<p><strong>ರಬಕವಿ ಬನಹಟ್ಟಿ:</strong> ತಾಲ್ಲೂಕಿನ ಮಹಾಲಿಂಗಪುರ ಸಮುದಾಯ ಆರೋಗ್ಯ ಕೇಂದ್ರವು ರಾಜಕಾರಣದ ಕೇಂದ್ರವಾಗಿದೆ. ಆಸ್ಪತ್ರೆ ಮತ್ತು ಬಡವರಿಗೆ ಚಿಕಿತ್ಸೆ ನೀಡುವ ವಿಷಯದಲ್ಲಿ ರಾಜಕಾರಣ ಬೇಡ. ಇಲ್ಲಿ ಬರುವ ರೋಗಿಗಳಿಗೆ ಸರಿಯಾಗಿ ಚಿಕಿತ್ಸೆ ದೊರೆಯುತ್ತಿಲ್ಲ. ಸರ್ಕಾರ 30ಕ್ಕೂ ಹೆಚ್ಚು ಸಿಬ್ಬಂದಿಗೆ ನೀಡುವ ಸಂಬಳ ವ್ಯರ್ಥವಾಗುತ್ತಿದೆ. ಈ ವಿಷಯವನ್ನು ಸದನದಲ್ಲಿ ಚರ್ಚೆ ಮಾಡಲಾಗುವುದು’ ಎಂದು ಶಾಸಕ ಸಿದ್ದು ಸವದಿ ಹೇಳಿದರು.</p>.<p>ಶನಿವಾರ ರಬಕವಿ ಬನಹಟ್ಟಿ ನಗರಸಭೆಯ ಸಭಾ ಭವನದಲ್ಲಿ ನಡೆದ ತಾಲ್ಲೂಕು ಮಟ್ಟದ ಕೆಡಿಪಿ ಸಭೆಯಲ್ಲಿ ಅವರು ಮಾತನಾಡಿದರು.</p>.<p>ರಬಕವಿ ಬನಹಟ್ಟಿ ತಾಲ್ಲೂಕಿನಲ್ಲಿ ಡೆಂಗಿ ನಿಯಂತ್ರಣಕ್ಕಾಗಿ ಎಲ್ಲ ರೀತಿಯ ಕ್ರಮಗಳನ್ನು ತೆಗೆದುಕೊಳ್ಳಲಾಗಿದೆ. ಈಗಾಗಲೇ ಪ್ರತಿಯೊಂದು ನಗರ ಮತ್ತು ಗ್ರಾಮೀಣ ಪ್ರದೇಶಗಳಲ್ಲಿ ಫಾಗಿಂಗ್ ಮಾಡಲಾಗಿದೆ. ಮುಂದಿನ ದಿನಗಳಲ್ಲಿ ಇನ್ನೊಂದು ಸುತ್ತು ಫಾಗಿಂಗ್ ಮಾಡಲು ಅಧಿಕಾರಿಗಳಿಗೆ ಶಾಸಕ ಸಿದ್ದು ಸವದಿ ಸೂಚಿಸಿದರು.</p>.<p>‘ತಾಲ್ಲೂಕಿನಲ್ಲಿ ಇದುವರೆಗೆ ಏಳು ಪ್ರಕರಣಗಳು ಕಂಡು ಬಂದಿವೆ. ಅವರಿಗೆ ಸೂಕ್ತ ಚಿಕಿತ್ಸೆ ನೀಡಲಾಗಿದೆ ಮತ್ತು ಅವರು ಗುಣಮುಖರಾಗುತ್ತಿದ್ದಾರೆ. ಕ್ಷೇತ್ರದಲ್ಲಿ ಒಟ್ಟು 22 ಜನರಿಗೆ ಎಚ್ಐವಿ ದೃಢಪಟ್ಟಿದ್ದು ಅವರಿಗೆ ಚಿಕಿತ್ಸೆ ನೀಡಲಾಗುತ್ತಿದೆ’ ಎಂದು ತಾಲ್ಲೂಕು ಆರೋಗ್ಯ ವೈದ್ಯಾಧಿಕಾರಿ ಜಿ.ಎಸ್. ಗಲಗಲಿ ತಿಳಿಸಿದರು.</p>.<p>‘ಕೃಷ್ಣಾ ನದಿಗೆ ಸದ್ಯ ಯಾವುದೇ ರೀತಿಯಲ್ಲಿ ಪ್ರವಾಹದ ಭೀತಿ ಇಲ್ಲ. ಕೆಲವರು ಕೇವಲ ಅಂಕಿ ಅಂಶಗಳ ಸಲುವಾಗಿ ಸಭೆಯನ್ನು ಮಾಡುತ್ತಿದ್ದಾರೆ’ ಎಂದರು.</p>.<p>ಕ್ಷೇತ್ರ ಶಿಕ್ಷಣಾಧಿಕಾರಿ ಅಶೋಕ ಬಸಗೊಂಡನವರ ಮಾತನಾಡಿ, ‘ರಬಕವಿ ಬನಹಟ್ಟಿ ತಾಲ್ಲೂಕಿನಲ್ಲಿ ಶೇ 67 ರಷ್ಟು ಪಠ್ಯ ಪುಸ್ತಕಗಳ ವಿತರಣೆಯಾಗಿದೆ. ಉರ್ದು ಮಾಧ್ಯಮದ ಪುಸ್ತಕಗಳು ಬರಬೇಕಾಗಿವೆ. ಸಮವಸ್ತ್ರಗಳನ್ನು ಪೂರ್ತಿಯಾಗಿ ವಿತರಣೆ ಮಾಡಲಾಗಿದೆ. ತಾಲ್ಲೂಕಿನಲ್ಲಿ ಒಂದನೇ ತರಗತಿಯಿಂದ ಎಸ್ಎಸ್ಎಲ್ಸಿವರೆಗೆ 94,723 ವಿದ್ಯಾರ್ಥಿಗಳು ದಾಖಲಾಗಿದ್ಧಾರೆ. ಅಂದಾಜು 5500 ವಿದ್ಯಾರ್ಥಿಗಳು ದಾಖಲಾಗಬೇಕು’ ಎಂದು ಸಭೆಗೆ ತಿಳಿಸಿದರು.</p>.<p>‘ತಾಲ್ಲೂಕಿನ ಬಹಳಷ್ಟು ಶಿಕ್ಷಕರು ಕಲಿಸುವುದನ್ನು ಬಿಟ್ಟು ರಾಜಕಾರಣ ಮಾಡುತ್ತಿದ್ದಾರೆ. ಈ ಬಗ್ಗೆ ಅಧಿಕಾರಿಗಳು ಗಮನ ನೀಡಬೇಕಾಗಿದೆ’ ಎಂದು ಸಿದ್ದು ಸವದಿ ಸೂಚನೆ ನೀಡಿದರು.</p>.<p>ತಾಲ್ಲೂಕಿನಲ್ಲಿ 50 ಜೆಜೆಎಂ ಯೊಜನೆಗಳಲ್ಲಿ 34 ಯೋಜನೆಗಳು ಮುಕ್ತಾಯಗೊಂಡಿವೆ. ಕೇವಲ ಐದನ್ನು ಮಾತ್ರ ಹಸ್ತಾಂತರ ಮಾಡಲಾಗಿದೆ ಎಂದು ನೀರಾವರಿ ಅಧಿಕಾರಿಗಳು ಸಭೆಗೆ ಮಾಹಿತಿ ನೀಡಿದರು.</p>.<p>ತಾಲ್ಲೂಕಿನ ವಿವಿಧ ಇಲಾಖೆಗಳ ಪ್ರಗತಿ ಮತ್ತು ಮಾಹಿತಿಯನ್ನು ಪಡೆದುಕೊಂಡರು.</p>.<p>ರಬಕವಿ ಬನಹಟ್ಟಿ ತಾಲ್ಲೂಕು ಪಂಚಾಯ್ತಿ ಆಡಳಿತಾಧಿಕಾರಿ ಎಚ್.ಬಿ. ಪಾಟೀಲ, ತಾಲ್ಲೂಕು ಪಂಚಾಯ್ತಿ ಕಾರ್ಯ ನಿರ್ವಾಹಕ ಅಧಿಕಾರಿ ಸಿದ್ದಪ್ಪ ಪಟ್ಟಿಹಾಳ, ಪೌರಾಯುಕ್ತ ಜಗದೀಶ ಈಟಿ, ವಿ.ಎಸ್. ನಾಯಕ, ನಿಂಗಪ್ಪ ಗಾಣಿಗೇರ, ಆನಂದ ಕೆಸರಗೊಪ್ಪ, ಸುರೇಶ ನೀಲನೂರ, ಬಿ.ಎಂ. ಬಡಿಗೇರ ವಿನಯ ಹುಲ್ಯಾಳ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ರಬಕವಿ ಬನಹಟ್ಟಿ:</strong> ತಾಲ್ಲೂಕಿನ ಮಹಾಲಿಂಗಪುರ ಸಮುದಾಯ ಆರೋಗ್ಯ ಕೇಂದ್ರವು ರಾಜಕಾರಣದ ಕೇಂದ್ರವಾಗಿದೆ. ಆಸ್ಪತ್ರೆ ಮತ್ತು ಬಡವರಿಗೆ ಚಿಕಿತ್ಸೆ ನೀಡುವ ವಿಷಯದಲ್ಲಿ ರಾಜಕಾರಣ ಬೇಡ. ಇಲ್ಲಿ ಬರುವ ರೋಗಿಗಳಿಗೆ ಸರಿಯಾಗಿ ಚಿಕಿತ್ಸೆ ದೊರೆಯುತ್ತಿಲ್ಲ. ಸರ್ಕಾರ 30ಕ್ಕೂ ಹೆಚ್ಚು ಸಿಬ್ಬಂದಿಗೆ ನೀಡುವ ಸಂಬಳ ವ್ಯರ್ಥವಾಗುತ್ತಿದೆ. ಈ ವಿಷಯವನ್ನು ಸದನದಲ್ಲಿ ಚರ್ಚೆ ಮಾಡಲಾಗುವುದು’ ಎಂದು ಶಾಸಕ ಸಿದ್ದು ಸವದಿ ಹೇಳಿದರು.</p>.<p>ಶನಿವಾರ ರಬಕವಿ ಬನಹಟ್ಟಿ ನಗರಸಭೆಯ ಸಭಾ ಭವನದಲ್ಲಿ ನಡೆದ ತಾಲ್ಲೂಕು ಮಟ್ಟದ ಕೆಡಿಪಿ ಸಭೆಯಲ್ಲಿ ಅವರು ಮಾತನಾಡಿದರು.</p>.<p>ರಬಕವಿ ಬನಹಟ್ಟಿ ತಾಲ್ಲೂಕಿನಲ್ಲಿ ಡೆಂಗಿ ನಿಯಂತ್ರಣಕ್ಕಾಗಿ ಎಲ್ಲ ರೀತಿಯ ಕ್ರಮಗಳನ್ನು ತೆಗೆದುಕೊಳ್ಳಲಾಗಿದೆ. ಈಗಾಗಲೇ ಪ್ರತಿಯೊಂದು ನಗರ ಮತ್ತು ಗ್ರಾಮೀಣ ಪ್ರದೇಶಗಳಲ್ಲಿ ಫಾಗಿಂಗ್ ಮಾಡಲಾಗಿದೆ. ಮುಂದಿನ ದಿನಗಳಲ್ಲಿ ಇನ್ನೊಂದು ಸುತ್ತು ಫಾಗಿಂಗ್ ಮಾಡಲು ಅಧಿಕಾರಿಗಳಿಗೆ ಶಾಸಕ ಸಿದ್ದು ಸವದಿ ಸೂಚಿಸಿದರು.</p>.<p>‘ತಾಲ್ಲೂಕಿನಲ್ಲಿ ಇದುವರೆಗೆ ಏಳು ಪ್ರಕರಣಗಳು ಕಂಡು ಬಂದಿವೆ. ಅವರಿಗೆ ಸೂಕ್ತ ಚಿಕಿತ್ಸೆ ನೀಡಲಾಗಿದೆ ಮತ್ತು ಅವರು ಗುಣಮುಖರಾಗುತ್ತಿದ್ದಾರೆ. ಕ್ಷೇತ್ರದಲ್ಲಿ ಒಟ್ಟು 22 ಜನರಿಗೆ ಎಚ್ಐವಿ ದೃಢಪಟ್ಟಿದ್ದು ಅವರಿಗೆ ಚಿಕಿತ್ಸೆ ನೀಡಲಾಗುತ್ತಿದೆ’ ಎಂದು ತಾಲ್ಲೂಕು ಆರೋಗ್ಯ ವೈದ್ಯಾಧಿಕಾರಿ ಜಿ.ಎಸ್. ಗಲಗಲಿ ತಿಳಿಸಿದರು.</p>.<p>‘ಕೃಷ್ಣಾ ನದಿಗೆ ಸದ್ಯ ಯಾವುದೇ ರೀತಿಯಲ್ಲಿ ಪ್ರವಾಹದ ಭೀತಿ ಇಲ್ಲ. ಕೆಲವರು ಕೇವಲ ಅಂಕಿ ಅಂಶಗಳ ಸಲುವಾಗಿ ಸಭೆಯನ್ನು ಮಾಡುತ್ತಿದ್ದಾರೆ’ ಎಂದರು.</p>.<p>ಕ್ಷೇತ್ರ ಶಿಕ್ಷಣಾಧಿಕಾರಿ ಅಶೋಕ ಬಸಗೊಂಡನವರ ಮಾತನಾಡಿ, ‘ರಬಕವಿ ಬನಹಟ್ಟಿ ತಾಲ್ಲೂಕಿನಲ್ಲಿ ಶೇ 67 ರಷ್ಟು ಪಠ್ಯ ಪುಸ್ತಕಗಳ ವಿತರಣೆಯಾಗಿದೆ. ಉರ್ದು ಮಾಧ್ಯಮದ ಪುಸ್ತಕಗಳು ಬರಬೇಕಾಗಿವೆ. ಸಮವಸ್ತ್ರಗಳನ್ನು ಪೂರ್ತಿಯಾಗಿ ವಿತರಣೆ ಮಾಡಲಾಗಿದೆ. ತಾಲ್ಲೂಕಿನಲ್ಲಿ ಒಂದನೇ ತರಗತಿಯಿಂದ ಎಸ್ಎಸ್ಎಲ್ಸಿವರೆಗೆ 94,723 ವಿದ್ಯಾರ್ಥಿಗಳು ದಾಖಲಾಗಿದ್ಧಾರೆ. ಅಂದಾಜು 5500 ವಿದ್ಯಾರ್ಥಿಗಳು ದಾಖಲಾಗಬೇಕು’ ಎಂದು ಸಭೆಗೆ ತಿಳಿಸಿದರು.</p>.<p>‘ತಾಲ್ಲೂಕಿನ ಬಹಳಷ್ಟು ಶಿಕ್ಷಕರು ಕಲಿಸುವುದನ್ನು ಬಿಟ್ಟು ರಾಜಕಾರಣ ಮಾಡುತ್ತಿದ್ದಾರೆ. ಈ ಬಗ್ಗೆ ಅಧಿಕಾರಿಗಳು ಗಮನ ನೀಡಬೇಕಾಗಿದೆ’ ಎಂದು ಸಿದ್ದು ಸವದಿ ಸೂಚನೆ ನೀಡಿದರು.</p>.<p>ತಾಲ್ಲೂಕಿನಲ್ಲಿ 50 ಜೆಜೆಎಂ ಯೊಜನೆಗಳಲ್ಲಿ 34 ಯೋಜನೆಗಳು ಮುಕ್ತಾಯಗೊಂಡಿವೆ. ಕೇವಲ ಐದನ್ನು ಮಾತ್ರ ಹಸ್ತಾಂತರ ಮಾಡಲಾಗಿದೆ ಎಂದು ನೀರಾವರಿ ಅಧಿಕಾರಿಗಳು ಸಭೆಗೆ ಮಾಹಿತಿ ನೀಡಿದರು.</p>.<p>ತಾಲ್ಲೂಕಿನ ವಿವಿಧ ಇಲಾಖೆಗಳ ಪ್ರಗತಿ ಮತ್ತು ಮಾಹಿತಿಯನ್ನು ಪಡೆದುಕೊಂಡರು.</p>.<p>ರಬಕವಿ ಬನಹಟ್ಟಿ ತಾಲ್ಲೂಕು ಪಂಚಾಯ್ತಿ ಆಡಳಿತಾಧಿಕಾರಿ ಎಚ್.ಬಿ. ಪಾಟೀಲ, ತಾಲ್ಲೂಕು ಪಂಚಾಯ್ತಿ ಕಾರ್ಯ ನಿರ್ವಾಹಕ ಅಧಿಕಾರಿ ಸಿದ್ದಪ್ಪ ಪಟ್ಟಿಹಾಳ, ಪೌರಾಯುಕ್ತ ಜಗದೀಶ ಈಟಿ, ವಿ.ಎಸ್. ನಾಯಕ, ನಿಂಗಪ್ಪ ಗಾಣಿಗೇರ, ಆನಂದ ಕೆಸರಗೊಪ್ಪ, ಸುರೇಶ ನೀಲನೂರ, ಬಿ.ಎಂ. ಬಡಿಗೇರ ವಿನಯ ಹುಲ್ಯಾಳ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>