<p><strong>ಬೆಂಗಳೂರು</strong>: ಕನ್ನಡಿಗ ರವೀಂದ್ರ ಶೆಟ್ಟಿ ಅವರು ಏಷ್ಯನ್ ಕ್ರೀಡಾಕೂಟದಲ್ಲಿ ಆಡಲಿರುವ ಥಾಯ್ಲೆಂಡ್ ಕಬಡ್ಡಿ ತಂಡದ ಮುಖ್ಯ ಕೋಚ್ ಆಗಿ ನೇಮಕವಾಗಿದ್ದಾರೆ.</p>.<p>ಮೂಲತಃ ಹಾವೇರಿ ಜಿಲ್ಲೆಯ ಬ್ಯಾಡಗಿಯ ರವೀಂದ್ರ ಅವರು ಸುಮಾರು ನಾಲ್ಕು ದಶಕಗಳಿಂದ ಕಬಡ್ಡಿ ಆಟಗಾರನಾಗಿ, ಅಂತರರಾಷ್ಟ್ರೀಯ ಕೋಚ್ ಆಗಿ ಕಾರ್ಯನಿರ್ವಹಿಸಿದ್ದಾರೆ. ಬೆಂಗಳೂರಿನಲ್ಲಿರುವ ಸಿಐಎಲ್ ರಕ್ಷಣಾ ಸಚಿವಾಲಯದಲ್ಲಿ ಕಾರ್ಯನಿರ್ವಹಿಸಿದ್ದಾರೆ. ಕರ್ನಾಟಕ ಕಬಡ್ಡಿ ತಂಡದ ಪ್ರಮುಖ ಆಟಗಾರರಾಗಿದ್ದ ಅವರು, ವೃತ್ತಿಯಿಂದ ಎಂಜಿನಿಯರ್ ಆಗಿದ್ದಾರೆ.</p>.<p>ಅವರ ಮಾರ್ಗದರ್ಶನದಲ್ಲಿ ಕರ್ನಾಟಕ ತಂಡವು ಸುಮಾರು 20 ರಾಷ್ಟ್ರೀಯ ಟೂರ್ನಿಗಳಲ್ಲಿ ಆಡಿತ್ತು. 2012ರಲ್ಲಿ ಮಲೇಷ್ಯಾ ರಾಷ್ಟ್ರೀಯ ಕಬಡ್ಡಿ ತಂಡದ ಕೋಚ್ ಆಗಿದ್ದರು. ಬಿಹಾರದ ಪಾಟ್ನಾದಲ್ಲಿ ನಡೆದಿದ್ದ ಮಹಿಳಾ ವಿಶ್ವಕಪ್ ಕಬಡ್ಡಿ ಟೂರ್ನಿಯಲ್ಲಿ ಆಡಿದ ಮಲೇಷ್ಯಾ ತಂಡಕ್ಕೆ ರವೀಂದ್ರ ಮಾರ್ಗದರ್ಶನ ನೀಡಿದ್ದರು.</p>.<p>ರವೀಂದ್ರ ಅವರನ್ನು ಭಾರತ ಜೂನಿಯರ್ ತಂಡದ ಆಯ್ಕೆ ಸಮಿತಿಯ ಸದಸ್ಯರನ್ನಾಗಿ ಈಚೆಗೆ ಭಾರತ ಅಮೆಚೂರ್ ಕಬಡ್ಡಿ ಫೆಡರೇಷನ್ ನೇಮಕ ಮಾಡಿತ್ತು. ತೆಹರಾನ್ನಲ್ಲಿ ನಡೆದ ಜೂನಿಯರ್ ವಿಶ್ವಕಪ್ ಟೂರ್ನಿಯಲ್ಲಿ ಭಾರತ ತಂಡಕ್ಕೆ ಕೋಚ್ ಆಗಿದ್ದರು. ತಂಡವು ಚಿನ್ನ ಗೆದ್ದಿತ್ತು.</p>.<p>ಪ್ರೊಕಬಡ್ಡಿ ಟೂರ್ನಿಯಲ್ಲಿ ಅವರು ಯು ಮುಂಬಾ, ಜೈಪುರ ಪಿಂಕ್ ಪ್ಯಾಂಥರ್ಸ್, ಪುಣೇರಿ ಪಲ್ಟನ್ ಹಾಗೂ ಪಟ್ನಾ ಪೈರೆಟ್ಸ್ ತಂಡಗಳಿಗೆ ಕೋಚ್ ಆಗಿದ್ದರು.</p>.<p>‘ಥಾಯ್ಲೆಂಡ್ನಲ್ಲಿ ಪ್ರತಿಭಾವಂತ ಆಟಗಾರರಿದ್ದಾರೆ. ಅವರೆಲ್ಲರೂ ಅಪಾರ ಆಸಕ್ತಿಯಿಂದ ಕಲಿಯುತ್ತಿದ್ದಾರೆ. ಬಲಿಷ್ಠ ತಂಡಗಳ ಎದುರು ಉತ್ತಮವಾಗಿ ಆಡುವ ವಿಶ್ವಾಸವಿದೆ‘ ಎಂದು ರವೀಂದ್ರ ಶೆಟ್ಟಿ ‘ಪ್ರಜಾವಾಣಿ‘ಗೆ ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ಕನ್ನಡಿಗ ರವೀಂದ್ರ ಶೆಟ್ಟಿ ಅವರು ಏಷ್ಯನ್ ಕ್ರೀಡಾಕೂಟದಲ್ಲಿ ಆಡಲಿರುವ ಥಾಯ್ಲೆಂಡ್ ಕಬಡ್ಡಿ ತಂಡದ ಮುಖ್ಯ ಕೋಚ್ ಆಗಿ ನೇಮಕವಾಗಿದ್ದಾರೆ.</p>.<p>ಮೂಲತಃ ಹಾವೇರಿ ಜಿಲ್ಲೆಯ ಬ್ಯಾಡಗಿಯ ರವೀಂದ್ರ ಅವರು ಸುಮಾರು ನಾಲ್ಕು ದಶಕಗಳಿಂದ ಕಬಡ್ಡಿ ಆಟಗಾರನಾಗಿ, ಅಂತರರಾಷ್ಟ್ರೀಯ ಕೋಚ್ ಆಗಿ ಕಾರ್ಯನಿರ್ವಹಿಸಿದ್ದಾರೆ. ಬೆಂಗಳೂರಿನಲ್ಲಿರುವ ಸಿಐಎಲ್ ರಕ್ಷಣಾ ಸಚಿವಾಲಯದಲ್ಲಿ ಕಾರ್ಯನಿರ್ವಹಿಸಿದ್ದಾರೆ. ಕರ್ನಾಟಕ ಕಬಡ್ಡಿ ತಂಡದ ಪ್ರಮುಖ ಆಟಗಾರರಾಗಿದ್ದ ಅವರು, ವೃತ್ತಿಯಿಂದ ಎಂಜಿನಿಯರ್ ಆಗಿದ್ದಾರೆ.</p>.<p>ಅವರ ಮಾರ್ಗದರ್ಶನದಲ್ಲಿ ಕರ್ನಾಟಕ ತಂಡವು ಸುಮಾರು 20 ರಾಷ್ಟ್ರೀಯ ಟೂರ್ನಿಗಳಲ್ಲಿ ಆಡಿತ್ತು. 2012ರಲ್ಲಿ ಮಲೇಷ್ಯಾ ರಾಷ್ಟ್ರೀಯ ಕಬಡ್ಡಿ ತಂಡದ ಕೋಚ್ ಆಗಿದ್ದರು. ಬಿಹಾರದ ಪಾಟ್ನಾದಲ್ಲಿ ನಡೆದಿದ್ದ ಮಹಿಳಾ ವಿಶ್ವಕಪ್ ಕಬಡ್ಡಿ ಟೂರ್ನಿಯಲ್ಲಿ ಆಡಿದ ಮಲೇಷ್ಯಾ ತಂಡಕ್ಕೆ ರವೀಂದ್ರ ಮಾರ್ಗದರ್ಶನ ನೀಡಿದ್ದರು.</p>.<p>ರವೀಂದ್ರ ಅವರನ್ನು ಭಾರತ ಜೂನಿಯರ್ ತಂಡದ ಆಯ್ಕೆ ಸಮಿತಿಯ ಸದಸ್ಯರನ್ನಾಗಿ ಈಚೆಗೆ ಭಾರತ ಅಮೆಚೂರ್ ಕಬಡ್ಡಿ ಫೆಡರೇಷನ್ ನೇಮಕ ಮಾಡಿತ್ತು. ತೆಹರಾನ್ನಲ್ಲಿ ನಡೆದ ಜೂನಿಯರ್ ವಿಶ್ವಕಪ್ ಟೂರ್ನಿಯಲ್ಲಿ ಭಾರತ ತಂಡಕ್ಕೆ ಕೋಚ್ ಆಗಿದ್ದರು. ತಂಡವು ಚಿನ್ನ ಗೆದ್ದಿತ್ತು.</p>.<p>ಪ್ರೊಕಬಡ್ಡಿ ಟೂರ್ನಿಯಲ್ಲಿ ಅವರು ಯು ಮುಂಬಾ, ಜೈಪುರ ಪಿಂಕ್ ಪ್ಯಾಂಥರ್ಸ್, ಪುಣೇರಿ ಪಲ್ಟನ್ ಹಾಗೂ ಪಟ್ನಾ ಪೈರೆಟ್ಸ್ ತಂಡಗಳಿಗೆ ಕೋಚ್ ಆಗಿದ್ದರು.</p>.<p>‘ಥಾಯ್ಲೆಂಡ್ನಲ್ಲಿ ಪ್ರತಿಭಾವಂತ ಆಟಗಾರರಿದ್ದಾರೆ. ಅವರೆಲ್ಲರೂ ಅಪಾರ ಆಸಕ್ತಿಯಿಂದ ಕಲಿಯುತ್ತಿದ್ದಾರೆ. ಬಲಿಷ್ಠ ತಂಡಗಳ ಎದುರು ಉತ್ತಮವಾಗಿ ಆಡುವ ವಿಶ್ವಾಸವಿದೆ‘ ಎಂದು ರವೀಂದ್ರ ಶೆಟ್ಟಿ ‘ಪ್ರಜಾವಾಣಿ‘ಗೆ ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>