<p><strong>ಬಾಗಲಕೋಟೆ:</strong> ಅಂಗವಿಕಲ ಮಕ್ಕಳಿಗೆ ಸರ್ಕಾರದ ಸೌಲಭ್ಯ, ಶಿಕ್ಷಣ ಪಡೆಯುವಲ್ಲಿ ಪುನರ್ ವಸತಿ ಕಾರ್ಯಕರ್ತರ ಪಾತ್ರ ಮಹತ್ವದ್ದಾಗಿದೆ ಎಂದು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಕಾರ್ಯದರ್ಶಿ ದ್ಯಾವಪ್ಪ ಎಸ್.ಬಿ. ಹೇಳಿದರು.</p>.<p>ಜಿಲ್ಲಾ ಪಂಚಾಯಿತಿ ಸಭಾಭವನದಲ್ಲಿಜಿಲ್ಲಾ ವಿಕಲಚೇತನರ ಸಬಲೀಕರಣ ಇಲಾಖೆ ವತಿಯಿಂದ ಪುನರ್ವಸತಿ ಕಾರ್ಯಕರ್ತರಿಗೆ ಮಂಗಳವಾರ ಹಮ್ಮಿಕೊಂಡಿದ್ದ ಎರಡು ದಿನಗಳ ಸಾಮರ್ಥ್ಯ ಅಭಿವೃದ್ಧಿ ತರಬೇತಿ ಕಾರ್ಯಾಗಾರ ಉದ್ಘಾಟಿಸಿ ಮಾತನಾಡಿದರು.</p>.<p>‘ಸಾಮಾನ್ಯ ಮಕ್ಕಳಂತೆಯೇ ಶಿಕ್ಷಣ, ಸೌಲಭ್ಯಗಳನ್ನು ಪಡೆಯಲು ನೀವೆಲ್ಲರೂ ಕೆಲಸ ಮಾಡುತ್ತಿದ್ದು, ಪ್ರತಿ ಮಗು ಶಿಕ್ಷಣ ಪಡೆಯಬೇಕು. ಸರ್ಕಾರದ ಸೌಲಭ್ಯಗಳನ್ನು ಪಡೆಯುವುದು ಎಲ್ಲರ ಹಕ್ಕು‘ ಎಂದರು.</p>.<p>ಸರ್ಕಾರದಿಂದ ಸಿಗಬೇಕಾದ ಶಿಕ್ಷಣ ಮತ್ತು ಸರ್ಕಾರಿ ಸೌಲಭ್ಯಗಳಾದ ಯುಡಿಐಡಿ ಕಾರ್ಡ್, ಪೋಷಣಾ ಭತ್ಯೆ, ಸಾಧನ ಸಲಕರಣೆಗಳು, ವಿದ್ಯಾರ್ಥಿ ವೇತನ, ಪ್ರೋತ್ಸಾಹ ಧನ ಸೇರಿದಂತೆ ಎಲ್ಲ ಸೌಲಭ್ಯಗಳನ್ನು ತಲುಪಿಸಲು ಪರಿಣಾಮಕಾರಿಯಾಗಿ ಕೆಲಸ ಮಾಡಬೇಕು ಎಂದು ಸಲಹೆ ನೀಡಿದರು.</p>.<p>ಜಿಲ್ಲಾ ಪಂಚಾಯಿತಿ ಉಪಕಾರ್ಯದರ್ಶಿ ಅಮರೇಶ ನಾಯಕ ಮಾತನಾಡಿ, ಅಂಗವಿಕಲರ ಸೇವೆ ಮಾಡುವುದು ಪುಣ್ಯದ ಕೆಲಸ ಎಂದು ತಿಳಿದು ಕೆಲಸ ಮಾಡಬೇಕು ಎಂದರು.</p>.<p>ಅಧ್ಯಕ್ಷತೆ ವಹಿಸಿದ್ದ ಜಿಲ್ಲಾ ವಿಕಲಚೇತನರ ಕಲ್ಯಾಣ ಅಧಿಕಾರಿ ಸವಿತಾ ಕಾಳೆ ಮಾತನಾಡಿ, ಸರ್ಕಾರದಿಂದ ಸಿಗುವ ಸೌಲಭ್ಯಗಳನ್ನು ಎಲ್ಲರಿಗೂ ತಲುಪಿಸಬೇಕು. ಯಾವುದವೇ ಮಗು ಶಿಕ್ಷಣ ಮತ್ತು ಸೌಲಭ್ಯಗಳಿಂದ ವಂಚಿತವಾಗಬಾರದು ಎಂದು ಸಲಹೆ ನೀಡಿದರು.</p>.<p>ಬಾಗಲಕೋಟೆ ತಹಶೀಲ್ದಾರ್ ಅಮರೇಶ ಪಮ್ಮಾರ, ರೋಶಿನಿ, ಬಿಂದು ಮರಸಾನಿ, ಅಭಿನ್, ರಿಯಾಜ್ ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬಾಗಲಕೋಟೆ:</strong> ಅಂಗವಿಕಲ ಮಕ್ಕಳಿಗೆ ಸರ್ಕಾರದ ಸೌಲಭ್ಯ, ಶಿಕ್ಷಣ ಪಡೆಯುವಲ್ಲಿ ಪುನರ್ ವಸತಿ ಕಾರ್ಯಕರ್ತರ ಪಾತ್ರ ಮಹತ್ವದ್ದಾಗಿದೆ ಎಂದು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಕಾರ್ಯದರ್ಶಿ ದ್ಯಾವಪ್ಪ ಎಸ್.ಬಿ. ಹೇಳಿದರು.</p>.<p>ಜಿಲ್ಲಾ ಪಂಚಾಯಿತಿ ಸಭಾಭವನದಲ್ಲಿಜಿಲ್ಲಾ ವಿಕಲಚೇತನರ ಸಬಲೀಕರಣ ಇಲಾಖೆ ವತಿಯಿಂದ ಪುನರ್ವಸತಿ ಕಾರ್ಯಕರ್ತರಿಗೆ ಮಂಗಳವಾರ ಹಮ್ಮಿಕೊಂಡಿದ್ದ ಎರಡು ದಿನಗಳ ಸಾಮರ್ಥ್ಯ ಅಭಿವೃದ್ಧಿ ತರಬೇತಿ ಕಾರ್ಯಾಗಾರ ಉದ್ಘಾಟಿಸಿ ಮಾತನಾಡಿದರು.</p>.<p>‘ಸಾಮಾನ್ಯ ಮಕ್ಕಳಂತೆಯೇ ಶಿಕ್ಷಣ, ಸೌಲಭ್ಯಗಳನ್ನು ಪಡೆಯಲು ನೀವೆಲ್ಲರೂ ಕೆಲಸ ಮಾಡುತ್ತಿದ್ದು, ಪ್ರತಿ ಮಗು ಶಿಕ್ಷಣ ಪಡೆಯಬೇಕು. ಸರ್ಕಾರದ ಸೌಲಭ್ಯಗಳನ್ನು ಪಡೆಯುವುದು ಎಲ್ಲರ ಹಕ್ಕು‘ ಎಂದರು.</p>.<p>ಸರ್ಕಾರದಿಂದ ಸಿಗಬೇಕಾದ ಶಿಕ್ಷಣ ಮತ್ತು ಸರ್ಕಾರಿ ಸೌಲಭ್ಯಗಳಾದ ಯುಡಿಐಡಿ ಕಾರ್ಡ್, ಪೋಷಣಾ ಭತ್ಯೆ, ಸಾಧನ ಸಲಕರಣೆಗಳು, ವಿದ್ಯಾರ್ಥಿ ವೇತನ, ಪ್ರೋತ್ಸಾಹ ಧನ ಸೇರಿದಂತೆ ಎಲ್ಲ ಸೌಲಭ್ಯಗಳನ್ನು ತಲುಪಿಸಲು ಪರಿಣಾಮಕಾರಿಯಾಗಿ ಕೆಲಸ ಮಾಡಬೇಕು ಎಂದು ಸಲಹೆ ನೀಡಿದರು.</p>.<p>ಜಿಲ್ಲಾ ಪಂಚಾಯಿತಿ ಉಪಕಾರ್ಯದರ್ಶಿ ಅಮರೇಶ ನಾಯಕ ಮಾತನಾಡಿ, ಅಂಗವಿಕಲರ ಸೇವೆ ಮಾಡುವುದು ಪುಣ್ಯದ ಕೆಲಸ ಎಂದು ತಿಳಿದು ಕೆಲಸ ಮಾಡಬೇಕು ಎಂದರು.</p>.<p>ಅಧ್ಯಕ್ಷತೆ ವಹಿಸಿದ್ದ ಜಿಲ್ಲಾ ವಿಕಲಚೇತನರ ಕಲ್ಯಾಣ ಅಧಿಕಾರಿ ಸವಿತಾ ಕಾಳೆ ಮಾತನಾಡಿ, ಸರ್ಕಾರದಿಂದ ಸಿಗುವ ಸೌಲಭ್ಯಗಳನ್ನು ಎಲ್ಲರಿಗೂ ತಲುಪಿಸಬೇಕು. ಯಾವುದವೇ ಮಗು ಶಿಕ್ಷಣ ಮತ್ತು ಸೌಲಭ್ಯಗಳಿಂದ ವಂಚಿತವಾಗಬಾರದು ಎಂದು ಸಲಹೆ ನೀಡಿದರು.</p>.<p>ಬಾಗಲಕೋಟೆ ತಹಶೀಲ್ದಾರ್ ಅಮರೇಶ ಪಮ್ಮಾರ, ರೋಶಿನಿ, ಬಿಂದು ಮರಸಾನಿ, ಅಭಿನ್, ರಿಯಾಜ್ ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>