<p><strong>ಕೆರೂರ (ಬಾಗಲಕೋಟೆ):</strong> ‘ಸಾಂಕ್ರಾಮಿಕ ರೋಗಗಳನ್ನು ನಿಯಂತ್ರಣಕ್ಕೆ ತರಲು ಸ್ವಚ್ಛತೆ ಮುಖ್ಯ’ ಎಂದು ನಂಬಿರುವ ಕೆರೂರು ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ಜಗದೀಶ ಆರ್.ನಾಯ್ಕರ ಪೌರಕಾರ್ಮಿಕರ ಜೊತೆ ಸೇರಿ ಪಟ್ಟಣದಲ್ಲಿ ಸ್ವಚ್ಛತಾ ಅಭಿಯಾನ ನಡೆಸಿದ್ದಾರೆ.</p>.<p>ಪ್ರತಿ ದಿನ ನಸುಕಿನಲ್ಲಿ 5ಕ್ಕೆ ಪಟ್ಟಣ ಪಂಚಾಯಿತಿ ಕಚೇರಿಗೆ ಬಂದು, ಪೌರ ಕಾರ್ಮಿಕರನ್ನು ಸೇರಿಸಿ ಸ್ವತಃ ತಾವೇ ನೇತೃತ್ವ ವಹಿಸಿ ಸ್ವಚ್ಛಗೊಳಿಸುತ್ತಾರೆ. ಪಟ್ಟಣದ ರಸ್ತೆ, ಬಯಲು, ಚರಂಡಿ ಎಲ್ಲವೂ ಶುಚಿಗೊಳಿಸುತ್ತಾರೆ.</p>.<p>ಬೇಸಿಗೆಯ ಬಿಸಿಲಿನ ತಾಪಕ್ಕೆ ನೀರಿನ ಮೂಲಗಳಲ್ಲಿ ಅಂತರ್ಜಲ ಮಟ್ಟ ಕುಸಿಯುತ್ತಿದೆ. ಶಾಶ್ವತ ಕುಡಿಯುವ ನೀರಿನ ಯೋಜನೆಗೆ ಬಳಸಿಕೊಂಡ ಪಟ್ಟಣದ 110 ಎಕರೆ ವಿಸ್ತೀರ್ಣದ ಕೆರೆಯ ನೀರಿನ ಆಳ ಕಡಿಮೆಯಾಗಿದೆ. ನೀರಿನ ಕೊರತೆ ಆಗದಿರಲಿಯೆಂದು ಪಟ್ಟಣದ ಬಾವಿಗಳನ್ನು ಸ್ವಚ್ಛಗೊಳಿಸಿ ನೀರನ್ನು ತಿಳಿಯಾಗಿಸಿದ್ದಾರೆ.</p>.<p>ನೀರನ್ನು ಮಿತವಾಗಿ ಬಳಸುವಂತೆ ಜಾಗೃತಿ ಮೂಡಿಸುತ್ತಾರೆ. ಶುದ್ಧ ಕುಡಿಯುವ ನೀರಿನ ಘಟಕಗಳ ಮೇಲೆ ವಿಶೇಷ ನಿಗಾ ವಹಿಸಿ, ಅವು ಸಮರ್ಪಕವಾಗಿ ಬಳಕೆಯಾಗುವಂತೆ ಕ್ರಮ ಕೈಗೊಂಡಿದ್ದಾರೆ. ಅವರಿ ಪಟ್ಟಣ ಪಂಚಾಯಿತಿ ಸಿಬ್ಬಂದಿ ನವೀನ ಮಹಾರಾಜನವರ, ಬಿ.ಸಿ.ಕಟ್ಟಿಮನಿ ಹಾಗೂ ಪೌರಕಾರ್ಮಿಕರು ಜೊತೆಯಾಗಿದ್ದಾರೆ.</p>.<p>‘ಬೇಸಿಗೆಗಾಲದಲ್ಲಿ ಸಾಂಕ್ರಾಮಿಕ ರೋಗಗಳ ಭೀತಿಯ ಜೊತೆಗೆ ನೀರಿನ ಕೊರತೆ ಕಾಡುತ್ತದೆ. ಜನರಿಗೆ ಯಾವ ತೊಂದರೆ ಆಗದಂತೆ ನೋಡಿಕೊಳ್ಳುವ ಜವಾಬ್ದಾರಿ ಪಟ್ಟಣ ಪಂಚಾಯಿತಿ ಮೇಲಿದೆ. ಚುನಾವಣೆ ನಿಮಿತ್ತ ವರ್ಗಾವಣೆಯಾಗಿ ಇಲ್ಲಿ ಬಂದಿರುವ ನನ್ನ ಅವಧಿ ಮೂರು ತಿಂಗಳು. ಇಲ್ಲಿ ಇದ್ದಷ್ಟು ದಿನ ಪ್ರಾಮಾಣಿಕವಾಗಿ ಪಟ್ಟಣದ ಸೇವೆ ಮಾಡುವೆ’ ಎಂದು ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ಜಗದೀಶ ಆರ್ ನಾಯಕ್ ‘ಪ್ರಜಾವಾಣಿ’ಗೆ ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕೆರೂರ (ಬಾಗಲಕೋಟೆ):</strong> ‘ಸಾಂಕ್ರಾಮಿಕ ರೋಗಗಳನ್ನು ನಿಯಂತ್ರಣಕ್ಕೆ ತರಲು ಸ್ವಚ್ಛತೆ ಮುಖ್ಯ’ ಎಂದು ನಂಬಿರುವ ಕೆರೂರು ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ಜಗದೀಶ ಆರ್.ನಾಯ್ಕರ ಪೌರಕಾರ್ಮಿಕರ ಜೊತೆ ಸೇರಿ ಪಟ್ಟಣದಲ್ಲಿ ಸ್ವಚ್ಛತಾ ಅಭಿಯಾನ ನಡೆಸಿದ್ದಾರೆ.</p>.<p>ಪ್ರತಿ ದಿನ ನಸುಕಿನಲ್ಲಿ 5ಕ್ಕೆ ಪಟ್ಟಣ ಪಂಚಾಯಿತಿ ಕಚೇರಿಗೆ ಬಂದು, ಪೌರ ಕಾರ್ಮಿಕರನ್ನು ಸೇರಿಸಿ ಸ್ವತಃ ತಾವೇ ನೇತೃತ್ವ ವಹಿಸಿ ಸ್ವಚ್ಛಗೊಳಿಸುತ್ತಾರೆ. ಪಟ್ಟಣದ ರಸ್ತೆ, ಬಯಲು, ಚರಂಡಿ ಎಲ್ಲವೂ ಶುಚಿಗೊಳಿಸುತ್ತಾರೆ.</p>.<p>ಬೇಸಿಗೆಯ ಬಿಸಿಲಿನ ತಾಪಕ್ಕೆ ನೀರಿನ ಮೂಲಗಳಲ್ಲಿ ಅಂತರ್ಜಲ ಮಟ್ಟ ಕುಸಿಯುತ್ತಿದೆ. ಶಾಶ್ವತ ಕುಡಿಯುವ ನೀರಿನ ಯೋಜನೆಗೆ ಬಳಸಿಕೊಂಡ ಪಟ್ಟಣದ 110 ಎಕರೆ ವಿಸ್ತೀರ್ಣದ ಕೆರೆಯ ನೀರಿನ ಆಳ ಕಡಿಮೆಯಾಗಿದೆ. ನೀರಿನ ಕೊರತೆ ಆಗದಿರಲಿಯೆಂದು ಪಟ್ಟಣದ ಬಾವಿಗಳನ್ನು ಸ್ವಚ್ಛಗೊಳಿಸಿ ನೀರನ್ನು ತಿಳಿಯಾಗಿಸಿದ್ದಾರೆ.</p>.<p>ನೀರನ್ನು ಮಿತವಾಗಿ ಬಳಸುವಂತೆ ಜಾಗೃತಿ ಮೂಡಿಸುತ್ತಾರೆ. ಶುದ್ಧ ಕುಡಿಯುವ ನೀರಿನ ಘಟಕಗಳ ಮೇಲೆ ವಿಶೇಷ ನಿಗಾ ವಹಿಸಿ, ಅವು ಸಮರ್ಪಕವಾಗಿ ಬಳಕೆಯಾಗುವಂತೆ ಕ್ರಮ ಕೈಗೊಂಡಿದ್ದಾರೆ. ಅವರಿ ಪಟ್ಟಣ ಪಂಚಾಯಿತಿ ಸಿಬ್ಬಂದಿ ನವೀನ ಮಹಾರಾಜನವರ, ಬಿ.ಸಿ.ಕಟ್ಟಿಮನಿ ಹಾಗೂ ಪೌರಕಾರ್ಮಿಕರು ಜೊತೆಯಾಗಿದ್ದಾರೆ.</p>.<p>‘ಬೇಸಿಗೆಗಾಲದಲ್ಲಿ ಸಾಂಕ್ರಾಮಿಕ ರೋಗಗಳ ಭೀತಿಯ ಜೊತೆಗೆ ನೀರಿನ ಕೊರತೆ ಕಾಡುತ್ತದೆ. ಜನರಿಗೆ ಯಾವ ತೊಂದರೆ ಆಗದಂತೆ ನೋಡಿಕೊಳ್ಳುವ ಜವಾಬ್ದಾರಿ ಪಟ್ಟಣ ಪಂಚಾಯಿತಿ ಮೇಲಿದೆ. ಚುನಾವಣೆ ನಿಮಿತ್ತ ವರ್ಗಾವಣೆಯಾಗಿ ಇಲ್ಲಿ ಬಂದಿರುವ ನನ್ನ ಅವಧಿ ಮೂರು ತಿಂಗಳು. ಇಲ್ಲಿ ಇದ್ದಷ್ಟು ದಿನ ಪ್ರಾಮಾಣಿಕವಾಗಿ ಪಟ್ಟಣದ ಸೇವೆ ಮಾಡುವೆ’ ಎಂದು ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ಜಗದೀಶ ಆರ್ ನಾಯಕ್ ‘ಪ್ರಜಾವಾಣಿ’ಗೆ ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>