<p><strong>ಬಾಗಲಕೋಟೆ:</strong> ನಗರಕ್ಕೆ ಘೋಷಣೆಯಾಗಿರುವ ಸರ್ಕಾರಿ ವೈದ್ಯಕೀಯ ಕಾಲೇಜಿಗೆ ಅನುದಾನ ತಂದವರಿಗೆ ಮತ ನೀಡಲಾಗುವುದು ಎಂಬ ಅಭಿಯಾನವನ್ನು ಕರ್ನಾಟಕ ನವನಿರ್ಮಾಣ ಸೇನೆ ಮುಖಂಡರು ಆರಂಭಿಸಿದ್ದಾರೆ.</p>.<p>ಸೋಮವಾರ ಜಿಲ್ಲಾಧಿಕಾರಿ ಕಚೇರಿ ಮುಂದೆ ಪ್ರತಿಭಟನೆ ಮಾಡಿದ ಅವರು, ವಿಧಾನಸಭೆ ಚುನಾವಣೆ ವೇಳೆ ಅನುದಾನ ನೀಡುವುದಾಗಿ ಘೋಷಿಸಿದ್ದ ಸಿದ್ದರಾಮಯ್ಯ ಅವರು, ಬಜೆಟ್ನಲ್ಲಿ ಅನುದಾನ ನೀಡದಿರುವುದಕ್ಕೆ ಅಸಮಾಧಾನ ವ್ಯಕ್ತಪಡಿಸಿದರು.</p>.<p>ಪ್ರಜಾಪ್ರಭುತ್ವದಲ್ಲಿ ಮತದಾನವೇ ಅತ್ಯಂತ ಪ್ರಮುಖ ಅಸ್ತ್ರವಾಗಿದೆ. ಹಾಗಾಗಿ ಅನುದಾನ ತಂದವರಿಗೆ ಮತ ನೀಡಲಾಗುವುದು. ಅವಶ್ಯಕತೆ ಬಿದ್ದರೆ ಬಹಿಷ್ಕಾರಕ್ಕೂ ಮುಂದಾಗಲಾಗುವುದು. ಈ ಬಗ್ಗೆ ಮನೆ, ಮನೆಗೆ ತೆರಳಿ ಜನರಿಗೆ ತಿಳಿಸಲಾಗುವುದು ಎಂದು ಮನವಿ ಪತ್ರದಲ್ಲಿ ತಿಳಿಸಿದರು.</p>.<p>ಸರ್ಕಾರ ಕೂಡಲೇ ಎಚ್ಚೆತ್ತುಕೊಂಡು ಕಾಲೇಜು ನಿರ್ಮಾಣಕ್ಕೆ ಬೇಕಾಗಿರುವ ₹610 ಕೋಟಿ ಬಿಡುಗಡೆ ಮಾಡುವ ಮೂಲಕ ಬಡಜನರಿಗೆ ಚಿಕಿತ್ಸೆ ಪಡೆಯಲು ನೆರವಾಗಬೇಕು ಎಂದು ಆಗ್ರಹಿಸಿದರು.</p>.<p>ಸಮಾಜವಾದದ ಬಗ್ಗೆ ಮಾತನಾಡುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಸಮಾಜವಾದ ಯಶಸ್ಸು ಕಾಣಬೇಕಾದರೆ, ಸಾಮಾಜಿಕವಾಗಿ ಹಿಂದುಳಿದ, ನಿರ್ಲಕ್ಷಕ್ಕೆ ಒಳಗಾಗಿರುವ ಜನರಿಗೆ ಶಿಕ್ಷಣ, ಆರೋಗ್ಯ, ಉದ್ಯೋಗ ನಿಡಿದಾಗ ಮಾತ್ರ ಸಾಧ್ಯವಾಗುತ್ತದೆ. ಆದ್ದರಿಂದ ಕ್ರಮಕೈಗೊಳ್ಳಬೇಕು ಎಂದು ಒತ್ತಾಯಿಸಿದರು.</p>.<p>ಜಿಲ್ಲಾ ಘಟಕದ ಅಧ್ಯಕ್ಷ ಆತ್ಮಾರಾಮ ನೀಲನಾಯಕ, ವಕೀಲ ರಮೇಶ ಬದ್ನೂರ, ಎನ್.ಎ. ಟಂಕಸಾಲಿ, ರಶೀದ್, ಜಾಫರ್ ಕೊರಟಿ, ಬಿ.ಎಸ್. ಬಾವಾಖಾನ್ ಮತ್ತಿತರರು ಪಾಲ್ಗೊಂಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬಾಗಲಕೋಟೆ:</strong> ನಗರಕ್ಕೆ ಘೋಷಣೆಯಾಗಿರುವ ಸರ್ಕಾರಿ ವೈದ್ಯಕೀಯ ಕಾಲೇಜಿಗೆ ಅನುದಾನ ತಂದವರಿಗೆ ಮತ ನೀಡಲಾಗುವುದು ಎಂಬ ಅಭಿಯಾನವನ್ನು ಕರ್ನಾಟಕ ನವನಿರ್ಮಾಣ ಸೇನೆ ಮುಖಂಡರು ಆರಂಭಿಸಿದ್ದಾರೆ.</p>.<p>ಸೋಮವಾರ ಜಿಲ್ಲಾಧಿಕಾರಿ ಕಚೇರಿ ಮುಂದೆ ಪ್ರತಿಭಟನೆ ಮಾಡಿದ ಅವರು, ವಿಧಾನಸಭೆ ಚುನಾವಣೆ ವೇಳೆ ಅನುದಾನ ನೀಡುವುದಾಗಿ ಘೋಷಿಸಿದ್ದ ಸಿದ್ದರಾಮಯ್ಯ ಅವರು, ಬಜೆಟ್ನಲ್ಲಿ ಅನುದಾನ ನೀಡದಿರುವುದಕ್ಕೆ ಅಸಮಾಧಾನ ವ್ಯಕ್ತಪಡಿಸಿದರು.</p>.<p>ಪ್ರಜಾಪ್ರಭುತ್ವದಲ್ಲಿ ಮತದಾನವೇ ಅತ್ಯಂತ ಪ್ರಮುಖ ಅಸ್ತ್ರವಾಗಿದೆ. ಹಾಗಾಗಿ ಅನುದಾನ ತಂದವರಿಗೆ ಮತ ನೀಡಲಾಗುವುದು. ಅವಶ್ಯಕತೆ ಬಿದ್ದರೆ ಬಹಿಷ್ಕಾರಕ್ಕೂ ಮುಂದಾಗಲಾಗುವುದು. ಈ ಬಗ್ಗೆ ಮನೆ, ಮನೆಗೆ ತೆರಳಿ ಜನರಿಗೆ ತಿಳಿಸಲಾಗುವುದು ಎಂದು ಮನವಿ ಪತ್ರದಲ್ಲಿ ತಿಳಿಸಿದರು.</p>.<p>ಸರ್ಕಾರ ಕೂಡಲೇ ಎಚ್ಚೆತ್ತುಕೊಂಡು ಕಾಲೇಜು ನಿರ್ಮಾಣಕ್ಕೆ ಬೇಕಾಗಿರುವ ₹610 ಕೋಟಿ ಬಿಡುಗಡೆ ಮಾಡುವ ಮೂಲಕ ಬಡಜನರಿಗೆ ಚಿಕಿತ್ಸೆ ಪಡೆಯಲು ನೆರವಾಗಬೇಕು ಎಂದು ಆಗ್ರಹಿಸಿದರು.</p>.<p>ಸಮಾಜವಾದದ ಬಗ್ಗೆ ಮಾತನಾಡುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಸಮಾಜವಾದ ಯಶಸ್ಸು ಕಾಣಬೇಕಾದರೆ, ಸಾಮಾಜಿಕವಾಗಿ ಹಿಂದುಳಿದ, ನಿರ್ಲಕ್ಷಕ್ಕೆ ಒಳಗಾಗಿರುವ ಜನರಿಗೆ ಶಿಕ್ಷಣ, ಆರೋಗ್ಯ, ಉದ್ಯೋಗ ನಿಡಿದಾಗ ಮಾತ್ರ ಸಾಧ್ಯವಾಗುತ್ತದೆ. ಆದ್ದರಿಂದ ಕ್ರಮಕೈಗೊಳ್ಳಬೇಕು ಎಂದು ಒತ್ತಾಯಿಸಿದರು.</p>.<p>ಜಿಲ್ಲಾ ಘಟಕದ ಅಧ್ಯಕ್ಷ ಆತ್ಮಾರಾಮ ನೀಲನಾಯಕ, ವಕೀಲ ರಮೇಶ ಬದ್ನೂರ, ಎನ್.ಎ. ಟಂಕಸಾಲಿ, ರಶೀದ್, ಜಾಫರ್ ಕೊರಟಿ, ಬಿ.ಎಸ್. ಬಾವಾಖಾನ್ ಮತ್ತಿತರರು ಪಾಲ್ಗೊಂಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>