<p><strong>ಅಮೀನಗಡ:</strong> ‘ಮಹಿಳೆಯರ ಆರ್ಥಿಕತೆಯ ಸ್ವಾವಲಂಬನೆ ಜೊತೆಗೆ ಅರೋಗ್ಯಕ್ಕೂ ಉತ್ತಮ ಕೊಡುಗೆ ನೀಡುವಲ್ಲಿ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಟ್ರಸ್ಟ್ ಶ್ರಮವಹಿಸುತ್ತಿದೆ‘ ಎಂದು ಜಿಲ್ಲಾ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಎಸ್.ಜಿ.ನಂಜಯ್ಯನಮಠ ಹೇಳಿದರು.</p>.<p>ಬುಧವಾರ ಪಟ್ಟಣದ ಬನಶಂಕರಿ ಕಲ್ಯಾಣ ಮಂಟಪದಲ್ಲಿ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಟ್ರಸ್ಟ್ ಯೋಜನೆಯಡಿ ವಿವಿಧ ಸೌಲಭ್ಯಗಳ ವಿತರಣೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ‘ಗ್ರಾಮೀಣ ಭಾಗದ ಜನತೆಗೆ ಆರ್ಥಿಕ ನೆರವು ನೀಡುವುದಲ್ಲದೆ ಮಹಿಳೆಯರಿಗೆ ಸ್ವಾವಲಂಬನೆಯ ಬದುಕಿಗೆ ನೆರವಾಗುತ್ತಿರುವುದು ಶ್ಲಾಘನೀಯ‘ ಎಂದರು.</p>.<p>ಶಿಕ್ಷಣ ಇಲಾಖೆಯ ನಿವೃತ್ತ ಶಿಕ್ಷಣಾಧಿಕಾರಿ ಸಿದ್ಧಮ್ಮ ಪಾಟೀಲ ಮಾತನಾಡಿ, ಆರ್ಥಿಕ ಸಬಲತೆಗಷ್ಟೇ ಸೀಮಿತವಾಗದ ಧರ್ಮಸ್ಥಳ ಸಂಘದ ಕಾರ್ಯ ಅರೋಗ್ಯ, ಕೃಷಿಗೆ ಸೇರಿದಂತೆ ವಿವಿಧ ಯೋಜನೆಗಳನ್ನು ರೂಪಿಸಿ ಬಡಜನತೆ ಅನುಕೂಲವಾಗಿದೆ.</p>.<p>ತಾಲ್ಲೂಕು ಯೋಜನಾಧಿಕಾರಿ ಸಂತೋಷಕುಮಾರ ಪ್ರಾಸ್ತಾವಿಕವಾಗಿ ಮಾತನಾಡಿದರು.</p>.<p>ಪಟ್ಟಣ ಪಂಚಾಯ್ತಿ ಸದಸ್ಯ ತುಕಾರಾಮ ಲಮಾಣಿ, ಮುಖಂಡರಾದ ಅಜ್ಮಿರ್ ಮುಲ್ಲಾ, ಬಸವರಾಜ ಬೇವಿನಮಟ್ಟಿ, ವಿಷ್ಣು ಗೌಡರ, ವಲಯ ಮೇಲ್ವಿಚಾರಕಿ ಪವಿತ್ರಾ, ಜ್ಞಾನ ವಿಕಾಸ ಸಮನ್ವಯಧಿಕಾರಿ ಶಿವಲಿಂಗಮ್ಮ, ನಿಂಗಮ್ಮ ಸೂಡಿ ಸೇರಿದಂತೆ ಇತರರು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಅಮೀನಗಡ:</strong> ‘ಮಹಿಳೆಯರ ಆರ್ಥಿಕತೆಯ ಸ್ವಾವಲಂಬನೆ ಜೊತೆಗೆ ಅರೋಗ್ಯಕ್ಕೂ ಉತ್ತಮ ಕೊಡುಗೆ ನೀಡುವಲ್ಲಿ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಟ್ರಸ್ಟ್ ಶ್ರಮವಹಿಸುತ್ತಿದೆ‘ ಎಂದು ಜಿಲ್ಲಾ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಎಸ್.ಜಿ.ನಂಜಯ್ಯನಮಠ ಹೇಳಿದರು.</p>.<p>ಬುಧವಾರ ಪಟ್ಟಣದ ಬನಶಂಕರಿ ಕಲ್ಯಾಣ ಮಂಟಪದಲ್ಲಿ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಟ್ರಸ್ಟ್ ಯೋಜನೆಯಡಿ ವಿವಿಧ ಸೌಲಭ್ಯಗಳ ವಿತರಣೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ‘ಗ್ರಾಮೀಣ ಭಾಗದ ಜನತೆಗೆ ಆರ್ಥಿಕ ನೆರವು ನೀಡುವುದಲ್ಲದೆ ಮಹಿಳೆಯರಿಗೆ ಸ್ವಾವಲಂಬನೆಯ ಬದುಕಿಗೆ ನೆರವಾಗುತ್ತಿರುವುದು ಶ್ಲಾಘನೀಯ‘ ಎಂದರು.</p>.<p>ಶಿಕ್ಷಣ ಇಲಾಖೆಯ ನಿವೃತ್ತ ಶಿಕ್ಷಣಾಧಿಕಾರಿ ಸಿದ್ಧಮ್ಮ ಪಾಟೀಲ ಮಾತನಾಡಿ, ಆರ್ಥಿಕ ಸಬಲತೆಗಷ್ಟೇ ಸೀಮಿತವಾಗದ ಧರ್ಮಸ್ಥಳ ಸಂಘದ ಕಾರ್ಯ ಅರೋಗ್ಯ, ಕೃಷಿಗೆ ಸೇರಿದಂತೆ ವಿವಿಧ ಯೋಜನೆಗಳನ್ನು ರೂಪಿಸಿ ಬಡಜನತೆ ಅನುಕೂಲವಾಗಿದೆ.</p>.<p>ತಾಲ್ಲೂಕು ಯೋಜನಾಧಿಕಾರಿ ಸಂತೋಷಕುಮಾರ ಪ್ರಾಸ್ತಾವಿಕವಾಗಿ ಮಾತನಾಡಿದರು.</p>.<p>ಪಟ್ಟಣ ಪಂಚಾಯ್ತಿ ಸದಸ್ಯ ತುಕಾರಾಮ ಲಮಾಣಿ, ಮುಖಂಡರಾದ ಅಜ್ಮಿರ್ ಮುಲ್ಲಾ, ಬಸವರಾಜ ಬೇವಿನಮಟ್ಟಿ, ವಿಷ್ಣು ಗೌಡರ, ವಲಯ ಮೇಲ್ವಿಚಾರಕಿ ಪವಿತ್ರಾ, ಜ್ಞಾನ ವಿಕಾಸ ಸಮನ್ವಯಧಿಕಾರಿ ಶಿವಲಿಂಗಮ್ಮ, ನಿಂಗಮ್ಮ ಸೂಡಿ ಸೇರಿದಂತೆ ಇತರರು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>