<p><strong>ಹಗರಿಬೊಮ್ಮನಹಳ್ಳಿ</strong>: ಕುರುಬ ಸಮಾಜದ ಅಭಿವೃದ್ಧಿಗೆ ₹25ಲಕ್ಷ ಅನುದಾನ ನೀಡುವುದಾಗಿ ಶಾಸಕ ಕೆ.ನೇಮರಾಜನಾಯ್ಕ ಭರವಸೆ ನೀಡಿದರು.</p>.<p>ಪಟ್ಟಣದ ಕನ್ಯಕಾಪರಮೇಶ್ವರಿ ಕಲ್ಯಾಣ ಮಂಟಪದಲ್ಲಿ ತಾಲ್ಲೂಕು ಕುರುಬರ ಸಂಘ ಮತ್ತು ಕನಕ ನೌಕರರ ಸಂಘದಿಂದ ಸಮಾಜದ ಎಸ್ಎಸ್ಎಲ್ಸಿ ಮತ್ತು ಪಿಯುಸಿ ವಿದ್ಯಾರ್ಥಿಗಳಿಗೆ ಹಮ್ಮಿಕೊಂಡಿದ್ದ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.</p>.<p>ಅನುದಾನ ಬಿಡುಗಡೆಗೆ ಶೀಘ್ರ ಜಿಲ್ಲಾ ಉಸ್ತುವಾರಿ ಸಚಿವರೊಂದಿಗೆ ಮಾತುಕತೆ ನಡೆಸಲಾಗುವುದು. ಸಮಾಜದ ಸಮಗ್ರ ಅಭಿವೃದ್ಧಿಗೆ ಅಗತ್ಯ ಕ್ರಮ ಕೈಗೊಳ್ಳಲಾಗುವುದು, ಜಾತ್ಯತೀತ ಮತ್ತು ಪಕ್ಷಾತೀತವಾಗಿ ಕ್ಷೇತ್ರದಲ್ಲಿ ಹಲವು ವಿಶೇಷ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ ಎಂದರು.</p>.<p>ವಿದ್ಯಾರ್ಥಿಗಳು ಉನ್ನತ ಶಿಕ್ಷಣ ಪಡೆಯುವ ಮೂಲಕ ಮುಖ್ಯವಾಹಿನಿಗೆ ಬರಬೇಕು. ಅನಗತ್ಯ ವಿಷಯಗಳ ಕುರಿತಂತೆ ಹಾಲಹರಣ ಮಾಡದೇ ವಿದ್ಯಾಭ್ಯಾಸದ ಕಡೆ ಗಮನ ಹರಿಸಬೇಕು, ಶಿಕ್ಷಣದಿಂದ ಮಾತ್ರ ಎಲ್ಲವೂ ಸಾಧ್ಯ, ಪ್ರತಿಭಾ ಪುರಸ್ಕಾರದಂತಹ ಕಾರ್ಯಕ್ರಮಗಳು ವಿದ್ಯಾರ್ಥಿಗಳು ಮತ್ತಷ್ಟೂ ಸಾಧನೆ ಮಾಡಲು ಪ್ರೇರಣೆ ನೀಡುತ್ತವೆ ಎಂದು ಅಭಿಪ್ರಾಯಪಟ್ಟರು.</p>.<p>ಮಠ್ಯಮಾನ್ಯಗಳು ಕೂಡ ಶಿಕ್ಷಣ ದಾಸೋಹ ನೀಡುತ್ತಿವೆ, ಇದೊಂದು ಸಮಾಜಮುಖಿ ಕಾರ್ಯ ಆಗಿದೆ ಎಂದರು.</p>.<p>ಸಮಾಜದ ಮುಖಂಡ ಬುಡ್ಡಿ ಬಸವರಾಜ ಪ್ರಾಸ್ತಾವಿಕವಾಗಿ ಮಾತನಾಡಿ, ಕನಕ ಭವನದ ಅಭಿವೃದ್ಧಿಗೆ ಅಗತ್ಯ ಅನುದಾನ ನೀಡುವಂತೆ ಶಾಸಕರಿಗೆ ಮನವಿ ಮಾಡಿದರು.</p>.<p>ಕಾಗಿನೆಲೆ ಮಹಾಸಂಸ್ಥಾನ ಕನಕ ಗುರುಪೀಠ ತಿಂಥಿಣಿ ಬ್ರಿಜ್ನ ಸಿದ್ದರಾಮಾನಂದಪುರಿ ಸ್ವಾಮೀಜಿ, ನಂದಿಪುರದ ಮಹೇಶ್ವರ ಸ್ವಾಮೀಜಿ ಸಾನ್ನಿಧ್ಯ ವಹಿಸಿದ್ದರು.</p>.<p>ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷ ಕುರಿ ಶಿವಮೂರ್ತಿ, ಸಮಾಜದ ತಾಲ್ಲೂಕು ಘಟಕದ ಅಧ್ಯಕ್ಷ ಶಿವರಾಜ್, ನೌಕರರ ಸಂಘದ ಅಧ್ಯಕ್ಷ ಎಂ.ಎಸ್.ಕಲ್ಗುಡಿ, ಕೊಟ್ರಯ್ಯ ಒಡೆಯರ್, ಅಕ್ಷರ ದಾಸೋಹ ಜಿಲ್ಲಾ ಯೋಜನಾಧಿಕಾರಿ ಶೇಖರಪ್ಪ ಹೊರಪೇಟಿ, ತಾಲ್ಲೂಕು ಪಂಚಾಯ್ತಿ ಕಾರ್ಯನಿರ್ವಾಹಕ ಅಧಿಕಾರಿ ಜಿ.ಪರಮೇಶ್ವರ್, ಕೆಎಸ್ಆರ್ಟಿಸಿ ಘಟಕ ವ್ಯವಸ್ಥಾಪಕ ನೀಲಪ್ಪ, ಜಿಲ್ಲಾ ಕುರುಬರ ಸಂಘದ ಅಧ್ಯಕ್ಷ ತಿಮ್ಮಪ್ಪ, ಮುಟುಗನಹಳ್ಳಿ ಕೊಟ್ರೇಶ್, ಕೆಎಸ್ಆರ್ಟಿಸಿ ಘಟಕದ ವ್ಯವಸ್ಥಾಪಕ ನೀಲಪ್ಪ, ಜಿಲ್ಲಾ ಕುರುಬರ ಸಂಘದ ಅಧ್ಯಕ್ಷ ತಿಮ್ಮಪ್ಪ, ಮುಟುಗನಹಳ್ಳಿ ಕೊಟ್ರೇಶ್, ಬಣಕಾರ ಗೋಣೆಪ್ಪ, ಭರಮಜ್ಜ, ನಿಂಗಪ್ಪ, ಕೆ.ಶಾರದಾ ಮಂಜುನಾಥ, ರೇವಣಸಿದ್ಧಾಚಾರ್ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹಗರಿಬೊಮ್ಮನಹಳ್ಳಿ</strong>: ಕುರುಬ ಸಮಾಜದ ಅಭಿವೃದ್ಧಿಗೆ ₹25ಲಕ್ಷ ಅನುದಾನ ನೀಡುವುದಾಗಿ ಶಾಸಕ ಕೆ.ನೇಮರಾಜನಾಯ್ಕ ಭರವಸೆ ನೀಡಿದರು.</p>.<p>ಪಟ್ಟಣದ ಕನ್ಯಕಾಪರಮೇಶ್ವರಿ ಕಲ್ಯಾಣ ಮಂಟಪದಲ್ಲಿ ತಾಲ್ಲೂಕು ಕುರುಬರ ಸಂಘ ಮತ್ತು ಕನಕ ನೌಕರರ ಸಂಘದಿಂದ ಸಮಾಜದ ಎಸ್ಎಸ್ಎಲ್ಸಿ ಮತ್ತು ಪಿಯುಸಿ ವಿದ್ಯಾರ್ಥಿಗಳಿಗೆ ಹಮ್ಮಿಕೊಂಡಿದ್ದ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.</p>.<p>ಅನುದಾನ ಬಿಡುಗಡೆಗೆ ಶೀಘ್ರ ಜಿಲ್ಲಾ ಉಸ್ತುವಾರಿ ಸಚಿವರೊಂದಿಗೆ ಮಾತುಕತೆ ನಡೆಸಲಾಗುವುದು. ಸಮಾಜದ ಸಮಗ್ರ ಅಭಿವೃದ್ಧಿಗೆ ಅಗತ್ಯ ಕ್ರಮ ಕೈಗೊಳ್ಳಲಾಗುವುದು, ಜಾತ್ಯತೀತ ಮತ್ತು ಪಕ್ಷಾತೀತವಾಗಿ ಕ್ಷೇತ್ರದಲ್ಲಿ ಹಲವು ವಿಶೇಷ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ ಎಂದರು.</p>.<p>ವಿದ್ಯಾರ್ಥಿಗಳು ಉನ್ನತ ಶಿಕ್ಷಣ ಪಡೆಯುವ ಮೂಲಕ ಮುಖ್ಯವಾಹಿನಿಗೆ ಬರಬೇಕು. ಅನಗತ್ಯ ವಿಷಯಗಳ ಕುರಿತಂತೆ ಹಾಲಹರಣ ಮಾಡದೇ ವಿದ್ಯಾಭ್ಯಾಸದ ಕಡೆ ಗಮನ ಹರಿಸಬೇಕು, ಶಿಕ್ಷಣದಿಂದ ಮಾತ್ರ ಎಲ್ಲವೂ ಸಾಧ್ಯ, ಪ್ರತಿಭಾ ಪುರಸ್ಕಾರದಂತಹ ಕಾರ್ಯಕ್ರಮಗಳು ವಿದ್ಯಾರ್ಥಿಗಳು ಮತ್ತಷ್ಟೂ ಸಾಧನೆ ಮಾಡಲು ಪ್ರೇರಣೆ ನೀಡುತ್ತವೆ ಎಂದು ಅಭಿಪ್ರಾಯಪಟ್ಟರು.</p>.<p>ಮಠ್ಯಮಾನ್ಯಗಳು ಕೂಡ ಶಿಕ್ಷಣ ದಾಸೋಹ ನೀಡುತ್ತಿವೆ, ಇದೊಂದು ಸಮಾಜಮುಖಿ ಕಾರ್ಯ ಆಗಿದೆ ಎಂದರು.</p>.<p>ಸಮಾಜದ ಮುಖಂಡ ಬುಡ್ಡಿ ಬಸವರಾಜ ಪ್ರಾಸ್ತಾವಿಕವಾಗಿ ಮಾತನಾಡಿ, ಕನಕ ಭವನದ ಅಭಿವೃದ್ಧಿಗೆ ಅಗತ್ಯ ಅನುದಾನ ನೀಡುವಂತೆ ಶಾಸಕರಿಗೆ ಮನವಿ ಮಾಡಿದರು.</p>.<p>ಕಾಗಿನೆಲೆ ಮಹಾಸಂಸ್ಥಾನ ಕನಕ ಗುರುಪೀಠ ತಿಂಥಿಣಿ ಬ್ರಿಜ್ನ ಸಿದ್ದರಾಮಾನಂದಪುರಿ ಸ್ವಾಮೀಜಿ, ನಂದಿಪುರದ ಮಹೇಶ್ವರ ಸ್ವಾಮೀಜಿ ಸಾನ್ನಿಧ್ಯ ವಹಿಸಿದ್ದರು.</p>.<p>ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷ ಕುರಿ ಶಿವಮೂರ್ತಿ, ಸಮಾಜದ ತಾಲ್ಲೂಕು ಘಟಕದ ಅಧ್ಯಕ್ಷ ಶಿವರಾಜ್, ನೌಕರರ ಸಂಘದ ಅಧ್ಯಕ್ಷ ಎಂ.ಎಸ್.ಕಲ್ಗುಡಿ, ಕೊಟ್ರಯ್ಯ ಒಡೆಯರ್, ಅಕ್ಷರ ದಾಸೋಹ ಜಿಲ್ಲಾ ಯೋಜನಾಧಿಕಾರಿ ಶೇಖರಪ್ಪ ಹೊರಪೇಟಿ, ತಾಲ್ಲೂಕು ಪಂಚಾಯ್ತಿ ಕಾರ್ಯನಿರ್ವಾಹಕ ಅಧಿಕಾರಿ ಜಿ.ಪರಮೇಶ್ವರ್, ಕೆಎಸ್ಆರ್ಟಿಸಿ ಘಟಕ ವ್ಯವಸ್ಥಾಪಕ ನೀಲಪ್ಪ, ಜಿಲ್ಲಾ ಕುರುಬರ ಸಂಘದ ಅಧ್ಯಕ್ಷ ತಿಮ್ಮಪ್ಪ, ಮುಟುಗನಹಳ್ಳಿ ಕೊಟ್ರೇಶ್, ಕೆಎಸ್ಆರ್ಟಿಸಿ ಘಟಕದ ವ್ಯವಸ್ಥಾಪಕ ನೀಲಪ್ಪ, ಜಿಲ್ಲಾ ಕುರುಬರ ಸಂಘದ ಅಧ್ಯಕ್ಷ ತಿಮ್ಮಪ್ಪ, ಮುಟುಗನಹಳ್ಳಿ ಕೊಟ್ರೇಶ್, ಬಣಕಾರ ಗೋಣೆಪ್ಪ, ಭರಮಜ್ಜ, ನಿಂಗಪ್ಪ, ಕೆ.ಶಾರದಾ ಮಂಜುನಾಥ, ರೇವಣಸಿದ್ಧಾಚಾರ್ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>