<p><strong>ಸಂಡೂರು(ಬಳ್ಳಾರಿ):</strong> ತಾಲ್ಲೂಕಿನ ರಾಮನಮಲೈ ಅರಣ್ಯ ಪ್ರದೇಶದಲ್ಲಿ ಶ್ರೀಗಂಧದ ಮರಗಳನ್ನು ಕಡಿಯುತ್ತಿದ್ದ ಸುಶೀಲಾ ನಗರದ ಮುತಾಲಿ ನಾಯಕ್ ಎಂಬಾತನನ್ನು ಅರಣ್ಯ ಇಲಾಖೆ ಅಧಿಕಾರಿಗಳು ಶನಿವಾರ ಬಂಧಿಸಿದ್ದಾರೆ.</p>.<p>ಗಂಧದ ಮರಗಳನ್ನು ಈ ಭಾಗದಲ್ಲಿ ಕಡಿಯಲಾಗುತ್ತಿದೆ ಎಂಬ ಮಾಹಿತಿ ಇತ್ತು. ಅರಣ್ಯ ಇಲಾಖೆ ಸಿಬ್ಬಂಧಿ ಗಸ್ತು ನಡೆಸುವಾಗ ಮರ ಕಡಿಯುತ್ತಿದ್ದ ಶಬ್ದ ಕೇಳಿ ಬಂದಿದೆ. ಆಗ ನಾಲ್ಕು ಕಡೆಯಿಂದ ಸುತ್ತವರೆದ ಸಿಬ್ಬಂಧಿ ಮುತಾಲಿ ನಾಯಕ್ ನನ್ನು ಬಂಧಿಸಿ ಸುಮಾರು ಒಂದು ಕೆಜಿಯಷ್ಟು ಗಂಧದ ಕಟ್ಟಿಗೆಯನ್ನು ವಶಪಡಿಸಿಕೊಂಡಿದ್ದಾರೆ.</p><p>ಆರೋಪಿಯನ್ನು ನ್ಯಾಯಾಧೀಶರ ಮುಂದೆ ಹಾಜರು ಪಡಿಸಿ, ಬಳ್ಳಾರಿ ಕಾರಾಗೃಹದಲ್ಲಿ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ ಎಂದು ಇಲ್ಲಿನ ಉತ್ತರ ವಲಯ ಅರಣ್ಯಾಧಿಕಾರಿ ಸಯ್ಯದ್ ದಾದಾ ಖಲಂದರ್ ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಸಂಡೂರು(ಬಳ್ಳಾರಿ):</strong> ತಾಲ್ಲೂಕಿನ ರಾಮನಮಲೈ ಅರಣ್ಯ ಪ್ರದೇಶದಲ್ಲಿ ಶ್ರೀಗಂಧದ ಮರಗಳನ್ನು ಕಡಿಯುತ್ತಿದ್ದ ಸುಶೀಲಾ ನಗರದ ಮುತಾಲಿ ನಾಯಕ್ ಎಂಬಾತನನ್ನು ಅರಣ್ಯ ಇಲಾಖೆ ಅಧಿಕಾರಿಗಳು ಶನಿವಾರ ಬಂಧಿಸಿದ್ದಾರೆ.</p>.<p>ಗಂಧದ ಮರಗಳನ್ನು ಈ ಭಾಗದಲ್ಲಿ ಕಡಿಯಲಾಗುತ್ತಿದೆ ಎಂಬ ಮಾಹಿತಿ ಇತ್ತು. ಅರಣ್ಯ ಇಲಾಖೆ ಸಿಬ್ಬಂಧಿ ಗಸ್ತು ನಡೆಸುವಾಗ ಮರ ಕಡಿಯುತ್ತಿದ್ದ ಶಬ್ದ ಕೇಳಿ ಬಂದಿದೆ. ಆಗ ನಾಲ್ಕು ಕಡೆಯಿಂದ ಸುತ್ತವರೆದ ಸಿಬ್ಬಂಧಿ ಮುತಾಲಿ ನಾಯಕ್ ನನ್ನು ಬಂಧಿಸಿ ಸುಮಾರು ಒಂದು ಕೆಜಿಯಷ್ಟು ಗಂಧದ ಕಟ್ಟಿಗೆಯನ್ನು ವಶಪಡಿಸಿಕೊಂಡಿದ್ದಾರೆ.</p><p>ಆರೋಪಿಯನ್ನು ನ್ಯಾಯಾಧೀಶರ ಮುಂದೆ ಹಾಜರು ಪಡಿಸಿ, ಬಳ್ಳಾರಿ ಕಾರಾಗೃಹದಲ್ಲಿ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ ಎಂದು ಇಲ್ಲಿನ ಉತ್ತರ ವಲಯ ಅರಣ್ಯಾಧಿಕಾರಿ ಸಯ್ಯದ್ ದಾದಾ ಖಲಂದರ್ ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>