<p><strong>ಬಳ್ಳಾರಿ:</strong> ಕಳ್ಳಭಟ್ಟಿ, ಕೈಹೆಂಡ, ಮಾದಕ ವಸ್ತು ಮತ್ತು ನಿದ್ರಾಜನಕ ಪದಾರ್ಥಗಳ ಅಕ್ರಮಗಳನ್ನು ಸಂಪೂರ್ಣ ತಡೆಗಟ್ಟಲು ಪೊಲೀಸ್ ಮತ್ತು ಅಬಕಾರಿ ಇಲಾಖೆ ಕ್ರಮಗಳನ್ನು ಬಿಗಿಗೊಳಿಸಬೇಕು ಎಂದು ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ ಸೂಚಿಸಿದರು.</p>.<p>ಇಲ್ಲಿನ ಜಿಲ್ಲಾಧಿಕಾರಿ ಕಚೇರಿಯಲ್ಲಿ ಕಳ್ಳಭಟ್ಟಿ ಸಾರಾಯಿ, ಕೈಹೆಂಡ ಮತ್ತು ಕಲುಷಿತ ಮದ್ಯ ತಯಾರಿಕೆ, ಸಾಗಾಣಿಕೆ ಹಾಗೂ ಮಾರಾಟವನ್ನು ತಡೆಯಲು ರಚಿಸಲಾಗಿರುವ ವಿವಿಧ ಇಲಾಖೆಗಳನ್ನೊಳಗೊಂಡ ಸ್ಥಾಯಿ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.</p>.<p>ಯುವಜನರಿಗೆ ಡ್ರಗ್ಸ್ ದುಷ್ಪರಿಣಾಮಗಳ ಕುರಿತು ತಿಳಿವಳಿಕೆ ಮೂಡಿಸಲು ಸಮಿತಿ ಅಧ್ಯಕ್ಷರೂ ಆದ ಜಿಲ್ಲಾಧಿಕಾರಿ ತಿಳಿಸಿದರು.</p>.<p>ವಿಷಪೂರಿತ, ಕಲುಷಿತ ಮದ್ಯ ಸೇವಿಸಿ ತಮಿಳುನಾಡಿನ ಕಲ್ಲುಕುರಚಿ ಜಿಲ್ಲೆ ಸೇರಿದಂತೆ ದೇಶದ ವಿವಿಧೆಡೆ ಅಪಾರ ಸಾವುನೋವು ಸಂಭವಿಸಿದ್ದು, ಬಳ್ಳಾರಿಯಲ್ಲಿ ಇಂಥ ಯಾವುದೇ ಘಟನೆ ನಡೆಯದಂತೆ ಎಚ್ಚರಿಕೆ ವಹಿಸುವ ಭಾಗವಾಗಿ ಸಭೆ ನಡೆಯಿತು.</p>.<p>‘ಬಳ್ಳಾರಿಯು ಆಂಧ್ರಪ್ರದೇಶದೊಂದಿಗೆ ಗಡಿ ಹಂಚಿಕೊಂಡಿದ್ದು, ಅಲ್ಲಿಂದ, ಕೈಹೆಂಡ(ಸೇಂದಿ), ಸೇವನೆಗೆ ಯೋಗ್ಯವಲ್ಲದ ಮದ್ಯ ಬಾರದಂತೆ ಕ್ರಮ ಕೈಗೊಳ್ಳಬೇಕು’ ಎಂದು ಅಬಕಾರಿ, ಪೊಲೀಸ್, ಅರಣ್ಯ ಮತ್ತು ಕಂದಾಯ ಇಲಾಖೆಯ ಹಿರಿಯ ಅಧಿಕಾರಿಗಳಿಗೆ ಸೂಚಿಸಿದರು.</p>.<p>ಜಿಲ್ಲೆಯಲ್ಲಿ ಕಳ್ಳಭಟ್ಟಿ ತಯಾರಿಕಾ ಕೇಂದ್ರವಾಗಿರುವ ಕಂಪ್ಲಿ, ಶಿಕಾರಿಹಟ್ಟಿ ಪ್ರದೇಶದಲ್ಲಿ ಸಮಗ್ರ ಕ್ರಿಯಾಯೋಜನೆಯನ್ನು ರೂಪಿಸಿ, ಪರಿಣಾಮಕಾರಿ ಕ್ರಮ ಕೈಗೊಳ್ಳಬೇಕು ಎಂದು ತಿಳಿಸಲಾಯಿತು.</p>.<p>ಜಿಲ್ಲಾ ಪಂಚಾಯಿತಿ ಸಿಇಒ ರಾಹುಲ್ ಸಂಕನೂರು, ಎಸ್ಪಿ ಡಾ.ಶೋಭರಾಣಿ ವಿ.ಜೆ, ಅಬಕಾರಿ ಉಪ ಆಯುಕ್ತ ಮಂಜುನಾಥ್ ಎನ್, ಡಿಎಚ್ಒ ರಮೇಶಬಾಬು, ಡಿಡಿಪಿಐ ಉಮಾದೇವಿ, ತಹಶೀಲ್ದಾರರು, ಅಬಕಾರಿ ಅಧೀಕ್ಷಕರು, ಅಬಕಾರಿ ಉಪ ಅಧೀಕ್ಷಕರು, ಬಳ್ಳಾರಿ ವಲಯ ಅರಣ್ಯಾಧಿಕಾರಿ, ಅಬಕಾರಿ ನಿರೀಕ್ಷಕರು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬಳ್ಳಾರಿ:</strong> ಕಳ್ಳಭಟ್ಟಿ, ಕೈಹೆಂಡ, ಮಾದಕ ವಸ್ತು ಮತ್ತು ನಿದ್ರಾಜನಕ ಪದಾರ್ಥಗಳ ಅಕ್ರಮಗಳನ್ನು ಸಂಪೂರ್ಣ ತಡೆಗಟ್ಟಲು ಪೊಲೀಸ್ ಮತ್ತು ಅಬಕಾರಿ ಇಲಾಖೆ ಕ್ರಮಗಳನ್ನು ಬಿಗಿಗೊಳಿಸಬೇಕು ಎಂದು ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ ಸೂಚಿಸಿದರು.</p>.<p>ಇಲ್ಲಿನ ಜಿಲ್ಲಾಧಿಕಾರಿ ಕಚೇರಿಯಲ್ಲಿ ಕಳ್ಳಭಟ್ಟಿ ಸಾರಾಯಿ, ಕೈಹೆಂಡ ಮತ್ತು ಕಲುಷಿತ ಮದ್ಯ ತಯಾರಿಕೆ, ಸಾಗಾಣಿಕೆ ಹಾಗೂ ಮಾರಾಟವನ್ನು ತಡೆಯಲು ರಚಿಸಲಾಗಿರುವ ವಿವಿಧ ಇಲಾಖೆಗಳನ್ನೊಳಗೊಂಡ ಸ್ಥಾಯಿ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.</p>.<p>ಯುವಜನರಿಗೆ ಡ್ರಗ್ಸ್ ದುಷ್ಪರಿಣಾಮಗಳ ಕುರಿತು ತಿಳಿವಳಿಕೆ ಮೂಡಿಸಲು ಸಮಿತಿ ಅಧ್ಯಕ್ಷರೂ ಆದ ಜಿಲ್ಲಾಧಿಕಾರಿ ತಿಳಿಸಿದರು.</p>.<p>ವಿಷಪೂರಿತ, ಕಲುಷಿತ ಮದ್ಯ ಸೇವಿಸಿ ತಮಿಳುನಾಡಿನ ಕಲ್ಲುಕುರಚಿ ಜಿಲ್ಲೆ ಸೇರಿದಂತೆ ದೇಶದ ವಿವಿಧೆಡೆ ಅಪಾರ ಸಾವುನೋವು ಸಂಭವಿಸಿದ್ದು, ಬಳ್ಳಾರಿಯಲ್ಲಿ ಇಂಥ ಯಾವುದೇ ಘಟನೆ ನಡೆಯದಂತೆ ಎಚ್ಚರಿಕೆ ವಹಿಸುವ ಭಾಗವಾಗಿ ಸಭೆ ನಡೆಯಿತು.</p>.<p>‘ಬಳ್ಳಾರಿಯು ಆಂಧ್ರಪ್ರದೇಶದೊಂದಿಗೆ ಗಡಿ ಹಂಚಿಕೊಂಡಿದ್ದು, ಅಲ್ಲಿಂದ, ಕೈಹೆಂಡ(ಸೇಂದಿ), ಸೇವನೆಗೆ ಯೋಗ್ಯವಲ್ಲದ ಮದ್ಯ ಬಾರದಂತೆ ಕ್ರಮ ಕೈಗೊಳ್ಳಬೇಕು’ ಎಂದು ಅಬಕಾರಿ, ಪೊಲೀಸ್, ಅರಣ್ಯ ಮತ್ತು ಕಂದಾಯ ಇಲಾಖೆಯ ಹಿರಿಯ ಅಧಿಕಾರಿಗಳಿಗೆ ಸೂಚಿಸಿದರು.</p>.<p>ಜಿಲ್ಲೆಯಲ್ಲಿ ಕಳ್ಳಭಟ್ಟಿ ತಯಾರಿಕಾ ಕೇಂದ್ರವಾಗಿರುವ ಕಂಪ್ಲಿ, ಶಿಕಾರಿಹಟ್ಟಿ ಪ್ರದೇಶದಲ್ಲಿ ಸಮಗ್ರ ಕ್ರಿಯಾಯೋಜನೆಯನ್ನು ರೂಪಿಸಿ, ಪರಿಣಾಮಕಾರಿ ಕ್ರಮ ಕೈಗೊಳ್ಳಬೇಕು ಎಂದು ತಿಳಿಸಲಾಯಿತು.</p>.<p>ಜಿಲ್ಲಾ ಪಂಚಾಯಿತಿ ಸಿಇಒ ರಾಹುಲ್ ಸಂಕನೂರು, ಎಸ್ಪಿ ಡಾ.ಶೋಭರಾಣಿ ವಿ.ಜೆ, ಅಬಕಾರಿ ಉಪ ಆಯುಕ್ತ ಮಂಜುನಾಥ್ ಎನ್, ಡಿಎಚ್ಒ ರಮೇಶಬಾಬು, ಡಿಡಿಪಿಐ ಉಮಾದೇವಿ, ತಹಶೀಲ್ದಾರರು, ಅಬಕಾರಿ ಅಧೀಕ್ಷಕರು, ಅಬಕಾರಿ ಉಪ ಅಧೀಕ್ಷಕರು, ಬಳ್ಳಾರಿ ವಲಯ ಅರಣ್ಯಾಧಿಕಾರಿ, ಅಬಕಾರಿ ನಿರೀಕ್ಷಕರು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>