<p><strong>ತೋರಣಗಲ್ಲು:</strong> ‘ಯಶಸ್ವಿ ರೈತರ ಯಶೋಗಾಥೆಗಳನ್ನು ರೈತರಿಗೆ ಹೇಳುವುದರ ಮೂಲಕ ಸಮಗ್ರ ಕೃಷಿ ಪದ್ಧತಿಯತ್ತ ರೈತರನ್ನು ಸೆಳೆಯಬೇಕು. ಜೊತೆಗೆ ತೋಟಗಾರಿಕಾ ಬೆಳೆಗಳಿಂದ ರೈತರಿಗೆ ನಿರಂತರ ಆದಾಯ ಬರುತ್ತದೆ’ ಎಂದು ರಾಯಚೂರಿನ ಕೃಷಿ ವಿಜ್ಞಾನಗಳ ವಿಶ್ವವಿದ್ಯಾಲಯದ ಸಹ ಕೃಷಿ ವಿಸ್ತರಣಾ ನಿರ್ದೇಶಕ ಡಾ.ಎ.ಆರ್.ಕುರುಬರ್ ಹೇಳಿದರು.</p>.<p>ಇಲ್ಲಿನ ಒಪಿಜೆ ಕೇಂದ್ರದಲ್ಲಿ ಕೃಷಿ ವಿಜ್ಞಾನಗಳ ವಿಶ್ವವಿದ್ಯಾಲಯ ರಾಯಚೂರು, ಕೃಷಿ ವಿಜ್ಞಾನ ಕೇಂದ್ರ ಹಗರಿ ಹಾಗೂ ಜಿಂದಾಲ್ ಫೌಂಡೇಷನ್ ವತಿಯಿಂದ ಸೋಮವಾರ ಹಮ್ಮಿಕೊಂಡಿದ್ದ ಕೃಷಿ ತರಬೇತಿ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.</p>.<p>‘ಕೃಷಿ ದೇಶದ ಬೆನ್ನುಲುಬು ಆಗಿದ್ದರಿಂದ ಗ್ರಾಮೀಣ ಪ್ರದೇಶದ ಬಡ ರೈತರಿಗೆ ಕೃಷಿ ಆಧಾರಿತ ವಿವಿಧ ತರಬೇತಿ ಕಾರ್ಯಗಳು ಬಹಳ ಅವಶ್ಯ’ ಎಂದರು.</p>.<p>ಜಿಂದಾಲ್ ಕಾರ್ಖಾನೆಯ ಹಿರಿಯ ಉಪಾಧ್ಯಕ್ಷ ಸುನೀಲ್ರಾಲ್ಫ್ ಮಾತನಾಡಿ, ‘ಜಗತ್ತಿನ ಎಲ್ಲ ರಾಷ್ಟ್ರಗಳು ಕೃಷಿಯ ಮೇಲೆ ಹೆಚ್ಚು ಅವಲಂಬಿತವಾಗಿದ್ದು, ಕೃಷಿಗೆ ಹೆಚ್ಚಿನ ಒತ್ತು ನೀಡುವುದಲ್ಲದೆ ಉತ್ತಮ ಬೆಳೆಗಳನ್ನು ಬೆಳೆಯಲು ಹೆಚ್ಚಿನ ಆಸಕ್ತಿ ತೋರಬೇಕು’ ಎಂದು ಸಲಹೆ ನೀಡಿದರು.</p>.<p>ಕಾರ್ಯಕ್ರಮದಲ್ಲಿ ಬಳ್ಳಾರಿ, ವಿಜಯನಗರ, ಕೊಪ್ಪಳ ಮತ್ತು ಚಿತ್ರದುರ್ಗ ಜಿಲ್ಲೆಗಳ ರೈತ ಉತ್ಪಾದಕ ಕಂಪನಿಗಳ 60ಕ್ಕೂ ಹೆಚ್ಚು ಸಿಬ್ಬಂದಿ ಭಾಗವಹಿಸಿದ್ದರು.</p>.<p>ಹಗರಿ ಕೃಷಿ ವಿಜ್ಞಾನ ಕೇಂದ್ರದ ಮುಖ್ಯಸ್ಥ ಡಾ.ಎಂ.ಆರ್.ಗೋವಿಂದಪ್ಪ, ಮಣ್ಣು ವಿಜ್ಞಾನಿ ಡಾ.ಎಸ್.ರವಿ, ಗೃಹ ವಿಜ್ಞಾನಿ ಡಾ.ಎಚ್.ಶಿಲ್ಪಾ, ಜಿಂದಾಲ್ನ ಮುಖ್ಯಸ್ಥರಾದ ಪೆದ್ದಣ್ಣಬಿಡಾಲ, ಕೃಷಿ ವಿಭಾಗದ ಸಂಯೋಜಕ ನಾಗನಗೌಡ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ತೋರಣಗಲ್ಲು:</strong> ‘ಯಶಸ್ವಿ ರೈತರ ಯಶೋಗಾಥೆಗಳನ್ನು ರೈತರಿಗೆ ಹೇಳುವುದರ ಮೂಲಕ ಸಮಗ್ರ ಕೃಷಿ ಪದ್ಧತಿಯತ್ತ ರೈತರನ್ನು ಸೆಳೆಯಬೇಕು. ಜೊತೆಗೆ ತೋಟಗಾರಿಕಾ ಬೆಳೆಗಳಿಂದ ರೈತರಿಗೆ ನಿರಂತರ ಆದಾಯ ಬರುತ್ತದೆ’ ಎಂದು ರಾಯಚೂರಿನ ಕೃಷಿ ವಿಜ್ಞಾನಗಳ ವಿಶ್ವವಿದ್ಯಾಲಯದ ಸಹ ಕೃಷಿ ವಿಸ್ತರಣಾ ನಿರ್ದೇಶಕ ಡಾ.ಎ.ಆರ್.ಕುರುಬರ್ ಹೇಳಿದರು.</p>.<p>ಇಲ್ಲಿನ ಒಪಿಜೆ ಕೇಂದ್ರದಲ್ಲಿ ಕೃಷಿ ವಿಜ್ಞಾನಗಳ ವಿಶ್ವವಿದ್ಯಾಲಯ ರಾಯಚೂರು, ಕೃಷಿ ವಿಜ್ಞಾನ ಕೇಂದ್ರ ಹಗರಿ ಹಾಗೂ ಜಿಂದಾಲ್ ಫೌಂಡೇಷನ್ ವತಿಯಿಂದ ಸೋಮವಾರ ಹಮ್ಮಿಕೊಂಡಿದ್ದ ಕೃಷಿ ತರಬೇತಿ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.</p>.<p>‘ಕೃಷಿ ದೇಶದ ಬೆನ್ನುಲುಬು ಆಗಿದ್ದರಿಂದ ಗ್ರಾಮೀಣ ಪ್ರದೇಶದ ಬಡ ರೈತರಿಗೆ ಕೃಷಿ ಆಧಾರಿತ ವಿವಿಧ ತರಬೇತಿ ಕಾರ್ಯಗಳು ಬಹಳ ಅವಶ್ಯ’ ಎಂದರು.</p>.<p>ಜಿಂದಾಲ್ ಕಾರ್ಖಾನೆಯ ಹಿರಿಯ ಉಪಾಧ್ಯಕ್ಷ ಸುನೀಲ್ರಾಲ್ಫ್ ಮಾತನಾಡಿ, ‘ಜಗತ್ತಿನ ಎಲ್ಲ ರಾಷ್ಟ್ರಗಳು ಕೃಷಿಯ ಮೇಲೆ ಹೆಚ್ಚು ಅವಲಂಬಿತವಾಗಿದ್ದು, ಕೃಷಿಗೆ ಹೆಚ್ಚಿನ ಒತ್ತು ನೀಡುವುದಲ್ಲದೆ ಉತ್ತಮ ಬೆಳೆಗಳನ್ನು ಬೆಳೆಯಲು ಹೆಚ್ಚಿನ ಆಸಕ್ತಿ ತೋರಬೇಕು’ ಎಂದು ಸಲಹೆ ನೀಡಿದರು.</p>.<p>ಕಾರ್ಯಕ್ರಮದಲ್ಲಿ ಬಳ್ಳಾರಿ, ವಿಜಯನಗರ, ಕೊಪ್ಪಳ ಮತ್ತು ಚಿತ್ರದುರ್ಗ ಜಿಲ್ಲೆಗಳ ರೈತ ಉತ್ಪಾದಕ ಕಂಪನಿಗಳ 60ಕ್ಕೂ ಹೆಚ್ಚು ಸಿಬ್ಬಂದಿ ಭಾಗವಹಿಸಿದ್ದರು.</p>.<p>ಹಗರಿ ಕೃಷಿ ವಿಜ್ಞಾನ ಕೇಂದ್ರದ ಮುಖ್ಯಸ್ಥ ಡಾ.ಎಂ.ಆರ್.ಗೋವಿಂದಪ್ಪ, ಮಣ್ಣು ವಿಜ್ಞಾನಿ ಡಾ.ಎಸ್.ರವಿ, ಗೃಹ ವಿಜ್ಞಾನಿ ಡಾ.ಎಚ್.ಶಿಲ್ಪಾ, ಜಿಂದಾಲ್ನ ಮುಖ್ಯಸ್ಥರಾದ ಪೆದ್ದಣ್ಣಬಿಡಾಲ, ಕೃಷಿ ವಿಭಾಗದ ಸಂಯೋಜಕ ನಾಗನಗೌಡ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>