<p><strong>ಹೂವಿನಹಡಗಲಿ: </strong>ಮಲೆನಾಡಿನಲ್ಲಿ ಮಳೆ ಹೆಚ್ಚಾಗಿ ಸುರಿಯುತ್ತಿರುವುದರಿಂದ ತುಂಗಭದ್ರಾ ನದಿಯ ಒಳ ಹರಿವು ಮತ್ತಷ್ಟು ಹೆಚ್ಚಳವಾಗಿದೆ. ನದಿ ಅಪಾಯ ಮಟ್ಟದಲ್ಲಿ ಹರಿಯುತ್ತಿರುವುದರಿಂದ ನದಿ ತೀರದ ಗ್ರಾಮಗಳಿಗೆ ಪ್ರವಾಹ ಭೀತಿ ಉಂಟಾಗಿದೆ.</p>.<p>ತಾಲ್ಲೂಕಿನ ಪ್ರಸಿದ್ಧ ಸುಕ್ಷೇತ್ರ ಮದಲಗಟ್ಟಿ ಆಂಜನೇಯ ದೇವಸ್ಥಾನವನ್ನು ಭಾನುವಾರ ನದಿ ಸುತ್ತುವರಿದಿದೆ. ದೇವಸ್ಥಾನ ಸಮಿತಿಯವರು ಮುಂಜಾಗ್ರತಾ ಕ್ರಮವಾಗಿ ದೇಗುಲ ಮುಂಭಾಗದ ನದಿಗೆ ಅಡ್ಡಲಾಗಿ ಹಗ್ಗ ಕಟ್ಟಿದ್ದಾರೆ. ನದಿಗೆ ಯಾರೂ ಇಳಿಯದಂತೆ ಅರಿವು ಮೂಡಿಸುತ್ತಿದ್ದಾರೆ.</p>.<p>ತಾಲ್ಲೂಕಿನ ಹಿರೇಬನ್ನಿಮಟ್ಟಿ, ಮಕರಬ್ಬಿ, ಬ್ಯಾಲಹುಣ್ಸಿ, ನಂದಿಗಾವಿ ಗ್ರಾಮಗಳ ನದಿ ತೀರದ ಕೃಷಿ ಜಮೀನುಗಳು ಮುಳುಗಡೆಯಾಗಿವೆ. ನೂರಾರು ಎಕರೆ ಭತ್ತ, ಅಡಿಕೆ, ಮೆಕ್ಕೆಜೋಳ ಬೆಳಗಳು ಜಲಾವೃತಗೊಂಡಿದ್ದು, ರೈತರು ಬೆಳೆಹಾನಿಯ ಆತಂಕಕ್ಕೆ ಒಳಗಾಗಿದ್ದಾರೆ. ನದಿಯ ನೀರಿನ ಮಟ್ಟ ಇನ್ನಷ್ಟು ಏರಿಕೆಯಾದಲ್ಲಿ ಮಕರಬ್ಬಿ-ಬ್ಯಾಲಹುಣ್ಸಿ ರಸ್ತೆ ಸಂಪರ್ಕ ಕಡಿತಗೊಳ್ಳುವ ಸಾಧ್ಯತೆ ಇದೆ. ನದಿಗೆ ಅಳವಡಿಸಿರುವ ಮೋಟಾರ್ ಪಂಪ್ ಸೆಟ್ ಗಳನ್ನು ತೆರವುಗೊಳಿಸಿ, ಹೊರಗೆ ತರಲು ರೈತರು ಪರದಾಡುತ್ತಿದ್ದಾರೆ.</p>.<p>ಸಮೀಪದ ಸಿಂಗಟಾಲೂರು ಬ್ಯಾರೇಜ್ ನಲ್ಲಿ ಭಾನುವಾರ 1,68,488 ಕ್ಯೂಸೆಕ್ ಒಳ ಹರಿವು ದಾಖಲಾಗಿದೆ. ಬ್ಯಾರೇಜ್ ನ 17 ಗೇಟ್ ಗಳನ್ನು ತೆರೆದು ಅಷ್ಟೇ ಪ್ರಮಾಣದ ನೀರನ್ನು ನದಿಗೆ ಬಿಡಲಾಗಿದೆ. ತಡೆಗೋಡೆ ದಾಟಿಕೊಂಡು ನದಿಯ ನೀರು ಭೋರ್ಗರೆಯುವ ದೃಶ್ಯ ರುದ್ರ ರಮಣೀಯವಾಗಿದೆ. ಇದನ್ನು ವೀಕ್ಷಿಸಲು ಅಪಾರ ಜನರು ಬ್ಯಾರೇಜ್ ಗೆ ಆಗಮಿಸುತ್ತಿದ್ದಾರೆ.</p>.<p>‘ನದಿ ತೀರದ ಕಣ್ಗಾವಲಿಗೆ ನೋಡಲ್ ಅಧಿಕಾರಿಗಳನ್ನು ನೇಮಿಸಲಾಗಿದೆ. ಪ್ರವಾಹ ಪರಿಸ್ಥಿತಿ ಎದುರಿಸಲು ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಲಾಗಿದೆ. ಅವಶ್ಯಕತೆ ಇರುವ ಕಡೆ ಕಾಳಜಿ ಕೇಂದ್ರಗಳನ್ನು ತೆರೆಯಲು ವಸತಿಶಾಲೆ, ಹಾಸ್ಟೆಲ್ ಗಳನ್ನು ಗುರುತಿಸಿದ್ದೇವೆ’ ಎಂದು ಪ್ರಭಾರ ತಹಶೀಲ್ದಾರ್ ಅಮರೇಶ ‘ಪ್ರಜಾವಾಣಿ’ಗೆ ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹೂವಿನಹಡಗಲಿ: </strong>ಮಲೆನಾಡಿನಲ್ಲಿ ಮಳೆ ಹೆಚ್ಚಾಗಿ ಸುರಿಯುತ್ತಿರುವುದರಿಂದ ತುಂಗಭದ್ರಾ ನದಿಯ ಒಳ ಹರಿವು ಮತ್ತಷ್ಟು ಹೆಚ್ಚಳವಾಗಿದೆ. ನದಿ ಅಪಾಯ ಮಟ್ಟದಲ್ಲಿ ಹರಿಯುತ್ತಿರುವುದರಿಂದ ನದಿ ತೀರದ ಗ್ರಾಮಗಳಿಗೆ ಪ್ರವಾಹ ಭೀತಿ ಉಂಟಾಗಿದೆ.</p>.<p>ತಾಲ್ಲೂಕಿನ ಪ್ರಸಿದ್ಧ ಸುಕ್ಷೇತ್ರ ಮದಲಗಟ್ಟಿ ಆಂಜನೇಯ ದೇವಸ್ಥಾನವನ್ನು ಭಾನುವಾರ ನದಿ ಸುತ್ತುವರಿದಿದೆ. ದೇವಸ್ಥಾನ ಸಮಿತಿಯವರು ಮುಂಜಾಗ್ರತಾ ಕ್ರಮವಾಗಿ ದೇಗುಲ ಮುಂಭಾಗದ ನದಿಗೆ ಅಡ್ಡಲಾಗಿ ಹಗ್ಗ ಕಟ್ಟಿದ್ದಾರೆ. ನದಿಗೆ ಯಾರೂ ಇಳಿಯದಂತೆ ಅರಿವು ಮೂಡಿಸುತ್ತಿದ್ದಾರೆ.</p>.<p>ತಾಲ್ಲೂಕಿನ ಹಿರೇಬನ್ನಿಮಟ್ಟಿ, ಮಕರಬ್ಬಿ, ಬ್ಯಾಲಹುಣ್ಸಿ, ನಂದಿಗಾವಿ ಗ್ರಾಮಗಳ ನದಿ ತೀರದ ಕೃಷಿ ಜಮೀನುಗಳು ಮುಳುಗಡೆಯಾಗಿವೆ. ನೂರಾರು ಎಕರೆ ಭತ್ತ, ಅಡಿಕೆ, ಮೆಕ್ಕೆಜೋಳ ಬೆಳಗಳು ಜಲಾವೃತಗೊಂಡಿದ್ದು, ರೈತರು ಬೆಳೆಹಾನಿಯ ಆತಂಕಕ್ಕೆ ಒಳಗಾಗಿದ್ದಾರೆ. ನದಿಯ ನೀರಿನ ಮಟ್ಟ ಇನ್ನಷ್ಟು ಏರಿಕೆಯಾದಲ್ಲಿ ಮಕರಬ್ಬಿ-ಬ್ಯಾಲಹುಣ್ಸಿ ರಸ್ತೆ ಸಂಪರ್ಕ ಕಡಿತಗೊಳ್ಳುವ ಸಾಧ್ಯತೆ ಇದೆ. ನದಿಗೆ ಅಳವಡಿಸಿರುವ ಮೋಟಾರ್ ಪಂಪ್ ಸೆಟ್ ಗಳನ್ನು ತೆರವುಗೊಳಿಸಿ, ಹೊರಗೆ ತರಲು ರೈತರು ಪರದಾಡುತ್ತಿದ್ದಾರೆ.</p>.<p>ಸಮೀಪದ ಸಿಂಗಟಾಲೂರು ಬ್ಯಾರೇಜ್ ನಲ್ಲಿ ಭಾನುವಾರ 1,68,488 ಕ್ಯೂಸೆಕ್ ಒಳ ಹರಿವು ದಾಖಲಾಗಿದೆ. ಬ್ಯಾರೇಜ್ ನ 17 ಗೇಟ್ ಗಳನ್ನು ತೆರೆದು ಅಷ್ಟೇ ಪ್ರಮಾಣದ ನೀರನ್ನು ನದಿಗೆ ಬಿಡಲಾಗಿದೆ. ತಡೆಗೋಡೆ ದಾಟಿಕೊಂಡು ನದಿಯ ನೀರು ಭೋರ್ಗರೆಯುವ ದೃಶ್ಯ ರುದ್ರ ರಮಣೀಯವಾಗಿದೆ. ಇದನ್ನು ವೀಕ್ಷಿಸಲು ಅಪಾರ ಜನರು ಬ್ಯಾರೇಜ್ ಗೆ ಆಗಮಿಸುತ್ತಿದ್ದಾರೆ.</p>.<p>‘ನದಿ ತೀರದ ಕಣ್ಗಾವಲಿಗೆ ನೋಡಲ್ ಅಧಿಕಾರಿಗಳನ್ನು ನೇಮಿಸಲಾಗಿದೆ. ಪ್ರವಾಹ ಪರಿಸ್ಥಿತಿ ಎದುರಿಸಲು ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಲಾಗಿದೆ. ಅವಶ್ಯಕತೆ ಇರುವ ಕಡೆ ಕಾಳಜಿ ಕೇಂದ್ರಗಳನ್ನು ತೆರೆಯಲು ವಸತಿಶಾಲೆ, ಹಾಸ್ಟೆಲ್ ಗಳನ್ನು ಗುರುತಿಸಿದ್ದೇವೆ’ ಎಂದು ಪ್ರಭಾರ ತಹಶೀಲ್ದಾರ್ ಅಮರೇಶ ‘ಪ್ರಜಾವಾಣಿ’ಗೆ ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>