<p><strong>ಹರಪನಹಳ್ಳಿ:</strong> ಗ್ಯಾರಂಟಿ ಯೋಜನೆಗಳಿಂದ ನಮ್ಮ ಕಾಂಗ್ರೆಸ್ ಸರ್ಕಾರಕ್ಕೆ ಬಲ ಬಂದಿದೆ ಎಂದು ಶಾಸಕಿ ಎಂ.ಪಿ.ಲತಾ ಮಲ್ಲಿಕಾರ್ಜುನ ತಿಳಿಸಿದರು.</p>.<p>ತಾಲ್ಲೂಕಿನ ಚಿಗಟೇರಿಯಲ್ಲಿ ನಡೆದ ಗ್ಯಾರಂಟಿ ಯೋಜನೆಯ ಫಲಾನುಭವಿಗಳ ಸಮ್ಮೇಳನ ಉದ್ಘಾಟಿಸಿ ಅವರು ಮಾತನಾಡಿದರು.</p>.<p>ನಮ್ಮ ಸರ್ಕಾರ 5 ಗ್ಯಾರಂಟಿಗಳಿಂದ ಸರ್ಕಾರಕ್ಕೆ ಹಿನ್ನೆಡೆಯಾಗಿದೆ ಎಂದು ಬಹಳ ಜನ ತಪ್ಪು ಅಭಿಪ್ರಾಯ ಹೊಂದಿದ್ದಾರೆ. ಆದರೆ ಈ ಉಚಿತ ಸೌಲಭ್ಯಗಳಿಂದ ರಾಜ್ಯ ಸರ್ಕಾರಕ್ಕೆ ಶಕ್ತಿ ಬಂದಿದೆ ಎಂದು ಹೇಳಿದರು.</p>.<p>ಲೋಕೋಪಯೋಗಿ ಇಲಾಖೆಯಿಂದ ನನ್ನ ಕ್ಷೇತ್ರಕ್ಕೆ ₹ 20 ಕೋಟಿ ಅನುದಾನ, ಮುಖ್ಯಮಂತ್ರಿ ಅನುದಾನದಿಂದ ₹ 25 ಕೋಟಿ, ಅಲ್ಪಸಂಖ್ಯಾತ ಕಲ್ಯಾಣ ಇಲಾಖೆಯಿಂದ ₹ 5 ಕೋಟಿ ಹಾಗೂ ಸಮಾಜಕಲ್ಯಾಣ ಇಲಾಖೆಯಿಂದ ₹ 2 ಕೋಟಿ ಒಟ್ಟು ₹ 52 ಕೋಟಿ ಅನುದಾನ ಹರಪನಹಳ್ಳಿ ಕ್ಷೇತ್ರದ ಅಭಿವೃದ್ದಿಗೆ ಬಿಡುಗಡೆಯಾಗಿದೆ ಎಂದು ಮಾಹಿತಿ ನೀಡಿದರು.</p>.<p>ಕಲ್ಯಾಣ ಕರ್ನಾಟಕ ಅಭಿವೃದ್ದಿ ಮಂಡಳಿಯಿಂದಲೂ ಸಾಕಷ್ಟು ಅನುದಾನ ತಾಲ್ಲೂಕಿಗೆ ಬಂದಿದೆ. ಕೇವಲ 8 ತಿಂಗಳಲ್ಲಿ ಒಟ್ಟು ನನ್ನ ಕ್ಷೇತ್ರಕ್ಕೆ ₹ 200 ಕೋಟಿಗೂ ಅಧಿಕ ಹಣ ಬಿಡುಗಡೆಯಾಗಿದ್ದು, ಇದರಡಿ ಹಂತ ಹಂತವಾಗಿ ಅಭಿವೃದ್ದಿ ಕಾರ್ಯಗಳನ್ನು ಕ್ಷೇತ್ರದಲ್ಲಿ ಮಾಡುವುದಾಗಿ ತಿಳಿಸಿದರು.</p>.<p>ಗೃಹಜ್ಯೋತಿ, ಶಕ್ತಿ, ಗೃಹಲಕ್ಷ್ಮಿ, ನಿರುದ್ಯೋಗ ಭತ್ಯೆ ಸೇರಿ 5 ಗ್ಯಾರಂಟಿ ಯೋಜನೆಗಳ ವರದಿಯನ್ನು ವಿವಿಧ ಇಲಾಖೆ ಅಧಿಕಾರಿಗಳು ಮಂಡಿಸಿದರು. ತಹಶೀಲ್ದಾರ ಬಿ.ವಿ.ಗಿರೀಶ್ ಬಾಬು, ಇಒ ಪ್ರಕಾಶ್, ಸಿಡಿಪಿಒ ಹರೀಶ್, ಮತ್ತೂರು ಬಸವರಾಜ್ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹರಪನಹಳ್ಳಿ:</strong> ಗ್ಯಾರಂಟಿ ಯೋಜನೆಗಳಿಂದ ನಮ್ಮ ಕಾಂಗ್ರೆಸ್ ಸರ್ಕಾರಕ್ಕೆ ಬಲ ಬಂದಿದೆ ಎಂದು ಶಾಸಕಿ ಎಂ.ಪಿ.ಲತಾ ಮಲ್ಲಿಕಾರ್ಜುನ ತಿಳಿಸಿದರು.</p>.<p>ತಾಲ್ಲೂಕಿನ ಚಿಗಟೇರಿಯಲ್ಲಿ ನಡೆದ ಗ್ಯಾರಂಟಿ ಯೋಜನೆಯ ಫಲಾನುಭವಿಗಳ ಸಮ್ಮೇಳನ ಉದ್ಘಾಟಿಸಿ ಅವರು ಮಾತನಾಡಿದರು.</p>.<p>ನಮ್ಮ ಸರ್ಕಾರ 5 ಗ್ಯಾರಂಟಿಗಳಿಂದ ಸರ್ಕಾರಕ್ಕೆ ಹಿನ್ನೆಡೆಯಾಗಿದೆ ಎಂದು ಬಹಳ ಜನ ತಪ್ಪು ಅಭಿಪ್ರಾಯ ಹೊಂದಿದ್ದಾರೆ. ಆದರೆ ಈ ಉಚಿತ ಸೌಲಭ್ಯಗಳಿಂದ ರಾಜ್ಯ ಸರ್ಕಾರಕ್ಕೆ ಶಕ್ತಿ ಬಂದಿದೆ ಎಂದು ಹೇಳಿದರು.</p>.<p>ಲೋಕೋಪಯೋಗಿ ಇಲಾಖೆಯಿಂದ ನನ್ನ ಕ್ಷೇತ್ರಕ್ಕೆ ₹ 20 ಕೋಟಿ ಅನುದಾನ, ಮುಖ್ಯಮಂತ್ರಿ ಅನುದಾನದಿಂದ ₹ 25 ಕೋಟಿ, ಅಲ್ಪಸಂಖ್ಯಾತ ಕಲ್ಯಾಣ ಇಲಾಖೆಯಿಂದ ₹ 5 ಕೋಟಿ ಹಾಗೂ ಸಮಾಜಕಲ್ಯಾಣ ಇಲಾಖೆಯಿಂದ ₹ 2 ಕೋಟಿ ಒಟ್ಟು ₹ 52 ಕೋಟಿ ಅನುದಾನ ಹರಪನಹಳ್ಳಿ ಕ್ಷೇತ್ರದ ಅಭಿವೃದ್ದಿಗೆ ಬಿಡುಗಡೆಯಾಗಿದೆ ಎಂದು ಮಾಹಿತಿ ನೀಡಿದರು.</p>.<p>ಕಲ್ಯಾಣ ಕರ್ನಾಟಕ ಅಭಿವೃದ್ದಿ ಮಂಡಳಿಯಿಂದಲೂ ಸಾಕಷ್ಟು ಅನುದಾನ ತಾಲ್ಲೂಕಿಗೆ ಬಂದಿದೆ. ಕೇವಲ 8 ತಿಂಗಳಲ್ಲಿ ಒಟ್ಟು ನನ್ನ ಕ್ಷೇತ್ರಕ್ಕೆ ₹ 200 ಕೋಟಿಗೂ ಅಧಿಕ ಹಣ ಬಿಡುಗಡೆಯಾಗಿದ್ದು, ಇದರಡಿ ಹಂತ ಹಂತವಾಗಿ ಅಭಿವೃದ್ದಿ ಕಾರ್ಯಗಳನ್ನು ಕ್ಷೇತ್ರದಲ್ಲಿ ಮಾಡುವುದಾಗಿ ತಿಳಿಸಿದರು.</p>.<p>ಗೃಹಜ್ಯೋತಿ, ಶಕ್ತಿ, ಗೃಹಲಕ್ಷ್ಮಿ, ನಿರುದ್ಯೋಗ ಭತ್ಯೆ ಸೇರಿ 5 ಗ್ಯಾರಂಟಿ ಯೋಜನೆಗಳ ವರದಿಯನ್ನು ವಿವಿಧ ಇಲಾಖೆ ಅಧಿಕಾರಿಗಳು ಮಂಡಿಸಿದರು. ತಹಶೀಲ್ದಾರ ಬಿ.ವಿ.ಗಿರೀಶ್ ಬಾಬು, ಇಒ ಪ್ರಕಾಶ್, ಸಿಡಿಪಿಒ ಹರೀಶ್, ಮತ್ತೂರು ಬಸವರಾಜ್ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>