<p><strong>ಹರಪನಹಳ್ಳಿ: ‘</strong>ಕಾರ್ಮಿಕ ಮಂಡಳಿಯಲ್ಲಿ ನಡೆದಿರುವ ಕೋಟ್ಯಂತರ ಅವ್ಯವಹಾರ ನ್ಯಾಯಾಂಗ ತನಿಖೆಗೆ ಒಳಪಡಿಸಬೇಕು ಎಂದು ಒತ್ತಾಯಿಸಿ ಆಗಸ್ಟ್ 5ರಂದು ಮುಖ್ಯಮಂತ್ರಿ ಮನೆ ಚಲೋ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ’ ಎಂದು ರಾಜ್ಯ ಪ್ರಗತಿಪರ ಕಟ್ಟಡ ಕಾರ್ಮಿಕ ಸಂಘದ ರಾಜ್ಯ ಘಟಕದ ಅಧ್ಯಕ್ಷ ಅಪ್ಪಣ್ಣ ತಿಳಿಸಿದರು.</p>.<p>ಪಟ್ಟಣದ ಪ್ರವಾಸಿ ಮಂದಿರ ಆವರಣದಲ್ಲಿ ಮಂಗಳವಾರ ಪ್ರತಿಭಟನೆ ಬಳಿಕ ಕರೆದಿದ್ದ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿದರು.</p>.<p>ರಾಜ್ಯ ಕಾರ್ಮಿಕರ ಸಮನ್ವಯ ಸಮಿತಿ ನೇತೃತ್ವದಲ್ಲಿ ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ನಡೆಯುವ ಪ್ರತಿಭಟನೆಗೆ ಹೆಚ್ಚಿನ ಸಂಖ್ಯೆಯಲ್ಲಿ ಕಾರ್ಮಿಕರನ್ನು ಸೇರಿಸಲಾಗುತ್ತಿದೆ ಎಂದರು.</p>.<p>‘2019ರಿಂದ ಇಲ್ಲಿಯವರೆಗೂ ಕಾರ್ಮಿಕರ ಕಲ್ಯಾಣ ಮಂಡಳಿಯಲ್ಲಿ ₹4,500 ಕೋಟಿ ಹಣದ ಅಕ್ರಮ ನಡೆದಿದೆ. ಕೆಲ ವಿದ್ಯಾಸಂಸ್ಥೆಗಳು ಅಧಿಕಾರಿಗಳ ಜೊತೆ ಶಾಮೀಲಾಗಿ ಸಾವಿರಾರು ಅನರ್ಹರಿಗೆ ಕಾರ್ಮಿಕರ ಕಾರ್ಡ್ ವಿತರಿಸಿ, ಸ್ಕಾಲರ್ ಶಿಪ್ ಪಾವತಿ, ಮನೆ ನಿರ್ಮಾಣದ ಹೆಸರಿನಲ್ಲಿ ಅಕ್ರಮವಾಗಿ ₹400 ಕೋಟಿ ಹಣ ಸ್ಲಂ ಬೋರ್ಡ್ಗೆ ವರ್ಗಾಯಿಸಲಾಗಿದೆ. ಆರೋಗ್ಯ ತಪಾಸಣೆ, ಕಿಟ್ ವಿತರಣೆ, ಅಂಬುಲೆನ್ಸ್ ಖರೀದಿಯಲ್ಲಿ ಕೋಟ್ಯಂತರ ರೂಪಾಯಿ ಅವ್ಯವಹಾರ ನಡೆದಿದೆ. ಇದನ್ನು ನ್ಯಾಯಾಂಗ ತನಿಖೆಗೆ ಒಳಪಡಿಸಿ, ತಪ್ಪಿತಸ್ಥರಿಗೆ ಕಠಿಣ ಶಿಕ್ಷೆ ವಿಧಿಸಬೇಕು’ ಎಂದು ಆಗ್ರಹಿಸಿದರು.</p>.<p>ಕಾರ್ಮಿಕರಿಗಾಗಿ ಜಾರಿಗೆ ತಂದಿರುವ ಆರೋಗ್ಯಶ್ರೀ ಯೋಜನೆಯಿಂದ ಖಾಸಗಿ ಕಂಪನಿಗೆ ಲಾಭ ಆಗಿದೆಯೇ ಹೊರತು ಕಾರ್ಮಿಕರಿಗೆ ಕಿಂಚಿತ್ತೂ ಅನುಕೂಲವಾಗಿಲ್ಲ ಎಂದು ಆರೋಪಿಸಿದರು.</p>.<p>ಜಿಲ್ಲಾ ಕಾರ್ಯದರ್ಶಿ ಸಂದೇರ ಪರಶುರಾಮ್ ಮಾತನಾಡಿ, ‘ಕಟ್ಟಡ ಕಟ್ಟುವಾಗ ಆಕಸ್ಮಿಕ ಸಂಭವಿಸುವ ಅವಘಡಗಳಿಗೆ ಕಾರ್ಮಿಕರು ಸಾಯುತ್ತಿದ್ದಾರೆ. ಹರಪನಹಳ್ಳಿಯಲ್ಲಿ ಸಾವಿರಾರು ಬೋಗಸ್ ಕಾರ್ಡುಗಳಿವೆ. ಕಾರ್ಮಿಕ ಸಂಘಟನೆಗಳ ಸಭೆ ಕರೆಯದೇ, ಕಿಟ್ ಹಂಚಿಕೆ ಮಾಡಿದ್ದಾರೆ. ಅರ್ಹರಿಗೆ ತಲುಪಿಲ್ಲ’ ಎಂದು ದೂರಿದರು.</p>.<p>ಮುಖಂಡರಾದ ಬಾಲಗಂಗಾಧರ, ಸಂತೋಷ ಗುಳೇದಹಟ್ಟಿ , ದೊಡ್ಡ ಹಾಲಯ್ಯ, ರೆವಣಸಿದ್ದಪ್ಪ, ಪರಸಪ್ಪ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹರಪನಹಳ್ಳಿ: ‘</strong>ಕಾರ್ಮಿಕ ಮಂಡಳಿಯಲ್ಲಿ ನಡೆದಿರುವ ಕೋಟ್ಯಂತರ ಅವ್ಯವಹಾರ ನ್ಯಾಯಾಂಗ ತನಿಖೆಗೆ ಒಳಪಡಿಸಬೇಕು ಎಂದು ಒತ್ತಾಯಿಸಿ ಆಗಸ್ಟ್ 5ರಂದು ಮುಖ್ಯಮಂತ್ರಿ ಮನೆ ಚಲೋ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ’ ಎಂದು ರಾಜ್ಯ ಪ್ರಗತಿಪರ ಕಟ್ಟಡ ಕಾರ್ಮಿಕ ಸಂಘದ ರಾಜ್ಯ ಘಟಕದ ಅಧ್ಯಕ್ಷ ಅಪ್ಪಣ್ಣ ತಿಳಿಸಿದರು.</p>.<p>ಪಟ್ಟಣದ ಪ್ರವಾಸಿ ಮಂದಿರ ಆವರಣದಲ್ಲಿ ಮಂಗಳವಾರ ಪ್ರತಿಭಟನೆ ಬಳಿಕ ಕರೆದಿದ್ದ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿದರು.</p>.<p>ರಾಜ್ಯ ಕಾರ್ಮಿಕರ ಸಮನ್ವಯ ಸಮಿತಿ ನೇತೃತ್ವದಲ್ಲಿ ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ನಡೆಯುವ ಪ್ರತಿಭಟನೆಗೆ ಹೆಚ್ಚಿನ ಸಂಖ್ಯೆಯಲ್ಲಿ ಕಾರ್ಮಿಕರನ್ನು ಸೇರಿಸಲಾಗುತ್ತಿದೆ ಎಂದರು.</p>.<p>‘2019ರಿಂದ ಇಲ್ಲಿಯವರೆಗೂ ಕಾರ್ಮಿಕರ ಕಲ್ಯಾಣ ಮಂಡಳಿಯಲ್ಲಿ ₹4,500 ಕೋಟಿ ಹಣದ ಅಕ್ರಮ ನಡೆದಿದೆ. ಕೆಲ ವಿದ್ಯಾಸಂಸ್ಥೆಗಳು ಅಧಿಕಾರಿಗಳ ಜೊತೆ ಶಾಮೀಲಾಗಿ ಸಾವಿರಾರು ಅನರ್ಹರಿಗೆ ಕಾರ್ಮಿಕರ ಕಾರ್ಡ್ ವಿತರಿಸಿ, ಸ್ಕಾಲರ್ ಶಿಪ್ ಪಾವತಿ, ಮನೆ ನಿರ್ಮಾಣದ ಹೆಸರಿನಲ್ಲಿ ಅಕ್ರಮವಾಗಿ ₹400 ಕೋಟಿ ಹಣ ಸ್ಲಂ ಬೋರ್ಡ್ಗೆ ವರ್ಗಾಯಿಸಲಾಗಿದೆ. ಆರೋಗ್ಯ ತಪಾಸಣೆ, ಕಿಟ್ ವಿತರಣೆ, ಅಂಬುಲೆನ್ಸ್ ಖರೀದಿಯಲ್ಲಿ ಕೋಟ್ಯಂತರ ರೂಪಾಯಿ ಅವ್ಯವಹಾರ ನಡೆದಿದೆ. ಇದನ್ನು ನ್ಯಾಯಾಂಗ ತನಿಖೆಗೆ ಒಳಪಡಿಸಿ, ತಪ್ಪಿತಸ್ಥರಿಗೆ ಕಠಿಣ ಶಿಕ್ಷೆ ವಿಧಿಸಬೇಕು’ ಎಂದು ಆಗ್ರಹಿಸಿದರು.</p>.<p>ಕಾರ್ಮಿಕರಿಗಾಗಿ ಜಾರಿಗೆ ತಂದಿರುವ ಆರೋಗ್ಯಶ್ರೀ ಯೋಜನೆಯಿಂದ ಖಾಸಗಿ ಕಂಪನಿಗೆ ಲಾಭ ಆಗಿದೆಯೇ ಹೊರತು ಕಾರ್ಮಿಕರಿಗೆ ಕಿಂಚಿತ್ತೂ ಅನುಕೂಲವಾಗಿಲ್ಲ ಎಂದು ಆರೋಪಿಸಿದರು.</p>.<p>ಜಿಲ್ಲಾ ಕಾರ್ಯದರ್ಶಿ ಸಂದೇರ ಪರಶುರಾಮ್ ಮಾತನಾಡಿ, ‘ಕಟ್ಟಡ ಕಟ್ಟುವಾಗ ಆಕಸ್ಮಿಕ ಸಂಭವಿಸುವ ಅವಘಡಗಳಿಗೆ ಕಾರ್ಮಿಕರು ಸಾಯುತ್ತಿದ್ದಾರೆ. ಹರಪನಹಳ್ಳಿಯಲ್ಲಿ ಸಾವಿರಾರು ಬೋಗಸ್ ಕಾರ್ಡುಗಳಿವೆ. ಕಾರ್ಮಿಕ ಸಂಘಟನೆಗಳ ಸಭೆ ಕರೆಯದೇ, ಕಿಟ್ ಹಂಚಿಕೆ ಮಾಡಿದ್ದಾರೆ. ಅರ್ಹರಿಗೆ ತಲುಪಿಲ್ಲ’ ಎಂದು ದೂರಿದರು.</p>.<p>ಮುಖಂಡರಾದ ಬಾಲಗಂಗಾಧರ, ಸಂತೋಷ ಗುಳೇದಹಟ್ಟಿ , ದೊಡ್ಡ ಹಾಲಯ್ಯ, ರೆವಣಸಿದ್ದಪ್ಪ, ಪರಸಪ್ಪ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>