ಕಂಪ್ಲಿ (ಬಳ್ಳಾರಿ ಜಿಲ್ಲೆ): ನಿಗಮ ಮಂಡಳಿಗಳ ಅಧ್ಯಕ್ಷರ ಪಟ್ಟಿ ಗೊಂದಲ ಕುರಿತಂತೆ ‘ಹೀಗೆ ಆಗಬಾರದಿತ್ತು’ ಎಂದು ಶಾಸಕ ಜೆ.ಎನ್.ಗಣೇಶ್ ಬೇಸರ ವ್ಯಕ್ತಪಡಿಸಿದರು.
ತಾಲ್ಲೂಕಿನ ಸಣಾಪುರ ಗ್ರಾಮದಲ್ಲಿ ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ‘ನಿಗಮ ಮಂಡಳಿ ಪಟ್ಟಿಯಲ್ಲಿ ನನ್ನ ಹೆಸರು ಇದ್ದರೇನು? ಇಲ್ಲದಿದ್ದರೇನು?’ ಎಂದು ಬೇಸರ ವ್ಯಕ್ತಪಡಿಸಿದರು.
‘ಸಂಭಾವ್ಯರ ಮೊದಲ ಪಟ್ಟಿಯಲ್ಲಿ ಶಾಸಕ ಗಣೇಶ್ ಅವರಿಗೆ ‘ಖಾದಿ ನಿಗಮ’ಕ್ಕೆ ನೀಡಲಾಗುವುದು ಎಂದು ಕೇಳಿ ಬಂದಿತ್ತು. ಆ ವಿಷಯವು ಸಾಮಾಜಿಕ ಜಾಲತಾಣಗಳಲ್ಲೂ ಹರಿದಾಡಿತ್ತು. ಆದರೆ, ಶಾಸಕರು ಕೇಳಿದ ನಿಗಮ ಮಂಡಳಿ ನೀಡದಿರುವುದೇ ಈ ಅಸಮಾಧಾನಕ್ಕೆ ಕಾರಣವಿರಬಹುದು’ ಎಂದು ಹೆಸರು ಕಾಂಗ್ರೆಸ್ ಮುಖಂಡರೊಬ್ಬರು ತಿಳಿಸಿದರು.