<p><strong>ಕಂಪ್ಲಿ:</strong> ಇಲ್ಲಿಯ ಶಿಬಿರದಿನ್ನಿ ಬಲ ಭಾಗದಲ್ಲಿ 1988ರಲ್ಲಿ ನಿವೇಶನಕ್ಕಾಗಿ ₹ 350 ಪುರಸಭೆಗೆ ಪಾವತಿಸಿದ್ದು, ಇದುವರೆಗೂ ಸ್ಥಳ ಮಂಜೂರು ಮಾಡಿಲ್ಲ ಎಂದು ನಿವೇಶನ ರಹಿತ 9 ಜನರು ಆರೋಪಿಸಿದರು.</p>.<p>ಇಲ್ಲಿಯ ತಾಲ್ಲೂಕು ಕಚೇರಿ ಸಭಾಂಗಣದಲ್ಲಿ ಬಳ್ಳಾರಿ ಲೋಕಾಯುಕ್ತ ಪೊಲೀಸ್ ಅಧಿಕಾರಿಗಳಿಂದ ಶನಿವಾರ ಆಯೋಜಿಸಿದ್ದ ಸಾರ್ವಜನಿಕ ಕುಂದು ಕೊರತೆ ಸ್ವೀಕಾರ ಸಭೆಯಲ್ಲಿ ನಿರಾಶ್ರಿತರು ಅರ್ಜಿ ಸಲ್ಲಿಸಿ ಗೋಳು ತೋಡಿಕೊಂಡರು.</p>.<p>ನಟರಾಜ ಕಲಾ ವಿಜಯ ಸಂಘದ ಮುಂಭಾಗದಲ್ಲಿ ನಿರ್ಮಿಸಿದ ಸಿಸಿ ರಸ್ತೆ ಕಳಪೆ, ಹಕ್ಕು ಪತ್ರ ಬದಲಾವಣೆ, ತಾಲ್ಲೂಕಿನ ಹಿರೇಜಾಯಿಗನೂರು ಗ್ರಾಮದಲ್ಲಿ ಸ್ಮಶಾನ ಒತ್ತುವರಿ,<br> ಇಲ್ಲಿಯ ಎಪಿಎಂಸಿಯಲ್ಲಿ ಅನಧಿಕೃತವಾಗಿ ನಿರ್ಮಿಸಿದ 39 ವಾಣಿಜ್ಯ ಮಳಿಗೆಗಳನ್ನು ತೆರವುಗೊಳಿಸಲು ಮತ್ತು ತಾಲ್ಲೂಕಿನಲ್ಲಿ ಎಸ್.ಸಿ, ಎಸ್.ಟಿ ಸಮುದಾಯಕ್ಕೆ ಮಂಜೂರಾದ ಅನುದಾನ, ಯೋಜನೆಗಳ ಬಗ್ಗೆ ಅಧಿಕಾರಿಗಳು ಸರ್ಮಪಕ ಮಾಹಿತಿ ನೀಡುತ್ತಿಲ್ಲ ಎಂದು ಸಾರ್ವಜನಿಕರು ಅರ್ಜಿ ಸಲ್ಲಿಸಿದರು.</p>.<p>ಲೋಕಾಯುಕ್ತ ನಿರೀಕ್ಷಕ ಮಹಮ್ಮದ್ ರಫಿ ಮಾತನಾಡಿ, ವಿವಿಧ ಇಲಾಖೆಗೆ ಸಂಬಂಧಿಸಿದ 10 ಅರ್ಜಿಗಳು ಸಲ್ಲಿಕೆಯಾಗಿದ್ದು, ಸಂಬಂಧಿಸಿದ ಅಧಿಕಾರಿಗಳಿಗೆ ಸೂಕ್ತ ಕ್ರಮಕೈಗೊಳ್ಳಲು ಸೂಚಿಸಿದರು.</p>.<p>ತಹಶೀಲ್ದಾರ್ ಶಿವರಾಜ, ಪುರಸಭೆ ಮುಖ್ಯಾಧಿಕಾರಿ ಕೆ. ದುರುಗಣ್ಣ, ತಾಲ್ಲೂಕು ಪಂಚಾಯಿತಿ ಇಒ ಶ್ರೀಕುಮಾರ್, ನರೇಗಾ ಎ.ಡಿ ಕೆ.ಎಸ್. ಮಲ್ಲನಗೌಡ, ವಿವಿಧ ಇಲಾಖೆ ಅಧಿಕಾರಿಗಳು ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕಂಪ್ಲಿ:</strong> ಇಲ್ಲಿಯ ಶಿಬಿರದಿನ್ನಿ ಬಲ ಭಾಗದಲ್ಲಿ 1988ರಲ್ಲಿ ನಿವೇಶನಕ್ಕಾಗಿ ₹ 350 ಪುರಸಭೆಗೆ ಪಾವತಿಸಿದ್ದು, ಇದುವರೆಗೂ ಸ್ಥಳ ಮಂಜೂರು ಮಾಡಿಲ್ಲ ಎಂದು ನಿವೇಶನ ರಹಿತ 9 ಜನರು ಆರೋಪಿಸಿದರು.</p>.<p>ಇಲ್ಲಿಯ ತಾಲ್ಲೂಕು ಕಚೇರಿ ಸಭಾಂಗಣದಲ್ಲಿ ಬಳ್ಳಾರಿ ಲೋಕಾಯುಕ್ತ ಪೊಲೀಸ್ ಅಧಿಕಾರಿಗಳಿಂದ ಶನಿವಾರ ಆಯೋಜಿಸಿದ್ದ ಸಾರ್ವಜನಿಕ ಕುಂದು ಕೊರತೆ ಸ್ವೀಕಾರ ಸಭೆಯಲ್ಲಿ ನಿರಾಶ್ರಿತರು ಅರ್ಜಿ ಸಲ್ಲಿಸಿ ಗೋಳು ತೋಡಿಕೊಂಡರು.</p>.<p>ನಟರಾಜ ಕಲಾ ವಿಜಯ ಸಂಘದ ಮುಂಭಾಗದಲ್ಲಿ ನಿರ್ಮಿಸಿದ ಸಿಸಿ ರಸ್ತೆ ಕಳಪೆ, ಹಕ್ಕು ಪತ್ರ ಬದಲಾವಣೆ, ತಾಲ್ಲೂಕಿನ ಹಿರೇಜಾಯಿಗನೂರು ಗ್ರಾಮದಲ್ಲಿ ಸ್ಮಶಾನ ಒತ್ತುವರಿ,<br> ಇಲ್ಲಿಯ ಎಪಿಎಂಸಿಯಲ್ಲಿ ಅನಧಿಕೃತವಾಗಿ ನಿರ್ಮಿಸಿದ 39 ವಾಣಿಜ್ಯ ಮಳಿಗೆಗಳನ್ನು ತೆರವುಗೊಳಿಸಲು ಮತ್ತು ತಾಲ್ಲೂಕಿನಲ್ಲಿ ಎಸ್.ಸಿ, ಎಸ್.ಟಿ ಸಮುದಾಯಕ್ಕೆ ಮಂಜೂರಾದ ಅನುದಾನ, ಯೋಜನೆಗಳ ಬಗ್ಗೆ ಅಧಿಕಾರಿಗಳು ಸರ್ಮಪಕ ಮಾಹಿತಿ ನೀಡುತ್ತಿಲ್ಲ ಎಂದು ಸಾರ್ವಜನಿಕರು ಅರ್ಜಿ ಸಲ್ಲಿಸಿದರು.</p>.<p>ಲೋಕಾಯುಕ್ತ ನಿರೀಕ್ಷಕ ಮಹಮ್ಮದ್ ರಫಿ ಮಾತನಾಡಿ, ವಿವಿಧ ಇಲಾಖೆಗೆ ಸಂಬಂಧಿಸಿದ 10 ಅರ್ಜಿಗಳು ಸಲ್ಲಿಕೆಯಾಗಿದ್ದು, ಸಂಬಂಧಿಸಿದ ಅಧಿಕಾರಿಗಳಿಗೆ ಸೂಕ್ತ ಕ್ರಮಕೈಗೊಳ್ಳಲು ಸೂಚಿಸಿದರು.</p>.<p>ತಹಶೀಲ್ದಾರ್ ಶಿವರಾಜ, ಪುರಸಭೆ ಮುಖ್ಯಾಧಿಕಾರಿ ಕೆ. ದುರುಗಣ್ಣ, ತಾಲ್ಲೂಕು ಪಂಚಾಯಿತಿ ಇಒ ಶ್ರೀಕುಮಾರ್, ನರೇಗಾ ಎ.ಡಿ ಕೆ.ಎಸ್. ಮಲ್ಲನಗೌಡ, ವಿವಿಧ ಇಲಾಖೆ ಅಧಿಕಾರಿಗಳು ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>