<p>ಕೊಟ್ಟೂರು: ಕುಟುಂಬ ಮತ್ತು ಸಮಾಜ ವ್ಯವಸ್ಥಿತವಾಗಿ ಸಾಗಲು ಹೆಣ್ಣಿನ ಪಾತ್ರ ಬಹುಮುಖ್ಯವಾಗಿದೆ ಎಂದು ಸಾರ್ವಜನಿಕ ಗ್ರಂಥಾಲಯದ ಗ್ರಂಥಾಲಯಾಧಿಕಾರಿ ಮಲ್ಲಪ್ಪ ಗುಡ್ಲಾನೂರ್ ಅಭಿಪ್ರಾಯ ವ್ಯಕ್ತಪಡಿಸಿದರು.</p>.<p>ಪಟ್ಟಣದ ಅಂಗನವಾಡಿ ಕೇಂದ್ರದ ಆವರಣದಲ್ಲಿ ಬುಧವಾರ ನಡೆದ ರಾಷ್ಟ್ರೀಯ ಹೆಣ್ಣುಮಕ್ಕಳ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ‘ಬಾಲಕಿಯರಿಗೆ ಎಳೆಯ ಪ್ರಾಯದಲ್ಲಿ ಸೂಕ್ತವಾದ ಶಿಕ್ಷಣ ಕೊಡಿಸಿದರೆ ಮುಂದೆ ಅವರ ಜೀವನ ಸುಗಮವಾಗಿ ಸಾಗಿ ಆರ್ಥಿಕವಾಗಿ, ಸ್ವಾವಲಂಬಿಯಾಗಿ ಬದುಕು ಕಟ್ಟಿಕೊಳ್ಳಲು ಸಾಧ್ಯವಾಗುತ್ತದೆ’ ಎಂದರು.</p>.<p>ಎಲ್ಲಾ ರಂಗಗಳಲ್ಲೂ ಹೆಣ್ಣು ಮಕ್ಕಳು ಇಂದು ಮುಂಚೂಣಿಯಲ್ಲಿದ್ದು, ಕುಟುಂಬ ಹಾಗೂ ಹೊರಗೂ ಸಮರ್ಥವಾಗಿ ಕೆಲಸಗಳನ್ನು ನಿರ್ವಹಿಸುವ ಮೂಲಕ ಜಾಣ್ಮೆಯನ್ನು ತೋರುತ್ತಿದ್ದಾರೆ. ಹಾಗಾಗಿ ಅವರನ್ನು ಗೌರವಿಸಿ ಪ್ರೋತ್ಸಾಹಿಸುವ ನಿಟ್ಟಿನಲ್ಲಿ ಸರ್ಕಾರ ಹಲವಾರು ಯೋಜನೆಗಳನ್ನು ಜಾರಿಗೆ ತಂದು ಅನುಷ್ಠಾನಗೊಳಿಸುತ್ತಿರುವುದು ಶ್ಲಾಘನೀಯ ಎಂದರು.</p>.<p>ಶಿಕ್ಷಕಿ ಅಕ್ಕಮಹಾದೇವಿ ಮಾತನಾಡಿದರು, ಹನುಮಕ್ಕ, ರತ್ನಮ್ಮ ಹಾಗೂ ಪಾಲಕರು ಪಾಲ್ಗೊಂಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಕೊಟ್ಟೂರು: ಕುಟುಂಬ ಮತ್ತು ಸಮಾಜ ವ್ಯವಸ್ಥಿತವಾಗಿ ಸಾಗಲು ಹೆಣ್ಣಿನ ಪಾತ್ರ ಬಹುಮುಖ್ಯವಾಗಿದೆ ಎಂದು ಸಾರ್ವಜನಿಕ ಗ್ರಂಥಾಲಯದ ಗ್ರಂಥಾಲಯಾಧಿಕಾರಿ ಮಲ್ಲಪ್ಪ ಗುಡ್ಲಾನೂರ್ ಅಭಿಪ್ರಾಯ ವ್ಯಕ್ತಪಡಿಸಿದರು.</p>.<p>ಪಟ್ಟಣದ ಅಂಗನವಾಡಿ ಕೇಂದ್ರದ ಆವರಣದಲ್ಲಿ ಬುಧವಾರ ನಡೆದ ರಾಷ್ಟ್ರೀಯ ಹೆಣ್ಣುಮಕ್ಕಳ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ‘ಬಾಲಕಿಯರಿಗೆ ಎಳೆಯ ಪ್ರಾಯದಲ್ಲಿ ಸೂಕ್ತವಾದ ಶಿಕ್ಷಣ ಕೊಡಿಸಿದರೆ ಮುಂದೆ ಅವರ ಜೀವನ ಸುಗಮವಾಗಿ ಸಾಗಿ ಆರ್ಥಿಕವಾಗಿ, ಸ್ವಾವಲಂಬಿಯಾಗಿ ಬದುಕು ಕಟ್ಟಿಕೊಳ್ಳಲು ಸಾಧ್ಯವಾಗುತ್ತದೆ’ ಎಂದರು.</p>.<p>ಎಲ್ಲಾ ರಂಗಗಳಲ್ಲೂ ಹೆಣ್ಣು ಮಕ್ಕಳು ಇಂದು ಮುಂಚೂಣಿಯಲ್ಲಿದ್ದು, ಕುಟುಂಬ ಹಾಗೂ ಹೊರಗೂ ಸಮರ್ಥವಾಗಿ ಕೆಲಸಗಳನ್ನು ನಿರ್ವಹಿಸುವ ಮೂಲಕ ಜಾಣ್ಮೆಯನ್ನು ತೋರುತ್ತಿದ್ದಾರೆ. ಹಾಗಾಗಿ ಅವರನ್ನು ಗೌರವಿಸಿ ಪ್ರೋತ್ಸಾಹಿಸುವ ನಿಟ್ಟಿನಲ್ಲಿ ಸರ್ಕಾರ ಹಲವಾರು ಯೋಜನೆಗಳನ್ನು ಜಾರಿಗೆ ತಂದು ಅನುಷ್ಠಾನಗೊಳಿಸುತ್ತಿರುವುದು ಶ್ಲಾಘನೀಯ ಎಂದರು.</p>.<p>ಶಿಕ್ಷಕಿ ಅಕ್ಕಮಹಾದೇವಿ ಮಾತನಾಡಿದರು, ಹನುಮಕ್ಕ, ರತ್ನಮ್ಮ ಹಾಗೂ ಪಾಲಕರು ಪಾಲ್ಗೊಂಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>