<p><strong>ತೆಕ್ಕಲಕೋಟೆ</strong>: ತುಂಗಭದ್ರಾ ಜಲಾಶಯಕ್ಕೆ ಒಳಹರಿವಿನ ಪ್ರಮಾಣ ಹೆಚ್ಚಾಗಿದ್ದು, ಜಲಾಶಯ ಶೀಘ್ರವೇ ತುಂಬುವ ಸಾಧ್ಯತೆ ಇದೆ. ಸೋಮವಾರ ಮೂರು ಕ್ರಸ್ಟ್ಗೇಟ್ಗಳ ಮೂಲಕ ಜಲಾಶಯದಿಂದ ನದಿಗೆ ನೀರು ಬಿಡಲಾಗಿದೆ. ಇದರಿಂದಾಗಿ ನದಿ ಪಾತ್ರದ ಜನರು ಎಚ್ಚರದಿಂದ ಇರಬೇಕು ಎಂದು ಸಿರುಗುಪ್ಪ ತಹಶೀಲ್ದಾರ್ ಎಚ್ ವಿಶ್ವನಾಥ ತಿಳಿಸಿದ್ದಾರೆ.</p>.<p>ಸಮೀಪದ ತುಂಗಭದ್ರಾ ನದೀಪಾತ್ರದ ಎಂ.ಸೂಗೂರು, ನಡಿವಿ, ನಿಟ್ಟೂರು, ಉಡೆಗೋಳ ಗ್ರಾಮಗಳಿಗೆ ಭೇಟಿ ನೀಡಿದ ಅವರು ಸಾರ್ವಜನಿಕರಿಗೆ ನದಿಗೆ ಇಳಿಯದಂತೆ ಲಿಖಿತ ಹಾಗೂ ಮೌಖಿಕವಾಗಿ ಎಚ್ಚರಿಕೆ ನೀಡಿದರು.</p>.<p>ಈಗಾಗಲೆ ನದಿಯಲ್ಲಿ ಮೊಸಳೆಗಳು ಭಾರೀ ಪ್ರಮಾಣದಲ್ಲಿ ಇರುವುದರಿಂದ ಜಾನುವಾರುಗಳಿಗೆ ನೀರಿಗೆ ಕರೆದುಕೊಂಡು ಹೋಗುವ ರೈತರು ಎಚ್ಚರ ವಹಿಸಬೇಕು ಎಂದು ಸೂಚಿಸಿದರು.</p>.<p>ಈ ಸಂದರ್ಭದಲ್ಲಿ ಎಂ. ಸೂಗೂರು ಗ್ರಾಮದ ಜಾತಿ ಪ್ರಮಾಣ ಪತ್ರ ದುರ್ಬಳಕೆಯ ಎರಡು ಪ್ರಕರಣ ಕುರಿತು ಪರಿಶೀಲನೆ ನಡೆಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ತೆಕ್ಕಲಕೋಟೆ</strong>: ತುಂಗಭದ್ರಾ ಜಲಾಶಯಕ್ಕೆ ಒಳಹರಿವಿನ ಪ್ರಮಾಣ ಹೆಚ್ಚಾಗಿದ್ದು, ಜಲಾಶಯ ಶೀಘ್ರವೇ ತುಂಬುವ ಸಾಧ್ಯತೆ ಇದೆ. ಸೋಮವಾರ ಮೂರು ಕ್ರಸ್ಟ್ಗೇಟ್ಗಳ ಮೂಲಕ ಜಲಾಶಯದಿಂದ ನದಿಗೆ ನೀರು ಬಿಡಲಾಗಿದೆ. ಇದರಿಂದಾಗಿ ನದಿ ಪಾತ್ರದ ಜನರು ಎಚ್ಚರದಿಂದ ಇರಬೇಕು ಎಂದು ಸಿರುಗುಪ್ಪ ತಹಶೀಲ್ದಾರ್ ಎಚ್ ವಿಶ್ವನಾಥ ತಿಳಿಸಿದ್ದಾರೆ.</p>.<p>ಸಮೀಪದ ತುಂಗಭದ್ರಾ ನದೀಪಾತ್ರದ ಎಂ.ಸೂಗೂರು, ನಡಿವಿ, ನಿಟ್ಟೂರು, ಉಡೆಗೋಳ ಗ್ರಾಮಗಳಿಗೆ ಭೇಟಿ ನೀಡಿದ ಅವರು ಸಾರ್ವಜನಿಕರಿಗೆ ನದಿಗೆ ಇಳಿಯದಂತೆ ಲಿಖಿತ ಹಾಗೂ ಮೌಖಿಕವಾಗಿ ಎಚ್ಚರಿಕೆ ನೀಡಿದರು.</p>.<p>ಈಗಾಗಲೆ ನದಿಯಲ್ಲಿ ಮೊಸಳೆಗಳು ಭಾರೀ ಪ್ರಮಾಣದಲ್ಲಿ ಇರುವುದರಿಂದ ಜಾನುವಾರುಗಳಿಗೆ ನೀರಿಗೆ ಕರೆದುಕೊಂಡು ಹೋಗುವ ರೈತರು ಎಚ್ಚರ ವಹಿಸಬೇಕು ಎಂದು ಸೂಚಿಸಿದರು.</p>.<p>ಈ ಸಂದರ್ಭದಲ್ಲಿ ಎಂ. ಸೂಗೂರು ಗ್ರಾಮದ ಜಾತಿ ಪ್ರಮಾಣ ಪತ್ರ ದುರ್ಬಳಕೆಯ ಎರಡು ಪ್ರಕರಣ ಕುರಿತು ಪರಿಶೀಲನೆ ನಡೆಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>