<p><strong>ಹಗರಿಬೊಮ್ಮನಹಳ್ಳಿ</strong>: ಅಂಗವಿಕಲರನ್ನು ಕೇಂದ್ರ ಸರ್ಕಾರದ ಬಜೆಟ್ ನಲ್ಲಿ ನಿರ್ಲಕ್ಷಿಸಿದ್ದಾರೆ ಎಂದು ಆರೋಪಿಸಿ ಅಂಗವಿಕಲರ ಹಾಗೂ ಪಾಲಕರ ಒಕ್ಕೂಟದ ತಾಲ್ಲೂಕು ಘಟಕದ ಪದಾಧಿಕಾರಿಗಳು ಪಟ್ಟಣದಲ್ಲಿ ಮಂಗಳವಾರ ಪ್ರತಿಭಟನೆ ನಡೆಸಿದರು.</p>.<p>ಒಕ್ಕೂಟದ ರಾಜ್ಯ ಘಟಕದ ಪ್ರಧಾನ ಕಾರ್ಯದರ್ಶಿ ರಂಗಪ್ಪ ದಾಸರ್ ಮಾತನಾಡಿ, ಕೇಂದ್ರ ಸರ್ಕಾರ ಅಂಗವಿಕಲರನ್ನು ನಿರಂತರವಾಗಿ ಶೋಷಣೆ ಮಾಡುತ್ತಿದೆ, ಸರ್ಕಾರದ ಆದ್ಯತೆಗಳು ದಮನಿತರ ಪರವಾಗಿಲ್ಲದಿರುವುದು ಈ ಬಜೆಟ್ನಲ್ಲಿ ಸಾಬೀತಾಗಿದೆ. ಅಂಗವಿಕಲ ವ್ಯಕ್ತಿಗಳ ಸಬಲೀಕರಣ ಇಲಾಖೆಗೆ ಕೂಡ ಈ ಬಜೆಟ್ನಿಂದ ಏನೂ ದೊರೆತಿಲ್ಲ. ಪ್ರಸ್ತುತ ಬಜೆಟ್ನಲ್ಲಿ ಶೇ 0.025ರಷ್ಟು ಮಾತ್ರವೇ ಹಣ ದೊರೆತಿದೆ. ದೇಶದ ಅಂಗವಿಕಲರ ಹಕ್ಕುಗಳ ಸಂಘಟನೆಗಳು ಮತ್ತು ಹೋರಾಟಗಾರರು, ಎಲ್ಲ ಸಚಿವಾಲಯಗಳಿಗೆ ಶೇ ೫ರಷ್ಟು ಅನುದಾನಕ್ಕಾಗಿ ಒತ್ತಾಯಿಸುತ್ತಿದ್ದರೂ ಪ್ರಯೋಜವಾಗಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು.</p>.<p>ಇಂದಿರಾಗಾಂಧಿ ರಾಷ್ಟ್ರೀಯ ಅಂಗವಿಕಲರ ಪಿಂಚಣಿ ಯೋಜನೆ ಹಣ ಹೆಚ್ಚಳ ಮಾಡಿಲ್ಲ. ಪಿಂಚಣಿಯಲ್ಲಿ 2011ರಿಂದ ಕೇಂದ್ರ ಪಾಲು ₹ 300 ಮಾತ್ರ ನೀಡಿದೆ. ದೇಶದ ಅಂಗವಿಕಲರಿಗೆ ಒಂದೇ ರೀತಿಯ ಮಾಸಾಶನ ಯೋಜನೆಯನ್ನು ಕೇಂದ್ರ ಸರ್ಕಾರ ಜಾರಿ ಮಾಡಬೇಕು. ಆಂಧ್ರ ಪ್ರದೇಶದಲ್ಲಿ ₹ 6 ಸಾವಿರ ಮಾಸಾಶನ ನೀಡುತ್ತಿದ್ದಾರೆ. ರಾಜ್ಯದ ಅಂಗವಿಕರಲಿಗೆ ಕನಿಷ್ಟ ₹ 10 ಸಾವಿರ ಮಾಸಾಶನ ನೀಡಬೇಕು ಎಂದು ಆಗ್ರಹಿಸಿದರು.</p>.<p>ಒಕ್ಕೂಟದ ತಾಲ್ಲೂಕು ಘಟಕದ ಅಧ್ಯಕ್ಷೆ ಬಿ.ರೇಣುಕಾ ಮಾತನಾಡಿದರು. ಹುಲುಗಪ್ಪ, ಗಂಗಮ್ಮ, ಅಂಜಿನಪ್ಪ, ನಾಗರಾಜ, ಗಂಟೆ ಪರುಶಪ್ಪ, ಸೊಬಟಿ ಅಂಜಿನಪ್ಪ, ಉಮಾದೇವಿ, ಭೀಮೇಶ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹಗರಿಬೊಮ್ಮನಹಳ್ಳಿ</strong>: ಅಂಗವಿಕಲರನ್ನು ಕೇಂದ್ರ ಸರ್ಕಾರದ ಬಜೆಟ್ ನಲ್ಲಿ ನಿರ್ಲಕ್ಷಿಸಿದ್ದಾರೆ ಎಂದು ಆರೋಪಿಸಿ ಅಂಗವಿಕಲರ ಹಾಗೂ ಪಾಲಕರ ಒಕ್ಕೂಟದ ತಾಲ್ಲೂಕು ಘಟಕದ ಪದಾಧಿಕಾರಿಗಳು ಪಟ್ಟಣದಲ್ಲಿ ಮಂಗಳವಾರ ಪ್ರತಿಭಟನೆ ನಡೆಸಿದರು.</p>.<p>ಒಕ್ಕೂಟದ ರಾಜ್ಯ ಘಟಕದ ಪ್ರಧಾನ ಕಾರ್ಯದರ್ಶಿ ರಂಗಪ್ಪ ದಾಸರ್ ಮಾತನಾಡಿ, ಕೇಂದ್ರ ಸರ್ಕಾರ ಅಂಗವಿಕಲರನ್ನು ನಿರಂತರವಾಗಿ ಶೋಷಣೆ ಮಾಡುತ್ತಿದೆ, ಸರ್ಕಾರದ ಆದ್ಯತೆಗಳು ದಮನಿತರ ಪರವಾಗಿಲ್ಲದಿರುವುದು ಈ ಬಜೆಟ್ನಲ್ಲಿ ಸಾಬೀತಾಗಿದೆ. ಅಂಗವಿಕಲ ವ್ಯಕ್ತಿಗಳ ಸಬಲೀಕರಣ ಇಲಾಖೆಗೆ ಕೂಡ ಈ ಬಜೆಟ್ನಿಂದ ಏನೂ ದೊರೆತಿಲ್ಲ. ಪ್ರಸ್ತುತ ಬಜೆಟ್ನಲ್ಲಿ ಶೇ 0.025ರಷ್ಟು ಮಾತ್ರವೇ ಹಣ ದೊರೆತಿದೆ. ದೇಶದ ಅಂಗವಿಕಲರ ಹಕ್ಕುಗಳ ಸಂಘಟನೆಗಳು ಮತ್ತು ಹೋರಾಟಗಾರರು, ಎಲ್ಲ ಸಚಿವಾಲಯಗಳಿಗೆ ಶೇ ೫ರಷ್ಟು ಅನುದಾನಕ್ಕಾಗಿ ಒತ್ತಾಯಿಸುತ್ತಿದ್ದರೂ ಪ್ರಯೋಜವಾಗಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು.</p>.<p>ಇಂದಿರಾಗಾಂಧಿ ರಾಷ್ಟ್ರೀಯ ಅಂಗವಿಕಲರ ಪಿಂಚಣಿ ಯೋಜನೆ ಹಣ ಹೆಚ್ಚಳ ಮಾಡಿಲ್ಲ. ಪಿಂಚಣಿಯಲ್ಲಿ 2011ರಿಂದ ಕೇಂದ್ರ ಪಾಲು ₹ 300 ಮಾತ್ರ ನೀಡಿದೆ. ದೇಶದ ಅಂಗವಿಕಲರಿಗೆ ಒಂದೇ ರೀತಿಯ ಮಾಸಾಶನ ಯೋಜನೆಯನ್ನು ಕೇಂದ್ರ ಸರ್ಕಾರ ಜಾರಿ ಮಾಡಬೇಕು. ಆಂಧ್ರ ಪ್ರದೇಶದಲ್ಲಿ ₹ 6 ಸಾವಿರ ಮಾಸಾಶನ ನೀಡುತ್ತಿದ್ದಾರೆ. ರಾಜ್ಯದ ಅಂಗವಿಕರಲಿಗೆ ಕನಿಷ್ಟ ₹ 10 ಸಾವಿರ ಮಾಸಾಶನ ನೀಡಬೇಕು ಎಂದು ಆಗ್ರಹಿಸಿದರು.</p>.<p>ಒಕ್ಕೂಟದ ತಾಲ್ಲೂಕು ಘಟಕದ ಅಧ್ಯಕ್ಷೆ ಬಿ.ರೇಣುಕಾ ಮಾತನಾಡಿದರು. ಹುಲುಗಪ್ಪ, ಗಂಗಮ್ಮ, ಅಂಜಿನಪ್ಪ, ನಾಗರಾಜ, ಗಂಟೆ ಪರುಶಪ್ಪ, ಸೊಬಟಿ ಅಂಜಿನಪ್ಪ, ಉಮಾದೇವಿ, ಭೀಮೇಶ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>