<p><strong>ತೋರಣಗಲ್ಲು</strong>: ಹೋಬಳಿಯ ಹೊಸದರೋಜಿ ಕೆರೆಯ ಬಳಿ ರಸ್ತೆಯ ಪಕ್ಕದಲ್ಲಿನ ವಿದ್ಯುತ್ ಕಂಬಕ್ಕೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೆ ಮೃತಪಟ್ಟ ಘಟನೆ ಶುಕ್ರವಾರ ನಡೆದಿದೆ.</p>.<p>ದೇವಲಾಪುರ ಗ್ರಾಮದ ದುರುಗಪ್ಪ(30) ಮೃತ ಯುವಕ. ಕುಡತಿನಿ ಕಡೆಯಿಂದ ದೇವಲಾಪುರ ಗ್ರಾಮಕ್ಕೆ ತೆರಳುವ ವೇಳೆ ಬೈಕ್ ವೇಗವಾಗಿ ಚಲಾಯಿಸಿದ ಪರಿಣಾಮ ಈ ದುರ್ಘಟನೆ ಸಂಭವಿಸಿದ್ದು, ಕುಡತಿನಿ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ ಎಂದು ಠಾಣೆಯ ಪೊಲೀಸರು ತಿಳಿಸಿದ್ದಾರೆ.</p>.<p>ಅಪಾಯಕಾರಿ ವಿದ್ಯುತ್ ಕಂಬಗಳು: ಹೊಸದರೋಜಿ ಕೆರೆ ಏರಿಯ ಬಳಿ ಚಿಕ್ಕದಾದ ರಸ್ತೆಯ ಪಕ್ಕದಲ್ಲಿ ಸುಮಾರು ಏಳು ವಿದ್ಯುತ್ ಕಂಬಗಳು ಇದ್ದು ಅವುಗಳಿಂದ ನಿರಂತರವಾಗಿ ಬೈಕ್ ಸೇರಿದಂತೆ ಇತರೆ ವಾಹನಗಳ ಅಪಘಾತಗಳು ಸಂಭವಿಸುತ್ತಿವೆ. </p>.<p>ಕಳೆದ ತಿಂಗಳು ಇದೇ ಸ್ಥಳದಲ್ಲಿ ಬೈಕ್ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಪರಿಣಾಮ ಸವಾರ ಸ್ಥಳದಲ್ಲೆ ಮೃತಪಟ್ಟಿದ್ದರು. ಎರಡನೇ ಬಾರಿಯೂ ಸಹ ಅದೇ ಸ್ಥಳದಲ್ಲಿ ಮತ್ತೋಂದು ಘಟನೆ ಸಂಭವಿಸಿ ಮತ್ತೊಬ್ಬ ವ್ಯಕ್ತಿ ಮೃತಪಟ್ಟಿದ್ದಾರೆ. ಈ ರಸ್ತೆಯಲ್ಲಿ ನಿತ್ಯ ಸವಾರರು ಪ್ರಾಣಭಯದಲ್ಲೆ ಸಂಚರಿಸಬೇಕಾಗಿದೆ.</p>.<p>‘ದರೋಜಿ ಕೆರೆಯ ಬಳಿಯ ರಸ್ತೆಯ ಬದಿಯಲ್ಲಿನ ಒಟ್ಟು ಏಳು ವಿದ್ಯುತ್ ಕಂಬಗಳು ಅಪಾಯವನ್ನು ಆಹ್ವಾನಿಸುತ್ತಿದ್ದು, ಸಾರ್ವಜನಿಕರ ಸಂಚಾರದ ಅನುಕೂಲಕ್ಕಾಗಿ ಅವುಗಳನ್ನು ತ್ವರಿತವಾಗಿ ತೆರವುಗೊಳಿಸಲು ಸೂಕ್ತ ಕ್ರಮ ವಹಿಸಲಾಗುವುದು’ ಎಂದು ಸಂಡೂರು ತಾಲ್ಲೂಕಿನ ಕೆಇಬಿ ಇಲಾಖೆಯ ಸಹಾಯಕ ಕಾರ್ಯನಿರ್ವಾಹಕ ಅಭಿಯಂತರ ಕೆ.ಎ.ಉಮೇಶ್ ಪ್ರತಿಕ್ರಿಯಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ತೋರಣಗಲ್ಲು</strong>: ಹೋಬಳಿಯ ಹೊಸದರೋಜಿ ಕೆರೆಯ ಬಳಿ ರಸ್ತೆಯ ಪಕ್ಕದಲ್ಲಿನ ವಿದ್ಯುತ್ ಕಂಬಕ್ಕೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೆ ಮೃತಪಟ್ಟ ಘಟನೆ ಶುಕ್ರವಾರ ನಡೆದಿದೆ.</p>.<p>ದೇವಲಾಪುರ ಗ್ರಾಮದ ದುರುಗಪ್ಪ(30) ಮೃತ ಯುವಕ. ಕುಡತಿನಿ ಕಡೆಯಿಂದ ದೇವಲಾಪುರ ಗ್ರಾಮಕ್ಕೆ ತೆರಳುವ ವೇಳೆ ಬೈಕ್ ವೇಗವಾಗಿ ಚಲಾಯಿಸಿದ ಪರಿಣಾಮ ಈ ದುರ್ಘಟನೆ ಸಂಭವಿಸಿದ್ದು, ಕುಡತಿನಿ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ ಎಂದು ಠಾಣೆಯ ಪೊಲೀಸರು ತಿಳಿಸಿದ್ದಾರೆ.</p>.<p>ಅಪಾಯಕಾರಿ ವಿದ್ಯುತ್ ಕಂಬಗಳು: ಹೊಸದರೋಜಿ ಕೆರೆ ಏರಿಯ ಬಳಿ ಚಿಕ್ಕದಾದ ರಸ್ತೆಯ ಪಕ್ಕದಲ್ಲಿ ಸುಮಾರು ಏಳು ವಿದ್ಯುತ್ ಕಂಬಗಳು ಇದ್ದು ಅವುಗಳಿಂದ ನಿರಂತರವಾಗಿ ಬೈಕ್ ಸೇರಿದಂತೆ ಇತರೆ ವಾಹನಗಳ ಅಪಘಾತಗಳು ಸಂಭವಿಸುತ್ತಿವೆ. </p>.<p>ಕಳೆದ ತಿಂಗಳು ಇದೇ ಸ್ಥಳದಲ್ಲಿ ಬೈಕ್ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಪರಿಣಾಮ ಸವಾರ ಸ್ಥಳದಲ್ಲೆ ಮೃತಪಟ್ಟಿದ್ದರು. ಎರಡನೇ ಬಾರಿಯೂ ಸಹ ಅದೇ ಸ್ಥಳದಲ್ಲಿ ಮತ್ತೋಂದು ಘಟನೆ ಸಂಭವಿಸಿ ಮತ್ತೊಬ್ಬ ವ್ಯಕ್ತಿ ಮೃತಪಟ್ಟಿದ್ದಾರೆ. ಈ ರಸ್ತೆಯಲ್ಲಿ ನಿತ್ಯ ಸವಾರರು ಪ್ರಾಣಭಯದಲ್ಲೆ ಸಂಚರಿಸಬೇಕಾಗಿದೆ.</p>.<p>‘ದರೋಜಿ ಕೆರೆಯ ಬಳಿಯ ರಸ್ತೆಯ ಬದಿಯಲ್ಲಿನ ಒಟ್ಟು ಏಳು ವಿದ್ಯುತ್ ಕಂಬಗಳು ಅಪಾಯವನ್ನು ಆಹ್ವಾನಿಸುತ್ತಿದ್ದು, ಸಾರ್ವಜನಿಕರ ಸಂಚಾರದ ಅನುಕೂಲಕ್ಕಾಗಿ ಅವುಗಳನ್ನು ತ್ವರಿತವಾಗಿ ತೆರವುಗೊಳಿಸಲು ಸೂಕ್ತ ಕ್ರಮ ವಹಿಸಲಾಗುವುದು’ ಎಂದು ಸಂಡೂರು ತಾಲ್ಲೂಕಿನ ಕೆಇಬಿ ಇಲಾಖೆಯ ಸಹಾಯಕ ಕಾರ್ಯನಿರ್ವಾಹಕ ಅಭಿಯಂತರ ಕೆ.ಎ.ಉಮೇಶ್ ಪ್ರತಿಕ್ರಿಯಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>