<p><strong>ಸಂಡೂರು:</strong> ತಾಲ್ಲೂಕಿನ ಚೋರನೂರು ಹೋಬಳಿಯ ವಿವಿಧ ಗ್ರಾಮಗಳಿಗೆ ಶನಿವಾರ ಭೇಟಿ ನೀಡಿ ಕಾಂಗ್ರೆಸ್ ಅಭ್ಯರ್ಥಿ ಅನ್ನಪೂರ್ಣ ತುಕಾರಾಂ ಚುನಾವಣಾ ಪ್ರಚಾರ ಮಾಡಿದರು.</p>.<p>ನಿಡಗುರ್ತಿ, 72 ಮಲ್ಲಾಪುರ, ಕೊಂಡಾಪುರ, ಗಿರೇನಹಳ್ಳಿ, ಹುಲಿಕುಂಟೆ, ಉತ್ತರಮಲೈ, ಕಾಟಿನ್ ಕಂಬ,ಬಂಡ್ರಿ,ಗೊಲ್ಲರಹಟ್ಟಿ,ಕೋಡಿಹಳ್ಳಿ,ಕಪಟ್ರಾಳ್,ಹುಚ್ಚೇನಹಳ್ಳಿ,ಎಚ್.ಕೆ.ಹಳ್ಳಿ,ಶ್ರೀರಾಮ ಶೆಟ್ಟಿಹಳ್ಳಿ ,ಸಿ.ಕೆ ಹಳ್ಳಿ ಹಾಗೂ ಜೋಗಿಕಲ್ಲು ಗ್ರಾಮಗಳಲ್ಲಿ ಪ್ರಚಾರ ನಡೆಸಿದರು.</p>.<p>‘ಸಚಿವ ಸಂತೋಷ್ ಲಾಡ್ ಹಾಗೂ ಸಂಸದ ಇ.ತುಕಾರಾಂ ಅವರು ಕಳೆದ 20 ವರ್ಷಗಳಲ್ಲಿ ಕ್ಷೇತ್ರದಲ್ಲಿ ಸಾಕಷ್ಟು ಅಭಿವೃದ್ಧಿ ಕಾರ್ಯಗಳನ್ನು ಮಾಡಿದ್ದಾರೆ. ಮುಂದೆಯೂ ಅವರ ಮಾರ್ಗದರ್ಶನದಲ್ಲಿ ಕೆಲಸ ಮಾಡುತ್ತೇನೆ. 371(ಜೆ) ವಿಶೇಷ ಮೀಸಲಾತಿ ಮೂಲಕ ಈ ಭಾಗದಲ್ಲಿ ಉದ್ಯೋಗ, ವಿದ್ಯಾಭ್ಯಾಸಕ್ಕೆ ವಿಶೇಷ ಪ್ರಾತಿನಿಧ್ಯ ನೀಡಿದ್ದು ಕಾಂಗ್ರೆಸ್. ಗ್ಯಾರಂಟಿ ಯೋಜನೆಗಳ ಮೂಲಕ ನಾಡಿನ ಜನರಿಗೆ ಭರವಸೆಯ ಆಡಳಿತ ನೀಡುತ್ತಿದೆ. ಕಾಂಗ್ರೆಸ್ಗೆ ಮತ ನೀಡುವ ಮೂಲಕ ಬೆಂಬಲಿಸಬೇಕು’ ಎಂದು ಮನವಿ ಮಾಡಿದರು.</p>.<p>ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಅಕ್ಷಯ ಲಾಡ್ ಮಾತನಾಡಿ, ‘ಈ ಭಾಗದಲ್ಲಿ ಅಭಿವೃದ್ಧಿ ಆಗಿಲ್ಲ ಎಂದು ಬಿಜೆಪಿಯವರು ಹೇಳುತ್ತಿದ್ದಾರೆ. ಪ್ರಚಾರಕ್ಕೆ ಕ್ಷೇತ್ರದಲ್ಲಿ ಓಡಾಡುವಾಗ ಅವರಿಗೆ ಸ್ವಾಗತ ಕೋರುವ ರಸ್ತೆಗಳೇ ಅಭಿವೃ ದ್ಧಿಯನ್ನು ತೋರಿಸುತ್ತಿವೆ’ ಎಂದರು.</p>.<p>ತಾಲ್ಲೂಕು ಪಂಚಾಯಿತಿ ಮಾಜಿ ಸದಸ್ಯ ಬಂಡ್ರಿ ರವಿಕುಮಾರ್ ಮಾತನಾಡಿದರು. ಕಾಂಗ್ರೆಸ್ ಮುಖಂಡರಾದ ಜಯರಾಂ, ಶೈಲಜಾ ನಿಕ್ಕಂ, ಗಿರೇನಹಳ್ಳಿ ಹೊನ್ನೂರಸ್ವಾಮಿ, ಯಾದಗರ್ ಸಾಬ್, ಬಂಡ್ರಿ ವೀರಯ್ಯ ಸ್ವಾಮಿ ಇತರರು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಸಂಡೂರು:</strong> ತಾಲ್ಲೂಕಿನ ಚೋರನೂರು ಹೋಬಳಿಯ ವಿವಿಧ ಗ್ರಾಮಗಳಿಗೆ ಶನಿವಾರ ಭೇಟಿ ನೀಡಿ ಕಾಂಗ್ರೆಸ್ ಅಭ್ಯರ್ಥಿ ಅನ್ನಪೂರ್ಣ ತುಕಾರಾಂ ಚುನಾವಣಾ ಪ್ರಚಾರ ಮಾಡಿದರು.</p>.<p>ನಿಡಗುರ್ತಿ, 72 ಮಲ್ಲಾಪುರ, ಕೊಂಡಾಪುರ, ಗಿರೇನಹಳ್ಳಿ, ಹುಲಿಕುಂಟೆ, ಉತ್ತರಮಲೈ, ಕಾಟಿನ್ ಕಂಬ,ಬಂಡ್ರಿ,ಗೊಲ್ಲರಹಟ್ಟಿ,ಕೋಡಿಹಳ್ಳಿ,ಕಪಟ್ರಾಳ್,ಹುಚ್ಚೇನಹಳ್ಳಿ,ಎಚ್.ಕೆ.ಹಳ್ಳಿ,ಶ್ರೀರಾಮ ಶೆಟ್ಟಿಹಳ್ಳಿ ,ಸಿ.ಕೆ ಹಳ್ಳಿ ಹಾಗೂ ಜೋಗಿಕಲ್ಲು ಗ್ರಾಮಗಳಲ್ಲಿ ಪ್ರಚಾರ ನಡೆಸಿದರು.</p>.<p>‘ಸಚಿವ ಸಂತೋಷ್ ಲಾಡ್ ಹಾಗೂ ಸಂಸದ ಇ.ತುಕಾರಾಂ ಅವರು ಕಳೆದ 20 ವರ್ಷಗಳಲ್ಲಿ ಕ್ಷೇತ್ರದಲ್ಲಿ ಸಾಕಷ್ಟು ಅಭಿವೃದ್ಧಿ ಕಾರ್ಯಗಳನ್ನು ಮಾಡಿದ್ದಾರೆ. ಮುಂದೆಯೂ ಅವರ ಮಾರ್ಗದರ್ಶನದಲ್ಲಿ ಕೆಲಸ ಮಾಡುತ್ತೇನೆ. 371(ಜೆ) ವಿಶೇಷ ಮೀಸಲಾತಿ ಮೂಲಕ ಈ ಭಾಗದಲ್ಲಿ ಉದ್ಯೋಗ, ವಿದ್ಯಾಭ್ಯಾಸಕ್ಕೆ ವಿಶೇಷ ಪ್ರಾತಿನಿಧ್ಯ ನೀಡಿದ್ದು ಕಾಂಗ್ರೆಸ್. ಗ್ಯಾರಂಟಿ ಯೋಜನೆಗಳ ಮೂಲಕ ನಾಡಿನ ಜನರಿಗೆ ಭರವಸೆಯ ಆಡಳಿತ ನೀಡುತ್ತಿದೆ. ಕಾಂಗ್ರೆಸ್ಗೆ ಮತ ನೀಡುವ ಮೂಲಕ ಬೆಂಬಲಿಸಬೇಕು’ ಎಂದು ಮನವಿ ಮಾಡಿದರು.</p>.<p>ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಅಕ್ಷಯ ಲಾಡ್ ಮಾತನಾಡಿ, ‘ಈ ಭಾಗದಲ್ಲಿ ಅಭಿವೃದ್ಧಿ ಆಗಿಲ್ಲ ಎಂದು ಬಿಜೆಪಿಯವರು ಹೇಳುತ್ತಿದ್ದಾರೆ. ಪ್ರಚಾರಕ್ಕೆ ಕ್ಷೇತ್ರದಲ್ಲಿ ಓಡಾಡುವಾಗ ಅವರಿಗೆ ಸ್ವಾಗತ ಕೋರುವ ರಸ್ತೆಗಳೇ ಅಭಿವೃ ದ್ಧಿಯನ್ನು ತೋರಿಸುತ್ತಿವೆ’ ಎಂದರು.</p>.<p>ತಾಲ್ಲೂಕು ಪಂಚಾಯಿತಿ ಮಾಜಿ ಸದಸ್ಯ ಬಂಡ್ರಿ ರವಿಕುಮಾರ್ ಮಾತನಾಡಿದರು. ಕಾಂಗ್ರೆಸ್ ಮುಖಂಡರಾದ ಜಯರಾಂ, ಶೈಲಜಾ ನಿಕ್ಕಂ, ಗಿರೇನಹಳ್ಳಿ ಹೊನ್ನೂರಸ್ವಾಮಿ, ಯಾದಗರ್ ಸಾಬ್, ಬಂಡ್ರಿ ವೀರಯ್ಯ ಸ್ವಾಮಿ ಇತರರು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>