<p><strong>ಬಳ್ಳಾರಿ:</strong> ‘ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ನಡೆದಿರುವ ಹಗರಣ ಆತಂಕ ಮಾಡಿಸಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಚಿವ ಬಿ. ನಾಗೇಂದ್ರ ಅವರಿಂದ ರಾಜೀನಾಮೆ ಪಡೆಯಬೇಕು’ ಎಂದು ಬಿಜೆಪಿ ಮುಖಂಡ ಬಿ. ಶ್ರೀರಾಮುಲು ಆಗ್ರಹಿಸಿದರು.</p>.<p>ಸುದ್ದಿಗೋಷ್ಠಿಯಲ್ಲಿ ಭಾನುವಾರ ಮಾತನಾಡಿದ ಅವರು, ‘ಸರ್ಕಾರ ಪ್ರಕರಣವನ್ನು ಎಸ್ಐಟಿಗೆ ನೀಡಿದೆ. ಆದರೆ, ಎಸ್ಐಟಿಗೆ ಮಿತಿಗಳಿರುತ್ತವೆ. ನಾಗೇಂದ್ರ ಸಚಿವರಾಗಿ ಮುಂದುವರಿದರೆ ತನಿಖೆಯ ಮೇಲೆ ಪ್ರಭಾವ ಬೀರುವ ಸಾಧ್ಯತೆಗಳಿರುತ್ತವೆ. ಆದ್ದರಿಂದ ಪ್ರಕರಣವನ್ನು ಸಿಬಿಐಗೆ ಕೊಡಬೇಕು’ ಎಂದು ಹೇಳಿದರು. </p>.<p>‘ಸಾಯುವಾಗ ಯಾರೂ ಸುಳ್ಳು ಹೇಳುವುದಿಲ್ಲ. ಹೀಗಾಗಿಯೇ ಸಚಿವರ ಬಗ್ಗೆ ಡೆತ್ನೋಟ್ನಲ್ಲಿ ಬರೆದಿಟ್ಟಿದ್ದಾರೆ. ನಾಗೇಂದ್ರ ರಾಜೀನಾಮೆ ನೀಡಲೇಬೇಕು‘ ಎಂದು ಅವರು ಪ್ರತಿಪಾದಿಸಿದರು. </p>.<p>‘ವಾಲ್ಮೀಕಿ ನಿಗಮದಲ್ಲಿ ಮಾತ್ರವಲ್ಲ. ಎಲ್ಲ ನಿಗಮ ಮತ್ತು ಇಲಾಖೆಗಳಲ್ಲೂ ಇದೇ ಪರಿಸ್ಥಿತಿ ಇದೆ. ಸರ್ಕಾರದ ಹಣವನ್ನು ಹೇಗೆ ಬಳಸಲು ಸಾಧ್ಯ? ಇದು ಹೀಗೆಯೇ ಮುಂದುವರಿದರೆ ಜನರು ಸರ್ಕಾರದ ವಿರುದ್ಧ ದಂಗೆ ಏಳಲಿದ್ದಾರೆ’ ಎಂದು ಎಚ್ಚರಿಸಿದರು. </p>.<p>‘ಮೀಸಲು ಕ್ಷೇತ್ರದಿಂದ ಗೆದ್ದ ನಾಗೇಂದ್ರ ಅದೇ ಸಮಾಜಕ್ಕೆ ಸಮಸ್ಯೆ ಉಂಟು ಮಾಡಿದ್ದಾರೆ’ ಎಂದೂ ಶ್ರೀರಾಮುಲು ಟೀಕಿಸಿದರು.</p>.<p>ಮತಗಟ್ಟೆ ಸಮೀಕ್ಷೆಗಳ ಕುರಿತು ಪ್ರತಿಕ್ರಿಯಿಸಿದ ಅವರು, ‘ಬಿಜೆಪಿ 400ಕ್ಕೂ ಹೆಚ್ಚು ಸ್ಥಾನಗಳನ್ನು ಗೆಲ್ಲುವ ನಿರೀಕ್ಷೆ ಇತ್ತು. ಆದರೆ, ಮತಗಟ್ಟೆ ಸಮೀಕ್ಷೆಯಲ್ಲಿ ಕಡಿಮೆ ಬಂದಿದೆ. ರಾಜ್ಯದಲ್ಲಿ ಬಿಜೆಪಿ ನೇತೃತ್ವದ ಮೈತ್ರಿಕೂಟಕ್ಕೆ 24ಕ್ಕೂ ಅಧಿಕ ಸ್ಥಾನ ಸಿಗಲಿದೆ‘ ಎಂದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬಳ್ಳಾರಿ:</strong> ‘ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ನಡೆದಿರುವ ಹಗರಣ ಆತಂಕ ಮಾಡಿಸಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಚಿವ ಬಿ. ನಾಗೇಂದ್ರ ಅವರಿಂದ ರಾಜೀನಾಮೆ ಪಡೆಯಬೇಕು’ ಎಂದು ಬಿಜೆಪಿ ಮುಖಂಡ ಬಿ. ಶ್ರೀರಾಮುಲು ಆಗ್ರಹಿಸಿದರು.</p>.<p>ಸುದ್ದಿಗೋಷ್ಠಿಯಲ್ಲಿ ಭಾನುವಾರ ಮಾತನಾಡಿದ ಅವರು, ‘ಸರ್ಕಾರ ಪ್ರಕರಣವನ್ನು ಎಸ್ಐಟಿಗೆ ನೀಡಿದೆ. ಆದರೆ, ಎಸ್ಐಟಿಗೆ ಮಿತಿಗಳಿರುತ್ತವೆ. ನಾಗೇಂದ್ರ ಸಚಿವರಾಗಿ ಮುಂದುವರಿದರೆ ತನಿಖೆಯ ಮೇಲೆ ಪ್ರಭಾವ ಬೀರುವ ಸಾಧ್ಯತೆಗಳಿರುತ್ತವೆ. ಆದ್ದರಿಂದ ಪ್ರಕರಣವನ್ನು ಸಿಬಿಐಗೆ ಕೊಡಬೇಕು’ ಎಂದು ಹೇಳಿದರು. </p>.<p>‘ಸಾಯುವಾಗ ಯಾರೂ ಸುಳ್ಳು ಹೇಳುವುದಿಲ್ಲ. ಹೀಗಾಗಿಯೇ ಸಚಿವರ ಬಗ್ಗೆ ಡೆತ್ನೋಟ್ನಲ್ಲಿ ಬರೆದಿಟ್ಟಿದ್ದಾರೆ. ನಾಗೇಂದ್ರ ರಾಜೀನಾಮೆ ನೀಡಲೇಬೇಕು‘ ಎಂದು ಅವರು ಪ್ರತಿಪಾದಿಸಿದರು. </p>.<p>‘ವಾಲ್ಮೀಕಿ ನಿಗಮದಲ್ಲಿ ಮಾತ್ರವಲ್ಲ. ಎಲ್ಲ ನಿಗಮ ಮತ್ತು ಇಲಾಖೆಗಳಲ್ಲೂ ಇದೇ ಪರಿಸ್ಥಿತಿ ಇದೆ. ಸರ್ಕಾರದ ಹಣವನ್ನು ಹೇಗೆ ಬಳಸಲು ಸಾಧ್ಯ? ಇದು ಹೀಗೆಯೇ ಮುಂದುವರಿದರೆ ಜನರು ಸರ್ಕಾರದ ವಿರುದ್ಧ ದಂಗೆ ಏಳಲಿದ್ದಾರೆ’ ಎಂದು ಎಚ್ಚರಿಸಿದರು. </p>.<p>‘ಮೀಸಲು ಕ್ಷೇತ್ರದಿಂದ ಗೆದ್ದ ನಾಗೇಂದ್ರ ಅದೇ ಸಮಾಜಕ್ಕೆ ಸಮಸ್ಯೆ ಉಂಟು ಮಾಡಿದ್ದಾರೆ’ ಎಂದೂ ಶ್ರೀರಾಮುಲು ಟೀಕಿಸಿದರು.</p>.<p>ಮತಗಟ್ಟೆ ಸಮೀಕ್ಷೆಗಳ ಕುರಿತು ಪ್ರತಿಕ್ರಿಯಿಸಿದ ಅವರು, ‘ಬಿಜೆಪಿ 400ಕ್ಕೂ ಹೆಚ್ಚು ಸ್ಥಾನಗಳನ್ನು ಗೆಲ್ಲುವ ನಿರೀಕ್ಷೆ ಇತ್ತು. ಆದರೆ, ಮತಗಟ್ಟೆ ಸಮೀಕ್ಷೆಯಲ್ಲಿ ಕಡಿಮೆ ಬಂದಿದೆ. ರಾಜ್ಯದಲ್ಲಿ ಬಿಜೆಪಿ ನೇತೃತ್ವದ ಮೈತ್ರಿಕೂಟಕ್ಕೆ 24ಕ್ಕೂ ಅಧಿಕ ಸ್ಥಾನ ಸಿಗಲಿದೆ‘ ಎಂದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>