<p><strong>ಚಾಂದ್ ಬಾಷ</strong></p>.<p><strong>ತೆಕ್ಕಲಕೋಟೆ</strong> : ಪಟ್ಟಣದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ (ಎಸ್.ಡಬ್ಯ್ಲೂ.ಎಸ್) ಯು ಮೂಲ ಸೌಲಭ್ಯಗಳಿಂದ ವಂಚಿತವಾಗಿದ್ದು, ಶಿಥಿಲವಾದ ಕೊಠಡಿಗಳಲ್ಲಿ ವಿದ್ಯಾರ್ಥಿಗಳು ಪಾಠ ಪ್ರವಚನ ಕೇಳುವಂತಾಗಿದೆ.</p>.<p>1 ರಿಂದ 6ನೇ ತರಗತಿ ವರೆಗೆ ಒಟ್ಟು 128 ವಿದ್ಯಾರ್ಥಿಗಳು ವಿದ್ಯಾಭ್ಯಾಸ ಮಾಡುತ್ತಿದ್ದು, ಇಲ್ಲಿ ಇಬ್ಬರು ಕಾಯಂ ಶಿಕ್ಷಕರು, ಒಬ್ಬ ಅತಿಥಿ ಶಿಕ್ಷಕ ಕಾರ್ಯನಿರ್ವಹಿಸುತ್ತಿದ್ದಾರೆ. ಶಾಲೆಯು 6 ಕೊಠಡಿ ಹೊಂದಿದ್ದು ಇದರಲ್ಲಿ 2 ಕೊಠಡಿಗಳು ಮಾತ್ರ ಬಳಕೆಗೆ ಯೋಗ್ಯವಾಗಿವೆ.</p>.<p>ನಾಲ್ಕು ಕೊಠಡಿಗಳಲ್ಲಿ ಒಂದು ಕೊಠಡಿಗೆ ಚುನಾವಣೆಯ ಸಂದರ್ಭದಲ್ಲಿ ಚಾವಣಿಯ ಸಿಮೆಂಟ್ ಉದುರದಂತೆ ರಿಪೇರಿ ಮಾಡಲಾಗಿದೆ. ಇನ್ನೊಂದು ಕೊಠಡಿಯ ಚಾವಣಿಯು ಮಳೆಯಿಂದಾಗಿ ತೇವಾಂಶ ಹಿಡಿದುಕೊಂಡಿದ್ದು, ಅಲ್ಲಲ್ಲಿ ಸಿಮೆಂಟ್ ಉದುರಿ ಬೀಳುತ್ತಿದೆ. 1 ರಿಂದ 3 ಹಾಗೂ 4 ರಿಂದ 6ನೇ ತರಗತಿಯ ಮಕ್ಕಳನ್ನು 2 ಕೊಠಡಿಗಳಲ್ಲಿ ಕೂಡಿಸಿ ಪಾಠ ಮಾಡಬೇಕಾದ ಅನಿವಾರ್ಯತೆಯಿದೆ.</p>.<div><blockquote>ಶಾಲೆಯ ಎಲ್ಲಾ ಕೊಠಡಿಗಳು ಶಿಥಿಲಗೊಂಡಿದ್ದು ಹೊಸ ಕೊಠಡಿಗಳನ್ನು ನಿರ್ಮಿಸಿ ಕೊಡುವಂತೆ ಕ್ಷೇತ್ರ ಶಿಕ್ಷಣಾಧಿಕಾರಿಗಳಿಗೆ ಮನವಿ ಸಲ್ಲಿಸಲಾಗಿದೆ. ಪರಿಶೀಲನೆ ನಡೆದಿದೆ.</blockquote><span class="attribution">ರೇಖಾ ಶ್ರೀವಾಣಿ, ಮುಖ್ಯಗುರು</span></div>.<p>ಸಿಮೆಂಟ್ ಸೀಟ್ ಅಳವಡಿಸಿದ ಇನ್ನೊಂದು ಕೊಠಡಿ ಇದ್ದು, ತರಗತಿ ನಡೆಸಲು ಯೋಗ್ಯವಾಗಿಲ್ಲ. ಇದರ ಪಕ್ಕದಲ್ಲಿರುವ ಕೋಣೆಯು ತೀವ್ರ ಶಿಥಿಲಾವಸ್ಥೆ ತಲುಪಿದ್ದು, ಯಾವಾಗ ಬೀಳುತ್ತದೋ ಎನ್ನುವ ಆತಂಕದಿಂದ ಈ ಕೊಠಡಿಗೆ ಬೀಗ ಜಡಿಯಲಾಗಿದೆ.</p>.<div><blockquote>ಶಿಥಿಲ ಕೊಠಡಿಗಳ ಬಗ್ಗೆ ಇಲಾಖೆಯ ಹಿರಿಯ ಅಧಿಕಾರಿಗಳಿಗೆ ತಿಳಿಸಲಾಗಿದೆ. ಆದಷ್ಟು ಶೀಘ್ರ ಹೊಸ ಕಟ್ಟಡ ನಿರ್ಮಾಣವಾಗುವ ಭರವಸೆ ಇದೆ.</blockquote><span class="attribution">ಎಚ್. ಗುರಪ್ಪ, ಕ್ಷೇತ್ರ ಶಿಕ್ಷಣಾಧಿಕಾರಿ, ಸಿರುಗುಪ್ಪ</span></div>.<p>ಕೋಣೆಗಳ ಕೊರತೆಯಿಂದಾಗಿ 1-3ನೇ ತರಗತಿ ವಿದ್ಯಾರ್ಥಿಗಳನ್ನು ಒಂದು ಕೋಣೆಯಲ್ಲಿ, 4-6ನೇ ತರಗತಿ ವಿದ್ಯಾರ್ಥಿಗಳನ್ನು ಮತ್ತೊಂದು ಕೋಣೆಯಲ್ಲಿ ಕೂಡಿಸಿ ಪಾಠ ಮಾಡಲಾಗುತ್ತಿದ್ದು, ಪಾಠ ಪ್ರವಚನಕ್ಕೆ ಅಡ್ಡಿಯಾಗುತ್ತಿದೆ. ವಿದ್ಯಾರ್ಥಿಗಳಿಗೆ ಶಾಲೆಯಲ್ಲಿ ಕುಡಿಯುವ ನೀರಿನ ಸೌಲಭ್ಯ ಇಲ್ಲದಿರುವುದರಿಂದ ಶಾಲೆಯ ಅಕ್ಕ ಪಕ್ಕದ ಮನೆಗಳಲ್ಲಿ ಕೇಳಿ ನೀರು ಕುಡಿಯುವ ಪರಿಸ್ಥಿತಿಯೂ ಇದೆ. ಮಕ್ಕಳಿಗೆ ಶೌಚಾಲಯವೂ ಇರುವುದಿಲ್ಲ.</p>.<p>ಶಿಥಿಲ ಕಟ್ಟದಲ್ಲಿಯೇ ವಿದ್ಯಾರ್ಥಿಗಳು ಓದುತ್ತಿದ್ದು, ಮಳೆ ಬಂದರೆ ಚಾವಣಿಯ ನೀರು ತೊಟ್ಟಿಕ್ಕುತ್ತದೆ. ವಿದ್ಯಾರ್ಥಿಗಳ ಸುರಕ್ಷೆಯ ದೃಷ್ಟಿಯಿಂದ ಹೊಸ ಕೊಠಡಿಗಳ ನಿರ್ಮಾಣಕ್ಕೆ ಸರ್ಕಾರ ಕ್ರಮ ತೆಗೆದುಕೊಳ್ಳಬೇಕೆಂದು ಪಟ್ಟಣ ನಿವಾಸಿ ಎಚ್. ಕಾಡಸಿದ್ದ ಒತ್ತಾಯಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚಾಂದ್ ಬಾಷ</strong></p>.<p><strong>ತೆಕ್ಕಲಕೋಟೆ</strong> : ಪಟ್ಟಣದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ (ಎಸ್.ಡಬ್ಯ್ಲೂ.ಎಸ್) ಯು ಮೂಲ ಸೌಲಭ್ಯಗಳಿಂದ ವಂಚಿತವಾಗಿದ್ದು, ಶಿಥಿಲವಾದ ಕೊಠಡಿಗಳಲ್ಲಿ ವಿದ್ಯಾರ್ಥಿಗಳು ಪಾಠ ಪ್ರವಚನ ಕೇಳುವಂತಾಗಿದೆ.</p>.<p>1 ರಿಂದ 6ನೇ ತರಗತಿ ವರೆಗೆ ಒಟ್ಟು 128 ವಿದ್ಯಾರ್ಥಿಗಳು ವಿದ್ಯಾಭ್ಯಾಸ ಮಾಡುತ್ತಿದ್ದು, ಇಲ್ಲಿ ಇಬ್ಬರು ಕಾಯಂ ಶಿಕ್ಷಕರು, ಒಬ್ಬ ಅತಿಥಿ ಶಿಕ್ಷಕ ಕಾರ್ಯನಿರ್ವಹಿಸುತ್ತಿದ್ದಾರೆ. ಶಾಲೆಯು 6 ಕೊಠಡಿ ಹೊಂದಿದ್ದು ಇದರಲ್ಲಿ 2 ಕೊಠಡಿಗಳು ಮಾತ್ರ ಬಳಕೆಗೆ ಯೋಗ್ಯವಾಗಿವೆ.</p>.<p>ನಾಲ್ಕು ಕೊಠಡಿಗಳಲ್ಲಿ ಒಂದು ಕೊಠಡಿಗೆ ಚುನಾವಣೆಯ ಸಂದರ್ಭದಲ್ಲಿ ಚಾವಣಿಯ ಸಿಮೆಂಟ್ ಉದುರದಂತೆ ರಿಪೇರಿ ಮಾಡಲಾಗಿದೆ. ಇನ್ನೊಂದು ಕೊಠಡಿಯ ಚಾವಣಿಯು ಮಳೆಯಿಂದಾಗಿ ತೇವಾಂಶ ಹಿಡಿದುಕೊಂಡಿದ್ದು, ಅಲ್ಲಲ್ಲಿ ಸಿಮೆಂಟ್ ಉದುರಿ ಬೀಳುತ್ತಿದೆ. 1 ರಿಂದ 3 ಹಾಗೂ 4 ರಿಂದ 6ನೇ ತರಗತಿಯ ಮಕ್ಕಳನ್ನು 2 ಕೊಠಡಿಗಳಲ್ಲಿ ಕೂಡಿಸಿ ಪಾಠ ಮಾಡಬೇಕಾದ ಅನಿವಾರ್ಯತೆಯಿದೆ.</p>.<div><blockquote>ಶಾಲೆಯ ಎಲ್ಲಾ ಕೊಠಡಿಗಳು ಶಿಥಿಲಗೊಂಡಿದ್ದು ಹೊಸ ಕೊಠಡಿಗಳನ್ನು ನಿರ್ಮಿಸಿ ಕೊಡುವಂತೆ ಕ್ಷೇತ್ರ ಶಿಕ್ಷಣಾಧಿಕಾರಿಗಳಿಗೆ ಮನವಿ ಸಲ್ಲಿಸಲಾಗಿದೆ. ಪರಿಶೀಲನೆ ನಡೆದಿದೆ.</blockquote><span class="attribution">ರೇಖಾ ಶ್ರೀವಾಣಿ, ಮುಖ್ಯಗುರು</span></div>.<p>ಸಿಮೆಂಟ್ ಸೀಟ್ ಅಳವಡಿಸಿದ ಇನ್ನೊಂದು ಕೊಠಡಿ ಇದ್ದು, ತರಗತಿ ನಡೆಸಲು ಯೋಗ್ಯವಾಗಿಲ್ಲ. ಇದರ ಪಕ್ಕದಲ್ಲಿರುವ ಕೋಣೆಯು ತೀವ್ರ ಶಿಥಿಲಾವಸ್ಥೆ ತಲುಪಿದ್ದು, ಯಾವಾಗ ಬೀಳುತ್ತದೋ ಎನ್ನುವ ಆತಂಕದಿಂದ ಈ ಕೊಠಡಿಗೆ ಬೀಗ ಜಡಿಯಲಾಗಿದೆ.</p>.<div><blockquote>ಶಿಥಿಲ ಕೊಠಡಿಗಳ ಬಗ್ಗೆ ಇಲಾಖೆಯ ಹಿರಿಯ ಅಧಿಕಾರಿಗಳಿಗೆ ತಿಳಿಸಲಾಗಿದೆ. ಆದಷ್ಟು ಶೀಘ್ರ ಹೊಸ ಕಟ್ಟಡ ನಿರ್ಮಾಣವಾಗುವ ಭರವಸೆ ಇದೆ.</blockquote><span class="attribution">ಎಚ್. ಗುರಪ್ಪ, ಕ್ಷೇತ್ರ ಶಿಕ್ಷಣಾಧಿಕಾರಿ, ಸಿರುಗುಪ್ಪ</span></div>.<p>ಕೋಣೆಗಳ ಕೊರತೆಯಿಂದಾಗಿ 1-3ನೇ ತರಗತಿ ವಿದ್ಯಾರ್ಥಿಗಳನ್ನು ಒಂದು ಕೋಣೆಯಲ್ಲಿ, 4-6ನೇ ತರಗತಿ ವಿದ್ಯಾರ್ಥಿಗಳನ್ನು ಮತ್ತೊಂದು ಕೋಣೆಯಲ್ಲಿ ಕೂಡಿಸಿ ಪಾಠ ಮಾಡಲಾಗುತ್ತಿದ್ದು, ಪಾಠ ಪ್ರವಚನಕ್ಕೆ ಅಡ್ಡಿಯಾಗುತ್ತಿದೆ. ವಿದ್ಯಾರ್ಥಿಗಳಿಗೆ ಶಾಲೆಯಲ್ಲಿ ಕುಡಿಯುವ ನೀರಿನ ಸೌಲಭ್ಯ ಇಲ್ಲದಿರುವುದರಿಂದ ಶಾಲೆಯ ಅಕ್ಕ ಪಕ್ಕದ ಮನೆಗಳಲ್ಲಿ ಕೇಳಿ ನೀರು ಕುಡಿಯುವ ಪರಿಸ್ಥಿತಿಯೂ ಇದೆ. ಮಕ್ಕಳಿಗೆ ಶೌಚಾಲಯವೂ ಇರುವುದಿಲ್ಲ.</p>.<p>ಶಿಥಿಲ ಕಟ್ಟದಲ್ಲಿಯೇ ವಿದ್ಯಾರ್ಥಿಗಳು ಓದುತ್ತಿದ್ದು, ಮಳೆ ಬಂದರೆ ಚಾವಣಿಯ ನೀರು ತೊಟ್ಟಿಕ್ಕುತ್ತದೆ. ವಿದ್ಯಾರ್ಥಿಗಳ ಸುರಕ್ಷೆಯ ದೃಷ್ಟಿಯಿಂದ ಹೊಸ ಕೊಠಡಿಗಳ ನಿರ್ಮಾಣಕ್ಕೆ ಸರ್ಕಾರ ಕ್ರಮ ತೆಗೆದುಕೊಳ್ಳಬೇಕೆಂದು ಪಟ್ಟಣ ನಿವಾಸಿ ಎಚ್. ಕಾಡಸಿದ್ದ ಒತ್ತಾಯಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>