<p><strong>ಕಂಪ್ಲಿ(ಬಳ್ಳಾರಿ):</strong> ಇಲ್ಲಿಯ ಕೋಟೆ ಜನವಸತಿ ಪ್ರದೇಶದ ಬಳಿಯ ತುಂಗಭದ್ರಾ ನದಿಗೆ ಜಲಾಶಯದಿಂದ ಹೆಚ್ಚಿನ ಪ್ರಮಾಣದ ನೀರು ಹರಿದು ಬರುತ್ತಿದ್ದು, ಸೇತುವೆ ಮುಳುಗಡೆ ಭೀತಿ ಎದುರಾಗಿದೆ.</p>.<p>ಸದ್ಯ ಮುಂಜಾಗ್ರತೆಯಾಗಿ ಕಂಪ್ಲಿ- ಗಂಗಾವತಿ ಸೇತುವೆ ಬಂದ್ ಮಾಡಲಾಗಿದ್ದು, ಸಂಪರ್ಕ ಕಡಿತಗೊಂಡಿದೆ.</p><p>ಅದರಿಂದ ಕಲ್ಯಾಣ, ಉತ್ತರ ಮತ್ತು ಮಧ್ಯ ಕರ್ನಾಟಕ, ತೆಲಂಗಾಣ, ಆಂಧ್ರಪ್ರದೇಶಕ್ಕೆ ತೆರಳುವ ಪ್ರಯಾಣಿಕರಿಗೆ ತುಂಬಾ ತೊಂದರೆಯಾಗಿದೆ.</p>.<p>ಕಂಪ್ಲಿಯಿಂದ ಗಂಗಾವತಿಗೆ ನಿತ್ಯ ತೆರಳುವ ವಿವಿಧ ಶಾಲಾ ಕಾಲೇಜು ವಿದ್ಯಾರ್ಥಿಗಳು, ಪ್ರಮುಖ ಆಸ್ಪತ್ರೆಗಳಿಗೆ ಚಿಕಿತ್ಸೆ ಪಡೆಯಲು ಹೋಗುವ ರೋಗಿಗಳು, ವಾಣಿಜ್ಯ ವ್ಯವಹಾರಗಳಿಗೆ ತೆರಳುವವರು ವಿಜಯನಗರ ಜಿಲ್ಲೆಯ ಬುಕ್ಕಸಾಗರ ಗ್ರಾಮದ ಬಳಿಯ ಕಡೆಬಾಗಿಲು ಸೇತುವೆ ಮೂಲಕ ಸುತ್ತು ಬಳಸಿ ಪ್ರಯಾಣಿಸಬೇಕಾದ ಅನಿವಾರ್ಯತೆ ತಲೆದೋರಿದೆ.</p>. <p>ಕಂಪ್ಲಿ-ಸಿರುಗುಪ್ಪ ಹೆದ್ದಾರಿಗೆ ನದಿ ಹಿನ್ನೀರು ನುಗ್ಗುವ ಸಾಧ್ಯತೆ ಇರುವುದರಿಂದ ಸಂಪರ್ಕ ಕಡಿತಗೊಳ್ಳುವ ನಿರೀಕ್ಷೆ ಇದೆ.</p><p>ನದಿ ಪಾತ್ರದಲ್ಲಿ ಅಳವಡಿಸಿರುವ ಪಂಪ್ ಸೆಟ್ ಗಳನ್ನು ರೈತರು ಸುರಕ್ಷಿತ ಸ್ಥಳಕ್ಕೆ ಸಾಗಿಸಲು ಈಗಾಗಲೆ ಮುಂದಾಗಿದ್ದಾರೆ.</p> <p>ನದಿ ಬಳಿ ಮೀನುಗಾರರ ಅನೇಕ ಕುಟುಂಬಗಳು ವಾಸಿಸುತ್ತಿದ್ದು, ನೀರಿನ ಪ್ರಮಾಣ ಹೆಚ್ಚಾದಲ್ಲಿ ಕಾಳಜಿ ಕೇಂದ್ರಕ್ಕೆ ಸ್ಥಳಾಂತರಿಸಲು ತಾಲ್ಲೂಕು ಆಡಳಿತ ಕ್ರಮ ಕೈಗೊಳ್ಳಲಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕಂಪ್ಲಿ(ಬಳ್ಳಾರಿ):</strong> ಇಲ್ಲಿಯ ಕೋಟೆ ಜನವಸತಿ ಪ್ರದೇಶದ ಬಳಿಯ ತುಂಗಭದ್ರಾ ನದಿಗೆ ಜಲಾಶಯದಿಂದ ಹೆಚ್ಚಿನ ಪ್ರಮಾಣದ ನೀರು ಹರಿದು ಬರುತ್ತಿದ್ದು, ಸೇತುವೆ ಮುಳುಗಡೆ ಭೀತಿ ಎದುರಾಗಿದೆ.</p>.<p>ಸದ್ಯ ಮುಂಜಾಗ್ರತೆಯಾಗಿ ಕಂಪ್ಲಿ- ಗಂಗಾವತಿ ಸೇತುವೆ ಬಂದ್ ಮಾಡಲಾಗಿದ್ದು, ಸಂಪರ್ಕ ಕಡಿತಗೊಂಡಿದೆ.</p><p>ಅದರಿಂದ ಕಲ್ಯಾಣ, ಉತ್ತರ ಮತ್ತು ಮಧ್ಯ ಕರ್ನಾಟಕ, ತೆಲಂಗಾಣ, ಆಂಧ್ರಪ್ರದೇಶಕ್ಕೆ ತೆರಳುವ ಪ್ರಯಾಣಿಕರಿಗೆ ತುಂಬಾ ತೊಂದರೆಯಾಗಿದೆ.</p>.<p>ಕಂಪ್ಲಿಯಿಂದ ಗಂಗಾವತಿಗೆ ನಿತ್ಯ ತೆರಳುವ ವಿವಿಧ ಶಾಲಾ ಕಾಲೇಜು ವಿದ್ಯಾರ್ಥಿಗಳು, ಪ್ರಮುಖ ಆಸ್ಪತ್ರೆಗಳಿಗೆ ಚಿಕಿತ್ಸೆ ಪಡೆಯಲು ಹೋಗುವ ರೋಗಿಗಳು, ವಾಣಿಜ್ಯ ವ್ಯವಹಾರಗಳಿಗೆ ತೆರಳುವವರು ವಿಜಯನಗರ ಜಿಲ್ಲೆಯ ಬುಕ್ಕಸಾಗರ ಗ್ರಾಮದ ಬಳಿಯ ಕಡೆಬಾಗಿಲು ಸೇತುವೆ ಮೂಲಕ ಸುತ್ತು ಬಳಸಿ ಪ್ರಯಾಣಿಸಬೇಕಾದ ಅನಿವಾರ್ಯತೆ ತಲೆದೋರಿದೆ.</p>. <p>ಕಂಪ್ಲಿ-ಸಿರುಗುಪ್ಪ ಹೆದ್ದಾರಿಗೆ ನದಿ ಹಿನ್ನೀರು ನುಗ್ಗುವ ಸಾಧ್ಯತೆ ಇರುವುದರಿಂದ ಸಂಪರ್ಕ ಕಡಿತಗೊಳ್ಳುವ ನಿರೀಕ್ಷೆ ಇದೆ.</p><p>ನದಿ ಪಾತ್ರದಲ್ಲಿ ಅಳವಡಿಸಿರುವ ಪಂಪ್ ಸೆಟ್ ಗಳನ್ನು ರೈತರು ಸುರಕ್ಷಿತ ಸ್ಥಳಕ್ಕೆ ಸಾಗಿಸಲು ಈಗಾಗಲೆ ಮುಂದಾಗಿದ್ದಾರೆ.</p> <p>ನದಿ ಬಳಿ ಮೀನುಗಾರರ ಅನೇಕ ಕುಟುಂಬಗಳು ವಾಸಿಸುತ್ತಿದ್ದು, ನೀರಿನ ಪ್ರಮಾಣ ಹೆಚ್ಚಾದಲ್ಲಿ ಕಾಳಜಿ ಕೇಂದ್ರಕ್ಕೆ ಸ್ಥಳಾಂತರಿಸಲು ತಾಲ್ಲೂಕು ಆಡಳಿತ ಕ್ರಮ ಕೈಗೊಳ್ಳಲಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>