<p><strong>ಕುಡತಿನಿ</strong> (ತೋರಣಗಲ್ಲು): ಕುಡತಿನಿ ಪಟ್ಟಣದ ಹೊವಲಯದಲ್ಲಿನ ಎಚ್ಎಲ್ಸಿ ಕಾಲುವೆಯ ಬಳಿ ಮದುವೆ ದಿಬ್ಬಣದ ಲಾರಿಯೊಂದು ಮುಗುಚಿ ಇಬ್ಬರು ಮಹಿಳೆಯರು ಮೃತಪಟ್ಟು, ಸುಮಾರು 26 ಜನ ಗಾಯಗೊಂಡ ಘಟನೆ ಭಾನುವಾರ ಸಂಭವಿಸಿದೆ.</p>.<p>ಪಟ್ಟಣಸೆರಗು ಗ್ರಾಮದ ಮಹಿಳೆ ಮಾರೆಮ್ಮ(45) ಸ್ಥಳದಲ್ಲೆ ಮೃತಪಟ್ಟರೆ ಅದೇ ಗ್ರಾಮದ ಮತ್ತೊಬ್ಬ ಮಹಿಳೆ ಭಾಗ್ಯಮ್ಮ(55) ಬಳ್ಳಾರಿಯ ವಿಮ್ಸ್ಗೆ ತೆರಳುವ ವೇಳೆ ಮಾರ್ಗ ಮಧ್ಯದಲ್ಲಿ ಕೊನೆಯುಸಿರೆಳೆದಿದ್ದಾರೆ.</p>.<p>ಕುರುಗೋಡು ತಾಲ್ಲೂಕಿನ ಪಟ್ಟಣಸೆರಗು ಗ್ರಾಮದ ಸುಮಾರು 50ಕ್ಕೂ ಹೆಚ್ಚು ಜನ ಆಂದ್ರಪ್ರದೇಶದಲ್ಲಿನ ಕೆರೆನಹಳ್ಳಿ ಗ್ರಾಮದಲ್ಲಿ ಭಾನುವಾರ ನಡೆದ ಮದುವೆ ಕಾರ್ಯಕ್ರಮ ಮುಗಿಸಿಕೊಂಡು ತಮ್ಮ ಸ್ವಗ್ರಾಮಕ್ಕೆ ತೆರಳುವ ವೇಳೆ ಈ ದುರ್ಘಟನೆ ಸಂಭವಿಸಿದೆ.</p>.<p>ಅತಿವೇಗದ ಚಾಲನೆಯೇ ಅಪಘಾತಕ್ಕೆ ಕಾರಣ ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ. ಗಾಯಗೊಂಡವರಿಗೆ ಕುಡತಿನಿ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಪ್ರಥಮ ಚಿಕಿತ್ಸೆ ಕೊಡಿಸಲಾಗಿದೆ. ಗಂಭೀರ ಗಾಯಗೊಂಡ ಇಬ್ಬರನ್ನು ಹೆಚ್ಚಿನ ಚಿಕಿತ್ಸೆಗಾಗಿ ಬಳ್ಳಾರಿಯ ವಿಮ್ಸ್ಗೆ ದಾಖಲಿಸಲಾಗಿದೆ.</p>.<p>ಕುರುಗೋಡು ಠಾಣೆಯ ಪಿಎಸ್ಐ ವಿರೇಶಪ್ಪ, ಕುಡತಿನಿ ಠಾಣೆಯ ಪೊಲೀಸರು ಘಟನಾ ಸ್ಥಳಕ್ಕೆ ಬಂದು, ಪರಿಶೀಲಿಸಿ ಸ್ಥಳದಲ್ಲಿದ್ದ ಜನರಿಂದ ಸಮಗ್ರ ಮಾಹಿತಿ ಪಡೆದುಕೊಂಡರು.</p>.<p>ಇದೇ ಮಾರ್ಗದಲ್ಲಿ ತೆರಳುತ್ತಿದ್ದ ಕಾಂಗ್ರೆಸ್ನ ಲೋಕಸಭಾ ಅಭ್ಯರ್ಥಿ ಈ.ತುಕಾರಾಂ ಘಟನೆಯ ಬಗ್ಗೆ ಸ್ಥಳೀಯರಿಂದ ಮಾಹಿತಿ ಪಡೆದರು.</p>.<p>ನಂತರ ವಿಮ್ಸ್ನ ನಿರ್ದೇಶಕ ಗಂಗಾಧರಗೌಡ ಅವರಿಗೆ ದೂರವಾಣಿ ಕರೆ ಮಾಡಿ ಗಾಯಾಳುಗಳಿಗೆ ಅಗತ್ಯ ಚಿಕಿತ್ಸೆ ನೀಡುವಂತೆ ಸೂಚಿಸಿದರು.</p>.<p>ಕುಡತಿನಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದ್ದು ಹೆಚ್ಚಿನ ತನಿಖೆ ನಡೆಸಲಾಗುತ್ತಿದೆ ಎಂದು ಕುರುಗೋಡು ವೃತ್ತದ ಸಿಪಿಐ ವಿಶ್ವನಾಥ ಹಿರೇಗೌಡ ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕುಡತಿನಿ</strong> (ತೋರಣಗಲ್ಲು): ಕುಡತಿನಿ ಪಟ್ಟಣದ ಹೊವಲಯದಲ್ಲಿನ ಎಚ್ಎಲ್ಸಿ ಕಾಲುವೆಯ ಬಳಿ ಮದುವೆ ದಿಬ್ಬಣದ ಲಾರಿಯೊಂದು ಮುಗುಚಿ ಇಬ್ಬರು ಮಹಿಳೆಯರು ಮೃತಪಟ್ಟು, ಸುಮಾರು 26 ಜನ ಗಾಯಗೊಂಡ ಘಟನೆ ಭಾನುವಾರ ಸಂಭವಿಸಿದೆ.</p>.<p>ಪಟ್ಟಣಸೆರಗು ಗ್ರಾಮದ ಮಹಿಳೆ ಮಾರೆಮ್ಮ(45) ಸ್ಥಳದಲ್ಲೆ ಮೃತಪಟ್ಟರೆ ಅದೇ ಗ್ರಾಮದ ಮತ್ತೊಬ್ಬ ಮಹಿಳೆ ಭಾಗ್ಯಮ್ಮ(55) ಬಳ್ಳಾರಿಯ ವಿಮ್ಸ್ಗೆ ತೆರಳುವ ವೇಳೆ ಮಾರ್ಗ ಮಧ್ಯದಲ್ಲಿ ಕೊನೆಯುಸಿರೆಳೆದಿದ್ದಾರೆ.</p>.<p>ಕುರುಗೋಡು ತಾಲ್ಲೂಕಿನ ಪಟ್ಟಣಸೆರಗು ಗ್ರಾಮದ ಸುಮಾರು 50ಕ್ಕೂ ಹೆಚ್ಚು ಜನ ಆಂದ್ರಪ್ರದೇಶದಲ್ಲಿನ ಕೆರೆನಹಳ್ಳಿ ಗ್ರಾಮದಲ್ಲಿ ಭಾನುವಾರ ನಡೆದ ಮದುವೆ ಕಾರ್ಯಕ್ರಮ ಮುಗಿಸಿಕೊಂಡು ತಮ್ಮ ಸ್ವಗ್ರಾಮಕ್ಕೆ ತೆರಳುವ ವೇಳೆ ಈ ದುರ್ಘಟನೆ ಸಂಭವಿಸಿದೆ.</p>.<p>ಅತಿವೇಗದ ಚಾಲನೆಯೇ ಅಪಘಾತಕ್ಕೆ ಕಾರಣ ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ. ಗಾಯಗೊಂಡವರಿಗೆ ಕುಡತಿನಿ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಪ್ರಥಮ ಚಿಕಿತ್ಸೆ ಕೊಡಿಸಲಾಗಿದೆ. ಗಂಭೀರ ಗಾಯಗೊಂಡ ಇಬ್ಬರನ್ನು ಹೆಚ್ಚಿನ ಚಿಕಿತ್ಸೆಗಾಗಿ ಬಳ್ಳಾರಿಯ ವಿಮ್ಸ್ಗೆ ದಾಖಲಿಸಲಾಗಿದೆ.</p>.<p>ಕುರುಗೋಡು ಠಾಣೆಯ ಪಿಎಸ್ಐ ವಿರೇಶಪ್ಪ, ಕುಡತಿನಿ ಠಾಣೆಯ ಪೊಲೀಸರು ಘಟನಾ ಸ್ಥಳಕ್ಕೆ ಬಂದು, ಪರಿಶೀಲಿಸಿ ಸ್ಥಳದಲ್ಲಿದ್ದ ಜನರಿಂದ ಸಮಗ್ರ ಮಾಹಿತಿ ಪಡೆದುಕೊಂಡರು.</p>.<p>ಇದೇ ಮಾರ್ಗದಲ್ಲಿ ತೆರಳುತ್ತಿದ್ದ ಕಾಂಗ್ರೆಸ್ನ ಲೋಕಸಭಾ ಅಭ್ಯರ್ಥಿ ಈ.ತುಕಾರಾಂ ಘಟನೆಯ ಬಗ್ಗೆ ಸ್ಥಳೀಯರಿಂದ ಮಾಹಿತಿ ಪಡೆದರು.</p>.<p>ನಂತರ ವಿಮ್ಸ್ನ ನಿರ್ದೇಶಕ ಗಂಗಾಧರಗೌಡ ಅವರಿಗೆ ದೂರವಾಣಿ ಕರೆ ಮಾಡಿ ಗಾಯಾಳುಗಳಿಗೆ ಅಗತ್ಯ ಚಿಕಿತ್ಸೆ ನೀಡುವಂತೆ ಸೂಚಿಸಿದರು.</p>.<p>ಕುಡತಿನಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದ್ದು ಹೆಚ್ಚಿನ ತನಿಖೆ ನಡೆಸಲಾಗುತ್ತಿದೆ ಎಂದು ಕುರುಗೋಡು ವೃತ್ತದ ಸಿಪಿಐ ವಿಶ್ವನಾಥ ಹಿರೇಗೌಡ ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>