<p>ವಿಜಯಪುರ(ದೇವನಹಳ್ಳಿ): ಗರ್ಭಿಣಿ ಸ್ತ್ರೀಯರು, ಬಾಣಂತಿಯರಿಗೆ ಅಂಗನವಾಡಿ ಕೇಂದ್ರದಲ್ಲಿ ವಿತರಿಸಲಾದ ಪೌಷ್ಟಿಕ ಆಹಾರ ಪೊಟ್ಟಣದಲ್ಲಿ ಸತ್ತ ಜಿರಳೆಗಳು ಪತ್ತೆಯಾಗಿವೆ. </p>.<p>ಹಾರೋಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಬುಳ್ಳಹಳ್ಳಿ ಗ್ರಾಮದ ಅಂಗನವಾಡಿ ಕೇಂದ್ರದಲ್ಲಿ ಮಂಗಳವಾರ ವಿತರಿಸಲಾದ ಆಹಾರ ಪೊಟ್ಟಣದಲ್ಲಿ 30ಕ್ಕೂ ಹೆಚ್ಚು ಸತ್ತ ಜಿರಳೆಗಳಿವೆ. </p>.<p>ಗ್ರಾಮದ ನಿವಾಸಿ ಪೂಜಪ್ಪ ಎಂಬುವರಿಗೆ ನೀಡಿದ ಎರಡು ಆಹಾರ ಪೊಟ್ಟಣಗಳ ಪೈಕಿ ಒಂದರಲ್ಲಿ ಈ ಜಿರಳೆಗಳು ಕಂಡುಬಂದಿವೆ. ಕೂಡಲೇ ಅವರು ಪೊಟ್ಟಣಗಳನ್ನು ಅಂಗನವಾಡಿ ಕೇಂದ್ರಕ್ಕೆ ಒಪ್ಪಿಸಿದ್ದಾರೆ. ‘ಒಂದು ಪೊಟ್ಟಣ ಚೆನ್ನಾಗಿದೆ. ಆದರೂ ಅದರಲ್ಲಿಯ ಹಿಟ್ಟು ಬಳಸಲು, ಮಕ್ಕಳಿಗೆ ಕೊಡಲು ಭಯವಾಗುತ್ತದೆ’ ಎಂದು ಪೂಜಪ್ಪ ಆತಂಕ ವ್ಯಕ್ತಪಡಿಸಿದರು.</p>.<p>‘ಪೊಟ್ಟಣಗಳನ್ನು ನಾವು ಇಲ್ಲಿ ತಯಾರು ಮಾಡುವುದಿಲ್ಲ. ನಮಗೆ ಮೂಟೆಗಳಲ್ಲಿ ಸರಬರಾಜು ಮಾಡುತ್ತಾರೆ. ನಾವು ಅವನ್ನು ವಿತರಿಸಿದ್ದೇವೆ ಅಷ್ಟೇ. ಜಿರಳೆ ಸೇರಿಕೊಂಡಿರುವುದಕ್ಕೂ ನಮಗೂ ಸಂಬಂಧವಿಲ್ಲ’ ಎಂದು ಅಂಗನವಾಡಿ ಸಹಾಯಕಿ ಪ್ರತಿಕ್ರಿಯಿಸಿದ್ದಾರೆ.</p>.<p>ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಮೂಲಕ ಅಂಗನವಾಡಿಗಳಿಗೆ ಪೂರೈಸುವ ಈ ಪೌಷ್ಟಿಕ ಆಹಾರ ಪೊಟ್ಟಣಗಳು ದೇವನಹಳ್ಳಿ ಪಟ್ಟಣದ ಒಂದನೇ ವಾರ್ಡ್ ಪ್ರಸನ್ನಹಳ್ಳಿಯಲ್ಲಿ ತಯಾರಾಗುತ್ತಿವೆ. 112ನೇ ಬ್ಯಾಚ್ನಲ್ಲಿ ತಯಾರಾದ ಪೊಟ್ಟಣದಲ್ಲಿ ಜಿರಳೆಗಳು ಪತ್ತೆ ಆಗಿವೆ. ಜೂನ್ ತಿಂಗಳಲ್ಲಿ ಈ ಆಹಾರ ಪೊಟ್ಟಣ ಪ್ಯಾಕ್ ಮಾಡಲಾಗಿದ್ದು, ಆಗಸ್ಟ್ 28ರವರೆಗೂ ಉಪಯೋಗಿಸಬಹುದಾಗಿದೆ. </p>.<p>ದೇವನಹಳ್ಳಿಯಲ್ಲಿನ ಆಹಾರ ತಯಾರಿಕ ಘಟಕದಲ್ಲಿ ರಾಜ್ಯದಲ್ಲೇ ಉತ್ತಮವಾದ ಗುಣಮಟ್ಟದ ಪೌಷ್ಟಿಕ ಆಹಾರ ಪೊಟ್ಟಣ ತಯಾರಿಸುತ್ತಿದ್ದಾರೆ. ಇದುವರೆಗೂ ಯಾವುದೇ ದೂರು ಬಂದಿರಲಿಲ್ಲ. ಪಾಕೇಟ್ನಲ್ಲಿ ಜಿರಳೆಗಳು ಕಾಣಿಸಿಕೊಂಡಿರುವ ಬಗ್ಗೆ ಪರಿಶೀಲನೆ ನಡೆಸಲಾಗುತ್ತಿದೆ. – ನಟರಾಜ್ ಉಪನಿರ್ದೇಶಕ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಬೆಂಗಳೂರು ಗ್ರಾಮಾಂತರ ಜಿಲ್ಲೆ</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ವಿಜಯಪುರ(ದೇವನಹಳ್ಳಿ): ಗರ್ಭಿಣಿ ಸ್ತ್ರೀಯರು, ಬಾಣಂತಿಯರಿಗೆ ಅಂಗನವಾಡಿ ಕೇಂದ್ರದಲ್ಲಿ ವಿತರಿಸಲಾದ ಪೌಷ್ಟಿಕ ಆಹಾರ ಪೊಟ್ಟಣದಲ್ಲಿ ಸತ್ತ ಜಿರಳೆಗಳು ಪತ್ತೆಯಾಗಿವೆ. </p>.<p>ಹಾರೋಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಬುಳ್ಳಹಳ್ಳಿ ಗ್ರಾಮದ ಅಂಗನವಾಡಿ ಕೇಂದ್ರದಲ್ಲಿ ಮಂಗಳವಾರ ವಿತರಿಸಲಾದ ಆಹಾರ ಪೊಟ್ಟಣದಲ್ಲಿ 30ಕ್ಕೂ ಹೆಚ್ಚು ಸತ್ತ ಜಿರಳೆಗಳಿವೆ. </p>.<p>ಗ್ರಾಮದ ನಿವಾಸಿ ಪೂಜಪ್ಪ ಎಂಬುವರಿಗೆ ನೀಡಿದ ಎರಡು ಆಹಾರ ಪೊಟ್ಟಣಗಳ ಪೈಕಿ ಒಂದರಲ್ಲಿ ಈ ಜಿರಳೆಗಳು ಕಂಡುಬಂದಿವೆ. ಕೂಡಲೇ ಅವರು ಪೊಟ್ಟಣಗಳನ್ನು ಅಂಗನವಾಡಿ ಕೇಂದ್ರಕ್ಕೆ ಒಪ್ಪಿಸಿದ್ದಾರೆ. ‘ಒಂದು ಪೊಟ್ಟಣ ಚೆನ್ನಾಗಿದೆ. ಆದರೂ ಅದರಲ್ಲಿಯ ಹಿಟ್ಟು ಬಳಸಲು, ಮಕ್ಕಳಿಗೆ ಕೊಡಲು ಭಯವಾಗುತ್ತದೆ’ ಎಂದು ಪೂಜಪ್ಪ ಆತಂಕ ವ್ಯಕ್ತಪಡಿಸಿದರು.</p>.<p>‘ಪೊಟ್ಟಣಗಳನ್ನು ನಾವು ಇಲ್ಲಿ ತಯಾರು ಮಾಡುವುದಿಲ್ಲ. ನಮಗೆ ಮೂಟೆಗಳಲ್ಲಿ ಸರಬರಾಜು ಮಾಡುತ್ತಾರೆ. ನಾವು ಅವನ್ನು ವಿತರಿಸಿದ್ದೇವೆ ಅಷ್ಟೇ. ಜಿರಳೆ ಸೇರಿಕೊಂಡಿರುವುದಕ್ಕೂ ನಮಗೂ ಸಂಬಂಧವಿಲ್ಲ’ ಎಂದು ಅಂಗನವಾಡಿ ಸಹಾಯಕಿ ಪ್ರತಿಕ್ರಿಯಿಸಿದ್ದಾರೆ.</p>.<p>ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಮೂಲಕ ಅಂಗನವಾಡಿಗಳಿಗೆ ಪೂರೈಸುವ ಈ ಪೌಷ್ಟಿಕ ಆಹಾರ ಪೊಟ್ಟಣಗಳು ದೇವನಹಳ್ಳಿ ಪಟ್ಟಣದ ಒಂದನೇ ವಾರ್ಡ್ ಪ್ರಸನ್ನಹಳ್ಳಿಯಲ್ಲಿ ತಯಾರಾಗುತ್ತಿವೆ. 112ನೇ ಬ್ಯಾಚ್ನಲ್ಲಿ ತಯಾರಾದ ಪೊಟ್ಟಣದಲ್ಲಿ ಜಿರಳೆಗಳು ಪತ್ತೆ ಆಗಿವೆ. ಜೂನ್ ತಿಂಗಳಲ್ಲಿ ಈ ಆಹಾರ ಪೊಟ್ಟಣ ಪ್ಯಾಕ್ ಮಾಡಲಾಗಿದ್ದು, ಆಗಸ್ಟ್ 28ರವರೆಗೂ ಉಪಯೋಗಿಸಬಹುದಾಗಿದೆ. </p>.<p>ದೇವನಹಳ್ಳಿಯಲ್ಲಿನ ಆಹಾರ ತಯಾರಿಕ ಘಟಕದಲ್ಲಿ ರಾಜ್ಯದಲ್ಲೇ ಉತ್ತಮವಾದ ಗುಣಮಟ್ಟದ ಪೌಷ್ಟಿಕ ಆಹಾರ ಪೊಟ್ಟಣ ತಯಾರಿಸುತ್ತಿದ್ದಾರೆ. ಇದುವರೆಗೂ ಯಾವುದೇ ದೂರು ಬಂದಿರಲಿಲ್ಲ. ಪಾಕೇಟ್ನಲ್ಲಿ ಜಿರಳೆಗಳು ಕಾಣಿಸಿಕೊಂಡಿರುವ ಬಗ್ಗೆ ಪರಿಶೀಲನೆ ನಡೆಸಲಾಗುತ್ತಿದೆ. – ನಟರಾಜ್ ಉಪನಿರ್ದೇಶಕ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಬೆಂಗಳೂರು ಗ್ರಾಮಾಂತರ ಜಿಲ್ಲೆ</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>