<p><strong>ಆನೇಕಲ್:</strong> ತಾಲ್ಲೂಕಿನ ನೆರಳೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಬೆಂಡಗಾನಹಳ್ಳಿಯಲ್ಲಿ ಗುರುವಾರ ಬ್ರಿಕ್ ಫೀಲ್ಡ್ ಶೆಲ್ವರ್ಸ್ ನಿವಾಸಿಗಳು ಕನ್ನಡ ಕವಿಗಳ ಹೆಸರಿನ ರಸ್ತೆ ನಾಮಫಲಕ ಅಳವಡಿಸಲು ಅನ್ಯಭಾಷಿಕರು ಅಡ್ಡಿಪಡಿಸಿದ್ದರಿಂದ ಕನ್ನಡ ಪರ ಸಂಘಟನೆಗಳು ಮತ್ತು ಅನ್ಯಭಾಷಿಕ ವಾಸಿಗಳ ನಡುವೆ ಚಕಮಕಿ ನಡೆಯಿತು.</p>.<p>ಸ್ಥಳೀಯ ಕೆಆರ್ಎಸ್ ಪಕ್ಷದ ಮುಖಂಡ ಮಹೇಶ್ ನೇತೃತ್ವದಲ್ಲಿ ಬಡಾವಣೆಯ ರಸ್ತೆಗಳಲ್ಲಿ ಕವಿ, ಸಾಹಿತಿ ಹಾಗೂ ಕನ್ನಡ ಹೋರಾಟಗಾರರ ಹೆಸರಿನ ನಾಮಫಲಕ ಅಳವಡಿಸಲು ಗ್ರಾಮ ಪಂಚಾಯಿತಿಯಿಂದ ಅನುಮತಿ ಪಡೆದು ಫಲಕ ಅಳವಡಿಸಲು ಮುಂದಾಗಿದ್ದರು. ಈ ಸಂದರ್ಭದಲ್ಲಿ ಬ್ರಿಕ್ ಫೀಲ್ಡ್ ಶೆಲ್ಟರ್ಸ್ ಬಡಾವಣೆಯ ಕೆಲವು ನಿವಾಸಿಗಳು ವಿರೋಧ ವ್ಯಕ್ತಪಡಿಸಿದ್ದು, ಅಲ್ಲದೆ ಇವುಗಳನ್ನು ಕಿತ್ತುಹಾಕಲು ಮುಂದಾದ ಹಿನ್ನೆಲೆಯಲ್ಲಿ ಮಾತಿನ ಚಕಮಕಿ ನಡೆದಿತ್ತು.</p>.<p>ಪೊಲೀಸರು, ಗ್ರಾಮ ಪಂಚಾಯಿತಿ ಅಧಿಕಾರಿಗಳು ಮತ್ತು ಸ್ಥಳೀಯರ ನಡುವೆ ವಾಗ್ವದ ನಡೆಯಿತು. ಗ್ರಾಮ ಪಂಚಾಯಿತಿ ವತಿಯಿಂದ ನಾಮಫಲಕಗಳನ್ನು ಅಳವಡಿಸಲಾಗುವುದು ಎಂದು ತೀರ್ಮಾನವಾದ ಹಿನ್ನೆಲೆಯಲ್ಲಿ ಉದ್ವಿಗ್ನ ಪರಿಸ್ಥಿತಿ <br>ಶಮನವಾಯಿತು.</p>.<p>ಫಲಕ ಅಳವಡಿಕೆಗೆ ಬಡಾವಣೆ ನಿವಾಸಿಗಳು ವಿರೋಧ ವ್ಯಕ್ತಪಡಿಸಿದ ವಿಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ. ಕನ್ನಡ ನೆಲದಲ್ಲಿ ವಾಸವಿದ್ದು ಕನ್ನಡಿಗರ ಕವಿಗಳ ಹೆಸರಿನ ನಾಮಫಲಕಗಳಿಗೆ ವಿರೋಧ ವ್ಯಕ್ತಪಡಿಸಿದನ್ನು ಸಾಮಾಜಿಕ ಜಾಲತಾಣಿಗರು ಟೀಕಿಸಿದ್ದಾರೆ.</p>.<p>ಸ್ಥಳಕ್ಕೆ ಕನ್ನಡ ಪರ ಸಂಘಟನೆಯ ರೂಪೇಶ್ ರಾಜಣ್ಣ ಭೇಟಿ ನೀಡಿ ಘಟನೆ ನಡೆದ ಸ್ಥಳದಲ್ಲಿ ಕನ್ನಡ ರಾಜ್ಯೋತ್ಸವವನ್ನು ಅದ್ದೂರಿಯಾಗಿ ಆಚರಿಸಲಾಗುವುದು. ಜೊತಗೆ ಇತರೆ ಅಪಾರ್ಟ್ಮೆಂಟ್ಗಳಲ್ಲಿಯೂ ಕನ್ನಡ ನಾಡು ನುಡಿಯ ಬಗ್ಗೆ ಜಾಗೃತಿ ಮೂಡಿಸಲಾಗುವುದು ಎಂದರು.</p>.<p>‘ಗ್ರಾಮ ಪಂಚಾಯಿತಿ ವತಿಯಿಂದ ನಾಮಫಲಕಗಳನ್ನು ಸಿದ್ಧಪಡಿಸಲಾಗಿದ್ದು, ಶೀಘ್ರದಲ್ಲಿ ಫಲಕಗಳನ್ನು ಅಳವಡಿಸಲಾಗುವುದು’ ನೆರಳೂರು ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಗಂಗಾಧರ್ <br>ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಆನೇಕಲ್:</strong> ತಾಲ್ಲೂಕಿನ ನೆರಳೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಬೆಂಡಗಾನಹಳ್ಳಿಯಲ್ಲಿ ಗುರುವಾರ ಬ್ರಿಕ್ ಫೀಲ್ಡ್ ಶೆಲ್ವರ್ಸ್ ನಿವಾಸಿಗಳು ಕನ್ನಡ ಕವಿಗಳ ಹೆಸರಿನ ರಸ್ತೆ ನಾಮಫಲಕ ಅಳವಡಿಸಲು ಅನ್ಯಭಾಷಿಕರು ಅಡ್ಡಿಪಡಿಸಿದ್ದರಿಂದ ಕನ್ನಡ ಪರ ಸಂಘಟನೆಗಳು ಮತ್ತು ಅನ್ಯಭಾಷಿಕ ವಾಸಿಗಳ ನಡುವೆ ಚಕಮಕಿ ನಡೆಯಿತು.</p>.<p>ಸ್ಥಳೀಯ ಕೆಆರ್ಎಸ್ ಪಕ್ಷದ ಮುಖಂಡ ಮಹೇಶ್ ನೇತೃತ್ವದಲ್ಲಿ ಬಡಾವಣೆಯ ರಸ್ತೆಗಳಲ್ಲಿ ಕವಿ, ಸಾಹಿತಿ ಹಾಗೂ ಕನ್ನಡ ಹೋರಾಟಗಾರರ ಹೆಸರಿನ ನಾಮಫಲಕ ಅಳವಡಿಸಲು ಗ್ರಾಮ ಪಂಚಾಯಿತಿಯಿಂದ ಅನುಮತಿ ಪಡೆದು ಫಲಕ ಅಳವಡಿಸಲು ಮುಂದಾಗಿದ್ದರು. ಈ ಸಂದರ್ಭದಲ್ಲಿ ಬ್ರಿಕ್ ಫೀಲ್ಡ್ ಶೆಲ್ಟರ್ಸ್ ಬಡಾವಣೆಯ ಕೆಲವು ನಿವಾಸಿಗಳು ವಿರೋಧ ವ್ಯಕ್ತಪಡಿಸಿದ್ದು, ಅಲ್ಲದೆ ಇವುಗಳನ್ನು ಕಿತ್ತುಹಾಕಲು ಮುಂದಾದ ಹಿನ್ನೆಲೆಯಲ್ಲಿ ಮಾತಿನ ಚಕಮಕಿ ನಡೆದಿತ್ತು.</p>.<p>ಪೊಲೀಸರು, ಗ್ರಾಮ ಪಂಚಾಯಿತಿ ಅಧಿಕಾರಿಗಳು ಮತ್ತು ಸ್ಥಳೀಯರ ನಡುವೆ ವಾಗ್ವದ ನಡೆಯಿತು. ಗ್ರಾಮ ಪಂಚಾಯಿತಿ ವತಿಯಿಂದ ನಾಮಫಲಕಗಳನ್ನು ಅಳವಡಿಸಲಾಗುವುದು ಎಂದು ತೀರ್ಮಾನವಾದ ಹಿನ್ನೆಲೆಯಲ್ಲಿ ಉದ್ವಿಗ್ನ ಪರಿಸ್ಥಿತಿ <br>ಶಮನವಾಯಿತು.</p>.<p>ಫಲಕ ಅಳವಡಿಕೆಗೆ ಬಡಾವಣೆ ನಿವಾಸಿಗಳು ವಿರೋಧ ವ್ಯಕ್ತಪಡಿಸಿದ ವಿಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ. ಕನ್ನಡ ನೆಲದಲ್ಲಿ ವಾಸವಿದ್ದು ಕನ್ನಡಿಗರ ಕವಿಗಳ ಹೆಸರಿನ ನಾಮಫಲಕಗಳಿಗೆ ವಿರೋಧ ವ್ಯಕ್ತಪಡಿಸಿದನ್ನು ಸಾಮಾಜಿಕ ಜಾಲತಾಣಿಗರು ಟೀಕಿಸಿದ್ದಾರೆ.</p>.<p>ಸ್ಥಳಕ್ಕೆ ಕನ್ನಡ ಪರ ಸಂಘಟನೆಯ ರೂಪೇಶ್ ರಾಜಣ್ಣ ಭೇಟಿ ನೀಡಿ ಘಟನೆ ನಡೆದ ಸ್ಥಳದಲ್ಲಿ ಕನ್ನಡ ರಾಜ್ಯೋತ್ಸವವನ್ನು ಅದ್ದೂರಿಯಾಗಿ ಆಚರಿಸಲಾಗುವುದು. ಜೊತಗೆ ಇತರೆ ಅಪಾರ್ಟ್ಮೆಂಟ್ಗಳಲ್ಲಿಯೂ ಕನ್ನಡ ನಾಡು ನುಡಿಯ ಬಗ್ಗೆ ಜಾಗೃತಿ ಮೂಡಿಸಲಾಗುವುದು ಎಂದರು.</p>.<p>‘ಗ್ರಾಮ ಪಂಚಾಯಿತಿ ವತಿಯಿಂದ ನಾಮಫಲಕಗಳನ್ನು ಸಿದ್ಧಪಡಿಸಲಾಗಿದ್ದು, ಶೀಘ್ರದಲ್ಲಿ ಫಲಕಗಳನ್ನು ಅಳವಡಿಸಲಾಗುವುದು’ ನೆರಳೂರು ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಗಂಗಾಧರ್ <br>ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>