<p><strong>ಆನೇಕಲ್</strong>: ಇಲ್ಲಿಗೆ ಸಮೀಪದ ತಮಿಳುನಾಡು ಗಡಿಗ್ರಾಮ ಅಣ್ಣಿಯಾಳ ಬಳಿ ಭಾನುವಾರ ಕಾಡಾನೆ ದಾಳಿಯಿಂದ ಇಬ್ಬರು ಮಹಿಳೆಯರು ಮೃತಪಟ್ಟಿದ್ದಾರೆ.</p>.<p>ತಮಿಳುನಾಡಿನ ಅಣ್ಣಿಯಾಳ ಗ್ರಾಮದ ಅಂಗನವಾಡಿ ಕಾರ್ಯಕರ್ತೆ ವಸಂತಮ್ಮ (37) ಮತ್ತು ಕೃಷಿ ಕೂಲಿ ಕಾರ್ಮಿಕ ಮಹಿಳೆ ಅಶ್ವಥಮ್ಮ(40) ಮೃತರು.</p>.<p>ರಜೆ ಇದ್ದ ಕಾರಣ ವಸಂತಮ್ಮ ತೋಟದ ಕೆಲಸಕ್ಕೆ ತೆರಳಿದ್ದರು. ಅಶ್ವಥಮ್ಮ ಎಂದಿನಂತೆ ತೋಟದಲ್ಲಿ ಕೂಲಿ ಕೆಲಸ ಮಾಡುತ್ತಿದ್ದರು. ತೋಟಕ್ಕೆ ನುಗ್ಗಿದ ಕಾಡಾನೆಗಳ ಹಿಂಡು ತೋಟದಲ್ಲಿ ಕೆಲಸ ಮಾಡುತ್ತಿದ್ದ ಈ ಇಬ್ಬರ ಮೇಲೆ ದಾಳಿ ನಡೆಸಿವೆ. ಅಲ್ಲದೆ ಹಸುಗಳ ಮೇಲೂ ದಾಳಿ ನಡೆಸಿದ್ದು, ಮೂರು ಹಸು ಗಾಯಗೊಂಡಿವೆ. </p>.<p>ಕಾಡಾನೆ ದಾಳಿ ನಿಯಂತ್ರಿಸುವಲ್ಲಿ ಅರಣ್ಯ ಇಲಾಖೆ ವಿಫಲವಾಗಿದೆ ಎಂದು ಆರೋಪಿಸಿ ತಮಿಳುನಾಡಿನ ಥಳಿ ವಿಧಾನಸಭಾ ಕ್ಷೇತ್ರದ ಶಾಸಕ ಟಿ.ರಾಮಚಂದ್ರನ್ ನೇತೃತ್ವದಲ್ಲಿ ಗ್ರಾಮಸ್ಥರು ರಸ್ತೆ ತಡೆ ನಡೆಸಿದರು.</p>.<p>ಕಳೆದ ಕೆಲವು ದಿನಗಳಿಂದ ಗುಮ್ಮಳಾಪುರ, ಅಣ್ಣಿಯಾಳ, ಥಳಿ ಮತ್ತು ಆನೇಕಲ್ ತಾಲ್ಲೂಕಿನ ಮೆಣಸಿಗನಹಳ್ಳಿ, ಕಾಳನಾಯಕನಹಳ್ಳಿ ಗ್ರಾಮಗಳಲ್ಲಿ ಕಾಡಾನೆ ಹಿಂಡು ಪ್ರತ್ಯಕ್ಷವಾಗುತ್ತಿವೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಆನೇಕಲ್</strong>: ಇಲ್ಲಿಗೆ ಸಮೀಪದ ತಮಿಳುನಾಡು ಗಡಿಗ್ರಾಮ ಅಣ್ಣಿಯಾಳ ಬಳಿ ಭಾನುವಾರ ಕಾಡಾನೆ ದಾಳಿಯಿಂದ ಇಬ್ಬರು ಮಹಿಳೆಯರು ಮೃತಪಟ್ಟಿದ್ದಾರೆ.</p>.<p>ತಮಿಳುನಾಡಿನ ಅಣ್ಣಿಯಾಳ ಗ್ರಾಮದ ಅಂಗನವಾಡಿ ಕಾರ್ಯಕರ್ತೆ ವಸಂತಮ್ಮ (37) ಮತ್ತು ಕೃಷಿ ಕೂಲಿ ಕಾರ್ಮಿಕ ಮಹಿಳೆ ಅಶ್ವಥಮ್ಮ(40) ಮೃತರು.</p>.<p>ರಜೆ ಇದ್ದ ಕಾರಣ ವಸಂತಮ್ಮ ತೋಟದ ಕೆಲಸಕ್ಕೆ ತೆರಳಿದ್ದರು. ಅಶ್ವಥಮ್ಮ ಎಂದಿನಂತೆ ತೋಟದಲ್ಲಿ ಕೂಲಿ ಕೆಲಸ ಮಾಡುತ್ತಿದ್ದರು. ತೋಟಕ್ಕೆ ನುಗ್ಗಿದ ಕಾಡಾನೆಗಳ ಹಿಂಡು ತೋಟದಲ್ಲಿ ಕೆಲಸ ಮಾಡುತ್ತಿದ್ದ ಈ ಇಬ್ಬರ ಮೇಲೆ ದಾಳಿ ನಡೆಸಿವೆ. ಅಲ್ಲದೆ ಹಸುಗಳ ಮೇಲೂ ದಾಳಿ ನಡೆಸಿದ್ದು, ಮೂರು ಹಸು ಗಾಯಗೊಂಡಿವೆ. </p>.<p>ಕಾಡಾನೆ ದಾಳಿ ನಿಯಂತ್ರಿಸುವಲ್ಲಿ ಅರಣ್ಯ ಇಲಾಖೆ ವಿಫಲವಾಗಿದೆ ಎಂದು ಆರೋಪಿಸಿ ತಮಿಳುನಾಡಿನ ಥಳಿ ವಿಧಾನಸಭಾ ಕ್ಷೇತ್ರದ ಶಾಸಕ ಟಿ.ರಾಮಚಂದ್ರನ್ ನೇತೃತ್ವದಲ್ಲಿ ಗ್ರಾಮಸ್ಥರು ರಸ್ತೆ ತಡೆ ನಡೆಸಿದರು.</p>.<p>ಕಳೆದ ಕೆಲವು ದಿನಗಳಿಂದ ಗುಮ್ಮಳಾಪುರ, ಅಣ್ಣಿಯಾಳ, ಥಳಿ ಮತ್ತು ಆನೇಕಲ್ ತಾಲ್ಲೂಕಿನ ಮೆಣಸಿಗನಹಳ್ಳಿ, ಕಾಳನಾಯಕನಹಳ್ಳಿ ಗ್ರಾಮಗಳಲ್ಲಿ ಕಾಡಾನೆ ಹಿಂಡು ಪ್ರತ್ಯಕ್ಷವಾಗುತ್ತಿವೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>