<p><strong>ಹೊಸಕೋಟೆ</strong>: ರಾಜ್ಯಸಭೆ ಚುನಾವಣೆಯಲ್ಲಿ ಬಿಜೆಪಿ-ಜೆಡಿಎಸ್ ಮೈತ್ರಿ ಅಭ್ಯರ್ಥಿ ಕುಪೇಂದ್ರರೆಡ್ಡಿ ಅವರಿಗೆ ಸೋಲಾಗಿದ್ದು, ರಾಜ್ಯದಲ್ಲಿ ಚುನಾವಣೆಗಳಲ್ಲಿಯೂ ಬಿಜೆಪಿ-ಜೆಡಿಎಸ್ ಮೈತ್ರಿಯೂ ಫಲಿಸುವುದಿಲ್ಲ ಎಂದು ಶಾಸಕ ಶರತ್ ಬಚ್ಚೇಗೌಡ ತಿಳಿಸಿದರು.</p>.<p>ನಗರದ ವಿವಿಧ ಅಭಿವೃದ್ಧಿ ಕಾಮಗಾರಿಗೆ ಬುಧವಾರ ಚಾಲನೆ ನೀಡಿ ಮಾತನಾಡಿ, ಕಾಂಗ್ರೆಸ್ ಶಾಸಕರ ಒಗ್ಗಟ್ಟಿನ ಫಲವಾಗಿ ಮೂರು ಅಭ್ಯರ್ಥಿಗಳು ಪಕ್ಷದಿಂದ ಆಯ್ಕೆಯಾಗಿದ್ದಾರೆ. ಇದು ಲೋಕಸಭೆ ಚುನಾವಣೆಗೆ ಮುನ್ನುಡಿಯಾಗಿದ್ದು, ಪಕ್ಷದ ಮೇಲಿನ ವಿಶ್ವಾಸನವನ್ನು ಕಾಂಗ್ರೆಸ್ ಶಾಸಕರು ಎಂದಿಗೂ ಕಳೆದುಕೊಳ್ಳುವುದಿಲ್ಲ ಎಂದರು.</p>.<p>ನಗರಸಭೆಯ ಎಲ್ಲಾ ವಾರ್ಡ್ಗಳಲ್ಲಿ ಅಗತ್ಯ ಮೂಲ ಸೌಕರ್ಯ ಕಲ್ಪಿಸಲು ಅನುದಾನ ನೀಡಿ ಅಭಿವೃದ್ಧಿ ಕೆಲಸ ಮಾಡಲಾಗುವುದು. ಗುತ್ತಿಗೆದಾರರು ಗುಣಮಟ್ಟದ ಕಾಮಗಾರಿ ಮಾಡಬೇಕು. ಕಾಮಗಾರಿಯನ್ನು ವಿಳಂಬ ಮಾಡಬಾರದು ಎಂದು ಎಚ್ಚರಿಕೆ ನೀಡಿದರು.</p>.<p>ಬಿ.ವಿ. ಬೈರೇಗೌಡ, ಎಚ್.ಎಂ.ಸುಬ್ಬರಾಜ್, ಡಿ.ಸಿ.ನಾಗರಾಜ್, ನಿಸಾರ್ ಅಹಮ್ಮದ್, ಹರೀಶ್ ಗೌಡ, ಮೋಹನ್ ಬಾಬು, ಕುಮಾರ್, ಸವಿತಾ ಶ್ರೀನಿವಾಸ್, ಪುಷ್ಮಮ್ಮ, ಸಾವಿತ್ರಿ, ಪವಿತ್ರ, ಗುತ್ತಿಗೆದಾರ ಈರಣ್ಣ, ತಗ್ಲಿ ನಾರಾಯಣಸ್ವಾಮಿ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹೊಸಕೋಟೆ</strong>: ರಾಜ್ಯಸಭೆ ಚುನಾವಣೆಯಲ್ಲಿ ಬಿಜೆಪಿ-ಜೆಡಿಎಸ್ ಮೈತ್ರಿ ಅಭ್ಯರ್ಥಿ ಕುಪೇಂದ್ರರೆಡ್ಡಿ ಅವರಿಗೆ ಸೋಲಾಗಿದ್ದು, ರಾಜ್ಯದಲ್ಲಿ ಚುನಾವಣೆಗಳಲ್ಲಿಯೂ ಬಿಜೆಪಿ-ಜೆಡಿಎಸ್ ಮೈತ್ರಿಯೂ ಫಲಿಸುವುದಿಲ್ಲ ಎಂದು ಶಾಸಕ ಶರತ್ ಬಚ್ಚೇಗೌಡ ತಿಳಿಸಿದರು.</p>.<p>ನಗರದ ವಿವಿಧ ಅಭಿವೃದ್ಧಿ ಕಾಮಗಾರಿಗೆ ಬುಧವಾರ ಚಾಲನೆ ನೀಡಿ ಮಾತನಾಡಿ, ಕಾಂಗ್ರೆಸ್ ಶಾಸಕರ ಒಗ್ಗಟ್ಟಿನ ಫಲವಾಗಿ ಮೂರು ಅಭ್ಯರ್ಥಿಗಳು ಪಕ್ಷದಿಂದ ಆಯ್ಕೆಯಾಗಿದ್ದಾರೆ. ಇದು ಲೋಕಸಭೆ ಚುನಾವಣೆಗೆ ಮುನ್ನುಡಿಯಾಗಿದ್ದು, ಪಕ್ಷದ ಮೇಲಿನ ವಿಶ್ವಾಸನವನ್ನು ಕಾಂಗ್ರೆಸ್ ಶಾಸಕರು ಎಂದಿಗೂ ಕಳೆದುಕೊಳ್ಳುವುದಿಲ್ಲ ಎಂದರು.</p>.<p>ನಗರಸಭೆಯ ಎಲ್ಲಾ ವಾರ್ಡ್ಗಳಲ್ಲಿ ಅಗತ್ಯ ಮೂಲ ಸೌಕರ್ಯ ಕಲ್ಪಿಸಲು ಅನುದಾನ ನೀಡಿ ಅಭಿವೃದ್ಧಿ ಕೆಲಸ ಮಾಡಲಾಗುವುದು. ಗುತ್ತಿಗೆದಾರರು ಗುಣಮಟ್ಟದ ಕಾಮಗಾರಿ ಮಾಡಬೇಕು. ಕಾಮಗಾರಿಯನ್ನು ವಿಳಂಬ ಮಾಡಬಾರದು ಎಂದು ಎಚ್ಚರಿಕೆ ನೀಡಿದರು.</p>.<p>ಬಿ.ವಿ. ಬೈರೇಗೌಡ, ಎಚ್.ಎಂ.ಸುಬ್ಬರಾಜ್, ಡಿ.ಸಿ.ನಾಗರಾಜ್, ನಿಸಾರ್ ಅಹಮ್ಮದ್, ಹರೀಶ್ ಗೌಡ, ಮೋಹನ್ ಬಾಬು, ಕುಮಾರ್, ಸವಿತಾ ಶ್ರೀನಿವಾಸ್, ಪುಷ್ಮಮ್ಮ, ಸಾವಿತ್ರಿ, ಪವಿತ್ರ, ಗುತ್ತಿಗೆದಾರ ಈರಣ್ಣ, ತಗ್ಲಿ ನಾರಾಯಣಸ್ವಾಮಿ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>