<p><strong>ಆನೇಕಲ್: </strong>ಹೆಬ್ಬಗೋಡಿ ಪೊಲೀಸರು ಮತ್ತು ನ್ಯಾಯಾಲಯ ನಿಯೋಜಿಸಿದ್ದ ಅಧಿಕಾರಿಗಳ ತಂಡ ಸೋಮವಾರ ಹೆಬ್ಬಗೋಡಿ ಸಮೀಪದಲ್ಲಿರುವ ವಿಧಾನ ಪರಿಷತ್ ಮಾಜಿ ಸದಸ್ಯ ಬಿ.ಟಿ.ದಯಾನಂದ ರೆಡ್ಡಿ ಅವರ ಒಡೆತನದ ಲ್ಯಾಂಡ್ ಮಾರ್ಕ್ ಕಟ್ಟಡದಲ್ಲಿ ಸ್ಥಳ ಮಹಜರು ನಡೆಸಿತು. </p>.<p>ಬೆಂಗಳೂರಿನ ಜೆ.ಸಿ. ರಸ್ತೆಯಲ್ಲಿರುವ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ(ಎಸ್ಬಿಐ) ಭಾರತ್ ಇನ್ಫ್ರಾಎಕ್ಸ್ಪೋರ್ಟ್ ಮತ್ತು ಇಂಪೋರ್ಟ್ ಕಂಪನಿಗೆ ₹110 ಕೋಟಿ ಸಾಲ ಮಂಜೂರು ಮಾಡಿತ್ತು. ಸಕಾಲಕ್ಕೆ ಸಾಲ ಮರು ಪಾವತಿಸದ ಹಿನ್ನೆಲೆಯಲ್ಲಿ ಕಂಪನಿಯನ್ನು ಎಸ್ಬಿಐ ತನ್ನ ವಶಕ್ಕೆ ಪಡೆದುಕೊಂಡಿತ್ತು. ಪ್ರಕರಣ ನ್ಯಾಯಾಲಯದ ಮೆಟ್ಟಿಲೇರಿತ್ತು. ಸ್ಥಳ ಮಹಜರು ನಡೆಸಲು ನ್ಯಾಯಾಲಯದ ನಿರ್ದೇಶನ ನೀಡಿತ್ತು. </p>.<p>ಕಂಪನಿಯನ್ನು ಬ್ಯಾಂಕ್ ವಶಕ್ಕೆ ಪಡೆದ ನಂತರ ಭದ್ರತಾ ಸಿಬ್ಬಂದಿಯನ್ನು ನೇಮಕ ಮಾಡಿರಲಿಲ್ಲ. ಹಾಗಾಗಿ ಕಂಪನಿಯಲ್ಲಿದ್ದ ಕೋಟ್ಯಾಂತರ ಮೌಲ್ಯ ಬೆಲೆಬಾಳುವ ವಸ್ತುಗಳು ಹಾಗೂ ಮಹತ್ವದ ದಾಖಲೆ ಕಳುವಾಗಿವೆ ಎಂದು ಸ್ಥಳ ಮಹಜರು ನಂತರ ದಯಾನಂದ ರೆಡ್ಡಿ ಆರೋಪ ಮಾಡಿದರು. </p>.<p>ಸಾಲ ಮರುಪಾವತಿಸಲು ವಿಫಲರಾದ ಸಾಲಗಾರರ ವಸತಿ ಅಥವಾ ವಾಣಿಜ್ಯ ಆಸ್ತಿಗಳನ್ನು ಹರಾಜು ಹಾಕಲು ಅವಕಾಶ ನೀಡುವ ಸರ್ಫೆಸಿ ಕಾಯ್ದೆಯನ್ನು ಎಸ್ಬಿಐ ಅಧಿಕಾರಿಗಳು ದುರುಪಯೋಗಪಡಿಸಿಕೊಂಡಿದ್ದಾರೆ ಎಂದು ದೂರಿದ್ದಾರೆ. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಆನೇಕಲ್: </strong>ಹೆಬ್ಬಗೋಡಿ ಪೊಲೀಸರು ಮತ್ತು ನ್ಯಾಯಾಲಯ ನಿಯೋಜಿಸಿದ್ದ ಅಧಿಕಾರಿಗಳ ತಂಡ ಸೋಮವಾರ ಹೆಬ್ಬಗೋಡಿ ಸಮೀಪದಲ್ಲಿರುವ ವಿಧಾನ ಪರಿಷತ್ ಮಾಜಿ ಸದಸ್ಯ ಬಿ.ಟಿ.ದಯಾನಂದ ರೆಡ್ಡಿ ಅವರ ಒಡೆತನದ ಲ್ಯಾಂಡ್ ಮಾರ್ಕ್ ಕಟ್ಟಡದಲ್ಲಿ ಸ್ಥಳ ಮಹಜರು ನಡೆಸಿತು. </p>.<p>ಬೆಂಗಳೂರಿನ ಜೆ.ಸಿ. ರಸ್ತೆಯಲ್ಲಿರುವ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ(ಎಸ್ಬಿಐ) ಭಾರತ್ ಇನ್ಫ್ರಾಎಕ್ಸ್ಪೋರ್ಟ್ ಮತ್ತು ಇಂಪೋರ್ಟ್ ಕಂಪನಿಗೆ ₹110 ಕೋಟಿ ಸಾಲ ಮಂಜೂರು ಮಾಡಿತ್ತು. ಸಕಾಲಕ್ಕೆ ಸಾಲ ಮರು ಪಾವತಿಸದ ಹಿನ್ನೆಲೆಯಲ್ಲಿ ಕಂಪನಿಯನ್ನು ಎಸ್ಬಿಐ ತನ್ನ ವಶಕ್ಕೆ ಪಡೆದುಕೊಂಡಿತ್ತು. ಪ್ರಕರಣ ನ್ಯಾಯಾಲಯದ ಮೆಟ್ಟಿಲೇರಿತ್ತು. ಸ್ಥಳ ಮಹಜರು ನಡೆಸಲು ನ್ಯಾಯಾಲಯದ ನಿರ್ದೇಶನ ನೀಡಿತ್ತು. </p>.<p>ಕಂಪನಿಯನ್ನು ಬ್ಯಾಂಕ್ ವಶಕ್ಕೆ ಪಡೆದ ನಂತರ ಭದ್ರತಾ ಸಿಬ್ಬಂದಿಯನ್ನು ನೇಮಕ ಮಾಡಿರಲಿಲ್ಲ. ಹಾಗಾಗಿ ಕಂಪನಿಯಲ್ಲಿದ್ದ ಕೋಟ್ಯಾಂತರ ಮೌಲ್ಯ ಬೆಲೆಬಾಳುವ ವಸ್ತುಗಳು ಹಾಗೂ ಮಹತ್ವದ ದಾಖಲೆ ಕಳುವಾಗಿವೆ ಎಂದು ಸ್ಥಳ ಮಹಜರು ನಂತರ ದಯಾನಂದ ರೆಡ್ಡಿ ಆರೋಪ ಮಾಡಿದರು. </p>.<p>ಸಾಲ ಮರುಪಾವತಿಸಲು ವಿಫಲರಾದ ಸಾಲಗಾರರ ವಸತಿ ಅಥವಾ ವಾಣಿಜ್ಯ ಆಸ್ತಿಗಳನ್ನು ಹರಾಜು ಹಾಕಲು ಅವಕಾಶ ನೀಡುವ ಸರ್ಫೆಸಿ ಕಾಯ್ದೆಯನ್ನು ಎಸ್ಬಿಐ ಅಧಿಕಾರಿಗಳು ದುರುಪಯೋಗಪಡಿಸಿಕೊಂಡಿದ್ದಾರೆ ಎಂದು ದೂರಿದ್ದಾರೆ. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>