<p><strong>ವಿಜಯಪುರ(ದೇವನಹಳ್ಳಿ)</strong>: ಪ್ರಾಕೃತಿಕ ವಿಕೋಪಗಳಿಂದ ಬೆಳೆ ನಷ್ಟ ಆಗಿರುವ ರೈತರಿಗೆ ವರ್ಷ ಕಳೆದರೂ ಇದುವರೆಗೂ ವಿಮೆ ಪರಿಹಾರದ ಹಣ ತಲುಪಿಲ್ಲ.</p>.<p>ತಾಲ್ಲೂಕಿನಲ್ಲಿ ಕಳೆದ ಸಾಲಿನಲ್ಲಿ 365 ರೈತರು ವಿಮೆ ಮಾಡಿಸಿದ್ದರು. ಇವರಲ್ಲಿ ಎಲ್ಲರಿಗೂ ಬೆಳೆನಷ್ಟ ಆಗಿದೆ ಎಂದು ಕೃಷಿ ಮತ್ತು ತೋಟಗಾರಿಕೆ ಇಲಾಖೆ ಅಧಿಕಾರಿಗಳು ಜಂಟಿ ಸಮೀಕ್ಷೆ ನಡೆಸಿ, ಸರ್ಕಾರಕ್ಕೆ ವರದಿ ಸಲ್ಲಿಸಿದ್ದಾರೆ. ಆದರೆ ಇದುವರೆಗೆ ರೈತರ ಖಾತೆಗೆ ಹಣ ವರ್ಗಾವಣೆ ಆಗಿಲ್ಲ.</p>.<p>‘2021-22ನೇ ಸಾಲಿನಲ್ಲಿ ಅತಿವೃಷ್ಟಿಯಿಂದಾಗಿ ದ್ರಾಕ್ಷಿ, ಮಾವು ಸೇರಿ ಹಲವು ಬೆಳೆ ನಷ್ಟವಾಗಿತ್ತು. ಅತಿವೃಷ್ಟಿಗೆ ತುತ್ತಾಗುವ ಮೊದಲೇ ಪ್ರಧಾನಿಮಂತ್ರಿ ಫಸಲ್ ಬಿಮಾ ಯೋಜನೆಯಡಿ ವಿಮೆ ಕಟ್ಟಿದ್ದೇವೆ. ಬೆಳೆನಷ್ಟ ಆಗಿರುವುದರಿಂದ ಕಳೆದ ಸೆಪ್ಟಂಬರ್ನಲ್ಲೆ ವಿಮೆ ಹಣ ರೈತರ ಖಾತೆಗಳಿಗೆ ಜಮೆಯಾಗಬೇಕಾಗಿತ್ತು. ಆದರೆ, ಈ ವರ್ಷ ಅಕ್ಟೋಬರ್ ಕಳೆದು ನವೆಂಬರ್ ತಲುಪುತ್ತಿದ್ದರೂ ಜಮೆ ಆಗಿಲ್ಲ’ ಎಂದು ಇಲ್ಲನ ಸ್ಥಳೀಯ ರೈತರು ಆರೋಪಿಸಿದರು.</p>.<p>‘ಸಹಾಯವಾಣಿ ಸಂಖ್ಯೆಗೆ ಕರೆ ಮಾಡಿದರೆ, ಕೇಂದ್ರ ಸರ್ಕಾರದಿಂದ ಪರಿಹಾರದ ಹಣ ಬಿಡುಗಡೆಯಾಗಿದೆ. ರಾಜ್ಯ ಸರ್ಕಾರದಿಂದ ಬಿಡುಗಡೆ ಆಗಿಲ್ಲ ಎಂದು ಉತ್ತರ ಕೊಡುತ್ತಾರೆ. ನಾವು ವಿಮೆಯ ಹಣವನ್ನೂ ಕಟ್ಟಿ, ಬೆಳೆ ನಷ್ಟ ಮಾಡಿಕೊಂಡು, ಮುಂದಿನ ಬೆಳೆ ನಾಟಿ ಮಾಡುವುದಕ್ಕೆ ಬಂಡವಾಳವಿಲ್ಲದಂತಾಗಿದೆ’ ಎಂದು ಅಳಲುತೋಡಿಕೊಂಡರು.</p>.<p>‘ತಾಲ್ಲೂಕಿನಲ್ಲಿ ಕಳೆದ ಸಾಲಿನಲ್ಲಿ 365 ರೈತರು, ವಿಮೆ ಮಾಡಿಸಿದ್ದಾರೆ. ಬೆಳೆ ವಿಮೆ ಮಾಡಿಸಿದರೆವರಿಗೆ ಮಾತ್ರ ಪರಿಹಾರ ಬರುತ್ತದೆ. ಸೆಪ್ಟೆಂಬರ್ ತಿಂಗಳಷ್ಟೊತ್ತಿಗೆ ಬ್ಯಾಂಕ್ ಖಾತೆಗಳಿಗೆ ಜಮೆ ಆಗಬೇಕಾಗಿತ್ತು. ಈ ಬಾರಿ ವಿಳಂಬವಾಗಿದೆ. ರೈತರೂ ಇಲಾಖೆಗೆ ಭೇಟಿ ನೀಡಿ, ಕೇಳುತ್ತಿದ್ದಾರೆ. ಬ್ಯಾಂಕ್ ಖಾತೆಗಳಿಗೆ ಆಧಾರ್ ಕಾರ್ಡ್ ಹೊಂದಾಣಿಕೆ ಸೇರಿದಂತೆ ತಾಂತ್ರಿಕ ಸಮಸ್ಯೆಗಳ ಕಾರಣದಿಂದ ಜಮೆ ಆಗದಿರಬಹುದು. ಮೇಲಾಧಿಕಾರಿಗಳ ಗಮನಕ್ಕೆ ತರಲಾಗುವುದು’ ಎಂದು ದೇವನಹಳ್ಳಿ ತಾಲ್ಲೂಕು ತೋಟಗಾರಿಕೆ ಇಲಾಖೆ ಅಧಿಕಾರಿ ಆದರ್ಶ್ ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ವಿಜಯಪುರ(ದೇವನಹಳ್ಳಿ)</strong>: ಪ್ರಾಕೃತಿಕ ವಿಕೋಪಗಳಿಂದ ಬೆಳೆ ನಷ್ಟ ಆಗಿರುವ ರೈತರಿಗೆ ವರ್ಷ ಕಳೆದರೂ ಇದುವರೆಗೂ ವಿಮೆ ಪರಿಹಾರದ ಹಣ ತಲುಪಿಲ್ಲ.</p>.<p>ತಾಲ್ಲೂಕಿನಲ್ಲಿ ಕಳೆದ ಸಾಲಿನಲ್ಲಿ 365 ರೈತರು ವಿಮೆ ಮಾಡಿಸಿದ್ದರು. ಇವರಲ್ಲಿ ಎಲ್ಲರಿಗೂ ಬೆಳೆನಷ್ಟ ಆಗಿದೆ ಎಂದು ಕೃಷಿ ಮತ್ತು ತೋಟಗಾರಿಕೆ ಇಲಾಖೆ ಅಧಿಕಾರಿಗಳು ಜಂಟಿ ಸಮೀಕ್ಷೆ ನಡೆಸಿ, ಸರ್ಕಾರಕ್ಕೆ ವರದಿ ಸಲ್ಲಿಸಿದ್ದಾರೆ. ಆದರೆ ಇದುವರೆಗೆ ರೈತರ ಖಾತೆಗೆ ಹಣ ವರ್ಗಾವಣೆ ಆಗಿಲ್ಲ.</p>.<p>‘2021-22ನೇ ಸಾಲಿನಲ್ಲಿ ಅತಿವೃಷ್ಟಿಯಿಂದಾಗಿ ದ್ರಾಕ್ಷಿ, ಮಾವು ಸೇರಿ ಹಲವು ಬೆಳೆ ನಷ್ಟವಾಗಿತ್ತು. ಅತಿವೃಷ್ಟಿಗೆ ತುತ್ತಾಗುವ ಮೊದಲೇ ಪ್ರಧಾನಿಮಂತ್ರಿ ಫಸಲ್ ಬಿಮಾ ಯೋಜನೆಯಡಿ ವಿಮೆ ಕಟ್ಟಿದ್ದೇವೆ. ಬೆಳೆನಷ್ಟ ಆಗಿರುವುದರಿಂದ ಕಳೆದ ಸೆಪ್ಟಂಬರ್ನಲ್ಲೆ ವಿಮೆ ಹಣ ರೈತರ ಖಾತೆಗಳಿಗೆ ಜಮೆಯಾಗಬೇಕಾಗಿತ್ತು. ಆದರೆ, ಈ ವರ್ಷ ಅಕ್ಟೋಬರ್ ಕಳೆದು ನವೆಂಬರ್ ತಲುಪುತ್ತಿದ್ದರೂ ಜಮೆ ಆಗಿಲ್ಲ’ ಎಂದು ಇಲ್ಲನ ಸ್ಥಳೀಯ ರೈತರು ಆರೋಪಿಸಿದರು.</p>.<p>‘ಸಹಾಯವಾಣಿ ಸಂಖ್ಯೆಗೆ ಕರೆ ಮಾಡಿದರೆ, ಕೇಂದ್ರ ಸರ್ಕಾರದಿಂದ ಪರಿಹಾರದ ಹಣ ಬಿಡುಗಡೆಯಾಗಿದೆ. ರಾಜ್ಯ ಸರ್ಕಾರದಿಂದ ಬಿಡುಗಡೆ ಆಗಿಲ್ಲ ಎಂದು ಉತ್ತರ ಕೊಡುತ್ತಾರೆ. ನಾವು ವಿಮೆಯ ಹಣವನ್ನೂ ಕಟ್ಟಿ, ಬೆಳೆ ನಷ್ಟ ಮಾಡಿಕೊಂಡು, ಮುಂದಿನ ಬೆಳೆ ನಾಟಿ ಮಾಡುವುದಕ್ಕೆ ಬಂಡವಾಳವಿಲ್ಲದಂತಾಗಿದೆ’ ಎಂದು ಅಳಲುತೋಡಿಕೊಂಡರು.</p>.<p>‘ತಾಲ್ಲೂಕಿನಲ್ಲಿ ಕಳೆದ ಸಾಲಿನಲ್ಲಿ 365 ರೈತರು, ವಿಮೆ ಮಾಡಿಸಿದ್ದಾರೆ. ಬೆಳೆ ವಿಮೆ ಮಾಡಿಸಿದರೆವರಿಗೆ ಮಾತ್ರ ಪರಿಹಾರ ಬರುತ್ತದೆ. ಸೆಪ್ಟೆಂಬರ್ ತಿಂಗಳಷ್ಟೊತ್ತಿಗೆ ಬ್ಯಾಂಕ್ ಖಾತೆಗಳಿಗೆ ಜಮೆ ಆಗಬೇಕಾಗಿತ್ತು. ಈ ಬಾರಿ ವಿಳಂಬವಾಗಿದೆ. ರೈತರೂ ಇಲಾಖೆಗೆ ಭೇಟಿ ನೀಡಿ, ಕೇಳುತ್ತಿದ್ದಾರೆ. ಬ್ಯಾಂಕ್ ಖಾತೆಗಳಿಗೆ ಆಧಾರ್ ಕಾರ್ಡ್ ಹೊಂದಾಣಿಕೆ ಸೇರಿದಂತೆ ತಾಂತ್ರಿಕ ಸಮಸ್ಯೆಗಳ ಕಾರಣದಿಂದ ಜಮೆ ಆಗದಿರಬಹುದು. ಮೇಲಾಧಿಕಾರಿಗಳ ಗಮನಕ್ಕೆ ತರಲಾಗುವುದು’ ಎಂದು ದೇವನಹಳ್ಳಿ ತಾಲ್ಲೂಕು ತೋಟಗಾರಿಕೆ ಇಲಾಖೆ ಅಧಿಕಾರಿ ಆದರ್ಶ್ ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>