<p><strong>ವಿಜಯಪುರ(ದೇವನಹಳ್ಳಿ):</strong> ಪಟ್ಟಣದ ಎವರ್ ಗ್ರೀನ್ ಶಾಲೆ ವಿದ್ಯಾರ್ಥಿಗಳು ಡೆಂಗಿ ಹರಡದಂತೆ ಪ್ರಮುಖ ಬೀದಿಗಳಲ್ಲಿ ಜಾಗೃತಿ ಜಾಥಾ ಕೈಗೊಂಡರು.</p>.<p>ಡೆಂಗಿ ಹರಡದಂತೆ ಜಾಗೃತಿ ಬರಹದ ಭಿತ್ತಿಪತ್ರ ಹಿಡಿದು ಘೋಷಣೆ ಕೂಗಿದರು. ಪಟ್ಟಣದ ಬಸ್ ನಿಲ್ದಾಣ ಹಾಗೂ ಗಾಂಧಿಚೌಕದಲ್ಲಿ ಬೀದಿನಾಟಕ ಮೂಲಕ ಜಾಗೃತಿ ಮೂಡಿಸಿದರು.</p>.<p>ಶಾಲೆ ಮುಖ್ಯಶಿಕ್ಷಕಿ ಆರ್.ಸವಿತಾ ಮಾತನಾಡಿ, ಈಚೆಗೆ ಡೆಂಗಿ ಪ್ರಕರಣಗಳು ಹೆಚ್ಚುತ್ತಿವೆ. ಜನರು ಈ ರೋಗದಿಂದ ಬಳಲುತ್ತಿದ್ದಾರೆ. ಇಂತಹ ಸಮಯದಲ್ಲಿ ಪ್ರತಿಯೊಬ್ಬರನ್ನು ಜಾಗೃತಗೊಳಿಸಬೇಕಾಗಿರುವುದು ಎಲ್ಲರ ಜವಾಬ್ದಾರಿ ಎಂದರು.</p>.<p>ಸಾರ್ವಜನಿಕರು ತಮ್ಮ ಸುತ್ತಮುತ್ತಲಿನ ಪರಿಸರದಲ್ಲಿ ಸ್ವಚ್ಛತೆ ಕಾಪಾಡಿಕೊಳ್ಳಬೇಕು. ನೀರು ನಿಲ್ಲದಂತೆ ಎಚ್ಚರ ವಹಿಸಬೇಕು. ಸೊಳ್ಳೆ ಪರದೆ ಉಪಯೋಗಿಸಬೇಕು. ಸ್ವಯಂ ಚಿಕಿತ್ಸೆ ಬದಲಿಗೆ ಸಮೀಪದ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆದುಕೊಳ್ಳುವ ಮೂಲಕ ಡೆಂಗಿ ಹರಡದಂತೆ ಜಾಗೃತಿ ವಹಿಸಬೇಕು ಎಂದರು. </p>.<p>ವೇದಗಾನ ಎಜುಕೇಷನ್ ಟ್ರಸ್ಟ್ ರುದ್ರಮೂರ್ತಿ, ಶಿಕ್ಷಕರಾದ ಆವಲಕೊಂಡರಾಯರೆಡ್ಡಿ, ರಮ್ಯಾ, ಗಣಕಯಂತ್ರ ವಿಭಾಗದ ರುದ್ರೇಶ್. ಪ್ರಭಾವತಿ, ಚೈತ್ರಾ, ಗಾನವಿ ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ವಿಜಯಪುರ(ದೇವನಹಳ್ಳಿ):</strong> ಪಟ್ಟಣದ ಎವರ್ ಗ್ರೀನ್ ಶಾಲೆ ವಿದ್ಯಾರ್ಥಿಗಳು ಡೆಂಗಿ ಹರಡದಂತೆ ಪ್ರಮುಖ ಬೀದಿಗಳಲ್ಲಿ ಜಾಗೃತಿ ಜಾಥಾ ಕೈಗೊಂಡರು.</p>.<p>ಡೆಂಗಿ ಹರಡದಂತೆ ಜಾಗೃತಿ ಬರಹದ ಭಿತ್ತಿಪತ್ರ ಹಿಡಿದು ಘೋಷಣೆ ಕೂಗಿದರು. ಪಟ್ಟಣದ ಬಸ್ ನಿಲ್ದಾಣ ಹಾಗೂ ಗಾಂಧಿಚೌಕದಲ್ಲಿ ಬೀದಿನಾಟಕ ಮೂಲಕ ಜಾಗೃತಿ ಮೂಡಿಸಿದರು.</p>.<p>ಶಾಲೆ ಮುಖ್ಯಶಿಕ್ಷಕಿ ಆರ್.ಸವಿತಾ ಮಾತನಾಡಿ, ಈಚೆಗೆ ಡೆಂಗಿ ಪ್ರಕರಣಗಳು ಹೆಚ್ಚುತ್ತಿವೆ. ಜನರು ಈ ರೋಗದಿಂದ ಬಳಲುತ್ತಿದ್ದಾರೆ. ಇಂತಹ ಸಮಯದಲ್ಲಿ ಪ್ರತಿಯೊಬ್ಬರನ್ನು ಜಾಗೃತಗೊಳಿಸಬೇಕಾಗಿರುವುದು ಎಲ್ಲರ ಜವಾಬ್ದಾರಿ ಎಂದರು.</p>.<p>ಸಾರ್ವಜನಿಕರು ತಮ್ಮ ಸುತ್ತಮುತ್ತಲಿನ ಪರಿಸರದಲ್ಲಿ ಸ್ವಚ್ಛತೆ ಕಾಪಾಡಿಕೊಳ್ಳಬೇಕು. ನೀರು ನಿಲ್ಲದಂತೆ ಎಚ್ಚರ ವಹಿಸಬೇಕು. ಸೊಳ್ಳೆ ಪರದೆ ಉಪಯೋಗಿಸಬೇಕು. ಸ್ವಯಂ ಚಿಕಿತ್ಸೆ ಬದಲಿಗೆ ಸಮೀಪದ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆದುಕೊಳ್ಳುವ ಮೂಲಕ ಡೆಂಗಿ ಹರಡದಂತೆ ಜಾಗೃತಿ ವಹಿಸಬೇಕು ಎಂದರು. </p>.<p>ವೇದಗಾನ ಎಜುಕೇಷನ್ ಟ್ರಸ್ಟ್ ರುದ್ರಮೂರ್ತಿ, ಶಿಕ್ಷಕರಾದ ಆವಲಕೊಂಡರಾಯರೆಡ್ಡಿ, ರಮ್ಯಾ, ಗಣಕಯಂತ್ರ ವಿಭಾಗದ ರುದ್ರೇಶ್. ಪ್ರಭಾವತಿ, ಚೈತ್ರಾ, ಗಾನವಿ ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>