<p><strong>ದೇವನಹಳ್ಳಿ</strong>: ಕಾರ್ಮಿಕ ಇಲಾಖೆಯ ವತಿಯಿಂದ ಅಸಂಘಟಿತ ವಲಯದ ವ್ಯಾಪ್ತಿಯಲ್ಲಿ ಬರುವ ಆಹಾರ ಮತ್ತು ಇತರೆ ಸಾಮಾನು ಸರಂಜಾಮು ಪೂರೈಸುವ ಪೂರ್ಣಕಾಲಿಕ/ಅರೆಕಾಲಿಕ ಡೆಲಿವರಿ ನೌಕರರಿಂದ ರಾಜ್ಯ ಗಿಗ್ ಕಾರ್ಮಿಕರ ವಿಮಾ ಯೋಜನೆಯಡಿ ಅಪಘಾತ ಪರಿಹಾರ ಮತ್ತು ವೈದ್ಯಕೀಯ ಸೌಲಭ್ಯಕ್ಕಾಗಿ ಅರ್ಜಿ ಆಹ್ವಾನಿಸಲಾಗಿದೆ.</p>.<p>ಅಪಘಾತದಿಂದ ಮರಣ ಹೊಂದಿದಲ್ಲಿ ವಿಮಾ ಪರಿಹಾರ ₹2 ಲಕ್ಷ, ಜೀವ ವಿಮಾ ₹ 2 ಲಕ್ಷ ಸೇರಿ ಒಟ್ಟು ₹4 ಲಕ್ಷ, ಅಪಘಾತದಿಂದ ಶಾಶ್ವತ ದುರ್ಬಲತೆ ಹೊಂದಿದಲ್ಲಿ ₹2 ಲಕ್ಷ ವರೆಗೆ, ಅಪಘಾತ ಅಥವಾ ಮಾರಣಾಂತಿಕ ಕಾಯಿಲೆ ಅಥವಾ ಗಂಭೀರ ಅನಾರೋಗ್ಯಕ್ಕೆ ತುತ್ತಾದಲ್ಲಿ ಆಸ್ಪತ್ರೆ ವೆಚ್ಚ ಮರುಪಾವತಿ ₹1 ಲಕ್ಷದವರೆಗೆ ಸೌಲಭ್ಯವಿರುತ್ತದೆ.</p>.<p>ಸೇವಾ ಸಿಂಧು ವೆಬ್ಸೈಟ್ನಲ್ಲಿ ಸ್ವಯಂ ಆಗಿ ಅಥವಾ ಹತ್ತಿರದ ಸೇವಾ ಕೇಂದ್ರಗಳಲ್ಲಿ ಪೂರ್ಣಕಾಲಿಕ/ಅರೆಕಾಲಿಕ ಡೆಲಿವರಿ ನೌಕರರು ಎಂದು ನೋಂದಾಯಿಸಿಕೊಳ್ಳುವ ಮೂಲಕ ಯೋಜನೆಯ ಪ್ರಯೋಜನೆ ಪಡೆಯಬಹುದಾಗಿದೆ.</p>.<p>ಅರ್ಹ ಫಲಾನುಭವಿಗಳು ಯೋಜನೆಯಡಿ ನಿಗದಿ ಪಡಿಸಿದ ನಮೂನೆಯಲ್ಲಿ ಅಗತ್ಯ ದಾಖಲೆಗಳೊಂದಿಗೆ ಅರ್ಜಿ ಸಲ್ಲಿಸಿ ಸೌಲಭ್ಯ ಪಡೆಯಬಹುದು. ಹೆಚ್ಚಿನ ಮಾಹಿತಿಗಾಗಿ ಕಾರ್ಮಿಕ ಸಹಾಯವಾಣಿ 155214 ಹಾಗೂ ಆಯಾಯ ಜಿಲ್ಲಾ, ತಾಲ್ಲಾಕು ಕಾರ್ಮಿಕ ಇಲಾಖೆ ಕಚೇರಿಯನ್ನು ಸಂಪರ್ಕಿಸಬಹುದು ಎಂದು ಪ್ರಕಟಣೆಯಲ್ಲಿ ತಿಳಸಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ದೇವನಹಳ್ಳಿ</strong>: ಕಾರ್ಮಿಕ ಇಲಾಖೆಯ ವತಿಯಿಂದ ಅಸಂಘಟಿತ ವಲಯದ ವ್ಯಾಪ್ತಿಯಲ್ಲಿ ಬರುವ ಆಹಾರ ಮತ್ತು ಇತರೆ ಸಾಮಾನು ಸರಂಜಾಮು ಪೂರೈಸುವ ಪೂರ್ಣಕಾಲಿಕ/ಅರೆಕಾಲಿಕ ಡೆಲಿವರಿ ನೌಕರರಿಂದ ರಾಜ್ಯ ಗಿಗ್ ಕಾರ್ಮಿಕರ ವಿಮಾ ಯೋಜನೆಯಡಿ ಅಪಘಾತ ಪರಿಹಾರ ಮತ್ತು ವೈದ್ಯಕೀಯ ಸೌಲಭ್ಯಕ್ಕಾಗಿ ಅರ್ಜಿ ಆಹ್ವಾನಿಸಲಾಗಿದೆ.</p>.<p>ಅಪಘಾತದಿಂದ ಮರಣ ಹೊಂದಿದಲ್ಲಿ ವಿಮಾ ಪರಿಹಾರ ₹2 ಲಕ್ಷ, ಜೀವ ವಿಮಾ ₹ 2 ಲಕ್ಷ ಸೇರಿ ಒಟ್ಟು ₹4 ಲಕ್ಷ, ಅಪಘಾತದಿಂದ ಶಾಶ್ವತ ದುರ್ಬಲತೆ ಹೊಂದಿದಲ್ಲಿ ₹2 ಲಕ್ಷ ವರೆಗೆ, ಅಪಘಾತ ಅಥವಾ ಮಾರಣಾಂತಿಕ ಕಾಯಿಲೆ ಅಥವಾ ಗಂಭೀರ ಅನಾರೋಗ್ಯಕ್ಕೆ ತುತ್ತಾದಲ್ಲಿ ಆಸ್ಪತ್ರೆ ವೆಚ್ಚ ಮರುಪಾವತಿ ₹1 ಲಕ್ಷದವರೆಗೆ ಸೌಲಭ್ಯವಿರುತ್ತದೆ.</p>.<p>ಸೇವಾ ಸಿಂಧು ವೆಬ್ಸೈಟ್ನಲ್ಲಿ ಸ್ವಯಂ ಆಗಿ ಅಥವಾ ಹತ್ತಿರದ ಸೇವಾ ಕೇಂದ್ರಗಳಲ್ಲಿ ಪೂರ್ಣಕಾಲಿಕ/ಅರೆಕಾಲಿಕ ಡೆಲಿವರಿ ನೌಕರರು ಎಂದು ನೋಂದಾಯಿಸಿಕೊಳ್ಳುವ ಮೂಲಕ ಯೋಜನೆಯ ಪ್ರಯೋಜನೆ ಪಡೆಯಬಹುದಾಗಿದೆ.</p>.<p>ಅರ್ಹ ಫಲಾನುಭವಿಗಳು ಯೋಜನೆಯಡಿ ನಿಗದಿ ಪಡಿಸಿದ ನಮೂನೆಯಲ್ಲಿ ಅಗತ್ಯ ದಾಖಲೆಗಳೊಂದಿಗೆ ಅರ್ಜಿ ಸಲ್ಲಿಸಿ ಸೌಲಭ್ಯ ಪಡೆಯಬಹುದು. ಹೆಚ್ಚಿನ ಮಾಹಿತಿಗಾಗಿ ಕಾರ್ಮಿಕ ಸಹಾಯವಾಣಿ 155214 ಹಾಗೂ ಆಯಾಯ ಜಿಲ್ಲಾ, ತಾಲ್ಲಾಕು ಕಾರ್ಮಿಕ ಇಲಾಖೆ ಕಚೇರಿಯನ್ನು ಸಂಪರ್ಕಿಸಬಹುದು ಎಂದು ಪ್ರಕಟಣೆಯಲ್ಲಿ ತಿಳಸಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>