<p><strong>ದೇವನಹಳ್ಳಿ</strong>: ತಾಲ್ಲೂಕಿನ ಕುಂದಾಣ ಭಾಗದಲ್ಲಿ ಶುಕ್ರವಾರ ಸಂಜೆ ಧಾರಾಕಾರ ಮಳೆಯಾಗಿದ್ದು, ಮಳೆ ಬಿದ್ದ ರಭಸಕ್ಕೆ ಸಾಕಷ್ಟು ಮರಗಳು ಧರೆಗುರುಳಿದ್ದು, ಅನೇಕ ಹಳ್ಳಿಗಳಿಗೆ ಸಂಪರ್ಕ ಕಲ್ಪಿಸುವ ರಸ್ತೆಗಳ ಗುಂಡಿಯಲ್ಲಿ ಮಳೆ ನೀರು ನಿಂತು ಅವಾಂತರ ಸೃಷ್ಟಿಯಾಗಿತ್ತು.</p>.<p>ದೇವನಹಳ್ಳಿ ಪಟ್ಟಣದಿಂದ ಐವಿಸಿ ರಸ್ತೆ, ಅಕ್ಕು ಪೇಟೆ ಮಾರ್ಗವಾಗಿ ಸಂಪರ್ಕ ಕಲ್ಪಿಸುವ ರೈಲ್ವೆ ಕೇಳ ಸೇತುವೆಗಳಲ್ಲಿ ಮಳೆ ನೀರು ನಿಂತು, ವಾಹನ ಸವಾರರು ಪರದಾಡಿದರು.</p>.<p>ಪ್ರತಿ ಬಾರಿ ಮಳೆ ಬಂದಾಗಲೂ ಪುರಸಭೆ, ಗ್ರಾಮ ಪಂಚಾಯಿತಿ ಅಧಿಕಾರಿಗಳ ನಿರ್ಲಕ್ಷ್ಯದಿಂದಾಗಿ ಸಾರ್ವಜನಿಕರು ಸಂಕಷ್ಟ ಎದುರಿಸಬೇಕಾಗುತ್ತಿದೆ ಎಂದು ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದರು.</p>.<p>ಹಲವೆಡೆ ರಾಜಕಾಲುವೆಗಳಲ್ಲಿ ಹೂಳು ತುಂಬಿಕೊಂಡಿದ್ದರಿಂದ ಇಳಿಜಾರು ಪ್ರದೇಶಗಳಲ್ಲಿ ಮಳೆ ನೀರು ರಸ್ತೆಯ ಮೇಲೆ ಹರಿಯಿತು. ಕುಂದಾಣ ಭಾಗದ ಬಂಡೆ ಪ್ರದೇಶದಿಂದ ಹರಿದು ಬಂದ ಮಳೆ ನೀರು ಹೊಲಗಳಿಗೆ ನುಗ್ಗಿದ್ದು, ಕಳೆ ಸಮೇತ ಮಣ್ಣನ್ನು ಹೊತ್ತು ರಭಸವಾಗಿ ಹರಿದು ಚರಂಡಿಗಳು ತುಂಬಿಕೊಂಡಿದ್ದವು.</p>.<p>ಪುರಸಭೆ ವ್ಯಾಪ್ತಿಯ ಕೋಟೆ ಪ್ರದೇಶದಲ್ಲಿ ಚರಂಡಿಗಳ ಸೂಕ್ತ ನಿರ್ವಹಣೆ ಇಲ್ಲದ ಕಾರಣದಿಂದಾಗಿ ಮಳೆ ನೀರಿನೊಂದಿಗೆ ಚರಂಡಿ ತ್ಯಾಜ್ಯವೂ ಮನೆಗಳಿಗೆ ನುಗ್ಗಿದ್ದು, ವೇಣು ಗೋಪಾಲ ಸ್ವಾಮಿ ದೇಗುಲದ ರಾಜ ಬೀದಿಯೂ ಕೆಲವೊತ್ತು ಮಳೆ ನೀರಿನಿಂದ ಆವೃತ್ತವಾಗಿತ್ತು.</p>.<p>ಗುರುವಾರ ಸುರಿದ ಭಾರಿ ಮಳೆಯ ಪರಿಣಾಮ ಬೈಪಾಸ್ ರಸ್ತೆಯಲ್ಲಿರುವ ಕೆಂಪೇಗೌಡ ವೃತ್ತದ ಬಳಿ ರಾಜಕಾಲುವೆ ಭರ್ತಿಯಾಗಿದ್ದು, ಅಲ್ಲಿ ಶೇಖರಣೆಯಾಗಿದ್ದ ಕಸವನ್ನು ಜೆಸಿಬಿ ಸಹಾಯದಿಂದ ಪುರಸಭೆ ಸಿಬ್ಬಂದಿ ತೆರವುಗೊಳಿಸಲು ಹರ ಸಾಹಸ ಪಟ್ಟರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ದೇವನಹಳ್ಳಿ</strong>: ತಾಲ್ಲೂಕಿನ ಕುಂದಾಣ ಭಾಗದಲ್ಲಿ ಶುಕ್ರವಾರ ಸಂಜೆ ಧಾರಾಕಾರ ಮಳೆಯಾಗಿದ್ದು, ಮಳೆ ಬಿದ್ದ ರಭಸಕ್ಕೆ ಸಾಕಷ್ಟು ಮರಗಳು ಧರೆಗುರುಳಿದ್ದು, ಅನೇಕ ಹಳ್ಳಿಗಳಿಗೆ ಸಂಪರ್ಕ ಕಲ್ಪಿಸುವ ರಸ್ತೆಗಳ ಗುಂಡಿಯಲ್ಲಿ ಮಳೆ ನೀರು ನಿಂತು ಅವಾಂತರ ಸೃಷ್ಟಿಯಾಗಿತ್ತು.</p>.<p>ದೇವನಹಳ್ಳಿ ಪಟ್ಟಣದಿಂದ ಐವಿಸಿ ರಸ್ತೆ, ಅಕ್ಕು ಪೇಟೆ ಮಾರ್ಗವಾಗಿ ಸಂಪರ್ಕ ಕಲ್ಪಿಸುವ ರೈಲ್ವೆ ಕೇಳ ಸೇತುವೆಗಳಲ್ಲಿ ಮಳೆ ನೀರು ನಿಂತು, ವಾಹನ ಸವಾರರು ಪರದಾಡಿದರು.</p>.<p>ಪ್ರತಿ ಬಾರಿ ಮಳೆ ಬಂದಾಗಲೂ ಪುರಸಭೆ, ಗ್ರಾಮ ಪಂಚಾಯಿತಿ ಅಧಿಕಾರಿಗಳ ನಿರ್ಲಕ್ಷ್ಯದಿಂದಾಗಿ ಸಾರ್ವಜನಿಕರು ಸಂಕಷ್ಟ ಎದುರಿಸಬೇಕಾಗುತ್ತಿದೆ ಎಂದು ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದರು.</p>.<p>ಹಲವೆಡೆ ರಾಜಕಾಲುವೆಗಳಲ್ಲಿ ಹೂಳು ತುಂಬಿಕೊಂಡಿದ್ದರಿಂದ ಇಳಿಜಾರು ಪ್ರದೇಶಗಳಲ್ಲಿ ಮಳೆ ನೀರು ರಸ್ತೆಯ ಮೇಲೆ ಹರಿಯಿತು. ಕುಂದಾಣ ಭಾಗದ ಬಂಡೆ ಪ್ರದೇಶದಿಂದ ಹರಿದು ಬಂದ ಮಳೆ ನೀರು ಹೊಲಗಳಿಗೆ ನುಗ್ಗಿದ್ದು, ಕಳೆ ಸಮೇತ ಮಣ್ಣನ್ನು ಹೊತ್ತು ರಭಸವಾಗಿ ಹರಿದು ಚರಂಡಿಗಳು ತುಂಬಿಕೊಂಡಿದ್ದವು.</p>.<p>ಪುರಸಭೆ ವ್ಯಾಪ್ತಿಯ ಕೋಟೆ ಪ್ರದೇಶದಲ್ಲಿ ಚರಂಡಿಗಳ ಸೂಕ್ತ ನಿರ್ವಹಣೆ ಇಲ್ಲದ ಕಾರಣದಿಂದಾಗಿ ಮಳೆ ನೀರಿನೊಂದಿಗೆ ಚರಂಡಿ ತ್ಯಾಜ್ಯವೂ ಮನೆಗಳಿಗೆ ನುಗ್ಗಿದ್ದು, ವೇಣು ಗೋಪಾಲ ಸ್ವಾಮಿ ದೇಗುಲದ ರಾಜ ಬೀದಿಯೂ ಕೆಲವೊತ್ತು ಮಳೆ ನೀರಿನಿಂದ ಆವೃತ್ತವಾಗಿತ್ತು.</p>.<p>ಗುರುವಾರ ಸುರಿದ ಭಾರಿ ಮಳೆಯ ಪರಿಣಾಮ ಬೈಪಾಸ್ ರಸ್ತೆಯಲ್ಲಿರುವ ಕೆಂಪೇಗೌಡ ವೃತ್ತದ ಬಳಿ ರಾಜಕಾಲುವೆ ಭರ್ತಿಯಾಗಿದ್ದು, ಅಲ್ಲಿ ಶೇಖರಣೆಯಾಗಿದ್ದ ಕಸವನ್ನು ಜೆಸಿಬಿ ಸಹಾಯದಿಂದ ಪುರಸಭೆ ಸಿಬ್ಬಂದಿ ತೆರವುಗೊಳಿಸಲು ಹರ ಸಾಹಸ ಪಟ್ಟರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>