<p><strong>ದೊಡ್ಡಬಳ್ಳಾಪುರ: </strong>ಇಲ್ಲಿನ ಚಿಂತನ ಮಂಥನ ಸಮಿತಿ ವತಿಯಿಂದ ಗಣರಾಜ್ಯೋತ್ಸವ ಪ್ರಯುಕ್ತ ಏರ್ಪಡಿಸಿದ್ದ ‘ಸೌಹಾರ್ದತೆ ಮತ್ತು ಸಾಮರಸ್ಯದ ಸಮಾಜ ರಚನೆಯಲ್ಲಿ ಯುವ ವಿದ್ಯಾರ್ಥಿಗಳ ಪಾತ್ರ’ ಪ್ರಬಂಧ ಸ್ಪರ್ಧೆಯಲ್ಲಿ ವಿಜೇತರಿಗೆ ಬಹುಮಾನ ವಿತರಿಸಲಾಯಿತು.</p>.<p>ಪ್ರಬಂಧ ಸ್ಪರ್ಧೆಯಲ್ಲಿ ಪ್ರೌಢಶಾಲಾ ವಿಭಾಗದಿಂದ ಮೈತ್ರಿ ಪ್ರಥಮ, ಎಂ.ಇಂಚನ ದ್ವಿತೀಯ, ಮಾಣಿಕ್ಯ ತೃತೀಯ ಬಹುಮಾನ ಪಡೆದರು.</p>.<p>ಮಹಿಳಾ ವೈದ್ಯೆ ಡಾ.ಇಂದಿರ ಶ್ಯಾಮ್ಪ್ರಸಾದ್ ಮಾತನಾಡಿ, ವಿದ್ಯಾರ್ಥಿಗಳು ಸಾಮಾಜಿಕ ಜಾಲತಾಣಗಳನ್ನು ದುರುಪಯೋಗ ಮಾಡಿಕೊಳ್ಳದೆ ಅರ್ಥಪೂರ್ಣ ಕಾರ್ಯಗಳಿಗೆ ಉಪಯೋಗಿಸಿಕೊಳ್ಳಬೇಕು ಎಂದು ಸಲಹೆ ನೀಡಿದರು.</p>.<p>ವಿದ್ಯಾರ್ಥಿಗಳಲ್ಲಿ ಮಾನವೀಯ ಮೌಲ್ಯಗಳನ್ನು ಬೆಳೆಸುವಂತಹ ಹಾಗೂ ದೇಶದ ಸಮಗ್ರ ಏಳಿಗೆಯ ದೃಷ್ಠಿಯಿಂದ ಇಂತಹ ಸ್ಪರ್ಧೆಗಳಲ್ಲಿ ಹೆಚ್ಚು ತೊಡಗಿಸಿಕೊಳ್ಳಬೇಕಿದೆ. ಇದಕ್ಕೆ ಶಿಕ್ಷಕರ ಹಾಗೂ ಪೋಷಕರ ಪ್ರೋತ್ಸಾಹವು ಮುಖ್ಯವಾಗಿದೆ ಎಂದರು.</p>.<p>ಜನಪರ ಹೋರಾಟಗಾರ ಪಿ.ಎ.ವೆಂಕಟೇಶ್ ಮಾತನಾಡಿ, ವಿದ್ಯಾರ್ಥಿಗಳು ಪಠ್ಯಪುಸ್ತಕಗಳಿಗೆ ಮಾತ್ರ ಸೀಮಿತವಾಗಬಾರದು. ಪಠ್ಯೇತರ ವಿಷಯವನ್ನು ಸಹ ಹೆಚ್ಚು ಅಧ್ಯಯನ ಮಾಡಬೇಕು. ಧರ್ಮ ಮನುಷ್ಯರನ್ನು ಸೃಷ್ಟಿ ಮಾಡಿಲ್ಲ, ಮನುಷ್ಯನೇ ಧರ್ಮವನ್ನು ಸೃಷ್ಟಿ ಮಾಡಿದ್ದಾನೆ ಎನ್ನುವ ಸತ್ಯದ ಅರಿವನ್ನು ವಿದ್ಯಾರ್ಥಿಗಳು ತಿಳಿದುಕೊಳ್ಳಬೇಕು ಎಂದರು.</p>.<p>ಮಾನಸಿಕ ರೋಗಗಳ ಬಗ್ಗೆ ಮಾಹಿತಿ ನೀಡಿದ ಸಂಪನ್ಮೂಲ ವ್ಯಕ್ತಿ ಡಾ.ಶ್ರೀನಿವಾಸ್, ಚಿಂತನ ಮಂಥನ ಸಮಿತಿ ಸಂಚಾಲಕ ನಟರಾಜು ಮಾತನಾಡಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ದೊಡ್ಡಬಳ್ಳಾಪುರ: </strong>ಇಲ್ಲಿನ ಚಿಂತನ ಮಂಥನ ಸಮಿತಿ ವತಿಯಿಂದ ಗಣರಾಜ್ಯೋತ್ಸವ ಪ್ರಯುಕ್ತ ಏರ್ಪಡಿಸಿದ್ದ ‘ಸೌಹಾರ್ದತೆ ಮತ್ತು ಸಾಮರಸ್ಯದ ಸಮಾಜ ರಚನೆಯಲ್ಲಿ ಯುವ ವಿದ್ಯಾರ್ಥಿಗಳ ಪಾತ್ರ’ ಪ್ರಬಂಧ ಸ್ಪರ್ಧೆಯಲ್ಲಿ ವಿಜೇತರಿಗೆ ಬಹುಮಾನ ವಿತರಿಸಲಾಯಿತು.</p>.<p>ಪ್ರಬಂಧ ಸ್ಪರ್ಧೆಯಲ್ಲಿ ಪ್ರೌಢಶಾಲಾ ವಿಭಾಗದಿಂದ ಮೈತ್ರಿ ಪ್ರಥಮ, ಎಂ.ಇಂಚನ ದ್ವಿತೀಯ, ಮಾಣಿಕ್ಯ ತೃತೀಯ ಬಹುಮಾನ ಪಡೆದರು.</p>.<p>ಮಹಿಳಾ ವೈದ್ಯೆ ಡಾ.ಇಂದಿರ ಶ್ಯಾಮ್ಪ್ರಸಾದ್ ಮಾತನಾಡಿ, ವಿದ್ಯಾರ್ಥಿಗಳು ಸಾಮಾಜಿಕ ಜಾಲತಾಣಗಳನ್ನು ದುರುಪಯೋಗ ಮಾಡಿಕೊಳ್ಳದೆ ಅರ್ಥಪೂರ್ಣ ಕಾರ್ಯಗಳಿಗೆ ಉಪಯೋಗಿಸಿಕೊಳ್ಳಬೇಕು ಎಂದು ಸಲಹೆ ನೀಡಿದರು.</p>.<p>ವಿದ್ಯಾರ್ಥಿಗಳಲ್ಲಿ ಮಾನವೀಯ ಮೌಲ್ಯಗಳನ್ನು ಬೆಳೆಸುವಂತಹ ಹಾಗೂ ದೇಶದ ಸಮಗ್ರ ಏಳಿಗೆಯ ದೃಷ್ಠಿಯಿಂದ ಇಂತಹ ಸ್ಪರ್ಧೆಗಳಲ್ಲಿ ಹೆಚ್ಚು ತೊಡಗಿಸಿಕೊಳ್ಳಬೇಕಿದೆ. ಇದಕ್ಕೆ ಶಿಕ್ಷಕರ ಹಾಗೂ ಪೋಷಕರ ಪ್ರೋತ್ಸಾಹವು ಮುಖ್ಯವಾಗಿದೆ ಎಂದರು.</p>.<p>ಜನಪರ ಹೋರಾಟಗಾರ ಪಿ.ಎ.ವೆಂಕಟೇಶ್ ಮಾತನಾಡಿ, ವಿದ್ಯಾರ್ಥಿಗಳು ಪಠ್ಯಪುಸ್ತಕಗಳಿಗೆ ಮಾತ್ರ ಸೀಮಿತವಾಗಬಾರದು. ಪಠ್ಯೇತರ ವಿಷಯವನ್ನು ಸಹ ಹೆಚ್ಚು ಅಧ್ಯಯನ ಮಾಡಬೇಕು. ಧರ್ಮ ಮನುಷ್ಯರನ್ನು ಸೃಷ್ಟಿ ಮಾಡಿಲ್ಲ, ಮನುಷ್ಯನೇ ಧರ್ಮವನ್ನು ಸೃಷ್ಟಿ ಮಾಡಿದ್ದಾನೆ ಎನ್ನುವ ಸತ್ಯದ ಅರಿವನ್ನು ವಿದ್ಯಾರ್ಥಿಗಳು ತಿಳಿದುಕೊಳ್ಳಬೇಕು ಎಂದರು.</p>.<p>ಮಾನಸಿಕ ರೋಗಗಳ ಬಗ್ಗೆ ಮಾಹಿತಿ ನೀಡಿದ ಸಂಪನ್ಮೂಲ ವ್ಯಕ್ತಿ ಡಾ.ಶ್ರೀನಿವಾಸ್, ಚಿಂತನ ಮಂಥನ ಸಮಿತಿ ಸಂಚಾಲಕ ನಟರಾಜು ಮಾತನಾಡಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>