<p><strong>ದೇವನಹಳ್ಳಿ:</strong> ಜಿಲ್ಲೆಯ ನೆಲಮಂಗಲ, ಹೊಸಕೋಟೆಯಲ್ಲಿ ಭ್ರೂಣ ಹತ್ಯೆ, ಗರ್ಭಪಾತ ಪ್ರಕರಣದ ವರದಿ ಸಲ್ಲಿಕೆ ವಿಚಾರವಾಗಿ ಆರೋಗ್ಯ ಇಲಾಖೆ ಅಧಿಕಾರಿಗಳ ಮುಸುಕಿನ ಗುದ್ದಾಟ ಮುಂದುವರಿದಿದೆ.</p>.<p>ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಸುನೀಲ್ ಕುಮಾರ್ ಶುಕ್ರವಾರ ಸುದ್ದಿಗೋಷ್ಠಿ ನಡೆಸಿ, ‘ನೆಲಮಂಗಲದ ಆಸರೆ ಆಸ್ಪತ್ರೆ, ಹೊಸಕೋಟೆ ಎಸ್ಪಿಜೆ ಮತ್ತು ಓವಂ ಆಸ್ಪತ್ರೆ ಪ್ರಕರಣದಲ್ಲಿ ಆಡಳಿತಾತ್ಮಕ ಲೋಪ ಕಂಡು ಬಂದಿರುವುದು ಸತ್ಯ’ ಎಂದು ಸ್ಪಷ್ಟಪಡಿಸಿದರು.</p>.<p>ಜಿಲ್ಲಾ ಕುಟುಂಬ ಕಲ್ಯಾಣ ಅಧಿಕಾರಿ ಡಾ.ಎಸ್.ಆರ್.ಮಂಜುನಾಥ್, ಗರ್ಭಧಾರಣೆ ಪೂರ್ವ ಮತ್ತು ಪ್ರಸವ ಪೂರ್ವ ಲಿಂಗ ಪತ್ತೆ ನಿಷೇಧ ಕಾಯ್ದೆ, ಗರ್ಭಾವಸ್ಥೆಯ ವೈದ್ಯಕೀಯ ಕಾಯ್ದೆ (ಎಂಟಿಪಿ) ಅನುಷ್ಠಾನದಲ್ಲಿ ಎಡವಿದ್ದಾರೆ ಎಂದು ದೂರಿದರು.</p>.<p>ಕಾಯ್ದೆ ಅನುಷ್ಠಾನಕ್ಕೆ ಜಿಲ್ಲಾಮಟ್ಟದಲ್ಲಿ ರಚನೆಯಾಗಿರುವ ಸಮಿತಿ ಸದಸ್ಯರ ಉಪಸ್ಥಿತಿಯಲ್ಲಿ ದಾಳಿ ನಡೆಸಿ ಪ್ರಕರಣ ದಾಖಲು ಮಾಡಬೇಕು. ಅದನ್ನು ಸಕ್ಷಮ ಪ್ರಾಧಿಕಾರ ಅಧ್ಯಕ್ಷ, ಜಿಲ್ಲಾಧಿಕಾರಿಗೆ ಸಲ್ಲಿಸಬೇಕು. ಇದ್ಯಾವುದನ್ನು ಡಾ.ಎಸ್.ಆರ್.ಮಂಜುನಾಥ್ ಪಾಲಿಸಿಲ್ಲ ಎಂದು ಆರೋಪಿಸಿದರು.</p>.<p>ಜಿಲ್ಲಾ ಆರೋಗ್ಯ ಇಲಾಖೆಯಲ್ಲಿ ನಡೆಯುತ್ತಿರುವ ವಿದ್ಯಮಾನ ಕುರಿತು ಪ್ರತಿಕ್ರಿಯಿಸಿದ ಜಿಲ್ಲಾಧಿಕಾರಿ ಎನ್.ಶಿವಶಂಕರ್, ‘ಡಿಎಚ್ಒ ಹಾಗೂ ಕುಟುಂಬ ಕಲ್ಯಾಣ ಅಧಿಕಾರಿ ನಡುವೆ ಸಮನ್ವಯ ಕೊರತೆ ಎದ್ದು ಕಾಣುತ್ತಿದೆ. ಅದನ್ನು ಸರಿಪಡಿಸಲಾಗುವುದು’ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ದೇವನಹಳ್ಳಿ:</strong> ಜಿಲ್ಲೆಯ ನೆಲಮಂಗಲ, ಹೊಸಕೋಟೆಯಲ್ಲಿ ಭ್ರೂಣ ಹತ್ಯೆ, ಗರ್ಭಪಾತ ಪ್ರಕರಣದ ವರದಿ ಸಲ್ಲಿಕೆ ವಿಚಾರವಾಗಿ ಆರೋಗ್ಯ ಇಲಾಖೆ ಅಧಿಕಾರಿಗಳ ಮುಸುಕಿನ ಗುದ್ದಾಟ ಮುಂದುವರಿದಿದೆ.</p>.<p>ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಸುನೀಲ್ ಕುಮಾರ್ ಶುಕ್ರವಾರ ಸುದ್ದಿಗೋಷ್ಠಿ ನಡೆಸಿ, ‘ನೆಲಮಂಗಲದ ಆಸರೆ ಆಸ್ಪತ್ರೆ, ಹೊಸಕೋಟೆ ಎಸ್ಪಿಜೆ ಮತ್ತು ಓವಂ ಆಸ್ಪತ್ರೆ ಪ್ರಕರಣದಲ್ಲಿ ಆಡಳಿತಾತ್ಮಕ ಲೋಪ ಕಂಡು ಬಂದಿರುವುದು ಸತ್ಯ’ ಎಂದು ಸ್ಪಷ್ಟಪಡಿಸಿದರು.</p>.<p>ಜಿಲ್ಲಾ ಕುಟುಂಬ ಕಲ್ಯಾಣ ಅಧಿಕಾರಿ ಡಾ.ಎಸ್.ಆರ್.ಮಂಜುನಾಥ್, ಗರ್ಭಧಾರಣೆ ಪೂರ್ವ ಮತ್ತು ಪ್ರಸವ ಪೂರ್ವ ಲಿಂಗ ಪತ್ತೆ ನಿಷೇಧ ಕಾಯ್ದೆ, ಗರ್ಭಾವಸ್ಥೆಯ ವೈದ್ಯಕೀಯ ಕಾಯ್ದೆ (ಎಂಟಿಪಿ) ಅನುಷ್ಠಾನದಲ್ಲಿ ಎಡವಿದ್ದಾರೆ ಎಂದು ದೂರಿದರು.</p>.<p>ಕಾಯ್ದೆ ಅನುಷ್ಠಾನಕ್ಕೆ ಜಿಲ್ಲಾಮಟ್ಟದಲ್ಲಿ ರಚನೆಯಾಗಿರುವ ಸಮಿತಿ ಸದಸ್ಯರ ಉಪಸ್ಥಿತಿಯಲ್ಲಿ ದಾಳಿ ನಡೆಸಿ ಪ್ರಕರಣ ದಾಖಲು ಮಾಡಬೇಕು. ಅದನ್ನು ಸಕ್ಷಮ ಪ್ರಾಧಿಕಾರ ಅಧ್ಯಕ್ಷ, ಜಿಲ್ಲಾಧಿಕಾರಿಗೆ ಸಲ್ಲಿಸಬೇಕು. ಇದ್ಯಾವುದನ್ನು ಡಾ.ಎಸ್.ಆರ್.ಮಂಜುನಾಥ್ ಪಾಲಿಸಿಲ್ಲ ಎಂದು ಆರೋಪಿಸಿದರು.</p>.<p>ಜಿಲ್ಲಾ ಆರೋಗ್ಯ ಇಲಾಖೆಯಲ್ಲಿ ನಡೆಯುತ್ತಿರುವ ವಿದ್ಯಮಾನ ಕುರಿತು ಪ್ರತಿಕ್ರಿಯಿಸಿದ ಜಿಲ್ಲಾಧಿಕಾರಿ ಎನ್.ಶಿವಶಂಕರ್, ‘ಡಿಎಚ್ಒ ಹಾಗೂ ಕುಟುಂಬ ಕಲ್ಯಾಣ ಅಧಿಕಾರಿ ನಡುವೆ ಸಮನ್ವಯ ಕೊರತೆ ಎದ್ದು ಕಾಣುತ್ತಿದೆ. ಅದನ್ನು ಸರಿಪಡಿಸಲಾಗುವುದು’ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>