<p>ಹೊಸಕೋಟೆ: ಸಮಾಜ ಸುಧಾರಣೆಗಾಗಿ ತಮ್ಮ ಜೀವನವನ್ನೇ ಮಡಿಪಾಗಿಟ್ಟು ಶ್ರಮಿಸಿದ ಸಮಾಜ ಸುಧಾರಕರನ್ನು ಕೇವಲ ಒಂದು ಜಾತಿಗೆ ಸೀಮಿತಗೊಳಿಸಬಾರದು ಎಂದು ಶಾಸಕ ಶರತ್ ಬಚ್ಚೇಗೌಡ ಹೇಳಿದರು.</p>.<p>ತಾಲ್ಲೂಕಿನ ಜಡಿಗೇನಹಳ್ಳಿ ಹೋಬಳಿಯ ಅತ್ತಿವಟ್ಟ ಗ್ರಾಮದಲ್ಲಿ ನಡೆದ ಕನ್ನಡ ರಾಜ್ಯೋತ್ಸವ ಹಾಗೂ ಕನಕ ಜಯಂತಿಯಲ್ಲಿ ಮಾತನಾಡಿದರು.</p>.<p>16ನೇ ಶತಮಾನದಲ್ಲೇ ಕನಕದಾಸರು ಜಾತಿ ವಿರುದ್ಧ ಹೋರಾಡುವ ಮೂಲಕ ಸಮಸಮಾಜ ನಿರ್ಮಾಣಕ್ಕಾಗಿ ಶ್ರಮಿಸಿದ್ದರು. ಇದಕ್ಕಾಗಿ ಮಾಧ್ಯಮವಾಗಿ ಕೀರ್ತನೆಗಳನ್ನು ಬಳಸಿಕೊಂಡಿದ್ದರು. ಅವರ ಕೀರ್ತನೆಗಳ ಶಕ್ತಿ ಇಂದಿಗೂ ಸಮಾಜದಲ್ಲಿ ಕೆಲಸ ಮಾಡುತ್ತಿವೆ ಎಂದು ಹೇಳಿದರು.</p>.<p>ಅವರ ವಿಚಾರಧಾರೆಗಳನ್ನು ಮೈಗೂಡಿಸಿಕೊಳ್ಳೂವ ಮೂಲಕ ಇಂದಿಗೂ ಸಮಾಜದಲ್ಲಿ ಜೀವಂತವಾಗಿರುವ ಮೇಲು–ಕೀಳು, ಭೇದಭಾವವನ್ನು ದೂರ ಮಾಡಬೇಕು ಎಂದು ಹೇಳಿದರು.</p>.<p>ಹಾಲುಮತ ಮಹಾಸಭಾ ತಾಲೂಕು ಅಧ್ಯಕ್ಷ ಅಪಸಂದ್ರ ನಾರಾಯಣಸ್ವಾಮಿ ಮಾತನಾಡಿದರು.</p>.<p>ಟಿಎಪಿಸಿಎಂಎಸ್ ಮಾಜಿ ಅಧ್ಯಕ್ಷ ಎಲ್ಅಂಡ್ಟಿ ಮಂಜುನಾಥ್, ಮುನಿರಾಜು, ಪೊಲೀಸ್ ಮುನಿಯಪ್ಪ, ಸುಬ್ಬರಾಜು, ಮಲ್ಲಸಂದ್ರ ಶೇಷಪ್ಪ, ತವಟಹಳ್ಳಿ ಭತ್ಯಪ್ಪ, ಹುಲ್ಲೂರು ರಾಜ್ಗೋಪಾಲ್ ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಹೊಸಕೋಟೆ: ಸಮಾಜ ಸುಧಾರಣೆಗಾಗಿ ತಮ್ಮ ಜೀವನವನ್ನೇ ಮಡಿಪಾಗಿಟ್ಟು ಶ್ರಮಿಸಿದ ಸಮಾಜ ಸುಧಾರಕರನ್ನು ಕೇವಲ ಒಂದು ಜಾತಿಗೆ ಸೀಮಿತಗೊಳಿಸಬಾರದು ಎಂದು ಶಾಸಕ ಶರತ್ ಬಚ್ಚೇಗೌಡ ಹೇಳಿದರು.</p>.<p>ತಾಲ್ಲೂಕಿನ ಜಡಿಗೇನಹಳ್ಳಿ ಹೋಬಳಿಯ ಅತ್ತಿವಟ್ಟ ಗ್ರಾಮದಲ್ಲಿ ನಡೆದ ಕನ್ನಡ ರಾಜ್ಯೋತ್ಸವ ಹಾಗೂ ಕನಕ ಜಯಂತಿಯಲ್ಲಿ ಮಾತನಾಡಿದರು.</p>.<p>16ನೇ ಶತಮಾನದಲ್ಲೇ ಕನಕದಾಸರು ಜಾತಿ ವಿರುದ್ಧ ಹೋರಾಡುವ ಮೂಲಕ ಸಮಸಮಾಜ ನಿರ್ಮಾಣಕ್ಕಾಗಿ ಶ್ರಮಿಸಿದ್ದರು. ಇದಕ್ಕಾಗಿ ಮಾಧ್ಯಮವಾಗಿ ಕೀರ್ತನೆಗಳನ್ನು ಬಳಸಿಕೊಂಡಿದ್ದರು. ಅವರ ಕೀರ್ತನೆಗಳ ಶಕ್ತಿ ಇಂದಿಗೂ ಸಮಾಜದಲ್ಲಿ ಕೆಲಸ ಮಾಡುತ್ತಿವೆ ಎಂದು ಹೇಳಿದರು.</p>.<p>ಅವರ ವಿಚಾರಧಾರೆಗಳನ್ನು ಮೈಗೂಡಿಸಿಕೊಳ್ಳೂವ ಮೂಲಕ ಇಂದಿಗೂ ಸಮಾಜದಲ್ಲಿ ಜೀವಂತವಾಗಿರುವ ಮೇಲು–ಕೀಳು, ಭೇದಭಾವವನ್ನು ದೂರ ಮಾಡಬೇಕು ಎಂದು ಹೇಳಿದರು.</p>.<p>ಹಾಲುಮತ ಮಹಾಸಭಾ ತಾಲೂಕು ಅಧ್ಯಕ್ಷ ಅಪಸಂದ್ರ ನಾರಾಯಣಸ್ವಾಮಿ ಮಾತನಾಡಿದರು.</p>.<p>ಟಿಎಪಿಸಿಎಂಎಸ್ ಮಾಜಿ ಅಧ್ಯಕ್ಷ ಎಲ್ಅಂಡ್ಟಿ ಮಂಜುನಾಥ್, ಮುನಿರಾಜು, ಪೊಲೀಸ್ ಮುನಿಯಪ್ಪ, ಸುಬ್ಬರಾಜು, ಮಲ್ಲಸಂದ್ರ ಶೇಷಪ್ಪ, ತವಟಹಳ್ಳಿ ಭತ್ಯಪ್ಪ, ಹುಲ್ಲೂರು ರಾಜ್ಗೋಪಾಲ್ ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>