<p>ಹೊಸಕೋಟೆ: ತಾಲ್ಲೂಕಿನ ಜಡಿಗೇನಹಳ್ಳಿ ಹೋಬಳಿಯ ಗೊಣಕನಹಳ್ಳಿ ಸಮೀಪ ₹30 ಕೋಟಿ ವೆಚ್ಚದ ಅಂತರರಾಷ್ಟ್ರೀಯ ಎಪಿಎಂಸಿ ಕೃಷಿ ಮತ್ತು ಹೂ ಮಾರುಕಟ್ಟೆ ನಿರ್ಮಾಣ ಸಂಬಂಧ ಸಭೆ ನಡೆಯಿತು.</p>.<p>ನಗರದ ತಾಲೂಕು ಕಚೇರಿಯಲ್ಲಿ ಜಿಲ್ಲಾಧಿಕಾರಿ ಎನ್. ಶಿವಶಂಕರ್ ಹಾಗೂ ತಹಶೀಲ್ದಾರ್ ವಿಜಯಕುಮಾರ್ ಅವರೊಂದಿಗೆ ಶಾಸಕ ಶರತ್ ಬಚ್ಚೇಗೌಡ ಅವರು ಚರ್ಚಿಸಿದರು.</p>.<p>ಈ ಭಾಗದ ರೈತರಿಗೆ ಅಂತರಾಷ್ಟ್ರೀಯ ದರ್ಜೆಯ ಮಾರುಕಟ್ಟೆ ದೊರಕಿಸಿಕೊಡುವ ನಿಟ್ಟಿನಲ್ಲಿ ನಡೆದ ಸಭೆಯಲ್ಲಿ ಎಪಿಎಂಸಿ ಮಾರುಕಟ್ಟೆಯನ್ನು ವೈಜ್ಞಾನಿಕವಾಗಿ ಮತ್ತು ರೈತ ಸ್ನೇಹಿಯಾಗಿ ರೂಪಿಸುವ ಕುರಿತು ಚರ್ಚಿಸಲಾಯಿತು.</p>.<p>ಸಭೆಯ ಬಳಿಕ ಗೊಣಕನಹಳ್ಳಿಯಲ್ಲಿರುವ ಎಪಿಎಂಸಿ ಜಾಗವನ್ನು ಅಧಿಕಾರಿಗಳೊಂದಿಗೆ ವೀಕ್ಷಿಸಿದರು. ಈ ಸಂದರ್ಭದಲ್ಲಿ ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ಚಂದ್ರಶೇಖರ್, ಎಪಿಎಂಸಿ ಆಡಳಿತಾಧಿಕಾರಿ ಡಾ.ರಾಜಣ್ಣ, ಅಧೀಕ್ಷಕ ಎಂಜಿನಿಯರ್ ರಘುನಂದನ್, ಎಪಿಎಂಸಿ ಅಧಿಕಾರಿ ರೂಪ ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಹೊಸಕೋಟೆ: ತಾಲ್ಲೂಕಿನ ಜಡಿಗೇನಹಳ್ಳಿ ಹೋಬಳಿಯ ಗೊಣಕನಹಳ್ಳಿ ಸಮೀಪ ₹30 ಕೋಟಿ ವೆಚ್ಚದ ಅಂತರರಾಷ್ಟ್ರೀಯ ಎಪಿಎಂಸಿ ಕೃಷಿ ಮತ್ತು ಹೂ ಮಾರುಕಟ್ಟೆ ನಿರ್ಮಾಣ ಸಂಬಂಧ ಸಭೆ ನಡೆಯಿತು.</p>.<p>ನಗರದ ತಾಲೂಕು ಕಚೇರಿಯಲ್ಲಿ ಜಿಲ್ಲಾಧಿಕಾರಿ ಎನ್. ಶಿವಶಂಕರ್ ಹಾಗೂ ತಹಶೀಲ್ದಾರ್ ವಿಜಯಕುಮಾರ್ ಅವರೊಂದಿಗೆ ಶಾಸಕ ಶರತ್ ಬಚ್ಚೇಗೌಡ ಅವರು ಚರ್ಚಿಸಿದರು.</p>.<p>ಈ ಭಾಗದ ರೈತರಿಗೆ ಅಂತರಾಷ್ಟ್ರೀಯ ದರ್ಜೆಯ ಮಾರುಕಟ್ಟೆ ದೊರಕಿಸಿಕೊಡುವ ನಿಟ್ಟಿನಲ್ಲಿ ನಡೆದ ಸಭೆಯಲ್ಲಿ ಎಪಿಎಂಸಿ ಮಾರುಕಟ್ಟೆಯನ್ನು ವೈಜ್ಞಾನಿಕವಾಗಿ ಮತ್ತು ರೈತ ಸ್ನೇಹಿಯಾಗಿ ರೂಪಿಸುವ ಕುರಿತು ಚರ್ಚಿಸಲಾಯಿತು.</p>.<p>ಸಭೆಯ ಬಳಿಕ ಗೊಣಕನಹಳ್ಳಿಯಲ್ಲಿರುವ ಎಪಿಎಂಸಿ ಜಾಗವನ್ನು ಅಧಿಕಾರಿಗಳೊಂದಿಗೆ ವೀಕ್ಷಿಸಿದರು. ಈ ಸಂದರ್ಭದಲ್ಲಿ ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ಚಂದ್ರಶೇಖರ್, ಎಪಿಎಂಸಿ ಆಡಳಿತಾಧಿಕಾರಿ ಡಾ.ರಾಜಣ್ಣ, ಅಧೀಕ್ಷಕ ಎಂಜಿನಿಯರ್ ರಘುನಂದನ್, ಎಪಿಎಂಸಿ ಅಧಿಕಾರಿ ರೂಪ ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>