<p><strong>ಹೊಸಕೋಟೆ</strong>: 25ನೇ ಕಾರ್ಗಿಲ್ ವಿಜಯ್ ದಿವಸ್ ಆಚರಣೆ ಅಂಗವಾಗಿ ನಗರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಕೇಂದ್ರದ ಎನ್ಸಿಸಿ ಘಟಕದ ವತಿಯಿಂದ ಸಸಿ ನೆಡಲಾಯಿತು.</p>.<p>ರಾಜ್ಯಶಾಸ್ತ್ರ ವಿಭಾಗದ ಮುಖ್ಯಸ್ಥ ಪ್ರೊ.ಈರಣ್ಣ, ಸೈನಿಕರು ಹಲವು ಸಂಕಷ್ಟ ಎದುರಿಸಿ ಈ ದೇಶವನ್ನು ಹಲವು ಸಮಸ್ಯೆಗಳಿಂದ ಕಾಯುತ್ತಿದ್ದಾರೆ. ಸೈನಿಕರ ಶೌರ್ಯ ಸಾಹಸಕ್ಕೆ ಹೆಸರಾದ ಕಾರ್ಗಿಲ್ ಯುದ್ಧ ಜಯಿಸಿ ಇಂದಿಗೆ 25 ವರ್ಷ ಸಂದಿದೆ. ಭಾರತೀಯರು ಹೆಮ್ಮೆಯಿಂದ ಈ ದಿನವನ್ನು ಆಚರಣೆ ಮಾಡುತ್ತಿರುವುದು ದೇಶ ಪ್ರೇಮದ ದ್ಯೋತಕ ಎಂದರು.</p>.<p>ಎನ್ಸಿಸಿ ಕಾರ್ಯಕ್ರಮಾಧಿಕಾರಿ ಪ್ರೊ.ವಿಶ್ವೇಶ್ವರಯ್ಯ ಮಾತನಾಡಿ, ದೇಶದ ಇತಿಹಾಸದಲ್ಲಿ ಹಲವು ಯುದ್ದಗಳನ್ನು ಸೈನಿಕರು ಗೆದ್ದಿದ್ದಾರೆ. ಅದರಲ್ಲಿ ಕಾರ್ಗಿಲ್ ಯುದ್ಧ ಸೈನಿಕರ ಶೌರ್ಯ ಎತ್ತಿ ಹಿಡಿದಿದೆ ಎಂದರು.</p>.<p>ಇಂಗ್ಲಿಷ್ ವಿಭಾಗದ ಮುಖ್ಯಸ್ಥೆ ಡೋರಿನ್ ಸ್ನೇಹಲತಾ, ವಾಣಿಜ್ಯ ಶಾಸ್ತ್ರ ವಿಭಾಗದ ಪ್ರೊ.ಅಶ್ವತ್ನಾರಾಯಣ್, ರಾಜ್ಯಶಾಸ್ತ್ರ ವಿಭಾಗದ ಪ್ರಾಧ್ಯಾಪಕ ಪ್ರೊ.ಕಾವಾಲಯ್ಯ, ಪ್ರೊ.ಶ್ರೀನಿವಾಸ್ ಆಚಾರ್ ಸೇರಿದಂತೆ ಎನ್ಸಿಸಿ ವಿದ್ಯಾರ್ಥಿಗಳು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹೊಸಕೋಟೆ</strong>: 25ನೇ ಕಾರ್ಗಿಲ್ ವಿಜಯ್ ದಿವಸ್ ಆಚರಣೆ ಅಂಗವಾಗಿ ನಗರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಕೇಂದ್ರದ ಎನ್ಸಿಸಿ ಘಟಕದ ವತಿಯಿಂದ ಸಸಿ ನೆಡಲಾಯಿತು.</p>.<p>ರಾಜ್ಯಶಾಸ್ತ್ರ ವಿಭಾಗದ ಮುಖ್ಯಸ್ಥ ಪ್ರೊ.ಈರಣ್ಣ, ಸೈನಿಕರು ಹಲವು ಸಂಕಷ್ಟ ಎದುರಿಸಿ ಈ ದೇಶವನ್ನು ಹಲವು ಸಮಸ್ಯೆಗಳಿಂದ ಕಾಯುತ್ತಿದ್ದಾರೆ. ಸೈನಿಕರ ಶೌರ್ಯ ಸಾಹಸಕ್ಕೆ ಹೆಸರಾದ ಕಾರ್ಗಿಲ್ ಯುದ್ಧ ಜಯಿಸಿ ಇಂದಿಗೆ 25 ವರ್ಷ ಸಂದಿದೆ. ಭಾರತೀಯರು ಹೆಮ್ಮೆಯಿಂದ ಈ ದಿನವನ್ನು ಆಚರಣೆ ಮಾಡುತ್ತಿರುವುದು ದೇಶ ಪ್ರೇಮದ ದ್ಯೋತಕ ಎಂದರು.</p>.<p>ಎನ್ಸಿಸಿ ಕಾರ್ಯಕ್ರಮಾಧಿಕಾರಿ ಪ್ರೊ.ವಿಶ್ವೇಶ್ವರಯ್ಯ ಮಾತನಾಡಿ, ದೇಶದ ಇತಿಹಾಸದಲ್ಲಿ ಹಲವು ಯುದ್ದಗಳನ್ನು ಸೈನಿಕರು ಗೆದ್ದಿದ್ದಾರೆ. ಅದರಲ್ಲಿ ಕಾರ್ಗಿಲ್ ಯುದ್ಧ ಸೈನಿಕರ ಶೌರ್ಯ ಎತ್ತಿ ಹಿಡಿದಿದೆ ಎಂದರು.</p>.<p>ಇಂಗ್ಲಿಷ್ ವಿಭಾಗದ ಮುಖ್ಯಸ್ಥೆ ಡೋರಿನ್ ಸ್ನೇಹಲತಾ, ವಾಣಿಜ್ಯ ಶಾಸ್ತ್ರ ವಿಭಾಗದ ಪ್ರೊ.ಅಶ್ವತ್ನಾರಾಯಣ್, ರಾಜ್ಯಶಾಸ್ತ್ರ ವಿಭಾಗದ ಪ್ರಾಧ್ಯಾಪಕ ಪ್ರೊ.ಕಾವಾಲಯ್ಯ, ಪ್ರೊ.ಶ್ರೀನಿವಾಸ್ ಆಚಾರ್ ಸೇರಿದಂತೆ ಎನ್ಸಿಸಿ ವಿದ್ಯಾರ್ಥಿಗಳು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>