<p><strong>ಆನೇಕಲ್ :</strong> ಪಟ್ಟಣದ ತಾಲ್ಲೂಕು ಕಚೇರಿಯ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿ ವಿವಿಧ ವಿಭಾಗಗಳ ದಾಖಲೆಗಳನ್ನು ಪರಿಶೀಲನೆ ನಡೆಸಿದರು.</p>.<p>ಲೋಕಾಯುಕ್ತ ಎಸ್.ಪಿ ಕ್ಯಾಪ್ಟನ್ ಅಯ್ಯಪ್ಪ, ಡಿವೈಎಸ್ಪಿ ಎಂ.ಗೌತಮ್, ಸುದೀರ್ ಮತ್ತು ಇನ್ಸ್ಪೆಕ್ಟರ್ ಅನಂತ್ರಾಮ್ ನೇತೃತ್ವದ 15ಕ್ಕೂ ಹೆಚ್ಚು ಮಂದಿ ಅಧಿಕಾರಿಗಳ ತಂಡ ತಾಲ್ಲೂಕು ಕಚೇರಿಗೆ ಮಧ್ಯಾಹ್ನ ದಿಡೀರ್ ಭೇಟಿ ನೀಡಿ ಕಚೇರಿಯ ಪ್ರತಿಯೊಂದು ವಿಭಾಗಗಳನ್ನು ಜಾಲಾಡಿತು.</p>.<p>ತಾಲ್ಲೂಕು ಕಚೇರಿಯ ಭೂದಾಖಲೆ ಕೊಠಡಿ, ಎಂಆರ್ ವಿಭಾಗ, ಸರ್ವೆ ಕಚೇರಿ, ಆದಾಯ ಮತ್ತು ಜಾತಿ ಪ್ರಮಾಣ ಪತ್ರ ವಿತರಣಾ ವಿಭಾಗ ಸೇರಿದಂತೆ ಎಲ್ಲಾ ವಿಭಾಗಗಳಿಗೂ ಏಕಕಾಲಕ್ಕೆ ದಾಳಿ ಮಾಡಿ ದಾಖಲೆ ಸಂಗ್ರಹಿಸಿದರು.</p>.<p>ಅರ್ಜಿಗಳನ್ನು ಸಲ್ಲಿಸಿ ತಿಂಗಳುಗಳೇ ಕಳೆದಿದ್ದರೂ ವಿಲೇವಾರಿ ಮಾಡದೇ ಅರ್ಜಿಗಳನ್ನು ಕಚೇರಿಯಲ್ಲಿಯೇ ಉಳಿಸಿಕೊಂಡಿದ್ದ ಕಂದಾಯ ಇಲಾಖೆಯ ಸಿಬ್ಬಂದಿಯನ್ನು ತರಾಟೆಗೆ ತೆಗೆದುಕೊಂಡರು.</p>.<p>ತಾಲ್ಲೂಕು ಕಚೇರಿಯಲ್ಲಿ ಮಧ್ಯವರ್ತಿಗಳ ಹಾವಳಿ ಹೆಚ್ಚಾಗಿರುವ ಹಿನ್ನೆಲೆಯಲ್ಲಿ ಲೋಕಾಯುಕ್ತ ದಾಳಿ ನಡೆದಿದೆ ಎನ್ನಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಆನೇಕಲ್ :</strong> ಪಟ್ಟಣದ ತಾಲ್ಲೂಕು ಕಚೇರಿಯ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿ ವಿವಿಧ ವಿಭಾಗಗಳ ದಾಖಲೆಗಳನ್ನು ಪರಿಶೀಲನೆ ನಡೆಸಿದರು.</p>.<p>ಲೋಕಾಯುಕ್ತ ಎಸ್.ಪಿ ಕ್ಯಾಪ್ಟನ್ ಅಯ್ಯಪ್ಪ, ಡಿವೈಎಸ್ಪಿ ಎಂ.ಗೌತಮ್, ಸುದೀರ್ ಮತ್ತು ಇನ್ಸ್ಪೆಕ್ಟರ್ ಅನಂತ್ರಾಮ್ ನೇತೃತ್ವದ 15ಕ್ಕೂ ಹೆಚ್ಚು ಮಂದಿ ಅಧಿಕಾರಿಗಳ ತಂಡ ತಾಲ್ಲೂಕು ಕಚೇರಿಗೆ ಮಧ್ಯಾಹ್ನ ದಿಡೀರ್ ಭೇಟಿ ನೀಡಿ ಕಚೇರಿಯ ಪ್ರತಿಯೊಂದು ವಿಭಾಗಗಳನ್ನು ಜಾಲಾಡಿತು.</p>.<p>ತಾಲ್ಲೂಕು ಕಚೇರಿಯ ಭೂದಾಖಲೆ ಕೊಠಡಿ, ಎಂಆರ್ ವಿಭಾಗ, ಸರ್ವೆ ಕಚೇರಿ, ಆದಾಯ ಮತ್ತು ಜಾತಿ ಪ್ರಮಾಣ ಪತ್ರ ವಿತರಣಾ ವಿಭಾಗ ಸೇರಿದಂತೆ ಎಲ್ಲಾ ವಿಭಾಗಗಳಿಗೂ ಏಕಕಾಲಕ್ಕೆ ದಾಳಿ ಮಾಡಿ ದಾಖಲೆ ಸಂಗ್ರಹಿಸಿದರು.</p>.<p>ಅರ್ಜಿಗಳನ್ನು ಸಲ್ಲಿಸಿ ತಿಂಗಳುಗಳೇ ಕಳೆದಿದ್ದರೂ ವಿಲೇವಾರಿ ಮಾಡದೇ ಅರ್ಜಿಗಳನ್ನು ಕಚೇರಿಯಲ್ಲಿಯೇ ಉಳಿಸಿಕೊಂಡಿದ್ದ ಕಂದಾಯ ಇಲಾಖೆಯ ಸಿಬ್ಬಂದಿಯನ್ನು ತರಾಟೆಗೆ ತೆಗೆದುಕೊಂಡರು.</p>.<p>ತಾಲ್ಲೂಕು ಕಚೇರಿಯಲ್ಲಿ ಮಧ್ಯವರ್ತಿಗಳ ಹಾವಳಿ ಹೆಚ್ಚಾಗಿರುವ ಹಿನ್ನೆಲೆಯಲ್ಲಿ ಲೋಕಾಯುಕ್ತ ದಾಳಿ ನಡೆದಿದೆ ಎನ್ನಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>