<p><strong>ಹಾರೋಹಳ್ಳಿ:</strong> ರಾಮನಗರ ವಿಧಾನ ಸಭಾ ಕ್ಷೇತ್ರದಲ್ಲಿ ಹಿಂದಿನ ಶಾಸಕರಾಗಿದ್ದವರು ಸರಿಯಾಗಿ ಕೆಲಸ ಮಾಡಿಲ್ಲ. ಇದರಿಂದಲೇ ಅವರು ಸೋತ್ತಿದ್ದಾರೆ ಎಂದು ಶಾಸಕ ಇಕ್ಬಾಲ್ ಹುಸೇನ್ ಹೇಳಿದರು.</p>.<p>ಹಾರೋಹಳ್ಳಿಯ ಗ್ರಾಮಾಂತರ ಪ್ರೌಢಶಾಲೆ ಸಭಾಂಗಣದಲ್ಲಿ ಗುರುವಾರ ನಡೆದ ಫಲಾನುಭವಿಗಳಿಗೆ ವಿವಿಧ ಉಪಕರಣಗಳ ವಿತರಣೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.</p>.<p>ಕ್ಷೇತ್ರದಲ್ಲಿದ್ದ ಮೂಲ ಸೌಕರ್ಯಗಳ ಕೊರತೆಯನ್ನು ಪರಿಹಾರಿಸುವಲ್ಲಿ ಈ ಹಿಂದಿನ ಶಾಸಕರು ವಿಫಲರಾಗಿದ್ದರೂ, ಈಗ ಅಭಿವೃದ್ಧಿಗೆ ಒತ್ತು ನೀಡುತ್ತಿದ್ದೇವೆ. ಕ್ಷೇತ್ರದಲ್ಲಿ 40 ವರ್ಷಗಳ ನಂತರ ಕಾಂಗ್ರೆಸ್ ಶಾಸಕರು ಗೆದ್ದಿದ್ದು ನಿಮ್ಮ ಋಣ ತೀರಿಸುವ ಕೆಲಸ ಮಾಡುತ್ತಿದ್ದೇವೆ ಎಂದು ತಿಳಿಸಿದರು.</p>.<p>ಮುಂದಿನ ದಿನಗಳಲ್ಲಿ ಮಹಿಳೆಯರಿಗೆ ಸ್ವ ಉದ್ಯೋಗ ಮಾಡಲು ಅನುಕೂಲ ಆಗುವಂತೆ ಕ್ಷೇತ್ರದಲ್ಲಿ 500 ಹೊಲಿಗೆ ಯಂತ್ರ ವಿತರಿಸಲಾಗುವುದು ಭರವಸೆ ನೀಡಿದರು.</p>.<p>ಅರ್ಹ ಫಲಾನುಭವಿಗಳಿಗೆ 24 ಹೊಲಿಗೆ ಯಂತ್ರ, 25 ಮರಗೆಲಸ ಉಪಕರಣ, 4 ಕುಲುಮೆ ಉಪಕರಣ ವಿತರಣೆ ಮಾಡಲಾಯಿತು.</p>.<p>ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಅಶೋಕ್, ಬಮುಲ್ ನಿರ್ದೆಶಕ ಹರೀಶ್ ಕುಮಾರ್, ದಿನೇಶ್, ಸಹಾಯಕ ಗ್ರಾಮಿಣ ಕೈಗಾರಿಕ ಅಧಿಕಾರಿ ಪ್ರಕಾಶ್ ಹಾಜರಿದ್ದರು.</p>.<div><blockquote>ಕ್ಷೇತ್ರದ ಜನರಿಗೆ ನಾವು ನೀಡಿರುವ ಭರವಸೆ ಈಡೇರಿಸಲು ಜನರ ಮನೆಯ ಮಗನಾಗಿ ಉಡುಗೊರೆ ನೀಡಿದರೆ ಪ್ರಕರಣ ದಾಖಲಿಸುವವರು ಅವರು ಕೂಡ ಜನರಿಗೆ ಉಡುಗೊರೆ ನೀಡಲು ಯಾರು ಕೂಡ ಹಸ್ತಕ್ಷೇಪ ಮಾಡುವುದಿಲ್ಲ </blockquote><span class="attribution">ಇಕ್ಬಾಲ್ ಹುಸೇನ್ ಶಾಸಕ</span></div>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹಾರೋಹಳ್ಳಿ:</strong> ರಾಮನಗರ ವಿಧಾನ ಸಭಾ ಕ್ಷೇತ್ರದಲ್ಲಿ ಹಿಂದಿನ ಶಾಸಕರಾಗಿದ್ದವರು ಸರಿಯಾಗಿ ಕೆಲಸ ಮಾಡಿಲ್ಲ. ಇದರಿಂದಲೇ ಅವರು ಸೋತ್ತಿದ್ದಾರೆ ಎಂದು ಶಾಸಕ ಇಕ್ಬಾಲ್ ಹುಸೇನ್ ಹೇಳಿದರು.</p>.<p>ಹಾರೋಹಳ್ಳಿಯ ಗ್ರಾಮಾಂತರ ಪ್ರೌಢಶಾಲೆ ಸಭಾಂಗಣದಲ್ಲಿ ಗುರುವಾರ ನಡೆದ ಫಲಾನುಭವಿಗಳಿಗೆ ವಿವಿಧ ಉಪಕರಣಗಳ ವಿತರಣೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.</p>.<p>ಕ್ಷೇತ್ರದಲ್ಲಿದ್ದ ಮೂಲ ಸೌಕರ್ಯಗಳ ಕೊರತೆಯನ್ನು ಪರಿಹಾರಿಸುವಲ್ಲಿ ಈ ಹಿಂದಿನ ಶಾಸಕರು ವಿಫಲರಾಗಿದ್ದರೂ, ಈಗ ಅಭಿವೃದ್ಧಿಗೆ ಒತ್ತು ನೀಡುತ್ತಿದ್ದೇವೆ. ಕ್ಷೇತ್ರದಲ್ಲಿ 40 ವರ್ಷಗಳ ನಂತರ ಕಾಂಗ್ರೆಸ್ ಶಾಸಕರು ಗೆದ್ದಿದ್ದು ನಿಮ್ಮ ಋಣ ತೀರಿಸುವ ಕೆಲಸ ಮಾಡುತ್ತಿದ್ದೇವೆ ಎಂದು ತಿಳಿಸಿದರು.</p>.<p>ಮುಂದಿನ ದಿನಗಳಲ್ಲಿ ಮಹಿಳೆಯರಿಗೆ ಸ್ವ ಉದ್ಯೋಗ ಮಾಡಲು ಅನುಕೂಲ ಆಗುವಂತೆ ಕ್ಷೇತ್ರದಲ್ಲಿ 500 ಹೊಲಿಗೆ ಯಂತ್ರ ವಿತರಿಸಲಾಗುವುದು ಭರವಸೆ ನೀಡಿದರು.</p>.<p>ಅರ್ಹ ಫಲಾನುಭವಿಗಳಿಗೆ 24 ಹೊಲಿಗೆ ಯಂತ್ರ, 25 ಮರಗೆಲಸ ಉಪಕರಣ, 4 ಕುಲುಮೆ ಉಪಕರಣ ವಿತರಣೆ ಮಾಡಲಾಯಿತು.</p>.<p>ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಅಶೋಕ್, ಬಮುಲ್ ನಿರ್ದೆಶಕ ಹರೀಶ್ ಕುಮಾರ್, ದಿನೇಶ್, ಸಹಾಯಕ ಗ್ರಾಮಿಣ ಕೈಗಾರಿಕ ಅಧಿಕಾರಿ ಪ್ರಕಾಶ್ ಹಾಜರಿದ್ದರು.</p>.<div><blockquote>ಕ್ಷೇತ್ರದ ಜನರಿಗೆ ನಾವು ನೀಡಿರುವ ಭರವಸೆ ಈಡೇರಿಸಲು ಜನರ ಮನೆಯ ಮಗನಾಗಿ ಉಡುಗೊರೆ ನೀಡಿದರೆ ಪ್ರಕರಣ ದಾಖಲಿಸುವವರು ಅವರು ಕೂಡ ಜನರಿಗೆ ಉಡುಗೊರೆ ನೀಡಲು ಯಾರು ಕೂಡ ಹಸ್ತಕ್ಷೇಪ ಮಾಡುವುದಿಲ್ಲ </blockquote><span class="attribution">ಇಕ್ಬಾಲ್ ಹುಸೇನ್ ಶಾಸಕ</span></div>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>