<p><strong>ಆನೇಕಲ್: </strong>ತಾಲ್ಲೂಕಿನ ಸರ್ಜಾಪುರ ಪೊಲೀಸ್ ಠಾಣೆ ವ್ಯಾಪ್ತಿಯ ಬಿಕ್ಕನಹಳ್ಳಿ ಜನತಾ ಕಾಲೊನಿಯಲ್ಲಿ ಗಂಡ ಹೆಂಡತಿಯ ನಡುವೆ ನಡೆದ ಕ್ಷುಲ್ಲಕ ಜಗಳದಿಂದಾಗಿ ಪತಿ, ಪತ್ನಿಯನ್ನು ಮಚ್ಚಿನಿಂದ ಕೊಚ್ಚಿ ಕೊಲೆ ಮಾಡಿ ತಾನು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.</p>.<p>ಲಕ್ಷಮ್ಮ(47) ಕೊಲೆಯಾದವರು. ವೆಂಕಟಸ್ವಾಮಿ(53) ಆತ್ಮಹತ್ಯೆ ಮಾಡಿಕೊಂಡವರು.</p>.<p>ಪತಿ–ಪತ್ನಿ ಇಬ್ಬರು ಕೂಲಿ ಕೆಲಸ ಮಾಡಿಕೊಂಡು ಜೀವನ ಸಾಗಿಸುತ್ತಿದ್ದರು. ತಮ್ಮ ಇಬ್ಬರು ಹೆಣ್ಣು ಮಕ್ಕಳಿಗೆ ಮದುವೆ ಮಾಡಿದ್ದರು. ಹೆಣ್ಣು ಮಕ್ಕಳ ಮದುವೆಗಾಗಿ ದಂಪತಿ ಬ್ಯಾಂಕ್ನಿಂದ ಸಾಲ ಪಡೆದಿದ್ದರು. ಸಾಲ ತೀರಿಸಲಾಗದಿದ್ದರಿಂದ ಬ್ಯಾಂಕ್ನವರು ಐದು ತಿಂಗಳ ಹಿಂದೆ ಮನೆ ಜಪ್ತಿ ಮಾಡಿದ್ದರು.</p>.<p>ಬಾಡಿಗೆ ಮನೆಯಲ್ಲಿ ವಾಸವಿದ್ದ ದಂಪತಿ ಇದೇ ವಿಚಾರಕ್ಕೆ ಪದೇ ಪದೇ ಜಗಳವಾಡುತ್ತಿದ್ದರು. ಬೇಸತ್ತ ಗಂಡ ವೆಂಕಟಸ್ವಾಮಿ ಪತ್ನಿ ಲಕ್ಷ್ಮಮ್ಮನನ್ನು ಮಚ್ಚಿನಿಂದ ಕೊಚ್ಚಿ ಹತ್ಯೆ ಮಾಡಿ ನಿರ್ಮಾಣ ಹಂತದಲ್ಲಿದ್ದ ಮನೆಯೊಂದಕ್ಕೆ ಹೋಗಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.</p>.<p>ಸ್ಥಳಕ್ಕೆ ವಿಧಿ ವಿಜ್ಞಾನ ಪ್ರಯೋಗಾಲಯದ ಸಿಬ್ಬಂದಿ ಮತ್ತು ಬೆರಳಚ್ಚು ತಜ್ಞರು ಭೇಟಿ ನೀಡಿ ಪರಿಶೀಲನೆ ನಡೆಸಿದರು.</p>.<p>ಸರ್ಜಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಆನೇಕಲ್: </strong>ತಾಲ್ಲೂಕಿನ ಸರ್ಜಾಪುರ ಪೊಲೀಸ್ ಠಾಣೆ ವ್ಯಾಪ್ತಿಯ ಬಿಕ್ಕನಹಳ್ಳಿ ಜನತಾ ಕಾಲೊನಿಯಲ್ಲಿ ಗಂಡ ಹೆಂಡತಿಯ ನಡುವೆ ನಡೆದ ಕ್ಷುಲ್ಲಕ ಜಗಳದಿಂದಾಗಿ ಪತಿ, ಪತ್ನಿಯನ್ನು ಮಚ್ಚಿನಿಂದ ಕೊಚ್ಚಿ ಕೊಲೆ ಮಾಡಿ ತಾನು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.</p>.<p>ಲಕ್ಷಮ್ಮ(47) ಕೊಲೆಯಾದವರು. ವೆಂಕಟಸ್ವಾಮಿ(53) ಆತ್ಮಹತ್ಯೆ ಮಾಡಿಕೊಂಡವರು.</p>.<p>ಪತಿ–ಪತ್ನಿ ಇಬ್ಬರು ಕೂಲಿ ಕೆಲಸ ಮಾಡಿಕೊಂಡು ಜೀವನ ಸಾಗಿಸುತ್ತಿದ್ದರು. ತಮ್ಮ ಇಬ್ಬರು ಹೆಣ್ಣು ಮಕ್ಕಳಿಗೆ ಮದುವೆ ಮಾಡಿದ್ದರು. ಹೆಣ್ಣು ಮಕ್ಕಳ ಮದುವೆಗಾಗಿ ದಂಪತಿ ಬ್ಯಾಂಕ್ನಿಂದ ಸಾಲ ಪಡೆದಿದ್ದರು. ಸಾಲ ತೀರಿಸಲಾಗದಿದ್ದರಿಂದ ಬ್ಯಾಂಕ್ನವರು ಐದು ತಿಂಗಳ ಹಿಂದೆ ಮನೆ ಜಪ್ತಿ ಮಾಡಿದ್ದರು.</p>.<p>ಬಾಡಿಗೆ ಮನೆಯಲ್ಲಿ ವಾಸವಿದ್ದ ದಂಪತಿ ಇದೇ ವಿಚಾರಕ್ಕೆ ಪದೇ ಪದೇ ಜಗಳವಾಡುತ್ತಿದ್ದರು. ಬೇಸತ್ತ ಗಂಡ ವೆಂಕಟಸ್ವಾಮಿ ಪತ್ನಿ ಲಕ್ಷ್ಮಮ್ಮನನ್ನು ಮಚ್ಚಿನಿಂದ ಕೊಚ್ಚಿ ಹತ್ಯೆ ಮಾಡಿ ನಿರ್ಮಾಣ ಹಂತದಲ್ಲಿದ್ದ ಮನೆಯೊಂದಕ್ಕೆ ಹೋಗಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.</p>.<p>ಸ್ಥಳಕ್ಕೆ ವಿಧಿ ವಿಜ್ಞಾನ ಪ್ರಯೋಗಾಲಯದ ಸಿಬ್ಬಂದಿ ಮತ್ತು ಬೆರಳಚ್ಚು ತಜ್ಞರು ಭೇಟಿ ನೀಡಿ ಪರಿಶೀಲನೆ ನಡೆಸಿದರು.</p>.<p>ಸರ್ಜಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>