ಭಾನುವಾರ, 8 ಸೆಪ್ಟೆಂಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ವಸತಿ ನಿಲಯಗಳಿಗೆ ಅನುದಾನ ಬಿಡುಗಡೆಗೆ ಮನವಿ

ಮನವಿ
Published 26 ಜುಲೈ 2024, 16:28 IST
Last Updated 26 ಜುಲೈ 2024, 16:28 IST
ಅಕ್ಷರ ಗಾತ್ರ

ವಿಜಯಪುರ(ದೇವನಹಳ್ಳಿ): ರಾಜ್ಯದಲ್ಲಿ ಸಮಾಜ ಕಲ್ಯಾಣ ಇಲಾಖೆ ಅಧೀನದಲ್ಲಿ ಕಾರ್ಯನಿರ್ವಹಿಸುತ್ತಿರುವ ವಸತಿ ನಿಲಯಗಳಿಗೆ ಅಗತ್ಯವಿರುವ ಅನುದಾನ ಕೂಡಲೇ ಬಿಡುಗಡೆ ಮಾಡಿ ಮಕ್ಕಳ ಶೈಕ್ಷಣಿಕ ಪ್ರಗತಿಗೆ ಸರ್ಕಾರ ನೆರವಾಗಬೇಕು ಎಂದು ಕರ್ನಾಟಕ ದಲಿತ ಜನ ಸೇನೆ ವತಿಯಿಂದ ಸಮಾಜ ಕಲ್ಯಾಣ ಇಲಾಖೆ ಆಯುಕ್ತರಿಗೆ ಮನವಿ ಪತ್ರ ಸಲ್ಲಿಸಲಾಗಿದೆ.

ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಸೇನೆ ರಾಜ್ಯ ಘಟಕದ ಅಧ್ಯಕ್ಷ ಟಿ.ಭರತ್, ಅಗತ್ಯವಿರುವಷ್ಟು ಅನುದಾನ ಬಿಡುಗಡೆಯಾಗದೆ ಮೂಲ ಸೌಕರ್ಯ ಕೊರತೆಯಿಂದ ಸಂಕಷ್ಟ ಎದುರಿಸುತ್ತಿದ್ದಾರೆ. ಅಧಿಕಾರಿಗಳು ಅನುದಾನದ ಕೊರತೆಯಿಂದ ಅಸಹಾಯಕರಾಗಿದ್ದಾರೆ. ಬಜೆಟ್‌ನಲ್ಲಿ ಘೋಷಣೆ ಮಾಡಿರುವಂತೆ ಸಂಪೂರ್ಣ ಅನುದಾನ ಬಿಡುಗಡೆಗೊಳಿಸುವಂತೆ ಸರ್ಕಾರಕ್ಕೆ ಒತ್ತಾಯ ಮಾಡಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT