<p><strong>ದೇವನಹಳ್ಳಿ</strong>: ಕೇಂದ್ರ ಸರ್ಕಾರ ಈಚೆಗೆ ಮಂಡಿಸಿ ಬಜೆಟ್ನಲ್ಲಿ ರಾಜ್ಯಕ್ಕೆ ಯಾವುದೇ ಯೋಜನೆ ಮತ್ತು ಅನುದಾನ ನೀಡದೆ ಮೋಸ ಮಾಡಿದೆ ಎಂದು ಆರೋಪಿಸಿ, ಚೊಂಬು ಪ್ರದರ್ಶಿಸಿ ಕಾಂಗ್ರೆಸ್ ಮುಖಂಡರು ಮತ್ತು ಕಾರ್ಯಕರ್ತರು ಪಟ್ಟಣದ ಪ್ರವಾಸಿಮಂದಿರದ ಆವರಣದಲ್ಲಿ ಶನಿವಾರ ಪ್ರತಿಭಟನೆ ನಡೆಸಿದರು.</p>.<p>ಪ್ರತಿಭಟನೆಯಲ್ಲಿ ಮಾತನಾಡಿದ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಚ್. ಮುನಿಯಪ್ಪ, ಕೇಂದ್ರದ ಎನ್ಡಿಎ ಸರ್ಕಾರ ಬಜೆಟ್ನಲ್ಲಿ ಮಿತ್ರ ಪಕ್ಷಕ್ಕೆ ಸಿಂಹಪಾಲು ನೀಡಿ, ಎನ್ಡಿಎಯೇತರ ಸರ್ಕಾರ ಇರುವ ಸರ್ಕಾರಗಳಿಗೆ ಯಾವುದೇ ಹೊಸ ಯೋಜನೆ ನೀಡಿದೆ, ಚೊಂಬು ಕೊಟ್ಟಿದ್ದಾರೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.</p>.<p>ರಾಜ್ಯದಿಂದ ಆಯ್ಕೆಯಾಗಿರುವ ಬಿಜೆಪಿಯ 19 ಸಂಸದರು ಈ ಅನ್ಯಾಯವನ್ನು ಪ್ರಶ್ನಿಸುವ ಧೈರ್ಯ ಮಾಡುತ್ತಿಲ್ಲ. ಆದರೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ಮುಡಾ ಹಗರಣ ಆರೋಪ ಮಾಡುತ್ತಿರುವುದು ಎಷ್ಟು ಸರಿ ಎಂದು ಪ್ರಶ್ನಿಸಿದರು.</p>.<p>ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತರಾಮನ್ ರಾಜ್ಯದಿಂದ ಆಯ್ಕೆಯಾಗಿದ್ದರೂ, ಇಂಡಿಯಾ ಒಕ್ಕೂಟಕ್ಕೆ ಸೇರಿದ ರಾಜ್ಯಗಳಿಗೆ ಅನ್ಯಾಯ ಮಾಡಿದ್ದಾರೆ. ಮಹಾರಾಷ್ಟ್ರದ ನಂತರ ಕರ್ನಾಟಕ ಜಿಎಸ್ಟಿ ಪಾವತಿಯಲ್ಲಿ ಮಂಜೂಣಿಯಲ್ಲಿದೆ. ಹೀಗಾದರೂ ತಾರತಮ್ಯ ಮಾಡಲಾಗುತ್ತಿದೆ ಎಂದು ದೂರಿದರು.</p>.<p>ಬೆಂಗಳೂರು ಅಂತರರಾಷ್ಟೀಯ ವಿಮಾನ ನಿಲ್ದಾಣ ಪ್ರದೇಶ ಯೋಜನಾ ಪ್ರಾಧಿಕಾರದ ಅಧ್ಯಕ್ಷ ವಿ.ಶಾಂತಕುಮಾರ್ ಮಾತನಾಡಿದರು.</p>.<p>ದೊಡ್ಡಬಳ್ಳಾಪುರ ಮಾಜಿ ಶಾಸಕ ವೆಂಕಟರಮಣಯ್ಯ, ಕೆಪಿಸಿಸಿ ಕಾರ್ಯದರ್ಶಿ ವಿ.ಮಂಜುನಾಥ್, ಜಿಲ್ಲಾ ಕಾಂಗ್ರೆಸ್ ಘಟಕದ ಅಧ್ಯಕ್ಷ ಸಿ ಆರ್.ಗೌಡ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಪ್ರಸನ್ನಕುಮಾರ್, ಜಿಲ್ಲಾ ಗ್ಯಾರಂಟಿ ಸಮಿತಿ ಅಧ್ಯಕ್ಷ ಬಿ.ರಾಜಣ್ಣ, ತಾಲ್ಲೂಕು ಗ್ಯಾರಂಟಿ ಸಮಿತಿಯ ಅಧ್ಯಕ್ಷ ಜಗನ್ನಾಥ, ತೂಬಗರೆ ಬ್ಲಾಕ್ ಅಧ್ಯಕ್ಷ ರಂಗಪ್ಪ, ಜಿಲ್ಲಾ ಎಸ್.ಸಿ. ಘಟಕದ ಅಧ್ಯಕ್ಷ ಚೌಡಪ್ಪನಹಳ್ಳಿ ಲೋಕೇಶ್, ಪುರಸಭೆ ಸದಸ್ಯ ವೇಣುಗೋಪಾಲ್, ಎಂ.ನಾರಾಯಣಸ್ವಾಮಿ, ಚಂದೇನಹಳ್ಳಿ ಮುನಿಯಪ್ಪ, ಅನಂತಕುಮಾರಿಚಿನ್ನಪ್ಪ, ಬಾಲರಾಜು, ಮುನಿರಾಜು, ಸಿ.ಎಂ.ರಮೇಶ್, ರಾಮಚಂದ್ರಪ್ಪ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ದೇವನಹಳ್ಳಿ</strong>: ಕೇಂದ್ರ ಸರ್ಕಾರ ಈಚೆಗೆ ಮಂಡಿಸಿ ಬಜೆಟ್ನಲ್ಲಿ ರಾಜ್ಯಕ್ಕೆ ಯಾವುದೇ ಯೋಜನೆ ಮತ್ತು ಅನುದಾನ ನೀಡದೆ ಮೋಸ ಮಾಡಿದೆ ಎಂದು ಆರೋಪಿಸಿ, ಚೊಂಬು ಪ್ರದರ್ಶಿಸಿ ಕಾಂಗ್ರೆಸ್ ಮುಖಂಡರು ಮತ್ತು ಕಾರ್ಯಕರ್ತರು ಪಟ್ಟಣದ ಪ್ರವಾಸಿಮಂದಿರದ ಆವರಣದಲ್ಲಿ ಶನಿವಾರ ಪ್ರತಿಭಟನೆ ನಡೆಸಿದರು.</p>.<p>ಪ್ರತಿಭಟನೆಯಲ್ಲಿ ಮಾತನಾಡಿದ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಚ್. ಮುನಿಯಪ್ಪ, ಕೇಂದ್ರದ ಎನ್ಡಿಎ ಸರ್ಕಾರ ಬಜೆಟ್ನಲ್ಲಿ ಮಿತ್ರ ಪಕ್ಷಕ್ಕೆ ಸಿಂಹಪಾಲು ನೀಡಿ, ಎನ್ಡಿಎಯೇತರ ಸರ್ಕಾರ ಇರುವ ಸರ್ಕಾರಗಳಿಗೆ ಯಾವುದೇ ಹೊಸ ಯೋಜನೆ ನೀಡಿದೆ, ಚೊಂಬು ಕೊಟ್ಟಿದ್ದಾರೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.</p>.<p>ರಾಜ್ಯದಿಂದ ಆಯ್ಕೆಯಾಗಿರುವ ಬಿಜೆಪಿಯ 19 ಸಂಸದರು ಈ ಅನ್ಯಾಯವನ್ನು ಪ್ರಶ್ನಿಸುವ ಧೈರ್ಯ ಮಾಡುತ್ತಿಲ್ಲ. ಆದರೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ಮುಡಾ ಹಗರಣ ಆರೋಪ ಮಾಡುತ್ತಿರುವುದು ಎಷ್ಟು ಸರಿ ಎಂದು ಪ್ರಶ್ನಿಸಿದರು.</p>.<p>ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತರಾಮನ್ ರಾಜ್ಯದಿಂದ ಆಯ್ಕೆಯಾಗಿದ್ದರೂ, ಇಂಡಿಯಾ ಒಕ್ಕೂಟಕ್ಕೆ ಸೇರಿದ ರಾಜ್ಯಗಳಿಗೆ ಅನ್ಯಾಯ ಮಾಡಿದ್ದಾರೆ. ಮಹಾರಾಷ್ಟ್ರದ ನಂತರ ಕರ್ನಾಟಕ ಜಿಎಸ್ಟಿ ಪಾವತಿಯಲ್ಲಿ ಮಂಜೂಣಿಯಲ್ಲಿದೆ. ಹೀಗಾದರೂ ತಾರತಮ್ಯ ಮಾಡಲಾಗುತ್ತಿದೆ ಎಂದು ದೂರಿದರು.</p>.<p>ಬೆಂಗಳೂರು ಅಂತರರಾಷ್ಟೀಯ ವಿಮಾನ ನಿಲ್ದಾಣ ಪ್ರದೇಶ ಯೋಜನಾ ಪ್ರಾಧಿಕಾರದ ಅಧ್ಯಕ್ಷ ವಿ.ಶಾಂತಕುಮಾರ್ ಮಾತನಾಡಿದರು.</p>.<p>ದೊಡ್ಡಬಳ್ಳಾಪುರ ಮಾಜಿ ಶಾಸಕ ವೆಂಕಟರಮಣಯ್ಯ, ಕೆಪಿಸಿಸಿ ಕಾರ್ಯದರ್ಶಿ ವಿ.ಮಂಜುನಾಥ್, ಜಿಲ್ಲಾ ಕಾಂಗ್ರೆಸ್ ಘಟಕದ ಅಧ್ಯಕ್ಷ ಸಿ ಆರ್.ಗೌಡ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಪ್ರಸನ್ನಕುಮಾರ್, ಜಿಲ್ಲಾ ಗ್ಯಾರಂಟಿ ಸಮಿತಿ ಅಧ್ಯಕ್ಷ ಬಿ.ರಾಜಣ್ಣ, ತಾಲ್ಲೂಕು ಗ್ಯಾರಂಟಿ ಸಮಿತಿಯ ಅಧ್ಯಕ್ಷ ಜಗನ್ನಾಥ, ತೂಬಗರೆ ಬ್ಲಾಕ್ ಅಧ್ಯಕ್ಷ ರಂಗಪ್ಪ, ಜಿಲ್ಲಾ ಎಸ್.ಸಿ. ಘಟಕದ ಅಧ್ಯಕ್ಷ ಚೌಡಪ್ಪನಹಳ್ಳಿ ಲೋಕೇಶ್, ಪುರಸಭೆ ಸದಸ್ಯ ವೇಣುಗೋಪಾಲ್, ಎಂ.ನಾರಾಯಣಸ್ವಾಮಿ, ಚಂದೇನಹಳ್ಳಿ ಮುನಿಯಪ್ಪ, ಅನಂತಕುಮಾರಿಚಿನ್ನಪ್ಪ, ಬಾಲರಾಜು, ಮುನಿರಾಜು, ಸಿ.ಎಂ.ರಮೇಶ್, ರಾಮಚಂದ್ರಪ್ಪ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>