ಮೂರ್ಚೆ ಹೋಗಿದ್ದ ಮಹಿಳೆಯೊಬ್ಬರನ್ನು ಆಂಬುಲೆನ್ಸ್ ನಲ್ಲಿ ಆಸ್ಪತ್ರೆಗೆ ಸಾಗಿಸಿದರು.
ಗ್ರಾಮಸ್ಥರು ಸ್ಮಶಾನಕ್ಕೆ ಜಾಗ ಕೇಳಿದ್ದಾರೆ. ಮೇಲಾಧಿಕಾರಿಗಳೊಂದಿಗೆ ಚರ್ಚೆ ನಡೆಸಿ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದ್ದೇವೆ. ದಾಖಲೆ ಸಂಪೂರ್ಣವಾಗಿ ಪರಿಶೀಲನೆ ನಡೆಸಿದ ನಂತರ ಮುಂದಿನ ಕ್ರಮ ಜರುಗಿಸಲಾಗುತ್ತದೆ.
–ಸತ್ಯನಾರಾಯಣ, ರಾಜಸ್ವ ನಿರೀಕ್ಷಕ ವಿಜಯಪುರ
ಮೂರ್ಛೆ ಹೋದ ಮಹಿಳೆ
ಗುಡಿಸಲು ತೆರವುಗೊಳಿಸುವಂತೆ ಅಧಿಕಾರಿಗಳು ಸೂಚನೆ ನೀಡುತ್ತಿದ್ದಂತೆ ಗುಡಿಸಲು ನಿವಾಸಿ ಮಹಿಳೆಯೊಬ್ಬರು ಮೂರ್ಛೆ ಹೋಗಿ ಕೆಳಗೆ ಬಿದ್ದರು. ಕೂಡಲೇ ಆಂಬುಲೆನ್ಸ್ ತರಿಸಿ ಸಮುದಾಯ ಆರೋಗ್ಯ ಕೇಂದ್ರಕ್ಕೆ ಕಳುಹಿಸಿ ಕೂಡಲೇ ಚಿಕಿತ್ಸೆ ಕೊಡಿಸಲಾಯಿತು.