<p><strong>ಮೂಡಲಗಿ:</strong> ನಿರಂತರವಾಗಿ ಸುರಿಯುವ ಮಳೆಯಿಂದ ತಾಲ್ಲೂಕಿನ ಘಟಪ್ರಭಾ ನದಿಗೆ ಹರಿದು ಬರುತ್ತಿರುವ ನೀರಿನ ಮಟ್ಟ ಹೆಚ್ಚಾಗಿದ್ದರಿಂದ ತಾಲ್ಲೂಕಿನ ನಾಲ್ಕು ಸೇತುವೆಗಳು ಭಾನುವಾರ ಜಲಾವೃತಗೊಂಡಿದ್ದರಿಂದ ಸಂಚಾರ ಸ್ಥಗಿತಗೊಂಡಿದೆ.</p>.<p>ಘಟಪ್ರಭಾ ನದಿಯ ನೀರಿನ ಮಟ್ಟ ಏರಿಕೆ ಆಗಿದ್ದರಿಂದ ತಾಲ್ಲೂಕಿನ ಅವರಾದಿ ಹಾಗೂ ಮಹಾಲಿಂಗಪುರಕ್ಕೆ ಸಂಪರ್ಕ ಕಲ್ಪಿಸುವ ಅವರಾದಿ ಸೇತುವೆ, ಸುಣಧೋಳಿ ಹಾಗೂ ಮೂಡಲಗಿಗೆ ಸಂಪರ್ಕ ಕಲ್ಪಿಸುವ ಸುಣಧೋಳಿ ಸೇತುವೆ, ವಡೇರಹಟ್ಟಿ ಹಾಗೂ ಉದಗಟ್ಟಿಗೆ ಸಂಪರ್ಕ ಕಲ್ಪಿಸುವ ವಡೇರಹಟ್ಟಿ ಸೇತುವೆ, ಕಮಲದಿನ್ನಿ ಹಾಗೂ ಹುಣಶ್ಯಾಳ ಪಿವೈಗೆ ಸಂಪರ್ಕ ಕಲ್ಪಿಸುವ ಕಮಲದಿನ್ನಿ ಸೇತುವೆಗಳು ಜಲಾವೃತಗೊಂಡ ಪರಿಣಾಮ ಹಲವು ಸಂಚಾರ ಸ್ಥಗಿತಗೊಂಡು ಗ್ರಾಮಗಳ ಸಂಪರ್ಕ ಕಡಿತಗೊಂಡಿದೆ.</p>.<p>ಸುಣಧೋಳಿ, ಅವರಾದಿ, ಕಮಲದಿನ್ನಿ ಸೇತುವೆ ಬಳಿಯಲ್ಲಯ ಬ್ಯಾರಿಕೇಡ್ ಮೂಲಕ ಸಂಚಾರ ನಿರ್ಬಂಧಿಸಲಾಗಿದೆ. ನದಿಯ ನೀರಿನ ಹರಿವು ಇನ್ನು ಅಧಿಕವಾಗುವ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕೆಯಾಗಿ ಭಾನುವಾರ ಮಧ್ಯಾಹ್ನದಿಂದ ಸುಣಧೋಳಿ ಮತ್ತು ಅವರಾದಿ ನದಿ ಪಾತ್ರದ ಜನರಿಗೆ ಸ್ಥಳಾಂತರವಾಗಲು ಧ್ವನಿವರ್ಧಕ ಮತ್ತು ಡಂಗೂರ ಮೂಲಕ ತಿಳಿಸಲಾಗಿದೆ ಎಂದು ತಹಶೀಲ್ದಾರ್ ಮಹಾದೇವ ಸನ್ನಮುರಿ ‘ಪ್ರಜಾವಾಣಿ’ಗೆ ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮೂಡಲಗಿ:</strong> ನಿರಂತರವಾಗಿ ಸುರಿಯುವ ಮಳೆಯಿಂದ ತಾಲ್ಲೂಕಿನ ಘಟಪ್ರಭಾ ನದಿಗೆ ಹರಿದು ಬರುತ್ತಿರುವ ನೀರಿನ ಮಟ್ಟ ಹೆಚ್ಚಾಗಿದ್ದರಿಂದ ತಾಲ್ಲೂಕಿನ ನಾಲ್ಕು ಸೇತುವೆಗಳು ಭಾನುವಾರ ಜಲಾವೃತಗೊಂಡಿದ್ದರಿಂದ ಸಂಚಾರ ಸ್ಥಗಿತಗೊಂಡಿದೆ.</p>.<p>ಘಟಪ್ರಭಾ ನದಿಯ ನೀರಿನ ಮಟ್ಟ ಏರಿಕೆ ಆಗಿದ್ದರಿಂದ ತಾಲ್ಲೂಕಿನ ಅವರಾದಿ ಹಾಗೂ ಮಹಾಲಿಂಗಪುರಕ್ಕೆ ಸಂಪರ್ಕ ಕಲ್ಪಿಸುವ ಅವರಾದಿ ಸೇತುವೆ, ಸುಣಧೋಳಿ ಹಾಗೂ ಮೂಡಲಗಿಗೆ ಸಂಪರ್ಕ ಕಲ್ಪಿಸುವ ಸುಣಧೋಳಿ ಸೇತುವೆ, ವಡೇರಹಟ್ಟಿ ಹಾಗೂ ಉದಗಟ್ಟಿಗೆ ಸಂಪರ್ಕ ಕಲ್ಪಿಸುವ ವಡೇರಹಟ್ಟಿ ಸೇತುವೆ, ಕಮಲದಿನ್ನಿ ಹಾಗೂ ಹುಣಶ್ಯಾಳ ಪಿವೈಗೆ ಸಂಪರ್ಕ ಕಲ್ಪಿಸುವ ಕಮಲದಿನ್ನಿ ಸೇತುವೆಗಳು ಜಲಾವೃತಗೊಂಡ ಪರಿಣಾಮ ಹಲವು ಸಂಚಾರ ಸ್ಥಗಿತಗೊಂಡು ಗ್ರಾಮಗಳ ಸಂಪರ್ಕ ಕಡಿತಗೊಂಡಿದೆ.</p>.<p>ಸುಣಧೋಳಿ, ಅವರಾದಿ, ಕಮಲದಿನ್ನಿ ಸೇತುವೆ ಬಳಿಯಲ್ಲಯ ಬ್ಯಾರಿಕೇಡ್ ಮೂಲಕ ಸಂಚಾರ ನಿರ್ಬಂಧಿಸಲಾಗಿದೆ. ನದಿಯ ನೀರಿನ ಹರಿವು ಇನ್ನು ಅಧಿಕವಾಗುವ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕೆಯಾಗಿ ಭಾನುವಾರ ಮಧ್ಯಾಹ್ನದಿಂದ ಸುಣಧೋಳಿ ಮತ್ತು ಅವರಾದಿ ನದಿ ಪಾತ್ರದ ಜನರಿಗೆ ಸ್ಥಳಾಂತರವಾಗಲು ಧ್ವನಿವರ್ಧಕ ಮತ್ತು ಡಂಗೂರ ಮೂಲಕ ತಿಳಿಸಲಾಗಿದೆ ಎಂದು ತಹಶೀಲ್ದಾರ್ ಮಹಾದೇವ ಸನ್ನಮುರಿ ‘ಪ್ರಜಾವಾಣಿ’ಗೆ ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>