<p><strong>ಸಂಗೊಳ್ಳಿ (ಬೆಳಗಾವಿ ಜಿಲ್ಲೆ):</strong> ಸಂಗೊಳ್ಳಿಯಲ್ಲಿ ಇದೇ ವರ್ಷ ಪ್ರಾರಂಭಿಸಿದ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಸೈನಿಕ ಶಾಲೆಯಲ್ಲಿ ಕರ್ನಾಟಕದ ಮಕ್ಕಳಿಗೆ ಶೇ 65ರಷ್ಟು ಮೀಸಲಾತಿ ನೀಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.</p><p>ಸಂಗೊಳ್ಳಿಯಲ್ಲಿ ಬುಧವಾರ ಮಾಧ್ಯಮದವರಿಗೆ ಪ್ರತಿಕ್ರಿಯೆ ನೀಡಿದ ಅವರು, ವಿಜಯಪುರ ಸೈನಿಕ ಶಾಲೆಯಲ್ಲಿ ಈಗಾಗಲೇ ಕನ್ನಡ ನಾಡಿನ ಮಕ್ಕಳಿಗಾಗಿ ಶೇ 65ರಷ್ಟು ಮೀಸಲಾತಿ ಇದೆ. ಅದೇ ಮಾದರಿಯನ್ನು ಇಲ್ಲಿಯೂ ಮುಂದುವರಿಸಲಾಗುವುದು ಎಂದರು.</p><p>ತಾಯ್ನಾಡಿಗಾಗಿ ಬಲಿದಾನ ಮಾಡಿದ ರಾಯಣ್ಣನ ಭೂಮಿಯಲ್ಲಿ ಸೈನಿಕ ಶಾಲೆ, ಶಿಲ್ಪವನ, ಸಮುದಾಯ ಭವನ ಉದ್ಘಾಟಿಸಿದ್ದು ನನಗೆ ಹೆಮ್ಮೆ ತಂದಿದೆ ಎಂದರು.</p><p>ಮಹಾರಾಷ್ಟ್ರ ಸರ್ಕಾರ 865 ಹಳ್ಳಿಗಳಿಗೆ ಜನಾರೋಗ್ಯ ವಿಮೆ ಜಾರಿ ಮಾಡಿದ ಬಗ್ಗೆ ಪ್ರತಿಕ್ರಿಯಿಸಿದ ಅವರು, ಈ ಬಗ್ಗೆ ಸರ್ಕಾರದ ಮುಖ್ಯ ಕಾರ್ಯದರ್ಶಿ ಅವರಿಗೆ ಸೂಚಿಸಿದ್ದೇನೆ. ಅವರು ಪರಿಶೀಲಿಸುತ್ತಾರೆ ಎಂದರು.</p><p>'ಸಿದ್ದರಾಮಯ್ಯ ಅವರು ಪೂರ್ಣಾವಧಿ ಮುಖ್ಯಮಂತ್ರಿ ಅಗಿರುತ್ತಾರೆ' ಎಂಬ ಯತೀಂದ್ರ ಅವರ ಹೇಳಿಕೆ ಕುರಿತು ಪ್ರತಿಕ್ರಿಯಿಸಿದ ಅವರು, ಅದನ್ನು ನಾನು ಅಥವಾ ನನ್ನ ಮಗ ತೀರ್ಮಾನ ಮಾಡುವುದಿಲ್ಲ. ಹೈಕಮಾಂಡ್ ನಿರ್ಧರಿಸುತ್ತದೆ' ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಸಂಗೊಳ್ಳಿ (ಬೆಳಗಾವಿ ಜಿಲ್ಲೆ):</strong> ಸಂಗೊಳ್ಳಿಯಲ್ಲಿ ಇದೇ ವರ್ಷ ಪ್ರಾರಂಭಿಸಿದ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಸೈನಿಕ ಶಾಲೆಯಲ್ಲಿ ಕರ್ನಾಟಕದ ಮಕ್ಕಳಿಗೆ ಶೇ 65ರಷ್ಟು ಮೀಸಲಾತಿ ನೀಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.</p><p>ಸಂಗೊಳ್ಳಿಯಲ್ಲಿ ಬುಧವಾರ ಮಾಧ್ಯಮದವರಿಗೆ ಪ್ರತಿಕ್ರಿಯೆ ನೀಡಿದ ಅವರು, ವಿಜಯಪುರ ಸೈನಿಕ ಶಾಲೆಯಲ್ಲಿ ಈಗಾಗಲೇ ಕನ್ನಡ ನಾಡಿನ ಮಕ್ಕಳಿಗಾಗಿ ಶೇ 65ರಷ್ಟು ಮೀಸಲಾತಿ ಇದೆ. ಅದೇ ಮಾದರಿಯನ್ನು ಇಲ್ಲಿಯೂ ಮುಂದುವರಿಸಲಾಗುವುದು ಎಂದರು.</p><p>ತಾಯ್ನಾಡಿಗಾಗಿ ಬಲಿದಾನ ಮಾಡಿದ ರಾಯಣ್ಣನ ಭೂಮಿಯಲ್ಲಿ ಸೈನಿಕ ಶಾಲೆ, ಶಿಲ್ಪವನ, ಸಮುದಾಯ ಭವನ ಉದ್ಘಾಟಿಸಿದ್ದು ನನಗೆ ಹೆಮ್ಮೆ ತಂದಿದೆ ಎಂದರು.</p><p>ಮಹಾರಾಷ್ಟ್ರ ಸರ್ಕಾರ 865 ಹಳ್ಳಿಗಳಿಗೆ ಜನಾರೋಗ್ಯ ವಿಮೆ ಜಾರಿ ಮಾಡಿದ ಬಗ್ಗೆ ಪ್ರತಿಕ್ರಿಯಿಸಿದ ಅವರು, ಈ ಬಗ್ಗೆ ಸರ್ಕಾರದ ಮುಖ್ಯ ಕಾರ್ಯದರ್ಶಿ ಅವರಿಗೆ ಸೂಚಿಸಿದ್ದೇನೆ. ಅವರು ಪರಿಶೀಲಿಸುತ್ತಾರೆ ಎಂದರು.</p><p>'ಸಿದ್ದರಾಮಯ್ಯ ಅವರು ಪೂರ್ಣಾವಧಿ ಮುಖ್ಯಮಂತ್ರಿ ಅಗಿರುತ್ತಾರೆ' ಎಂಬ ಯತೀಂದ್ರ ಅವರ ಹೇಳಿಕೆ ಕುರಿತು ಪ್ರತಿಕ್ರಿಯಿಸಿದ ಅವರು, ಅದನ್ನು ನಾನು ಅಥವಾ ನನ್ನ ಮಗ ತೀರ್ಮಾನ ಮಾಡುವುದಿಲ್ಲ. ಹೈಕಮಾಂಡ್ ನಿರ್ಧರಿಸುತ್ತದೆ' ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>