<p><strong>ಬೈಲಹೊಂಗಲ:</strong> ತಾಲ್ಲೂಕಿನ ಬೇವಿನಕೊಪ್ಪ ಗ್ರಾಮದ ಮಲಪ್ರಭಾ ನದಿಗೆ ಅಡ್ಡಲಾಗಿ ನಿರ್ಮಿಸಲಾಗುತ್ತಿರುವ ನೂತನ ಸೇತುವೆಯ ಮುಂಭಾಗದಲ್ಲಿ ವೀರಕೇಸರಿ ಅಮಟೂರ ಬಾಳಪ್ಪನವರ ಮೂರ್ತಿಯನ್ನು ನಿರ್ಮಿಸಿ ಸುತ್ತಲೂ ಉದ್ಯಾನ ನಿರ್ಮಿಸಬೇಕು ಎಂದು ಆಗ್ರಹಿಸಿ ಗ್ರಾಮಸ್ಥರು ಶಾಸಕ ಮಹಾಂತೇಶ ಕೌಜಲಗಿ ಅವರಿಗೆ ಭಾನುವಾರ ಮನವಿ ಸಲ್ಲಿಸಿದರು.</p>.<p>ಗ್ರಾಮದಿಂದ ಶಾಸಕರ ನಿವಾಸಕ್ಕೆ ಭೇಟಿ ನೀಡಿದ ಗ್ರಾಮಸ್ಥರು, ಬೇವಿನಕೊಪ್ಪ, ಸ್ವಾತಂತ್ರ್ಯ ಹೋರಾಟಗಾರ ಬಾಳಪ್ಪನವರ ತ್ಯಾಗ, ಬಲಿದಾನ, ದೇಶಕ್ಕೆ ನೀಡಿದ ಕೊಡುಗೆ ಬಗ್ಗೆ ಮಕ್ಕಳಿಗೆ ಪರಿಚಯಿಸಬೇಕು ಎಂದು ತಿಳಿಸಿದರು.</p>.<p>ಆದಷ್ಟು ಬೇಗ ಕ್ರಮವಹಿಸುವುದಾಗಿ ಶಾಸಕರು ಭರವಸೆ ನೀಡಿದರು.</p>.<p>ಅಮಟೂರ ಬಾಳಪ್ಪ ಟ್ರಸ್ಟ್ ಕಮಿಟಿ ಅಧ್ಯಕ್ಷ ಸೋಮನಗೌಡ ಪಾಟೀಲ, ಹಿರಿಯರಾದ ಶಿವಾಜಿ ಸೋಗಿಮನಿ, ಗ್ರಾಮ ಪಂಚಾಯಿತಿ ಸದಸ್ಯ ರಾಘವೇಂದ್ರ ಸಂಗಪ್ಪನವರ, ಈರನಗೌಡ ಪಾಟೀಲ, ಶಿವಾನಂದ ದಳವಾಯಿ, ನಾಗಪ್ಪಾ ನಂದಿ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೈಲಹೊಂಗಲ:</strong> ತಾಲ್ಲೂಕಿನ ಬೇವಿನಕೊಪ್ಪ ಗ್ರಾಮದ ಮಲಪ್ರಭಾ ನದಿಗೆ ಅಡ್ಡಲಾಗಿ ನಿರ್ಮಿಸಲಾಗುತ್ತಿರುವ ನೂತನ ಸೇತುವೆಯ ಮುಂಭಾಗದಲ್ಲಿ ವೀರಕೇಸರಿ ಅಮಟೂರ ಬಾಳಪ್ಪನವರ ಮೂರ್ತಿಯನ್ನು ನಿರ್ಮಿಸಿ ಸುತ್ತಲೂ ಉದ್ಯಾನ ನಿರ್ಮಿಸಬೇಕು ಎಂದು ಆಗ್ರಹಿಸಿ ಗ್ರಾಮಸ್ಥರು ಶಾಸಕ ಮಹಾಂತೇಶ ಕೌಜಲಗಿ ಅವರಿಗೆ ಭಾನುವಾರ ಮನವಿ ಸಲ್ಲಿಸಿದರು.</p>.<p>ಗ್ರಾಮದಿಂದ ಶಾಸಕರ ನಿವಾಸಕ್ಕೆ ಭೇಟಿ ನೀಡಿದ ಗ್ರಾಮಸ್ಥರು, ಬೇವಿನಕೊಪ್ಪ, ಸ್ವಾತಂತ್ರ್ಯ ಹೋರಾಟಗಾರ ಬಾಳಪ್ಪನವರ ತ್ಯಾಗ, ಬಲಿದಾನ, ದೇಶಕ್ಕೆ ನೀಡಿದ ಕೊಡುಗೆ ಬಗ್ಗೆ ಮಕ್ಕಳಿಗೆ ಪರಿಚಯಿಸಬೇಕು ಎಂದು ತಿಳಿಸಿದರು.</p>.<p>ಆದಷ್ಟು ಬೇಗ ಕ್ರಮವಹಿಸುವುದಾಗಿ ಶಾಸಕರು ಭರವಸೆ ನೀಡಿದರು.</p>.<p>ಅಮಟೂರ ಬಾಳಪ್ಪ ಟ್ರಸ್ಟ್ ಕಮಿಟಿ ಅಧ್ಯಕ್ಷ ಸೋಮನಗೌಡ ಪಾಟೀಲ, ಹಿರಿಯರಾದ ಶಿವಾಜಿ ಸೋಗಿಮನಿ, ಗ್ರಾಮ ಪಂಚಾಯಿತಿ ಸದಸ್ಯ ರಾಘವೇಂದ್ರ ಸಂಗಪ್ಪನವರ, ಈರನಗೌಡ ಪಾಟೀಲ, ಶಿವಾನಂದ ದಳವಾಯಿ, ನಾಗಪ್ಪಾ ನಂದಿ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>