<p><strong>ಚಿಕ್ಕೋಡಿ (ಬೆಳಗಾವಿ ಜಿಲ್ಲೆ):</strong> ತಾಲ್ಲೂಕಿನ ಮಾಂಜರಿ– ಬಾವನ ಸವದತ್ತಿ ಗ್ರಾಮಗಳ ನಡುವೆ ಕೃಷ್ಣಾ ನದಿಗೆ ನಿರ್ಮಿಸಿದ ಸಣ್ಣ ನೀರಾವರಿ ಇಲಾಖೆಗೆ ಸೇರಿದ ಬಾಂದಾರ ನದಿಯಲ್ಲಿ ಕೊಚ್ಚಿ ಹೋಗಿದೆ. ಕಳೆದ ಮೂರು ದಿನಗಳಿಂದ ನೀರಿನ ಹರಿವು ಹೆಚ್ಚಾಗಿದ್ದು, ಅದರ ರಭಸ ತಾಳಿದೇ ಬಾಂದಾರ ಹಾಳಾಗಿದೆ.</p>.<p>2019ರಲ್ಲಿ ₹ 5 ಕೋಟಿ ವೆಚ್ಚದಲ್ಲಿ ಇದನ್ನು ನಿರ್ಮಿಸಲಾಗಿದೆ. ಆದರೂ ನೀರಿನಲ್ಲಿ ಮುಳುಗುತ್ತಿತ್ತು. ಮತ್ತಷ್ಟು ಎತ್ತರ ಹೆಚ್ಚಿಸಲು ₹ 2 ಕೋಟಿ ಅನುದಾನದಲ್ಲಿ ಕಾಮಗಾರಿ ಕೈಗೆತ್ತಿಕೊಳ್ಳಲಾಗಿತ್ತು.</p>.<p>ಪೈಪಗಳನ್ನು ಹಾಕಿ 5 ಅಡಿ ಎತ್ತರ ಮಾಡುವುದು ಹಾಗೂ ಎರಡೂ ಬದಿಯಲ್ಲಿ ಸಂಪರ್ಕ ರಸ್ತೆ ನಿರ್ಮಾಣ ಮಾಡುವ ಕಾಮಗಾರಿ ನಡೆದಿದೆ. ಕಳಪೆ ಕಾಮಗಾರಿಯಿಂದಾಗಿ ಎಲ್ಲವೂ ಹಾಳಾಗಿದೆ ಎಂದು ಗ್ರಾಮಸ್ಥರು ಆಗ್ರಹಿಸಿದ್ದಾರೆ.</p>.<p>ಸಂಬಂಧಿಸಿದ ಅಧಿಕಾರಿ, ಗುತ್ತಿಗೆದಾರರ ವಿರುದ್ಧ ಸೂಕ್ತ ಕ್ರಮಕೈಗೊಳ್ಳಬೇಕು. ಇಲ್ಲದಿದ್ದರೆ ಹೋರಾಟ ಮಾಡಲಾಗುವುದು ಎಂದು ಕರ್ನಾಟಕ ರಾಜ್ಯ ರೈತ ಸಂಘದ ಬೆಳಗಾವಿ ಜಿಲ್ಲಾ ಘಟಕದ ವಕ್ತಾರ ತ್ಯಾಗರಾಜ ಕದಂ ಹೇಳಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚಿಕ್ಕೋಡಿ (ಬೆಳಗಾವಿ ಜಿಲ್ಲೆ):</strong> ತಾಲ್ಲೂಕಿನ ಮಾಂಜರಿ– ಬಾವನ ಸವದತ್ತಿ ಗ್ರಾಮಗಳ ನಡುವೆ ಕೃಷ್ಣಾ ನದಿಗೆ ನಿರ್ಮಿಸಿದ ಸಣ್ಣ ನೀರಾವರಿ ಇಲಾಖೆಗೆ ಸೇರಿದ ಬಾಂದಾರ ನದಿಯಲ್ಲಿ ಕೊಚ್ಚಿ ಹೋಗಿದೆ. ಕಳೆದ ಮೂರು ದಿನಗಳಿಂದ ನೀರಿನ ಹರಿವು ಹೆಚ್ಚಾಗಿದ್ದು, ಅದರ ರಭಸ ತಾಳಿದೇ ಬಾಂದಾರ ಹಾಳಾಗಿದೆ.</p>.<p>2019ರಲ್ಲಿ ₹ 5 ಕೋಟಿ ವೆಚ್ಚದಲ್ಲಿ ಇದನ್ನು ನಿರ್ಮಿಸಲಾಗಿದೆ. ಆದರೂ ನೀರಿನಲ್ಲಿ ಮುಳುಗುತ್ತಿತ್ತು. ಮತ್ತಷ್ಟು ಎತ್ತರ ಹೆಚ್ಚಿಸಲು ₹ 2 ಕೋಟಿ ಅನುದಾನದಲ್ಲಿ ಕಾಮಗಾರಿ ಕೈಗೆತ್ತಿಕೊಳ್ಳಲಾಗಿತ್ತು.</p>.<p>ಪೈಪಗಳನ್ನು ಹಾಕಿ 5 ಅಡಿ ಎತ್ತರ ಮಾಡುವುದು ಹಾಗೂ ಎರಡೂ ಬದಿಯಲ್ಲಿ ಸಂಪರ್ಕ ರಸ್ತೆ ನಿರ್ಮಾಣ ಮಾಡುವ ಕಾಮಗಾರಿ ನಡೆದಿದೆ. ಕಳಪೆ ಕಾಮಗಾರಿಯಿಂದಾಗಿ ಎಲ್ಲವೂ ಹಾಳಾಗಿದೆ ಎಂದು ಗ್ರಾಮಸ್ಥರು ಆಗ್ರಹಿಸಿದ್ದಾರೆ.</p>.<p>ಸಂಬಂಧಿಸಿದ ಅಧಿಕಾರಿ, ಗುತ್ತಿಗೆದಾರರ ವಿರುದ್ಧ ಸೂಕ್ತ ಕ್ರಮಕೈಗೊಳ್ಳಬೇಕು. ಇಲ್ಲದಿದ್ದರೆ ಹೋರಾಟ ಮಾಡಲಾಗುವುದು ಎಂದು ಕರ್ನಾಟಕ ರಾಜ್ಯ ರೈತ ಸಂಘದ ಬೆಳಗಾವಿ ಜಿಲ್ಲಾ ಘಟಕದ ವಕ್ತಾರ ತ್ಯಾಗರಾಜ ಕದಂ ಹೇಳಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>