<p><strong>ಬೆಳಗಾವಿ:</strong> ‘ಮಹಾತ್ಮ ಗಾಂಧೀಜಿ ಅಧ್ಯಕ್ಷತೆಯಲ್ಲಿ ಬೆಳಗಾವಿಯಲ್ಲಿ 1924ರಲ್ಲಿ ನಡೆದ ಕಾಂಗ್ರೆಸ್ ಅಧಿವೇಶನಕ್ಕೆ ಈಗ 100 ವರ್ಷ ತುಂಬಿದೆ. ಸರ್ಕಾರಿ ಮಾರ್ಗಸೂಚಿಯಂತೆ, ಅರ್ಥಪೂರ್ಣವಾಗಿ ಅಧಿವೇಶನದ ಶತಮಾನೋತ್ಸವ ಆಚರಿಸಲಾಗುವುದು’ ಎಂದು ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಹೇಳಿದರು.</p><p>ಇಲ್ಲಿನ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಸೋಮವಾರ ನಡೆದ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದ ಅವರು, ‘ಶತಮಾನೋತ್ಸವ ಆಚರಣೆಗೆ ಸರ್ಕಾರ ಬಜೆಟ್ನಲ್ಲಿ ₹2 ಕೋಟಿ ಅನುದಾನ ಮೀಸಲಿಟ್ಟಿದೆ. ಇದನ್ನು ಸಮರ್ಪಕವಾಗಿ ಬಳಸಿಕೊಳ್ಳಲಾಗುವುದು’ ಎಂದರು.</p>. <p>‘ಕಾಂಗ್ರೆಸ್ ಅಧಿವೇಶನದಲ್ಲಿ ಅಂಗೀಕರಿಸಿದ್ದ ಗೊತ್ತುವಳಿಗಳ ಕಿರುಹೊತ್ತಿಗೆ ಪ್ರಕಟಿಸಬೇಕು. ಅಧಿವೇಶನದ ಮಹತ್ವ ಸಾರಲು ಶಾಲಾ–ಕಾಲೇಜು ವಿದ್ಯಾರ್ಥಿಗಳಿಗೆ ವಿವಿಧ ಸ್ಪರ್ಧೆ ಏರ್ಪಡಿಸಬೇಕು’ ಎಂದು ಹಿರಿಯರಾದ ದಿಲೀಪ್ ಕಾಮತ್ ಸಲಹೆ ನೀಡಿದರು.</p><p>ಸಾಹಿತಿ ಸರಜೂ ಕಾಟ್ಕರ್, ‘ರಾಜ್ಯದಾದ್ಯಂತ ಶತಮಾನೋತ್ಸವ ಕಾರ್ಯಕ್ರಮ ಹಮ್ಮಿಕೊಳ್ಳಬೇಕು. ಅಧಿವೇಶನದ ದಾಖಲೆಗಳು, ಛಾಯಾಚಿತ್ರಗಳ ಪ್ರದರ್ಶನ ಏರ್ಪಡಿಸಬೇಕು. ಟಿಳಕವಾಡಿಯ ವೀರಸೌಧ ಪುನರುಜ್ಜೀವನಗೊಳಿಸಬೇಕು’ ಎಂದರು.</p><p>‘ಬೆಳಗಾವಿಯಲ್ಲಿ ಕಾಂಗ್ರೆಸ್ ಅಧಿವೇಶನ ನಡೆಸಲು ಕಾರಣೀಕರ್ತರಾದ ಗಂಗಾಧರರಾವ್ ದೇಶಪಾಂಡೆ ಸ್ಮರಿಸುವ ಕಾರ್ಯಕ್ರಮವನ್ನೂ ಇದರಲ್ಲಿ ಅಳವಡಿಸಿಕೊಳ್ಳಬೇಕು. ಅವರ ಸ್ಮಾರಕ ನಿರ್ಮಾಣ ಕಾಮಗಾರಿ ಪೂರ್ಣಗೊಳಿಸಲು ಶತಮಾನೋತ್ಸವದ ಅನುದಾನದಲ್ಲಿ ₹50 ಲಕ್ಷ ಒದಗಿಸಬೇಕು’ ಎಂದು ಗಂಗಾಧರರಾವ್ ದೇಶಪಾಂಡೆ ಸ್ಮಾರಕ ಟ್ರಸ್ಟಿನ ಅಧ್ಯಕ್ಷ ರವೀಂದ್ರ ದೇಶಪಾಂಡೆ, ಕಾರ್ಯದರ್ಶಿ ಸುಭಾಷ ಕುಲಕರ್ಣಿ ಮನವಿ ಮಾಡಿದರು.</p><p>ಪತ್ರಕರ್ತ ರಿಷಿಕೇಶ ಬಹದ್ದೂರದೇಸಾಯಿ, ‘ಆಧುನಿಕ ಮಾಧ್ಯಮ ಬಳಸಿಕೊಂಡು, ಬೆಳಗಾವಿ ಅಧಿವೇಶನದ ಸಮಗ್ರ ಮಾಹಿತಿ ಹೊಂದಿದ ಸಾಕ್ಷ್ಯಚಿತ್ರ ನಿರ್ಮಿಸಬೇಕು. ಜಿಲ್ಲೆಯಲ್ಲಿ ತಯಾರಾಗುವ ಖಾದಿ ಉತ್ಪನ್ನಗಳ ಮಾರಾಟಕ್ಕಾಗಿ ಆನ್ಲೈನ್ ಮೂಲಕ ರಾಷ್ಟ್ರೀಯ ಹಾಗೂ ಅಂತರರಾಷ್ಟ್ರೀಯ ಮಟ್ಟದಲ್ಲಿ ವೇದಿಕೆ ಕಲ್ಪಿಸಬೇಕು’ ಎಂದರು.</p><p>ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಉಪನಿರ್ದೇಶಕ ಗುರುನಾಥ ಕಡಬೂರ ಪ್ರಾಸ್ತಾವಿಕವಾಗಿ ಮಾತನಾಡಿದರು. ಮಹಾನಗರ ಪಾಲಿಕೆ ಆಯುಕ್ತ ಅಶೋಕ ದುಡಗುಂಟಿ, ಹೆಚ್ಚುವರಿ ಜಿಲ್ಲಾಧಿಕಾರಿ ವಿಜಯಕುಮಾರ್ ಹೊನಕೇರಿ, ಜಿಲ್ಲಾ ಪಂಚಾಯ್ತಿ ಉಪಕಾರ್ಯದರ್ಶಿ ಬಸವರಾಜ ಹೆಗ್ಗನಾಯಕ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಉಪನಿರ್ದೇಶಕಿ ವಿದ್ಯಾವತಿ ಭಜಂತ್ರಿ ಇದ್ದರು.</p><p>ಕಾಂಗ್ರೆಸ್ ಅಧಿವೇಶನಕ್ಕೆ ಅನುದಾನ ಮೀಸಲಿಟ್ಟಿದ್ದರೂ, ಸಿದ್ಧತೆ ಆರಂಭವಾಗದ ಕುರಿತು ‘ಪ್ರಜಾವಾಣಿ’ ಜೂನ್ 14ರ ಸಂಚಿಕೆಯಲ್ಲಿ ‘ಶತಮಾನೋತ್ಸವ ಆಚರಣೆಗಿಲ್ಲ ಸಿದ್ಧತೆ’ ಶೀರ್ಷಿಕೆಯಡಿ ವಿಶೇಷ ವರದಿ ಪ್ರಕಟಿಸಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಳಗಾವಿ:</strong> ‘ಮಹಾತ್ಮ ಗಾಂಧೀಜಿ ಅಧ್ಯಕ್ಷತೆಯಲ್ಲಿ ಬೆಳಗಾವಿಯಲ್ಲಿ 1924ರಲ್ಲಿ ನಡೆದ ಕಾಂಗ್ರೆಸ್ ಅಧಿವೇಶನಕ್ಕೆ ಈಗ 100 ವರ್ಷ ತುಂಬಿದೆ. ಸರ್ಕಾರಿ ಮಾರ್ಗಸೂಚಿಯಂತೆ, ಅರ್ಥಪೂರ್ಣವಾಗಿ ಅಧಿವೇಶನದ ಶತಮಾನೋತ್ಸವ ಆಚರಿಸಲಾಗುವುದು’ ಎಂದು ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಹೇಳಿದರು.</p><p>ಇಲ್ಲಿನ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಸೋಮವಾರ ನಡೆದ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದ ಅವರು, ‘ಶತಮಾನೋತ್ಸವ ಆಚರಣೆಗೆ ಸರ್ಕಾರ ಬಜೆಟ್ನಲ್ಲಿ ₹2 ಕೋಟಿ ಅನುದಾನ ಮೀಸಲಿಟ್ಟಿದೆ. ಇದನ್ನು ಸಮರ್ಪಕವಾಗಿ ಬಳಸಿಕೊಳ್ಳಲಾಗುವುದು’ ಎಂದರು.</p>. <p>‘ಕಾಂಗ್ರೆಸ್ ಅಧಿವೇಶನದಲ್ಲಿ ಅಂಗೀಕರಿಸಿದ್ದ ಗೊತ್ತುವಳಿಗಳ ಕಿರುಹೊತ್ತಿಗೆ ಪ್ರಕಟಿಸಬೇಕು. ಅಧಿವೇಶನದ ಮಹತ್ವ ಸಾರಲು ಶಾಲಾ–ಕಾಲೇಜು ವಿದ್ಯಾರ್ಥಿಗಳಿಗೆ ವಿವಿಧ ಸ್ಪರ್ಧೆ ಏರ್ಪಡಿಸಬೇಕು’ ಎಂದು ಹಿರಿಯರಾದ ದಿಲೀಪ್ ಕಾಮತ್ ಸಲಹೆ ನೀಡಿದರು.</p><p>ಸಾಹಿತಿ ಸರಜೂ ಕಾಟ್ಕರ್, ‘ರಾಜ್ಯದಾದ್ಯಂತ ಶತಮಾನೋತ್ಸವ ಕಾರ್ಯಕ್ರಮ ಹಮ್ಮಿಕೊಳ್ಳಬೇಕು. ಅಧಿವೇಶನದ ದಾಖಲೆಗಳು, ಛಾಯಾಚಿತ್ರಗಳ ಪ್ರದರ್ಶನ ಏರ್ಪಡಿಸಬೇಕು. ಟಿಳಕವಾಡಿಯ ವೀರಸೌಧ ಪುನರುಜ್ಜೀವನಗೊಳಿಸಬೇಕು’ ಎಂದರು.</p><p>‘ಬೆಳಗಾವಿಯಲ್ಲಿ ಕಾಂಗ್ರೆಸ್ ಅಧಿವೇಶನ ನಡೆಸಲು ಕಾರಣೀಕರ್ತರಾದ ಗಂಗಾಧರರಾವ್ ದೇಶಪಾಂಡೆ ಸ್ಮರಿಸುವ ಕಾರ್ಯಕ್ರಮವನ್ನೂ ಇದರಲ್ಲಿ ಅಳವಡಿಸಿಕೊಳ್ಳಬೇಕು. ಅವರ ಸ್ಮಾರಕ ನಿರ್ಮಾಣ ಕಾಮಗಾರಿ ಪೂರ್ಣಗೊಳಿಸಲು ಶತಮಾನೋತ್ಸವದ ಅನುದಾನದಲ್ಲಿ ₹50 ಲಕ್ಷ ಒದಗಿಸಬೇಕು’ ಎಂದು ಗಂಗಾಧರರಾವ್ ದೇಶಪಾಂಡೆ ಸ್ಮಾರಕ ಟ್ರಸ್ಟಿನ ಅಧ್ಯಕ್ಷ ರವೀಂದ್ರ ದೇಶಪಾಂಡೆ, ಕಾರ್ಯದರ್ಶಿ ಸುಭಾಷ ಕುಲಕರ್ಣಿ ಮನವಿ ಮಾಡಿದರು.</p><p>ಪತ್ರಕರ್ತ ರಿಷಿಕೇಶ ಬಹದ್ದೂರದೇಸಾಯಿ, ‘ಆಧುನಿಕ ಮಾಧ್ಯಮ ಬಳಸಿಕೊಂಡು, ಬೆಳಗಾವಿ ಅಧಿವೇಶನದ ಸಮಗ್ರ ಮಾಹಿತಿ ಹೊಂದಿದ ಸಾಕ್ಷ್ಯಚಿತ್ರ ನಿರ್ಮಿಸಬೇಕು. ಜಿಲ್ಲೆಯಲ್ಲಿ ತಯಾರಾಗುವ ಖಾದಿ ಉತ್ಪನ್ನಗಳ ಮಾರಾಟಕ್ಕಾಗಿ ಆನ್ಲೈನ್ ಮೂಲಕ ರಾಷ್ಟ್ರೀಯ ಹಾಗೂ ಅಂತರರಾಷ್ಟ್ರೀಯ ಮಟ್ಟದಲ್ಲಿ ವೇದಿಕೆ ಕಲ್ಪಿಸಬೇಕು’ ಎಂದರು.</p><p>ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಉಪನಿರ್ದೇಶಕ ಗುರುನಾಥ ಕಡಬೂರ ಪ್ರಾಸ್ತಾವಿಕವಾಗಿ ಮಾತನಾಡಿದರು. ಮಹಾನಗರ ಪಾಲಿಕೆ ಆಯುಕ್ತ ಅಶೋಕ ದುಡಗುಂಟಿ, ಹೆಚ್ಚುವರಿ ಜಿಲ್ಲಾಧಿಕಾರಿ ವಿಜಯಕುಮಾರ್ ಹೊನಕೇರಿ, ಜಿಲ್ಲಾ ಪಂಚಾಯ್ತಿ ಉಪಕಾರ್ಯದರ್ಶಿ ಬಸವರಾಜ ಹೆಗ್ಗನಾಯಕ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಉಪನಿರ್ದೇಶಕಿ ವಿದ್ಯಾವತಿ ಭಜಂತ್ರಿ ಇದ್ದರು.</p><p>ಕಾಂಗ್ರೆಸ್ ಅಧಿವೇಶನಕ್ಕೆ ಅನುದಾನ ಮೀಸಲಿಟ್ಟಿದ್ದರೂ, ಸಿದ್ಧತೆ ಆರಂಭವಾಗದ ಕುರಿತು ‘ಪ್ರಜಾವಾಣಿ’ ಜೂನ್ 14ರ ಸಂಚಿಕೆಯಲ್ಲಿ ‘ಶತಮಾನೋತ್ಸವ ಆಚರಣೆಗಿಲ್ಲ ಸಿದ್ಧತೆ’ ಶೀರ್ಷಿಕೆಯಡಿ ವಿಶೇಷ ವರದಿ ಪ್ರಕಟಿಸಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>