<p><strong>ಚಿಕ್ಕೋಡಿ</strong>: ಪಟ್ಟಣದ ವಿದ್ಯಾನಗರ ಬಡಾವಣೆಯ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆ ಆವರಣದಿಂದಲೇ ವಿದ್ಯಾರ್ಥಿನಿಯನ್ನು ಅಪಹರಿಸಲು ಯತ್ನಿಸಿದ ಘಟನೆ ಮಂಗಳವಾರ ನಡೆದಿದೆ. ಶಾಲಾ ಬಾಲಕನೊಬ್ಬ ಸಮಯ ಪ್ರಜ್ಞೆ ಮೆರೆದಿದ್ದರಿಂದ ಈ ಅಪಹರಣ ವಿಫಲವಾಗಿದೆ.</p>.<p>ಎರಡನೇ ತರಗತಿಯ ಬಾಲಕಿ ಸಂಜೆ 4ರ ಸುಮಾರಿಗೆ ಶೌಚಾಲಯಕ್ಕೆ ತೆರಳಿದ್ದಳು. ಪಕ್ಕದಲ್ಲೇ ಮುಖಕ್ಕೆ ಬಟ್ಟೆ ಕಟ್ಟಿಕೊಂಡು, ಹೊಂಚು ಹಾಕಿ ಕುಳಿತಿದ್ದ ಆರೋಪಿ ಬಾಲಕಿಯ ಬಾಯಿ ಮುಚ್ಚಿ ಹೊತ್ತುಕೊಂಡು ಹೋಗುತ್ತಿದ್ದ. ಇದನ್ನು ಕಿಟಕಿಯಿಂದ ನೋಡಿದ ಇನ್ನೊಬ್ಬ ಬಾಲಕ ಕೂಗಾಡಿ ತಮ್ಮ ಶಿಕ್ಷಕಿಗೆ ತಿಳಿಸಿದ.</p>.<p>ಶಿಕ್ಷಕರು ಹೊರಗೆ ಓಡಿಬಂದು ನೋಡಿದ್ದಾರೆ. ಅಷ್ಟರಲ್ಲಿ ಬಾಲಕಿಯೇ ಆರೋಪಿಯ ಕೈ ಕಚ್ಚಿ ತಪ್ಪಿಸಿಕೊಂಡು ಶಿಕ್ಷಕರತ್ತ ಓಡಿಬಂದಿದ್ದಾಳೆ. ತಕ್ಷಣ ಶಿಕ್ಷಕರು ಪೊಲೀಸರು ಹಾಗೂ ಹಿರಿಯ ಅಧಿಕಾರಿಗಳಿಗೆ ಮಾಹಿತಿ ನೀಡಿದ್ದಾರೆ.</p>.<p>ಚಿಕ್ಕೋಡಿ ತಹಶೀಲ್ದಾರ ಚಿದಂಬರ ಕುಲಕರ್ಣಿ, ಕ್ಷೇತ್ರ ಶಿಕ್ಷಣಾಧಿಕಾರಿ ಬಿ.ಎ. ಮೇಕಲಮರಡಿ, ಪಿಎಸ್ಐ ಬಸಗೌಡ ನೇರ್ಲಿ ಸ್ಥಳಕ್ಕೆ ಧಾವಿಸಿದರು. ಮುಖ್ಯ ಶಿಕ್ಷಕಿ ಪ್ರೇಮಲತಾ ಎ.ಎಂ. ಚಿಕ್ಕೋಡಿ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ. ಸಮೀಪದ ಸಿಸಿಟಿವಿ ಕ್ಯಾಮೆರಾಗಳನ್ನು ಪರಿಶೀಲಿಸಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.</p>.<p>ಪಟ್ಟಣದಲ್ಲಿ ಚಿಕ್ಕಮಕ್ಕಳಿಗೆ ಚಾಕೊಲೇಟ್, ಬಿಸ್ಕತ್ ಕೊಡುವುದಾಗಿ ನಂಬಿಸಿ ತಮ್ಮ ವಾಹನಗಳಲ್ಲಿ ಕೂಡಿಸಿಕೊಂಡು ಹೋಗುವ ಅನುಮಾಸ್ಪದ ವ್ಯಕ್ತಿಗಳು ತಿರುಗಾಡುವುದು ಕಂಡು ಬಂದಲ್ಲಿ ಪೊಲೀಸ ಠಾಣೆಗೆ ಮಾಹಿತಿ ನೀಡುವಂತೆ ಚಿಕ್ಕೋಡಿ ಪೊಲೀಸರು ಪ್ರಕಟಣೆ ನೀಡಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚಿಕ್ಕೋಡಿ</strong>: ಪಟ್ಟಣದ ವಿದ್ಯಾನಗರ ಬಡಾವಣೆಯ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆ ಆವರಣದಿಂದಲೇ ವಿದ್ಯಾರ್ಥಿನಿಯನ್ನು ಅಪಹರಿಸಲು ಯತ್ನಿಸಿದ ಘಟನೆ ಮಂಗಳವಾರ ನಡೆದಿದೆ. ಶಾಲಾ ಬಾಲಕನೊಬ್ಬ ಸಮಯ ಪ್ರಜ್ಞೆ ಮೆರೆದಿದ್ದರಿಂದ ಈ ಅಪಹರಣ ವಿಫಲವಾಗಿದೆ.</p>.<p>ಎರಡನೇ ತರಗತಿಯ ಬಾಲಕಿ ಸಂಜೆ 4ರ ಸುಮಾರಿಗೆ ಶೌಚಾಲಯಕ್ಕೆ ತೆರಳಿದ್ದಳು. ಪಕ್ಕದಲ್ಲೇ ಮುಖಕ್ಕೆ ಬಟ್ಟೆ ಕಟ್ಟಿಕೊಂಡು, ಹೊಂಚು ಹಾಕಿ ಕುಳಿತಿದ್ದ ಆರೋಪಿ ಬಾಲಕಿಯ ಬಾಯಿ ಮುಚ್ಚಿ ಹೊತ್ತುಕೊಂಡು ಹೋಗುತ್ತಿದ್ದ. ಇದನ್ನು ಕಿಟಕಿಯಿಂದ ನೋಡಿದ ಇನ್ನೊಬ್ಬ ಬಾಲಕ ಕೂಗಾಡಿ ತಮ್ಮ ಶಿಕ್ಷಕಿಗೆ ತಿಳಿಸಿದ.</p>.<p>ಶಿಕ್ಷಕರು ಹೊರಗೆ ಓಡಿಬಂದು ನೋಡಿದ್ದಾರೆ. ಅಷ್ಟರಲ್ಲಿ ಬಾಲಕಿಯೇ ಆರೋಪಿಯ ಕೈ ಕಚ್ಚಿ ತಪ್ಪಿಸಿಕೊಂಡು ಶಿಕ್ಷಕರತ್ತ ಓಡಿಬಂದಿದ್ದಾಳೆ. ತಕ್ಷಣ ಶಿಕ್ಷಕರು ಪೊಲೀಸರು ಹಾಗೂ ಹಿರಿಯ ಅಧಿಕಾರಿಗಳಿಗೆ ಮಾಹಿತಿ ನೀಡಿದ್ದಾರೆ.</p>.<p>ಚಿಕ್ಕೋಡಿ ತಹಶೀಲ್ದಾರ ಚಿದಂಬರ ಕುಲಕರ್ಣಿ, ಕ್ಷೇತ್ರ ಶಿಕ್ಷಣಾಧಿಕಾರಿ ಬಿ.ಎ. ಮೇಕಲಮರಡಿ, ಪಿಎಸ್ಐ ಬಸಗೌಡ ನೇರ್ಲಿ ಸ್ಥಳಕ್ಕೆ ಧಾವಿಸಿದರು. ಮುಖ್ಯ ಶಿಕ್ಷಕಿ ಪ್ರೇಮಲತಾ ಎ.ಎಂ. ಚಿಕ್ಕೋಡಿ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ. ಸಮೀಪದ ಸಿಸಿಟಿವಿ ಕ್ಯಾಮೆರಾಗಳನ್ನು ಪರಿಶೀಲಿಸಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.</p>.<p>ಪಟ್ಟಣದಲ್ಲಿ ಚಿಕ್ಕಮಕ್ಕಳಿಗೆ ಚಾಕೊಲೇಟ್, ಬಿಸ್ಕತ್ ಕೊಡುವುದಾಗಿ ನಂಬಿಸಿ ತಮ್ಮ ವಾಹನಗಳಲ್ಲಿ ಕೂಡಿಸಿಕೊಂಡು ಹೋಗುವ ಅನುಮಾಸ್ಪದ ವ್ಯಕ್ತಿಗಳು ತಿರುಗಾಡುವುದು ಕಂಡು ಬಂದಲ್ಲಿ ಪೊಲೀಸ ಠಾಣೆಗೆ ಮಾಹಿತಿ ನೀಡುವಂತೆ ಚಿಕ್ಕೋಡಿ ಪೊಲೀಸರು ಪ್ರಕಟಣೆ ನೀಡಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>